Homeಕರ್ನಾಟಕ‘ಒಳಗಿನ ಭ್ರಷ್ಟಾಚಾರ ಬಾಹ್ಯ ಭಯೋತ್ಪಾದನೆಗಿಂತ ಅಪಾಯಕಾರಿ’ | ಲಂಚ ಪ್ರಕರಣದ ವಿಚಾರಣೆ ವೇಳೆ ಬೆಂಗಳೂರು ನ್ಯಾಯಾಲಯ...

‘ಒಳಗಿನ ಭ್ರಷ್ಟಾಚಾರ ಬಾಹ್ಯ ಭಯೋತ್ಪಾದನೆಗಿಂತ ಅಪಾಯಕಾರಿ’ | ಲಂಚ ಪ್ರಕರಣದ ವಿಚಾರಣೆ ವೇಳೆ ಬೆಂಗಳೂರು ನ್ಯಾಯಾಲಯ ಅಭಿಪ್ರಾಯ

- Advertisement -
- Advertisement -

‘ಬಾಹ್ಯ ಭಯೋತ್ಪಾದನೆಗಿಂತ ಒಳಗಿನ ಭ್ರಷ್ಟಾಚಾರ ಅತ್ಯಂತ ಅಪಾಯಕಾರಿ’ ಎಂದು ಲಂಚ ಪ್ರಕರಣವೊಂದರ ವಿಚಾರಣೆ ನಡೆಸುವ ವೇಳೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಹೇಳಿದೆ. ಭೂ ವಿವಾದ ಇತ್ಯರ್ಥಕ್ಕೆ 5 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ್ದ ಮಾಜಿ ವಿಶೇಷ ತಹಶೀಲ್ದಾರ್ ಹಾಗೂ ಮಧ್ಯವರ್ತಿಯೊಬ್ಬರಿಗೆ ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಕೋರ್ಟ್‌ ಈ ಹೇಳಿಕೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬೆಂಗಳೂರು ದಕ್ಷಿಣ ತಾಲ್ಲೂಕಿನ ವಿಶೇಷ ತಹಶೀಲ್ದಾರ್ ಎಸ್ ವೆಂಕಟಾಚಲಪತಿ ಮತ್ತು ಮಧ್ಯವರ್ತಿ ಮಧುಸೂಧನ್ ಬಿ ಆರ್ ಅವರನ್ನು 2017 ರಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿತ್ತು. ಬುಧವಾರ ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ 23ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ ಎಂ ರಾಧಾಕೃಷ್ಣ ಅವರು ವೆಂಕಟಾಚಲಪತಿ ಮತ್ತು ಮಧುಸೂಧನ್ ಅವರಿಗೆ ತಲಾ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ಕ್ರಮವಾಗಿ 7 ಲಕ್ಷ ಮತ್ತು 40 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

“ಇಂದಿನ ದಿನಗಳಲ್ಲಿ ಸಾರ್ವಜನಿಕ ಕಚೇರಿಗಳಲ್ಲಿ, ವಿಶೇಷವಾಗಿ ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ದೊಡ್ಡ ಪ್ರಮಾಣದ ಭ್ರಷ್ಟಾಚಾರವು ಬಡ, ಅಸಹಾಯಕ ರೈತರು ಮತ್ತು ಇತರ ಸಾರ್ವಜನಿಕರ ಜೀವನಕ್ಕೆ ಶಾಪವಾಗಿ ಪರಿಣಮಿಸಿದೆ. ಸಾರ್ವಜನಿಕ ಸೇವಕರು ಮತ್ತು ಜನಪ್ರತಿನಿಧಿಗಳ ಈ ಅಂತರ್ಗತ ಭ್ರಷ್ಟ ಚಟುವಟಿಕೆಗಳು ಹೊರಗಿನ ಭಯೋತ್ಪಾದನೆಗಿಂತ ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸಿದೆ. ಇದು ದೇಶದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ” ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ಹೇಳಿದ್ದಾರೆ.

