Homeಅಂಕಣಗಳುಸಾಧ್ವಿ ಪ್ರಗ್ಯಾ ಭಯೋತ್ಪಾದನೆ ಮತ್ತು ದ್ವಂದ್ವಗಳು

ಸಾಧ್ವಿ ಪ್ರಗ್ಯಾ ಭಯೋತ್ಪಾದನೆ ಮತ್ತು ದ್ವಂದ್ವಗಳು

- Advertisement -
- Advertisement -

| ಗೌರಿ ಲಂಕೇಶ್ |
03 ಡಿಸೆಂಬರ್, 2008 ( ಕಂಡಹಾಗೆ ಸಂಪಾದಕೀಯದಿಂದ)

ಮೊದಲೇ ಒಂದು ಅಂಶವನ್ನು ಸ್ಪಷ್ಟಪಡಿಸಬೇಕಿದೆ. ಅದೇನೆಂದರೆ ಮಾಲೆಗಾಂವ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ಸಾಧ್ವಿ ಪ್ರಗ್ಯಾ, ಲೆಫ್ಟಿನೆಂಟ್ ಶ್ರೀಕಾಂತ್ ಪುರೋಹಿತ ಮತ್ತು ಇತರರ ಮೇಲೆ ಪೊಲೀಸ್ ದೌರ್ಜನ್ಯ ನಿಲ್ಲಬೇಕು. ಅವರೆಲ್ಲರಿಗೆ ಸೂಕ್ತ ಕಾನೂನು ನೆರವು ನೀಡಬೇಕು. ಅವರ ಮೇಲೆ ಪೊಲೀಸರು ಮಾಡಿರುವ ಆರೋಪಗಳನ್ನು ಸಾಬೀತುಪಡಿಸುವತ್ತ ಸರ್ಕಾರ ನೋಡಿಕೊಳ್ಳಬೇಕು. ಅಕಸ್ಮಾತ್ ಸಾಧ್ವಿ ಮತ್ತಾಕೆಯ ತಂಡ ನಿರ್ದೋಷಿಗಳಾಗಿದ್ದರೆ ಅದನ್ನೂ ಸಾಬೀತುಪಡಿಸಲು ಅವರಿಗೆ ಎಲ್ಲ ಅವಕಾಶಗಳನ್ನು ಮಾಡಿಕೊಡಬೇಕು. ಇದೆಲ್ಲ ಸರಿಯಾಗಿ ನಡೆದ ನಂತರ ಎಲ್ಲರೂ ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿರಬೇಕು.

ನಾವಾಗಲಿ, ಕಾನೂನು ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವವರಾಗಲಿ, ಮಾನವ ಹಕ್ಕುಗಳ ಹೋರಾಟಗಾರರಾಗಲಿ ಇದನ್ನು ಮೊದಲ ಬಾರಿ ಹೇಳುತ್ತಿಲ್ಲ. ಬಹಳ ವರ್ಷಗಳಿಂದ ನಮ್ಮೆಲ್ಲರ ನಿಲುವು ಇದೇ ಆಗಿದೆ. ಬಾಂಬ್ ಸ್ಪೋಟ ಆರೋಪಿಗಳ ಮೇಲೆ, ಸಿಮಿ ಸದಸ್ಯರು ಎಂಬ ಸಂಶಯದ ಮೇಲೆ, ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರಬಹುದು ಎಂಬ ನೆಪದಲ್ಲಿ ಸಾವಿರಾರು ಮುಸಲ್ಮಾನರನ್ನು ಪೊಲೀಸರು ಬಂಧಿಸಿದಾಗ ನಾವು ಹೇಳಿದ್ದು ಇದನ್ನೇ. ಈಗ ಸಾಧ್ವಿ, ಪುರೋಹಿತ್ ಮತ್ತು ಇತರರನ್ನು ಕುರಿತು ಹೇಳುವುದೂ ಇದೇ ಮಾತನ್ನೇ.

ಆದರೆ ಆರ್‌ಎಸ್‌ಎಸ್, ಬಿಜೆಪಿ, ವಿಶ್ವಹಿಂದೂ ಪರಿಷತ್, ಭಜರಂಗದಳ, ಅಭಿನವ ಭಾರತ್ ಮತ್ತು ಸಂಘ ಪರಿವಾರದ ಇತರೆ ತುಂಡುಗಳು ಮಾತ್ರ ಮೊದಲಿನಿಂದಲೂ ಹೇಗೆ ವರ್ತಿಸಿವೆ ನೋಡಿ.

