Homeಕರ್ನಾಟಕ‘ಒಳಗಿನ ಭ್ರಷ್ಟಾಚಾರ ಬಾಹ್ಯ ಭಯೋತ್ಪಾದನೆಗಿಂತ ಅಪಾಯಕಾರಿ’ | ಲಂಚ ಪ್ರಕರಣದ ವಿಚಾರಣೆ ವೇಳೆ ಬೆಂಗಳೂರು ನ್ಯಾಯಾಲಯ...

‘ಒಳಗಿನ ಭ್ರಷ್ಟಾಚಾರ ಬಾಹ್ಯ ಭಯೋತ್ಪಾದನೆಗಿಂತ ಅಪಾಯಕಾರಿ’ | ಲಂಚ ಪ್ರಕರಣದ ವಿಚಾರಣೆ ವೇಳೆ ಬೆಂಗಳೂರು ನ್ಯಾಯಾಲಯ ಅಭಿಪ್ರಾಯ

- Advertisement -
- Advertisement -

‘ಬಾಹ್ಯ ಭಯೋತ್ಪಾದನೆಗಿಂತ ಒಳಗಿನ ಭ್ರಷ್ಟಾಚಾರ ಅತ್ಯಂತ ಅಪಾಯಕಾರಿ’ ಎಂದು ಲಂಚ ಪ್ರಕರಣವೊಂದರ ವಿಚಾರಣೆ ನಡೆಸುವ ವೇಳೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಹೇಳಿದೆ. ಭೂ ವಿವಾದ ಇತ್ಯರ್ಥಕ್ಕೆ 5 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ್ದ ಮಾಜಿ ವಿಶೇಷ ತಹಶೀಲ್ದಾರ್ ಹಾಗೂ ಮಧ್ಯವರ್ತಿಯೊಬ್ಬರಿಗೆ ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಕೋರ್ಟ್‌ ಈ ಹೇಳಿಕೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬೆಂಗಳೂರು ದಕ್ಷಿಣ ತಾಲ್ಲೂಕಿನ ವಿಶೇಷ ತಹಶೀಲ್ದಾರ್ ಎಸ್ ವೆಂಕಟಾಚಲಪತಿ ಮತ್ತು ಮಧ್ಯವರ್ತಿ ಮಧುಸೂಧನ್ ಬಿ ಆರ್ ಅವರನ್ನು 2017 ರಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿತ್ತು. ಬುಧವಾರ ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ 23ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ ಎಂ ರಾಧಾಕೃಷ್ಣ ಅವರು ವೆಂಕಟಾಚಲಪತಿ ಮತ್ತು ಮಧುಸೂಧನ್ ಅವರಿಗೆ ತಲಾ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ಕ್ರಮವಾಗಿ 7 ಲಕ್ಷ ಮತ್ತು 40 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

“ಇಂದಿನ ದಿನಗಳಲ್ಲಿ ಸಾರ್ವಜನಿಕ ಕಚೇರಿಗಳಲ್ಲಿ, ವಿಶೇಷವಾಗಿ ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ದೊಡ್ಡ ಪ್ರಮಾಣದ ಭ್ರಷ್ಟಾಚಾರವು ಬಡ, ಅಸಹಾಯಕ ರೈತರು ಮತ್ತು ಇತರ ಸಾರ್ವಜನಿಕರ ಜೀವನಕ್ಕೆ ಶಾಪವಾಗಿ ಪರಿಣಮಿಸಿದೆ. ಸಾರ್ವಜನಿಕ ಸೇವಕರು ಮತ್ತು ಜನಪ್ರತಿನಿಧಿಗಳ ಈ ಅಂತರ್ಗತ ಭ್ರಷ್ಟ ಚಟುವಟಿಕೆಗಳು ಹೊರಗಿನ ಭಯೋತ್ಪಾದನೆಗಿಂತ ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸಿದೆ. ಇದು ದೇಶದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ” ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ಹೇಳಿದ್ದಾರೆ.

