Homeಮುಖಪುಟಭೀಕರ ಭೂಕಂಕ್ಕೆ ಕಂಗೆಟ್ಟ ನೇಪಾಳ: 128 ಜನರ ಸಾವು

ಭೀಕರ ಭೂಕಂಕ್ಕೆ ಕಂಗೆಟ್ಟ ನೇಪಾಳ: 128 ಜನರ ಸಾವು

- Advertisement -
- Advertisement -

ನೇಪಾಳದ ವಾಯುವ್ಯ ಜಿಲ್ಲೆಗಳಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ 6.4 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 128 ಜನರು ಸಾವನ್ನಪ್ಪಿದ್ದಾರೆ. ದುರಂತದಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ. ಭೂಕಂಪದ ಪ್ರಭಾವವು ಭಾರತದ ರಾಜಧಾನಿ, ನವದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶ (NCR) ವರೆಗೆ 800 ಕಿಲೋಮೀಟರ್ (500 ಮೈಲಿ) ದೂರದಲ್ಲಿದೆ.

ಭೂಕಂಪಪೀಡಿತ ಪ್ರದೇಶಗಳಲ್ಲಿ ಮನೆಗಳು ಕುಸಿದಿದ್ದು, ದೆಹಲಿ-ಎನ್‌ಸಿಆರ್‌ ಪ್ರದೇಶ ಸೇರಿದಂತೆ ಉತ್ತರ ಭಾರತದ ಕೆಲವೆಡೆ ಕೂಡಾ ಲಘು ಕಂಪನದ ಅನುಭವವಾಗಿದೆ.

ನವೆಂಬರ್ 4, 2023 ರಂದು ಜಾಲಕ್ಕೋಟ್‌ನಲ್ಲಿ ಸಂಭವಿಸಿದ ಭೂಕಂಪದಿಂದ ಗಾಯಗೊಂಡವರನ್ನು ಜಾಲಕ್ಕೋಟ್ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಭೂಕಂಪ ಪೀಡಿತ ಹಲವು ಪ್ರದೇಶಗಳೊಂದಿಗೆ ಸಂವಹನ ಸ್ಥಗಿತಗೊಂಡಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು  ಸ್ಥಳೀಯ ಅಧಿಕಾರಿ ಹರೀಶ್ ಚಂದ್ರ ಶರ್ಮಾ ಮಾಹಿತಿ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ರುಕುಂ ಪಶ್ಚಿಮದ ಮುಖ್ಯ ಜಿಲ್ಲಾ ಅಧಿಕಾರಿ ಹರಿ ಪ್ರಸಾದ್ ಪಂತ್ ಅವರು ದೃಢಪಡಿಸಿದಂತೆ ಭೂಕಂಪದಿಂದಾಗಿ ಹಲವಾರು ಮನೆಗಳು ಕುಸಿದಿದ್ದರಿಂದ ರುಕುಮ್ ಜಿಲ್ಲೆಯಲ್ಲಿ ಕನಿಷ್ಠ 36 ಜೀವಗಳನ್ನು ಕಳೆದುಕೊಂಡಿದೆ. ಒಟ್ಟು 30 ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆರೆಯ ಜಾಜರ್‌ಕೋಟ್ ಜಿಲ್ಲೆಯಲ್ಲಿ ಭೂಕಂಪದ ಪರಿಣಾಮವಾಗಿ 34 ಜನರು ದುರಂತವಾಗಿ ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಆಡಳಿತ ಅಧಿಕಾರಿ ಹರೀಶ್ ಚಂದ್ರ ಶರ್ಮಾ ತಿಳಿಸಿದ್ದಾರೆ.

ಭೀಕರ ದುರಂತದ ಹಿನ್ನೆಲೆಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಸರ್ಕಾರ ಪ್ರಕಟಿಸಿದೆ. ಭೂಕಂಪದ ಕೇಂದ್ರ ಬಿಂದುವಿನಿಂದ ಸುಮಾರು 800 ಕಿಲೋಮೀಟರ್ ದೂರದಲ್ಲಿರುವ ಭಾರತದ ರಾಜಧಾನಿ ಹೊಸದಿಲ್ಲಿ ಪ್ರದೇಶದಲ್ಲಿ ಕೂಡಾ ಭೂಕಂಪದ ಅನುಭವ ಆಗಿದೆ. ಆದರೆ ಬಹುತೇಕರು ನಿದ್ದೆಯಲ್ಲಿ ಇದ್ದ ಸಂದರ್ಭದಲ್ಲಿ ಇದು ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಶುಕ್ರವಾರ ಮಧ್ಯರಾತ್ರಿಗಿಂತ ಸ್ವಲ್ಪ ಮುಂಚೆ ಈ ದುರಂತ ಸಂಭವಿಸಿದ್ದು, ಪರ್ವತಶ್ರೇಣಿಗಳಿಂದ ಕೂಡಿದ ಗ್ರಾಮದಲ್ಲಿ ಪರಿಹಾರ ಕಾರ್ಯಾಚರಣೆ ಸಮರೋಪಾದಿಯಲ್ಲಿ ಸಾಗಿದೆ. 128 ಮಂದಿ ಈಗಾಗಲೇ ಮೃತಪಟ್ಟಿದ್ದು, ಹಲವು ಪ್ರದೇಶಗಳ ಜತೆ ಸಂಪರ್ಕ ವ್ಯವಸ್ಥೆ ಕಡಿದು ಹೋಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಸ್ಥಳೀಯ ಕಾಲಮಾನದ ಪ್ರಕಾರ ರಾತ್ರಿ 11.47ಕ್ಕೆ ಜಾಲಕ್ಕೋಟ್ ಜಿಲ್ಲೆಯ ರಮೀದಂಡ ಗ್ರಾಮದಲ್ಲಿ ಭೂಕಂಪ ಸಂಭವಿಸಿದೆ. ಎಂದು ಅಧಿಕಾರಿಗಳು ಎಕ್ಸ್ ಪೋಸ್‌ಟ್‌ನಲ್ಲಿ ಹೇಳಿದ್ದಾರೆ. 2015ರಲ್ಲಿ ಈ ಬೆಟ್ಟ ರಾಷ್ಟ್ರದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿ, 9 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟು, 10 ಲಕ್ಷ ಕಟ್ಟಡಗಳು ಹಾನಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: ಮಣಿಪುರ ಪೊಲೀಸರಿಂದ ಮಹಿಳೆಯರಿಗೆ ಕಿರುಕುಳ, ಹಲ್ಲೆ: ಕುಕಿ ಶಾಸಕರ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read