‘ಸಾಧ್ವಿ ಪ್ರಗ್ಯಾಗೆ ಪೊಲೀಸರು ದೈಹಿಕ ಹಿಂಸೆ ನೀಡಿದ್ದಾರೆ’ ಎಂದು ಅರಚಾಡುತ್ತಿರುವ ಚೆಡ್ಡಿಗಳಿಗೆ ಅದೇ ಪೊಲೀಸರು ಮುಸಲ್ಮಾನ ಆರೋಪಿಗಳ ಮೇಲೆ ದೌರ್ಜನ್ಯ ನಡೆಸಿದ್ದು ಕಾಣಿಸಲಿಲ್ಲ. ಈಗ ಪ್ರಗ್ಯಾಳಿಗೆ ಕಾನೂನು ನೆರವು ನೀಡಲು ವಕೀಲರ ಸಂಘಗಳನ್ನು ರೂಪಿಸಿರುವ, ಆಕೆಯ ಪರವಾಗಿ ಕಾನೂನು ಸಮರಕ್ಕೆ ಹಣ ಸಂಗ್ರಹಿಸುತ್ತಿರುವ ಚೆಡ್ಡಿಗಳು ಪ್ರಗ್ಯಾಳಂತೆಯೇ ಭಯೋತ್ಪಾದನೆ ಆರೋಪದ ಮೇಲೆ ಮುಸಲ್ಮಾನ ಯುವಕರನ್ನು ಬಂಧಿಸಿದಾಗ ಪ್ರತಿಕ್ರಿಯಿಸಿದ್ದು ಹೇಗೆ? ಅಫಜಲ್‌ಗುರು ಪರವಾಗಿ ಯಾವ ವಕೀಲನೂ ವಕಾಲತ್ತು ವಹಿಸಬಾರದೆಂದು ದೆಹಲಿಯ ವಕೀಲರ ಸಂಘ ಫತ್ವಾ ಹೊರಡಿಸಿತ್ತು. ಕೊನೆಗೆ ನ್ಯಾಯಾಲಯವೇ ಅಫಜಲ್‌ಗುರುಗೆ ಓರ್ವ ವಕೀಲನನ್ನು ನೇಮಿಸಿತ್ತಾದರೂ ಆತ ಎಂದೂ ಆಫಜಲ್‌ಗುರು ಪರವಾಗಿ ನ್ಯಾಯಾಲಯದಲ್ಲಿ ದನಿ ಎತ್ತಲಿಲ್ಲ. ಪರಿಣಾಮವಾಗಿ ಆತನಿಗೆ ಗಲ್ಲುಶಿಕ್ಷೆ ನೀಡಲಾಯ್ತು.

ಸಂಘ ಪರಿವಾರ ಯಾಕೆ ತನಗೊಂದು ನ್ಯಾಯ, ಇತರರಿಗೊಂದು ನ್ಯಾಯ ಎಂದು ವಾದಿಸುತ್ತದೆ?
ಬೆಂಗಳೂರಿನ ಡಾ.ಹನೀಫ್‌ರನ್ನು ಸುಳ್ಳು ಅರೋಪಗಳ ಮೇಲೆ ಆಸ್ಟ್ರೇಲಿಯಾದ ಪೊಲೀಸರು ಬಂಧಿಸಿದಾಗ ಹನೀಪರ ಹೆಂಡತಿ ಮತ್ತು ತಾಯಿ ಕಣ್ಣೀರಿಟ್ಟಿದ್ದನ್ನು ನೋಡಿ ತನಗೆ ನಿದ್ದೆ ಬರಲಿಲ್ಲ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದರು. ಆ ವಾಕ್ಯವನ್ನು ಚೆಡ್ಡಿಗಳು ಹಲವಾರು ಬಾರಿ ಲೇವಡಿ ಮಾಡಿದ್ದಾರೆ. ಯಾವ ಪರಿ ಎಂದರೆ ಜೈಪುರದಲ್ಲಿ ಸರಣಿ ಬಾಂಬ್ ಸ್ಪೋಟಗೊಂಡಾಗ ‘ಈಗ ನಿಮಗೆ ನೆಮ್ಮದಿಯ ನಿದ್ರೆ ಬರುತ್ತಿದೆಯೇ?’ ಎಂದು ಹಂಗಿಸಿದ್ದರು. ವಾಸ್ತವವಾಗಿ, ಆ ಬಾಂಬ್ ಸ್ಪೋಟಗಳ ‘ಮಸ್ಟರ್ ಮೈಂಡ್’ಗಳೆಂದು ಬಂಧಿಸಲಾಗಿದ್ದ ಹತ್ತಾರು ಮುಸಲ್ಮಾನ ಯುವಕರ ವಿರುದ್ಧ ಯಾವ ಮಾಹಿತಿಯೂ ಇಲ್ಲ ಎಂದು ರಾಜಸ್ತಾನದ ಮುಖ್ಯಮಂತ್ರಿ ವಸುಂಧರ ರಾಜೆ ಅವರ ಬಿಜೆಪಿ ಸರ್ಕಾರವೇ ಬಿಡುಗಡೆಗೊಳಿಸಿದೆ.

