Homeಅಂಕಣಗಳುಸಾಧ್ವಿ ಪ್ರಗ್ಯಾ ಭಯೋತ್ಪಾದನೆ ಮತ್ತು ದ್ವಂದ್ವಗಳು

ಸಾಧ್ವಿ ಪ್ರಗ್ಯಾ ಭಯೋತ್ಪಾದನೆ ಮತ್ತು ದ್ವಂದ್ವಗಳು

- Advertisement -
- Advertisement -

| ಗೌರಿ ಲಂಕೇಶ್ |
03 ಡಿಸೆಂಬರ್, 2008 ( ಕಂಡಹಾಗೆ ಸಂಪಾದಕೀಯದಿಂದ)

ಮೊದಲೇ ಒಂದು ಅಂಶವನ್ನು ಸ್ಪಷ್ಟಪಡಿಸಬೇಕಿದೆ. ಅದೇನೆಂದರೆ ಮಾಲೆಗಾಂವ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ಸಾಧ್ವಿ ಪ್ರಗ್ಯಾ, ಲೆಫ್ಟಿನೆಂಟ್ ಶ್ರೀಕಾಂತ್ ಪುರೋಹಿತ ಮತ್ತು ಇತರರ ಮೇಲೆ ಪೊಲೀಸ್ ದೌರ್ಜನ್ಯ ನಿಲ್ಲಬೇಕು. ಅವರೆಲ್ಲರಿಗೆ ಸೂಕ್ತ ಕಾನೂನು ನೆರವು ನೀಡಬೇಕು. ಅವರ ಮೇಲೆ ಪೊಲೀಸರು ಮಾಡಿರುವ ಆರೋಪಗಳನ್ನು ಸಾಬೀತುಪಡಿಸುವತ್ತ ಸರ್ಕಾರ ನೋಡಿಕೊಳ್ಳಬೇಕು. ಅಕಸ್ಮಾತ್ ಸಾಧ್ವಿ ಮತ್ತಾಕೆಯ ತಂಡ ನಿರ್ದೋಷಿಗಳಾಗಿದ್ದರೆ ಅದನ್ನೂ ಸಾಬೀತುಪಡಿಸಲು ಅವರಿಗೆ ಎಲ್ಲ ಅವಕಾಶಗಳನ್ನು ಮಾಡಿಕೊಡಬೇಕು. ಇದೆಲ್ಲ ಸರಿಯಾಗಿ ನಡೆದ ನಂತರ ಎಲ್ಲರೂ ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿರಬೇಕು.

ನಾವಾಗಲಿ, ಕಾನೂನು ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವವರಾಗಲಿ, ಮಾನವ ಹಕ್ಕುಗಳ ಹೋರಾಟಗಾರರಾಗಲಿ ಇದನ್ನು ಮೊದಲ ಬಾರಿ ಹೇಳುತ್ತಿಲ್ಲ. ಬಹಳ ವರ್ಷಗಳಿಂದ ನಮ್ಮೆಲ್ಲರ ನಿಲುವು ಇದೇ ಆಗಿದೆ. ಬಾಂಬ್ ಸ್ಪೋಟ ಆರೋಪಿಗಳ ಮೇಲೆ, ಸಿಮಿ ಸದಸ್ಯರು ಎಂಬ ಸಂಶಯದ ಮೇಲೆ, ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರಬಹುದು ಎಂಬ ನೆಪದಲ್ಲಿ ಸಾವಿರಾರು ಮುಸಲ್ಮಾನರನ್ನು ಪೊಲೀಸರು ಬಂಧಿಸಿದಾಗ ನಾವು ಹೇಳಿದ್ದು ಇದನ್ನೇ. ಈಗ ಸಾಧ್ವಿ, ಪುರೋಹಿತ್ ಮತ್ತು ಇತರರನ್ನು ಕುರಿತು ಹೇಳುವುದೂ ಇದೇ ಮಾತನ್ನೇ.

ಆದರೆ ಆರ್‌ಎಸ್‌ಎಸ್, ಬಿಜೆಪಿ, ವಿಶ್ವಹಿಂದೂ ಪರಿಷತ್, ಭಜರಂಗದಳ, ಅಭಿನವ ಭಾರತ್ ಮತ್ತು ಸಂಘ ಪರಿವಾರದ ಇತರೆ ತುಂಡುಗಳು ಮಾತ್ರ ಮೊದಲಿನಿಂದಲೂ ಹೇಗೆ ವರ್ತಿಸಿವೆ ನೋಡಿ.

