Homeಅಂಕಣಗಳುಸಾಧ್ವಿ ಪ್ರಗ್ಯಾ ಭಯೋತ್ಪಾದನೆ ಮತ್ತು ದ್ವಂದ್ವಗಳು

ಸಾಧ್ವಿ ಪ್ರಗ್ಯಾ ಭಯೋತ್ಪಾದನೆ ಮತ್ತು ದ್ವಂದ್ವಗಳು

- Advertisement -
- Advertisement -

| ಗೌರಿ ಲಂಕೇಶ್ |
03 ಡಿಸೆಂಬರ್, 2008 ( ಕಂಡಹಾಗೆ ಸಂಪಾದಕೀಯದಿಂದ)

ಮೊದಲೇ ಒಂದು ಅಂಶವನ್ನು ಸ್ಪಷ್ಟಪಡಿಸಬೇಕಿದೆ. ಅದೇನೆಂದರೆ ಮಾಲೆಗಾಂವ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ಸಾಧ್ವಿ ಪ್ರಗ್ಯಾ, ಲೆಫ್ಟಿನೆಂಟ್ ಶ್ರೀಕಾಂತ್ ಪುರೋಹಿತ ಮತ್ತು ಇತರರ ಮೇಲೆ ಪೊಲೀಸ್ ದೌರ್ಜನ್ಯ ನಿಲ್ಲಬೇಕು. ಅವರೆಲ್ಲರಿಗೆ ಸೂಕ್ತ ಕಾನೂನು ನೆರವು ನೀಡಬೇಕು. ಅವರ ಮೇಲೆ ಪೊಲೀಸರು ಮಾಡಿರುವ ಆರೋಪಗಳನ್ನು ಸಾಬೀತುಪಡಿಸುವತ್ತ ಸರ್ಕಾರ ನೋಡಿಕೊಳ್ಳಬೇಕು. ಅಕಸ್ಮಾತ್ ಸಾಧ್ವಿ ಮತ್ತಾಕೆಯ ತಂಡ ನಿರ್ದೋಷಿಗಳಾಗಿದ್ದರೆ ಅದನ್ನೂ ಸಾಬೀತುಪಡಿಸಲು ಅವರಿಗೆ ಎಲ್ಲ ಅವಕಾಶಗಳನ್ನು ಮಾಡಿಕೊಡಬೇಕು. ಇದೆಲ್ಲ ಸರಿಯಾಗಿ ನಡೆದ ನಂತರ ಎಲ್ಲರೂ ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿರಬೇಕು.

ನಾವಾಗಲಿ, ಕಾನೂನು ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವವರಾಗಲಿ, ಮಾನವ ಹಕ್ಕುಗಳ ಹೋರಾಟಗಾರರಾಗಲಿ ಇದನ್ನು ಮೊದಲ ಬಾರಿ ಹೇಳುತ್ತಿಲ್ಲ. ಬಹಳ ವರ್ಷಗಳಿಂದ ನಮ್ಮೆಲ್ಲರ ನಿಲುವು ಇದೇ ಆಗಿದೆ. ಬಾಂಬ್ ಸ್ಪೋಟ ಆರೋಪಿಗಳ ಮೇಲೆ, ಸಿಮಿ ಸದಸ್ಯರು ಎಂಬ ಸಂಶಯದ ಮೇಲೆ, ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರಬಹುದು ಎಂಬ ನೆಪದಲ್ಲಿ ಸಾವಿರಾರು ಮುಸಲ್ಮಾನರನ್ನು ಪೊಲೀಸರು ಬಂಧಿಸಿದಾಗ ನಾವು ಹೇಳಿದ್ದು ಇದನ್ನೇ. ಈಗ ಸಾಧ್ವಿ, ಪುರೋಹಿತ್ ಮತ್ತು ಇತರರನ್ನು ಕುರಿತು ಹೇಳುವುದೂ ಇದೇ ಮಾತನ್ನೇ.

ಆದರೆ ಆರ್‌ಎಸ್‌ಎಸ್, ಬಿಜೆಪಿ, ವಿಶ್ವಹಿಂದೂ ಪರಿಷತ್, ಭಜರಂಗದಳ, ಅಭಿನವ ಭಾರತ್ ಮತ್ತು ಸಂಘ ಪರಿವಾರದ ಇತರೆ ತುಂಡುಗಳು ಮಾತ್ರ ಮೊದಲಿನಿಂದಲೂ ಹೇಗೆ ವರ್ತಿಸಿವೆ ನೋಡಿ.