“ಸಾಮಾನ್ಯ ಜನರು ಎದುರಿಸುತ್ತಿರುವ ಪ್ರತಿಯೊಂದು ಸಮಸ್ಯೆಗೆ ಇದು ನಿಜವಾಗಿಯೂ ಮೂಲ ಕಾರಣವಾಗಿದೆ. ಈ ರೀತಿಯ ಕಳಂಕವನ್ನು ಮುಂದುವರಿಸಲು ಅನುಮತಿಸಿದರೆ, ಬಹುಶಃ ಅದು ವ್ಯವಸ್ಥೆಯ ತಳಹದಿಯನ್ನು ಮಾತ್ರವಲ್ಲದೆ ಸಾಮಾನ್ಯ ಜನರ ನಂಬಿಕೆಯನ್ನೂ ಸಹ ನಾಶಪಡಿಸುತ್ತದೆ. ಜೊತೆಗೆ ಇದು ಪ್ರಜಾಪ್ರಭುತ್ವದ ಸ್ಥಾಪನೆಯ ನಾಶಕ್ಕೆ ಕಾರಣವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಈ ಅಪರಾಧಿಗಳಿಗೆ ಕಠಿಣ ಶಿಕ್ಷೆಯ ಅಗತ್ಯವಿದೆ ಎಂದು ನಾನು ಅಭಿಪ್ರಾಯಪಟ್ಟಿದ್ದೇನೆ. ಹಾಗಾದರೆ ಇದು ಇತರರಿಗೆ ಇದು ಪಾಠವಾಗಲಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂಓದಿ:ಸೆಬಿ ಅಧ್ಯಕ್ಷೆ ವಿರುದ್ಧ ಲೋಕಪಾಲ್‌ಗೆ ದೂರು ನೀಡಿದ ಸಂಸದೆ ಮಹುವಾ ಮೊಯಿತ್ರಾ

ದೂರುದಾರರ ವ್ಯಕ್ತಿಯು ತನ್ನ ತಂದೆಯ ಮರಣದ ನಂತರ, ವಿಶೇಷ ತಹಶೀಲ್ದಾರ್ ಮತ್ತು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿದ್ದ ವೆಂಕಟಾಚಲಪತಿ ಅವರನ್ನು ಸಂಪರ್ಕಿಸಿ, ಭೂಮಿಯ ಹಂಚಿಕೆಯನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಕೋರಿದ್ದರು. ಆದರೆ, ವೆಂಕಟಾಚಲಪತಿ ಅವರು ಮಧುಸೂಧನ್ ಅವರನ್ನು ಭೇಟಿಯಾಗುವಂತೆ ಕೇಳಿದ್ದು, 20 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಮಾತುಕತೆಯ ನಂತರ, ಮೊತ್ತವನ್ನು 15 ಲಕ್ಷಕ್ಕೆ ಇಳಿಸಿ, ಮುಂಗಡವಾಗಿ 5 ಲಕ್ಷ ರೂ. ಪಾವತಿಸುವಂತೆ ಮತ್ತು ಬಾಕಿ ಪಾವತಿಸಿದ ನಂತರ ಆದೇಶ ಪ್ರತಿ ನೀಡಲಾಗುವುದು ಎಂದು ಅವರು ಹೇಳಿದ್ದರು. ಡಿಸೆಂಬರ್ 15, 2017 ರಂದು ದೂರುದಾರರು ಎಸಿಬಿಯನ್ನು ಸಂಪರ್ಕಿಸಿ ದೂರು ದಾಖಲಿಸಿದ್ದರು. ಹೀಗಾಗಿ ತಹಸಿಲ್ದಾರ್ ಅವರಿಗೆ ಎಸಿಬಿ ಬಲೆ ಬೀಸಿ, ಡಿಸೆಂಬರ್ 18, 2017 ರಂದು ವೆಂಕಟಾಚಲಪತಿ ಅವರ ಸೂಚನೆ ಮೇರೆಗೆ ಮಧುಸೂಧನ್ 5 ಲಕ್ಷ ಮುಂಗಡ ವಸೂಲಿ ಮಾಡುವಾಗ ಸಿಕ್ಕಿಬಿದ್ದಿದ್ದರು.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...