‘ಸಾಧ್ವಿ ಪ್ರಗ್ಯಾಗೆ ಪೊಲೀಸರು ದೈಹಿಕ ಹಿಂಸೆ ನೀಡಿದ್ದಾರೆ’ ಎಂದು ಅರಚಾಡುತ್ತಿರುವ ಚೆಡ್ಡಿಗಳಿಗೆ ಅದೇ ಪೊಲೀಸರು ಮುಸಲ್ಮಾನ ಆರೋಪಿಗಳ ಮೇಲೆ ದೌರ್ಜನ್ಯ ನಡೆಸಿದ್ದು ಕಾಣಿಸಲಿಲ್ಲ. ಈಗ ಪ್ರಗ್ಯಾಳಿಗೆ ಕಾನೂನು ನೆರವು ನೀಡಲು ವಕೀಲರ ಸಂಘಗಳನ್ನು ರೂಪಿಸಿರುವ, ಆಕೆಯ ಪರವಾಗಿ ಕಾನೂನು ಸಮರಕ್ಕೆ ಹಣ ಸಂಗ್ರಹಿಸುತ್ತಿರುವ ಚೆಡ್ಡಿಗಳು ಪ್ರಗ್ಯಾಳಂತೆಯೇ ಭಯೋತ್ಪಾದನೆ ಆರೋಪದ ಮೇಲೆ ಮುಸಲ್ಮಾನ ಯುವಕರನ್ನು ಬಂಧಿಸಿದಾಗ ಪ್ರತಿಕ್ರಿಯಿಸಿದ್ದು ಹೇಗೆ? ಅಫಜಲ್‌ಗುರು ಪರವಾಗಿ ಯಾವ ವಕೀಲನೂ ವಕಾಲತ್ತು ವಹಿಸಬಾರದೆಂದು ದೆಹಲಿಯ ವಕೀಲರ ಸಂಘ ಫತ್ವಾ ಹೊರಡಿಸಿತ್ತು. ಕೊನೆಗೆ ನ್ಯಾಯಾಲಯವೇ ಅಫಜಲ್‌ಗುರುಗೆ ಓರ್ವ ವಕೀಲನನ್ನು ನೇಮಿಸಿತ್ತಾದರೂ ಆತ ಎಂದೂ ಆಫಜಲ್‌ಗುರು ಪರವಾಗಿ ನ್ಯಾಯಾಲಯದಲ್ಲಿ ದನಿ ಎತ್ತಲಿಲ್ಲ. ಪರಿಣಾಮವಾಗಿ ಆತನಿಗೆ ಗಲ್ಲುಶಿಕ್ಷೆ ನೀಡಲಾಯ್ತು.

ಸಂಘ ಪರಿವಾರ ಯಾಕೆ ತನಗೊಂದು ನ್ಯಾಯ, ಇತರರಿಗೊಂದು ನ್ಯಾಯ ಎಂದು ವಾದಿಸುತ್ತದೆ?
ಬೆಂಗಳೂರಿನ ಡಾ.ಹನೀಫ್‌ರನ್ನು ಸುಳ್ಳು ಅರೋಪಗಳ ಮೇಲೆ ಆಸ್ಟ್ರೇಲಿಯಾದ ಪೊಲೀಸರು ಬಂಧಿಸಿದಾಗ ಹನೀಪರ ಹೆಂಡತಿ ಮತ್ತು ತಾಯಿ ಕಣ್ಣೀರಿಟ್ಟಿದ್ದನ್ನು ನೋಡಿ ತನಗೆ ನಿದ್ದೆ ಬರಲಿಲ್ಲ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದರು. ಆ ವಾಕ್ಯವನ್ನು ಚೆಡ್ಡಿಗಳು ಹಲವಾರು ಬಾರಿ ಲೇವಡಿ ಮಾಡಿದ್ದಾರೆ. ಯಾವ ಪರಿ ಎಂದರೆ ಜೈಪುರದಲ್ಲಿ ಸರಣಿ ಬಾಂಬ್ ಸ್ಪೋಟಗೊಂಡಾಗ ‘ಈಗ ನಿಮಗೆ ನೆಮ್ಮದಿಯ ನಿದ್ರೆ ಬರುತ್ತಿದೆಯೇ?’ ಎಂದು ಹಂಗಿಸಿದ್ದರು. ವಾಸ್ತವವಾಗಿ, ಆ ಬಾಂಬ್ ಸ್ಪೋಟಗಳ ‘ಮಸ್ಟರ್ ಮೈಂಡ್’ಗಳೆಂದು ಬಂಧಿಸಲಾಗಿದ್ದ ಹತ್ತಾರು ಮುಸಲ್ಮಾನ ಯುವಕರ ವಿರುದ್ಧ ಯಾವ ಮಾಹಿತಿಯೂ ಇಲ್ಲ ಎಂದು ರಾಜಸ್ತಾನದ ಮುಖ್ಯಮಂತ್ರಿ ವಸುಂಧರ ರಾಜೆ ಅವರ ಬಿಜೆಪಿ ಸರ್ಕಾರವೇ ಬಿಡುಗಡೆಗೊಳಿಸಿದೆ.

