Homeಮುಖಪುಟ'ಭಯೋತ್ಪಾದನಾ ಕೇಂದ್ರಗಳ ನಾಶದ ಹಕ್ಕು ಬಳಸಿದ್ದೇವೆ' | ಆಪರೇಷನ್ ಸಿಂಧೂರ್ ಸಮರ್ಥಿಸಿದ ಭಾರತ

‘ಭಯೋತ್ಪಾದನಾ ಕೇಂದ್ರಗಳ ನಾಶದ ಹಕ್ಕು ಬಳಸಿದ್ದೇವೆ’ | ಆಪರೇಷನ್ ಸಿಂಧೂರ್ ಸಮರ್ಥಿಸಿದ ಭಾರತ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನದ ವಿರುದ್ಧ ಬುಧವಾರ ತೀಕ್ಷ್ಣವಾದ ರಾಜತಾಂತ್ರಿಕ ಮತ್ತು ಮಿಲಿಟರಿ ದಾಳಿಯನ್ನು ನಡೆಸಿದೆ. ಈ ದಾಳಿಯನ್ನು ದೃಢಪಡಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ನೆರಳುಗಳಿದ್ದು, ಅದು ಜಮ್ಮು ಕಾಶ್ಮೀರದಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಕೋಮು ಸಾಮರಸ್ಯವನ್ನು ಭಂಗಗೊಳಿಸುವ ಉದ್ದೇಶವನ್ನು ಹೊಂದಿತ್ತು ಎಂದು ಹೇಳಿದ್ದಾರೆ. ಭಯೋತ್ಪಾದನಾ ಕೇಂದ್ರ

ಭಾರತ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿದ ಕೆಲವು ಗಂಟೆಗಳ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಿಸ್ರಿ, ಪಹಲ್ಗಾಮ್ ಹತ್ಯಾಕಾಂಡವನ್ನು “ತೀವ್ರ ಅನಾಗರಿಕ ದಾಳಿ” ಎಂದು ಬಣ್ಣಿಸಿದ್ದಾರೆ.

“ದಾಳಿಯ ವೇಳೆ ಸಂತ್ರಸ್ತರನ್ನು ಅವರ ಕುಟುಂಬ ಸದಸ್ಯರ ಮುಂದೆಯೇ ಹತ್ತಿರದಿಂದ ತಲೆಗೆ ಗುಂಡು ಹಾರಿಸಲಾಯಿತು. ಉದ್ದೇಶಪೂರ್ವಕವಾಗಿ ಅವರನ್ನು ಆಘಾತಗೊಳಿಸಲಾಯಿತು. ಕೋಮು ವೈಷಮ್ಯವನ್ನು ಪ್ರಚೋದಿಸುವ ಮತ್ತು ಕಾಶ್ಮೀರ ಸಹಜ ಸ್ಥಿತಿಗೆ ಮರಳುವುದನ್ನು ಹಳಿತಪ್ಪಿಸುವ ಗುರಿಯನ್ನು ಈ ದಾಳಿಯ ವಿಧಾನ ಹೊಂದಿತ್ತು” ಎಂದು ಅವರು ಹೇಳಿದ್ದಾರೆ.

“ಇದು ಕೇವಲ ಜನರ ಮೇಲಿನ ದಾಳಿಯಲ್ಲ, ದಾಳಿಯಿಂದ ಬದುಕಿ ಹಿಂತಿರುಗಿ ಹೋಗುವ ಸಂತ್ರಸ್ತರಿಗೆ ಸಂದೇಶ ರವಾನಿಸುವುದು ಕೂಡಾ ಈ ದಾಳಿಯ ಉದ್ದೇಶವಾಗಿತ್ತು. ಆದರೆ ಭಾರತವು ಸ್ಪಷ್ಟ ಮತ್ತು ದೃಢನಿಶ್ಚಯದಿಂದ ಪ್ರತಿಕ್ರಿಯಿಸಿದೆ” ಎಂದು ಮಿಸ್ರಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತ ಮುಂಜಾನೆ ನಡೆಸಿದ ನಿಖರ ದಾಳಿಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.