‘ಸಾಧ್ವಿ ಪ್ರಗ್ಯಾಗೆ ಪೊಲೀಸರು ದೈಹಿಕ ಹಿಂಸೆ ನೀಡಿದ್ದಾರೆ’ ಎಂದು ಅರಚಾಡುತ್ತಿರುವ ಚೆಡ್ಡಿಗಳಿಗೆ ಅದೇ ಪೊಲೀಸರು ಮುಸಲ್ಮಾನ ಆರೋಪಿಗಳ ಮೇಲೆ ದೌರ್ಜನ್ಯ ನಡೆಸಿದ್ದು ಕಾಣಿಸಲಿಲ್ಲ. ಈಗ ಪ್ರಗ್ಯಾಳಿಗೆ ಕಾನೂನು ನೆರವು ನೀಡಲು ವಕೀಲರ ಸಂಘಗಳನ್ನು ರೂಪಿಸಿರುವ, ಆಕೆಯ ಪರವಾಗಿ ಕಾನೂನು ಸಮರಕ್ಕೆ ಹಣ ಸಂಗ್ರಹಿಸುತ್ತಿರುವ ಚೆಡ್ಡಿಗಳು ಪ್ರಗ್ಯಾಳಂತೆಯೇ ಭಯೋತ್ಪಾದನೆ ಆರೋಪದ ಮೇಲೆ ಮುಸಲ್ಮಾನ ಯುವಕರನ್ನು ಬಂಧಿಸಿದಾಗ ಪ್ರತಿಕ್ರಿಯಿಸಿದ್ದು ಹೇಗೆ? ಅಫಜಲ್‌ಗುರು ಪರವಾಗಿ ಯಾವ ವಕೀಲನೂ ವಕಾಲತ್ತು ವಹಿಸಬಾರದೆಂದು ದೆಹಲಿಯ ವಕೀಲರ ಸಂಘ ಫತ್ವಾ ಹೊರಡಿಸಿತ್ತು. ಕೊನೆಗೆ ನ್ಯಾಯಾಲಯವೇ ಅಫಜಲ್‌ಗುರುಗೆ ಓರ್ವ ವಕೀಲನನ್ನು ನೇಮಿಸಿತ್ತಾದರೂ ಆತ ಎಂದೂ ಆಫಜಲ್‌ಗುರು ಪರವಾಗಿ ನ್ಯಾಯಾಲಯದಲ್ಲಿ ದನಿ ಎತ್ತಲಿಲ್ಲ. ಪರಿಣಾಮವಾಗಿ ಆತನಿಗೆ ಗಲ್ಲುಶಿಕ್ಷೆ ನೀಡಲಾಯ್ತು.

ಸಂಘ ಪರಿವಾರ ಯಾಕೆ ತನಗೊಂದು ನ್ಯಾಯ, ಇತರರಿಗೊಂದು ನ್ಯಾಯ ಎಂದು ವಾದಿಸುತ್ತದೆ?
ಬೆಂಗಳೂರಿನ ಡಾ.ಹನೀಫ್‌ರನ್ನು ಸುಳ್ಳು ಅರೋಪಗಳ ಮೇಲೆ ಆಸ್ಟ್ರೇಲಿಯಾದ ಪೊಲೀಸರು ಬಂಧಿಸಿದಾಗ ಹನೀಪರ ಹೆಂಡತಿ ಮತ್ತು ತಾಯಿ ಕಣ್ಣೀರಿಟ್ಟಿದ್ದನ್ನು ನೋಡಿ ತನಗೆ ನಿದ್ದೆ ಬರಲಿಲ್ಲ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದರು. ಆ ವಾಕ್ಯವನ್ನು ಚೆಡ್ಡಿಗಳು ಹಲವಾರು ಬಾರಿ ಲೇವಡಿ ಮಾಡಿದ್ದಾರೆ. ಯಾವ ಪರಿ ಎಂದರೆ ಜೈಪುರದಲ್ಲಿ ಸರಣಿ ಬಾಂಬ್ ಸ್ಪೋಟಗೊಂಡಾಗ ‘ಈಗ ನಿಮಗೆ ನೆಮ್ಮದಿಯ ನಿದ್ರೆ ಬರುತ್ತಿದೆಯೇ?’ ಎಂದು ಹಂಗಿಸಿದ್ದರು. ವಾಸ್ತವವಾಗಿ, ಆ ಬಾಂಬ್ ಸ್ಪೋಟಗಳ ‘ಮಸ್ಟರ್ ಮೈಂಡ್’ಗಳೆಂದು ಬಂಧಿಸಲಾಗಿದ್ದ ಹತ್ತಾರು ಮುಸಲ್ಮಾನ ಯುವಕರ ವಿರುದ್ಧ ಯಾವ ಮಾಹಿತಿಯೂ ಇಲ್ಲ ಎಂದು ರಾಜಸ್ತಾನದ ಮುಖ್ಯಮಂತ್ರಿ ವಸುಂಧರ ರಾಜೆ ಅವರ ಬಿಜೆಪಿ ಸರ್ಕಾರವೇ ಬಿಡುಗಡೆಗೊಳಿಸಿದೆ.