ಭಾರತದಲ್ಲಿ ಸಂಭವಿಸುವ ಎಲ್ಲಾ ಭಯೊತ್ಪಾದಕ ಕೃತ್ಯಗಳ ಹಿಂದೆ ಮುಸಲ್ಮಾನರೇ ಇರುತ್ತಾರೆಂಬ ಭಾವನೆ ನಮ್ಮ ಪೊಲೀಸ್ ಮತ್ತು ಮಾಧ್ಯಮಗಳಲ್ಲಿ ಆಳವಾಗಿ ಬೇರುಬಿಟ್ಟಿದೆ. ಆದ್ದರಿಂದಲೇ ಹೈದರಾಬಾದಿನ ಮೆಕ್ಕಾ ಮಸೀದಿಯಲ್ಲಿ ಬಾಂಬ್ ಸ್ಪೋಟಗೊಂಡು ಆರು ಜನ ಮುಸಲ್ಮಾನರೆ ಸತ್ತರೂ, ಮಾಲೆಗಾಂವ್‌ನ ಮಸೀದಿಯ ಹತ್ತಿರ ಶುಕ್ರವಾರದ ನಮಾಜಿನ ಮೇಲೆ ಬಾಂಬ್ ಸ್ಪೋಟಿಸಿ 37 ಜನ ಮುಸಲ್ಮಾನರೇ ಸಾವಿಗೀಡಾಗಿದ್ದರೂ, ಸಂಜೋತಾ ಟ್ರೈನಿನಲ್ಲಿ ಸ್ಪೋಟ ಸಂಭವಿಸಿ ಸತ್ತ 68 ಜನರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸಲ್ಮಾನರೇ ಇದ್ದರೂ ಆ ಎಲ್ಲಾ ಪ್ರಕರಣಗಳ ಹಿಂದೆ ಮುಸಲ್ಮಾನ್ ಸಂಘಟನೆಗಳೇ ಇದ್ದವು ಎಂಬಂತೆ ಪೊಲೀಸರು ಮತ್ತು ಮಾಧ್ಯಮಗಳು ಬಿಂಬಿಸಿದ್ದವು. ಸಾಮಾನ್ಯ ಜ್ಞಾನ ಇದ್ದವನಿಗೂ ಕೂಡ ಮುಸಲ್ಮಾನ ಭಯೋತ್ಪಾದಕರೇ ಯಾಕೆ ತಮ್ಮ ಪ್ರರ್ಥನಾ ಸ್ಥಳಗಳನ್ನು ಸ್ಪೋಟಿಸುತ್ತಾರೆ. ತಮ್ಮ ಸಮುದಾಯದವರನ್ನು ಕೊಲ್ಲುತ್ತಾರೆ, ಇದರ ಹಿಂದೆ ಬೇರೆ ಸಂಘಟನೆಗಳ ಕೈವಾಡವಿದೆ ಎಂದು ಹೊಳೆಯುತ್ತದೆ. ಆದರೆ ಪೊಲೀಸರು ಮಾತ್ರ ಎಂದಿನಂತೆ ಸಿಮಿ, ಲಷ್ಕರ್, ಜೈಷ್, ತಾಲಿಬಾನ್ ಎಂದೇ ಬಾಯಿಬಡಿದುಕೊಳ್ಳುತ್ತಿರುತ್ತಾರೆ.