ಭಾರತದಲ್ಲಿ ಸಂಭವಿಸುವ ಎಲ್ಲಾ ಭಯೊತ್ಪಾದಕ ಕೃತ್ಯಗಳ ಹಿಂದೆ ಮುಸಲ್ಮಾನರೇ ಇರುತ್ತಾರೆಂಬ ಭಾವನೆ ನಮ್ಮ ಪೊಲೀಸ್ ಮತ್ತು ಮಾಧ್ಯಮಗಳಲ್ಲಿ ಆಳವಾಗಿ ಬೇರುಬಿಟ್ಟಿದೆ. ಆದ್ದರಿಂದಲೇ ಹೈದರಾಬಾದಿನ ಮೆಕ್ಕಾ ಮಸೀದಿಯಲ್ಲಿ ಬಾಂಬ್ ಸ್ಪೋಟಗೊಂಡು ಆರು ಜನ ಮುಸಲ್ಮಾನರೆ ಸತ್ತರೂ, ಮಾಲೆಗಾಂವ್‌ನ ಮಸೀದಿಯ ಹತ್ತಿರ ಶುಕ್ರವಾರದ ನಮಾಜಿನ ಮೇಲೆ ಬಾಂಬ್ ಸ್ಪೋಟಿಸಿ 37 ಜನ ಮುಸಲ್ಮಾನರೇ ಸಾವಿಗೀಡಾಗಿದ್ದರೂ, ಸಂಜೋತಾ ಟ್ರೈನಿನಲ್ಲಿ ಸ್ಪೋಟ ಸಂಭವಿಸಿ ಸತ್ತ 68 ಜನರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸಲ್ಮಾನರೇ ಇದ್ದರೂ ಆ ಎಲ್ಲಾ ಪ್ರಕರಣಗಳ ಹಿಂದೆ ಮುಸಲ್ಮಾನ್ ಸಂಘಟನೆಗಳೇ ಇದ್ದವು ಎಂಬಂತೆ ಪೊಲೀಸರು ಮತ್ತು ಮಾಧ್ಯಮಗಳು ಬಿಂಬಿಸಿದ್ದವು. ಸಾಮಾನ್ಯ ಜ್ಞಾನ ಇದ್ದವನಿಗೂ ಕೂಡ ಮುಸಲ್ಮಾನ ಭಯೋತ್ಪಾದಕರೇ ಯಾಕೆ ತಮ್ಮ ಪ್ರರ್ಥನಾ ಸ್ಥಳಗಳನ್ನು ಸ್ಪೋಟಿಸುತ್ತಾರೆ. ತಮ್ಮ ಸಮುದಾಯದವರನ್ನು ಕೊಲ್ಲುತ್ತಾರೆ, ಇದರ ಹಿಂದೆ ಬೇರೆ ಸಂಘಟನೆಗಳ ಕೈವಾಡವಿದೆ ಎಂದು ಹೊಳೆಯುತ್ತದೆ. ಆದರೆ ಪೊಲೀಸರು ಮಾತ್ರ ಎಂದಿನಂತೆ ಸಿಮಿ, ಲಷ್ಕರ್, ಜೈಷ್, ತಾಲಿಬಾನ್ ಎಂದೇ ಬಾಯಿಬಡಿದುಕೊಳ್ಳುತ್ತಿರುತ್ತಾರೆ.