ಭಾರತದಲ್ಲಿ ಸಂಭವಿಸುವ ಎಲ್ಲಾ ಭಯೊತ್ಪಾದಕ ಕೃತ್ಯಗಳ ಹಿಂದೆ ಮುಸಲ್ಮಾನರೇ ಇರುತ್ತಾರೆಂಬ ಭಾವನೆ ನಮ್ಮ ಪೊಲೀಸ್ ಮತ್ತು ಮಾಧ್ಯಮಗಳಲ್ಲಿ ಆಳವಾಗಿ ಬೇರುಬಿಟ್ಟಿದೆ. ಆದ್ದರಿಂದಲೇ ಹೈದರಾಬಾದಿನ ಮೆಕ್ಕಾ ಮಸೀದಿಯಲ್ಲಿ ಬಾಂಬ್ ಸ್ಪೋಟಗೊಂಡು ಆರು ಜನ ಮುಸಲ್ಮಾನರೆ ಸತ್ತರೂ, ಮಾಲೆಗಾಂವ್‌ನ ಮಸೀದಿಯ ಹತ್ತಿರ ಶುಕ್ರವಾರದ ನಮಾಜಿನ ಮೇಲೆ ಬಾಂಬ್ ಸ್ಪೋಟಿಸಿ 37 ಜನ ಮುಸಲ್ಮಾನರೇ ಸಾವಿಗೀಡಾಗಿದ್ದರೂ, ಸಂಜೋತಾ ಟ್ರೈನಿನಲ್ಲಿ ಸ್ಪೋಟ ಸಂಭವಿಸಿ ಸತ್ತ 68 ಜನರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸಲ್ಮಾನರೇ ಇದ್ದರೂ ಆ ಎಲ್ಲಾ ಪ್ರಕರಣಗಳ ಹಿಂದೆ ಮುಸಲ್ಮಾನ್ ಸಂಘಟನೆಗಳೇ ಇದ್ದವು ಎಂಬಂತೆ ಪೊಲೀಸರು ಮತ್ತು ಮಾಧ್ಯಮಗಳು ಬಿಂಬಿಸಿದ್ದವು. ಸಾಮಾನ್ಯ ಜ್ಞಾನ ಇದ್ದವನಿಗೂ ಕೂಡ ಮುಸಲ್ಮಾನ ಭಯೋತ್ಪಾದಕರೇ ಯಾಕೆ ತಮ್ಮ ಪ್ರರ್ಥನಾ ಸ್ಥಳಗಳನ್ನು ಸ್ಪೋಟಿಸುತ್ತಾರೆ. ತಮ್ಮ ಸಮುದಾಯದವರನ್ನು ಕೊಲ್ಲುತ್ತಾರೆ, ಇದರ ಹಿಂದೆ ಬೇರೆ ಸಂಘಟನೆಗಳ ಕೈವಾಡವಿದೆ ಎಂದು ಹೊಳೆಯುತ್ತದೆ. ಆದರೆ ಪೊಲೀಸರು ಮಾತ್ರ ಎಂದಿನಂತೆ ಸಿಮಿ, ಲಷ್ಕರ್, ಜೈಷ್, ತಾಲಿಬಾನ್ ಎಂದೇ ಬಾಯಿಬಡಿದುಕೊಳ್ಳುತ್ತಿರುತ್ತಾರೆ.