“ಸಾಮಾನ್ಯ ಜನರು ಎದುರಿಸುತ್ತಿರುವ ಪ್ರತಿಯೊಂದು ಸಮಸ್ಯೆಗೆ ಇದು ನಿಜವಾಗಿಯೂ ಮೂಲ ಕಾರಣವಾಗಿದೆ. ಈ ರೀತಿಯ ಕಳಂಕವನ್ನು ಮುಂದುವರಿಸಲು ಅನುಮತಿಸಿದರೆ, ಬಹುಶಃ ಅದು ವ್ಯವಸ್ಥೆಯ ತಳಹದಿಯನ್ನು ಮಾತ್ರವಲ್ಲದೆ ಸಾಮಾನ್ಯ ಜನರ ನಂಬಿಕೆಯನ್ನೂ ಸಹ ನಾಶಪಡಿಸುತ್ತದೆ. ಜೊತೆಗೆ ಇದು ಪ್ರಜಾಪ್ರಭುತ್ವದ ಸ್ಥಾಪನೆಯ ನಾಶಕ್ಕೆ ಕಾರಣವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಈ ಅಪರಾಧಿಗಳಿಗೆ ಕಠಿಣ ಶಿಕ್ಷೆಯ ಅಗತ್ಯವಿದೆ ಎಂದು ನಾನು ಅಭಿಪ್ರಾಯಪಟ್ಟಿದ್ದೇನೆ. ಹಾಗಾದರೆ ಇದು ಇತರರಿಗೆ ಇದು ಪಾಠವಾಗಲಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂಓದಿ:ಸೆಬಿ ಅಧ್ಯಕ್ಷೆ ವಿರುದ್ಧ ಲೋಕಪಾಲ್‌ಗೆ ದೂರು ನೀಡಿದ ಸಂಸದೆ ಮಹುವಾ ಮೊಯಿತ್ರಾ

ದೂರುದಾರರ ವ್ಯಕ್ತಿಯು ತನ್ನ ತಂದೆಯ ಮರಣದ ನಂತರ, ವಿಶೇಷ ತಹಶೀಲ್ದಾರ್ ಮತ್ತು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿದ್ದ ವೆಂಕಟಾಚಲಪತಿ ಅವರನ್ನು ಸಂಪರ್ಕಿಸಿ, ಭೂಮಿಯ ಹಂಚಿಕೆಯನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಕೋರಿದ್ದರು. ಆದರೆ, ವೆಂಕಟಾಚಲಪತಿ ಅವರು ಮಧುಸೂಧನ್ ಅವರನ್ನು ಭೇಟಿಯಾಗುವಂತೆ ಕೇಳಿದ್ದು, 20 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಮಾತುಕತೆಯ ನಂತರ, ಮೊತ್ತವನ್ನು 15 ಲಕ್ಷಕ್ಕೆ ಇಳಿಸಿ, ಮುಂಗಡವಾಗಿ 5 ಲಕ್ಷ ರೂ. ಪಾವತಿಸುವಂತೆ ಮತ್ತು ಬಾಕಿ ಪಾವತಿಸಿದ ನಂತರ ಆದೇಶ ಪ್ರತಿ ನೀಡಲಾಗುವುದು ಎಂದು ಅವರು ಹೇಳಿದ್ದರು. ಡಿಸೆಂಬರ್ 15, 2017 ರಂದು ದೂರುದಾರರು ಎಸಿಬಿಯನ್ನು ಸಂಪರ್ಕಿಸಿ ದೂರು ದಾಖಲಿಸಿದ್ದರು. ಹೀಗಾಗಿ ತಹಸಿಲ್ದಾರ್ ಅವರಿಗೆ ಎಸಿಬಿ ಬಲೆ ಬೀಸಿ, ಡಿಸೆಂಬರ್ 18, 2017 ರಂದು ವೆಂಕಟಾಚಲಪತಿ ಅವರ ಸೂಚನೆ ಮೇರೆಗೆ ಮಧುಸೂಧನ್ 5 ಲಕ್ಷ ಮುಂಗಡ ವಸೂಲಿ ಮಾಡುವಾಗ ಸಿಕ್ಕಿಬಿದ್ದಿದ್ದರು.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...