ಹಿಂದೂತ್ವವಾದಿಗಳ ಭಂದತನ ಯಾವ ಮಟ್ಟದ್ದೆಂದರೆ ಅದರ ಮುಖವಾಣಿಯಾದ ಪಾಂಚಜನ್ಯದ ಸಂಪಾದಕ ತರುಣ್ ವಿಜಯ್ ಎಂಬಾತ ‘ಒಬ್ಬನೇ ಒಬ್ಬ ಹಿಂದೂ ಕೂಡ ಭಯೋತ್ಪಾದನೆಯನ್ನು ಸಮರ್ಥಿಸುವುದಿಲ್ಲ. ಅದು ನಮ್ಮ ವಂಶವಾಹಿಯಲ್ಲೇ ಇಲ್ಲ. ಈ ವಿಷಯದಲ್ಲಿ ನಮ್ಮ ರಕ್ತವರ್ಗವೇ ಬೇರೆಯದ್ದು’ ಎಂದು ವಾದಿಸಿದ್ದಾನೆ. ಅಷ್ಟೇ ಅಲ್ಲದೆ ‘ಸಾಧ್ವಿ ಪ್ರಗ್ಯಾ ಈಗ ಹೀರೋ ಆಗಿದ್ದಾಳೆ’ ಎಂದು ಹೇಳಿದ್ದಾನೆ. ಇ ತರುಣ್ ವಿಜಯ್‌ನನ್ನು ಯಾರಾದರೂ ಪ್ರಶ್ನಿಸಬೇಕಿದೆ: ‘ನೀಣೇ ಹೇಳಿರುವಂತೆ ಹಿಂದೂಗಳ ಅನುವಂಶದಲ್ಲಿ ಮತ್ತು ರಕ್ತವರ್ಗದಲ್ಲಿ ಭಯೋತ್ಪಾದನೆ ಇಲ್ಲ ಎಂಬುಬು ನಿಜವಾದರೆ, ಭಯೋತ್ಪಾದನೆ ಇಲ್ಲ ಎಂಬುದು ನಿಜವಾದರೆ, ಬಯೋತ್ಪಾದನೆ ಆರೊಪ ಹೊತ್ತಿರುವ ಪ್ರಗ್ಯಾ ಹಿಂದೂ ಅಲ್ಲ ಎಂದಾಯಿತಲ್ಲವೇ?’

ಈತನಂತೆ ಇನ್ನೊಬ್ಬ ಹಿಂದೂತ್ವವಾದಿ ನಾನಾ ವಾಡೇಕರ್ ಎಂಬಾತ, ಈಗ ಭಾರತ ಸೇನೆಗೆ ಕಳಂಕದಂತಾಗಿರುವ ಲೆಫ್ಟಿನೆಂಟ್ ಕರ್ನಲ್ ಪುರೋಹಿತನನ್ನು ಕ್ರಾಂತಿಕಾರಿ ಮಂಗಲ್ ಪಾಂಡೆಗೆ ಹೋಲಿಸಿದ್ದಾನಲ್ಲದೆ, ‘ಪ್ರಗ್ಯಾ ಮತ್ತು ಪುರೋಹಿತ್ ಬಾಂಬ್ ಸ್ಫೊಟದಲ್ಲಿ ಭಾಗವಹಿಸಿದ್ದು ನಿಜವಾದರೆ ಅವರ ಬಗ್ಗೆ ನಾವು ಹೆಮ್ಮೆಪಡುತ್ತೇವೆ’ ಎಂದಿದ್ದಾನೆ. ಅಮಾಯಕರನ್ನು ಕೊಲ್ಲುವುದು ಅದು ಹೇಗೆ ಹೆಮ್ಮೆಯ ವಿಷಯವಾಗುತ್ತದೆ? ಆದರೆ ತರುಣ್ ವಿಜಯ್ ಮತ್ತು ವಾಡೇಕರ್ ತರಹದವರು ಭೈರಪ್ಪ ಮತ್ತು ಚಿಮೂನ ಸಂತತಿಯವರೇ ಆಗಿರುವುದರಿಂದ ಇವೆಲ್ಲ ಅವರಿಗೆ ಅರ್ಥವಾಗುವುದಿಲ್ಲ ಬಿಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...