ಹಿಂದೂತ್ವವಾದಿಗಳ ಭಂದತನ ಯಾವ ಮಟ್ಟದ್ದೆಂದರೆ ಅದರ ಮುಖವಾಣಿಯಾದ ಪಾಂಚಜನ್ಯದ ಸಂಪಾದಕ ತರುಣ್ ವಿಜಯ್ ಎಂಬಾತ ‘ಒಬ್ಬನೇ ಒಬ್ಬ ಹಿಂದೂ ಕೂಡ ಭಯೋತ್ಪಾದನೆಯನ್ನು ಸಮರ್ಥಿಸುವುದಿಲ್ಲ. ಅದು ನಮ್ಮ ವಂಶವಾಹಿಯಲ್ಲೇ ಇಲ್ಲ. ಈ ವಿಷಯದಲ್ಲಿ ನಮ್ಮ ರಕ್ತವರ್ಗವೇ ಬೇರೆಯದ್ದು’ ಎಂದು ವಾದಿಸಿದ್ದಾನೆ. ಅಷ್ಟೇ ಅಲ್ಲದೆ ‘ಸಾಧ್ವಿ ಪ್ರಗ್ಯಾ ಈಗ ಹೀರೋ ಆಗಿದ್ದಾಳೆ’ ಎಂದು ಹೇಳಿದ್ದಾನೆ. ಇ ತರುಣ್ ವಿಜಯ್‌ನನ್ನು ಯಾರಾದರೂ ಪ್ರಶ್ನಿಸಬೇಕಿದೆ: ‘ನೀಣೇ ಹೇಳಿರುವಂತೆ ಹಿಂದೂಗಳ ಅನುವಂಶದಲ್ಲಿ ಮತ್ತು ರಕ್ತವರ್ಗದಲ್ಲಿ ಭಯೋತ್ಪಾದನೆ ಇಲ್ಲ ಎಂಬುಬು ನಿಜವಾದರೆ, ಭಯೋತ್ಪಾದನೆ ಇಲ್ಲ ಎಂಬುದು ನಿಜವಾದರೆ, ಬಯೋತ್ಪಾದನೆ ಆರೊಪ ಹೊತ್ತಿರುವ ಪ್ರಗ್ಯಾ ಹಿಂದೂ ಅಲ್ಲ ಎಂದಾಯಿತಲ್ಲವೇ?’

ಈತನಂತೆ ಇನ್ನೊಬ್ಬ ಹಿಂದೂತ್ವವಾದಿ ನಾನಾ ವಾಡೇಕರ್ ಎಂಬಾತ, ಈಗ ಭಾರತ ಸೇನೆಗೆ ಕಳಂಕದಂತಾಗಿರುವ ಲೆಫ್ಟಿನೆಂಟ್ ಕರ್ನಲ್ ಪುರೋಹಿತನನ್ನು ಕ್ರಾಂತಿಕಾರಿ ಮಂಗಲ್ ಪಾಂಡೆಗೆ ಹೋಲಿಸಿದ್ದಾನಲ್ಲದೆ, ‘ಪ್ರಗ್ಯಾ ಮತ್ತು ಪುರೋಹಿತ್ ಬಾಂಬ್ ಸ್ಫೊಟದಲ್ಲಿ ಭಾಗವಹಿಸಿದ್ದು ನಿಜವಾದರೆ ಅವರ ಬಗ್ಗೆ ನಾವು ಹೆಮ್ಮೆಪಡುತ್ತೇವೆ’ ಎಂದಿದ್ದಾನೆ. ಅಮಾಯಕರನ್ನು ಕೊಲ್ಲುವುದು ಅದು ಹೇಗೆ ಹೆಮ್ಮೆಯ ವಿಷಯವಾಗುತ್ತದೆ? ಆದರೆ ತರುಣ್ ವಿಜಯ್ ಮತ್ತು ವಾಡೇಕರ್ ತರಹದವರು ಭೈರಪ್ಪ ಮತ್ತು ಚಿಮೂನ ಸಂತತಿಯವರೇ ಆಗಿರುವುದರಿಂದ ಇವೆಲ್ಲ ಅವರಿಗೆ ಅರ್ಥವಾಗುವುದಿಲ್ಲ ಬಿಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...