Homeಮುಖಪುಟಆರೆಸ್ಸೆಸ್‌ ಮುಖಂಡನ ಮನೆಯಲ್ಲಿ 770 ಕೆಜಿ ಸ್ಪೋಟಕ ಪತ್ತೆ

ಆರೆಸ್ಸೆಸ್‌ ಮುಖಂಡನ ಮನೆಯಲ್ಲಿ 770 ಕೆಜಿ ಸ್ಪೋಟಕ ಪತ್ತೆ

- Advertisement -
- Advertisement -

ಕೇರಳ ಪೊಲೀಸರು ಕಣ್ಣೂರು ಜಿಲ್ಲೆಯ ಪೊಯಿಲೂರಿನಲ್ಲಿರುವ ಸ್ಥಳೀಯ ಆರೆಸ್ಸೆಸ್‌ ಮುಖಂಡ ಮತ್ತು ಆತನ ಸಂಬಂಧಿಕರ ನಿವಾಸದಿಂದ 770 ಕೆಜಿ ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಗಣನೀಯ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಆರೆಸ್ಸೆಸ್‌ ಸ್ಥಳೀಯ ಮುಖಂಡ ವಡಕಯಿಲ್ ಪ್ರಮೋದ್ ಮತ್ತು ಆತನ ಸಂಬಂಧಿ ವಡಕಯಿಲ್ ಶಾಂತಾ ಅವರ ಮನೆಗಳಲ್ಲಿ ಈ ಭಾರೀ ಪ್ರಮಾಣದ ಸ್ಪೋಟಕಗಳು ಪತ್ತೆಯಾಗಿದೆ. ಇದರ ಬೆನ್ನಲ್ಲಿ ಸದ್ಯ ಪ್ರಮೋದ್ ತಲೆಮರೆಸಿಕೊಂಡಿದ್ದಾನೆ.

ಗೌಪ್ಯ ಮಾಹಿತಿಯ ಆಧಾರದ ಮೇಲೆ ಕೊಲವಲ್ಲೂರು ಪೊಲೀಸ್ ಇನ್ಸ್‌ಪೆಕ್ಟರ್ ಸುಮೀತ್ ಕುಮಾರ್ ಮತ್ತು ಸಬ್ ಇನ್ಸ್‌ಪೆಕ್ಟರ್ ಸೋಬಿನ್ ನೇತೃತ್ವದಲ್ಲಿ ಕಾರ್ಯಾಚರಣೆಯನ್ನು ನಡೆಸಿದಾಗ ಈ ಭಾರೀ ಪ್ರಮಾಣದ ಸ್ಪೋಟಕಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಕೊಳವಲ್ಲೂರು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಗಳ ಪ್ರಕಾರ, ಸ್ಫೋಟಕಗಳನ್ನು ಅಕ್ರಮವಾಗಿ ವಿತರಿಸಲು ಉದ್ದೇಶಿಸಲಾಗಿತ್ತು ಎಂದು ಸೂಚಿಸುತ್ತದೆ. ನಾವು ಈ ಬಗ್ಗೆ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದೇವೆ. ಈ ಬೆಳವಣಿಗೆಗಳ ಮಧ್ಯೆ ಆ ಪ್ರದೇಶದ ಸುರಕ್ಷತೆ ಮತ್ತು ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ, ಕಣ್ಣೂರಿನ ಎರಂಜೋಲಿಪಾಲಂ ಬಳಿ ಬಾಂಬ್ ತಯಾರಿಕೆ ವೇಳೆ ಸ್ಫೋಟ ಸಂಭವಿಸಿ ಆರೆಸ್ಸೆಸ್‌ಗೆ ಸೇರಿದ ಯುವಕ ತೀವ್ರ ಗಾಯಗೊಂಡಿದ್ದರು. ಘಟನೆಯಲ್ಲಿ ವಿಷ್ಣು(20) ಅವರ ಅಂಗೈ ಒಡೆದು ಚೆಲ್ಲಾಪಿಲ್ಲಿಯಾಗಿತ್ತು. ವಿಷ್ಣು ಮನೆಯ ಸಮೀಪದ ಮೈದಾನದಲ್ಲಿ ಬಾಂಬ್ ತಯಾರಿಸುವ ಕಾರ್ಯದಲ್ಲಿ ತೊಡಗಿದ್ದಾಗ ಸ್ಫೋಟ ಸಂಭವಿಸಿತ್ತು. 30 ದಿನಗಳಲ್ಲಿ ಇದು ಎರಡನೇ ಘಟನೆಯಾಗಿದ್ದು, ಬಾಂಬ್ ತಯಾರಿಕೆಯಲ್ಲಿ ಆರೆಸ್ಸೆಸ್‌ ಕಾರ್ಯಕರ್ತರು ಭಾಗಿಯಾಗಿದ್ದಾರೆ ಎನ್ನುವುದನ್ನು ಬಹಿರಂಗಪಡಿಸುತ್ತದೆ.

ಈ ಕುರಿತು ಕೇರಳ ಕಾಂಗ್ರೆಸ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಆರೆಸ್ಸೆಸ್ ಸ್ಥಳೀಯ ಮುಖಂಡ ವಡಕ್ಕೈಲ್ ಪ್ರಮೋದ್ ಮತ್ತು ಆತನ ಸೋದರ ಸಂಬಂಧಿ ವಡಕ್ಕೈಲ್ ಶಾಂತಾ ಅವರ ಮನೆಗಳಿಂದ 770 ಕೆಜಿ ಸ್ಫೋಟಕಗಳನ್ನು ಕೇರಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಭಯೋತ್ಪಾದನೆ ಮತ್ತು ರಾಜ್ಯದ ವಿರುದ್ಧದ ಷಡ್ಯಂತ್ರದಂತಹ ಪ್ರಕರಣಗಳಲ್ಲಿ ಬಿಜೆಪಿ ಕಾರ್ಯಕರ್ತರು ಆಗಾಗ್ಗೆ ಸಿಕ್ಕಿಬಿದ್ದಿದ್ದಾರೆ. ಇಂತಹ ಭಾರೀ ಸ್ಫೋಟಕಗಳನ್ನು ಸಂಗ್ರಹಿಸುವ ಇತ್ತೀಚಿನ ಪ್ರಯತ್ನದ ಹಿಂದೆ ಬಿಜೆಪಿಯ ನಿಜವಾದ ಗುರಿ ಏನು? ಇದು ಚುನಾವಣೆಗೆ ಮುನ್ನ ಭಯೋತ್ಪಾದನೆ ಮತ್ತು ರಾಜಕೀಯ ಮತ್ತು ಕೋಮು ಉದ್ವಿಗ್ನತೆಯನ್ನು ಸೃಷ್ಟಿಸುವ ತಂತ್ರವೇ? ಈ ಬಗ್ಗೆ ಎನ್‌ಐಎ ತನಿಖೆಯನ್ನು ವಹಿಸಿಕೊಳ್ಳುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

 

ಇದನ್ನು ಓದಿ:ನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ: ಜಸ್ಟಿಸ್‌ ನಾಗರತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...