ಹಿಂದೂತ್ವವಾದಿಗಳ ಭಂದತನ ಯಾವ ಮಟ್ಟದ್ದೆಂದರೆ ಅದರ ಮುಖವಾಣಿಯಾದ ಪಾಂಚಜನ್ಯದ ಸಂಪಾದಕ ತರುಣ್ ವಿಜಯ್ ಎಂಬಾತ ‘ಒಬ್ಬನೇ ಒಬ್ಬ ಹಿಂದೂ ಕೂಡ ಭಯೋತ್ಪಾದನೆಯನ್ನು ಸಮರ್ಥಿಸುವುದಿಲ್ಲ. ಅದು ನಮ್ಮ ವಂಶವಾಹಿಯಲ್ಲೇ ಇಲ್ಲ. ಈ ವಿಷಯದಲ್ಲಿ ನಮ್ಮ ರಕ್ತವರ್ಗವೇ ಬೇರೆಯದ್ದು’ ಎಂದು ವಾದಿಸಿದ್ದಾನೆ. ಅಷ್ಟೇ ಅಲ್ಲದೆ ‘ಸಾಧ್ವಿ ಪ್ರಗ್ಯಾ ಈಗ ಹೀರೋ ಆಗಿದ್ದಾಳೆ’ ಎಂದು ಹೇಳಿದ್ದಾನೆ. ಇ ತರುಣ್ ವಿಜಯ್‌ನನ್ನು ಯಾರಾದರೂ ಪ್ರಶ್ನಿಸಬೇಕಿದೆ: ‘ನೀಣೇ ಹೇಳಿರುವಂತೆ ಹಿಂದೂಗಳ ಅನುವಂಶದಲ್ಲಿ ಮತ್ತು ರಕ್ತವರ್ಗದಲ್ಲಿ ಭಯೋತ್ಪಾದನೆ ಇಲ್ಲ ಎಂಬುಬು ನಿಜವಾದರೆ, ಭಯೋತ್ಪಾದನೆ ಇಲ್ಲ ಎಂಬುದು ನಿಜವಾದರೆ, ಬಯೋತ್ಪಾದನೆ ಆರೊಪ ಹೊತ್ತಿರುವ ಪ್ರಗ್ಯಾ ಹಿಂದೂ ಅಲ್ಲ ಎಂದಾಯಿತಲ್ಲವೇ?’

ಈತನಂತೆ ಇನ್ನೊಬ್ಬ ಹಿಂದೂತ್ವವಾದಿ ನಾನಾ ವಾಡೇಕರ್ ಎಂಬಾತ, ಈಗ ಭಾರತ ಸೇನೆಗೆ ಕಳಂಕದಂತಾಗಿರುವ ಲೆಫ್ಟಿನೆಂಟ್ ಕರ್ನಲ್ ಪುರೋಹಿತನನ್ನು ಕ್ರಾಂತಿಕಾರಿ ಮಂಗಲ್ ಪಾಂಡೆಗೆ ಹೋಲಿಸಿದ್ದಾನಲ್ಲದೆ, ‘ಪ್ರಗ್ಯಾ ಮತ್ತು ಪುರೋಹಿತ್ ಬಾಂಬ್ ಸ್ಫೊಟದಲ್ಲಿ ಭಾಗವಹಿಸಿದ್ದು ನಿಜವಾದರೆ ಅವರ ಬಗ್ಗೆ ನಾವು ಹೆಮ್ಮೆಪಡುತ್ತೇವೆ’ ಎಂದಿದ್ದಾನೆ. ಅಮಾಯಕರನ್ನು ಕೊಲ್ಲುವುದು ಅದು ಹೇಗೆ ಹೆಮ್ಮೆಯ ವಿಷಯವಾಗುತ್ತದೆ? ಆದರೆ ತರುಣ್ ವಿಜಯ್ ಮತ್ತು ವಾಡೇಕರ್ ತರಹದವರು ಭೈರಪ್ಪ ಮತ್ತು ಚಿಮೂನ ಸಂತತಿಯವರೇ ಆಗಿರುವುದರಿಂದ ಇವೆಲ್ಲ ಅವರಿಗೆ ಅರ್ಥವಾಗುವುದಿಲ್ಲ ಬಿಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...