“ಪಹಲ್ಗಾಮ್ ದಾಳಿಯು ಪಾಕಿಸ್ತಾನ ಮತ್ತು ಭಯೋತ್ಪಾದಕರ ನಡುವಿನ ಸಂಪರ್ಕವನ್ನು ಬಹಿರಂಗಪಡಿಸಿದೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವವರನ್ನು ಮತ್ತು ಮಾಸ್ಟರ್ ಮೈಂಡ್‌ಗಳನ್ನು ನಮ್ಮ ಗುಪ್ತಚರ ಸಂಸ್ಥೆಗಳು ಗುರುತಿಸಿವೆ. ಜವಾಬ್ದಾರಿಯನ್ನು ಹೊತ್ತಿರುವ ಗುಂಪು, ದಿ ರೆಸಿಸ್ಟೆನ್ಸ್ ಫ್ರಂಟ್ (TRF), ಲಷ್ಕರ್-ಎ-ತೈಬಾದ ಪ್ರತಿನಿಧಿ, ಈ ಸಂಘಟನೆ ಪಾಕಿಸ್ತಾನದಿಂದ ಸಂಪೂರ್ಣವಾಗಿ ಬೆಂಬಲಿತವಾಗಿದೆ.” ಎಂದು ಮಿಶ್ರಿ ಹೇಳಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ರಾಜತಾಂತ್ರಿಕ ತಂತ್ರವನ್ನು ಸೂಚಿಸಿದ ಅವರು, “ಏಪ್ರಿಲ್ 25 ರಂದು, ಪಾಕಿಸ್ತಾನವು ತನ್ನ ಹೇಳಿಕೆಯಿಂದ TRF ಉಲ್ಲೇಖವನ್ನು ತೆಗೆದುಹಾಕುವಂತೆ UNSC ಮೇಲೆ ಒತ್ತಡ ಹೇರಿತು. ಇದನ್ನು ಸಹ ನಿರ್ಲಕ್ಷಿಸಬಾರದು” ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನವು ತನ್ನ ನೆಲದಲ್ಲಿ ಭಯೋತ್ಪಾದಕ ಮೂಲಸೌಕರ್ಯವನ್ನು ಕೆಡವಲು ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂಬುದು ಸ್ಪಷ್ಟವಾದ ನಂತರವೇ ಭಾರತವು ಈ ಕ್ರಮಗಳನ್ನು “ಅಳದು ತೂಗಿ” ನಡೆಸಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಮಿಶ್ರಿ ಒತ್ತಿ ಹೇಳಿದ್ದಾರೆ.

“ಭಾರತಕ್ಕೆ ಹಾನಿ ಮಾಡಲು ದೀರ್ಘಕಾಲದಿಂದ ಬಳಸಲಾಗುತ್ತಿರುವ ಭಯೋತ್ಪಾದಕ ಮೂಲಸೌಕರ್ಯವನ್ನು ಇಂದು ಬೆಳಿಗ್ಗೆ ಕೆಡವುವ ಮೂಲಕ ನಮ್ಮ ಹಕ್ಕನ್ನು ನಾವು ಚಲಾಯಿಸಿದ್ದೇವೆ” ಎಂದು ಹೇಳುವ ಮೂಲಕ ಮಿಶ್ರಿ ಭಯೋತ್ಪಾದನಾ ಬೆದರಿಕೆಗಳಿಗೆ ನಿರ್ಣಾಯಕವಾಗಿ ಪ್ರತಿಕ್ರಿಯಿಸುವ ಹಕ್ಕನ್ನು ಭಾರತ ಕಾಯ್ದಿರಿಸಿದೆ ಎಂದು ಹೇಳಿದ್ದಾರೆ.

ವಿದೇಶಾಂಗ ಕಾರ್ಯದರ್ಶಿಯೊಂದಿಗೆ ವರದಿಗಾರರಿಗೆ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಷಿ, “ಆಪರೇಷನ್ ಸಿಂಧೂರ್‌ ನಡೆಸುವ ವೇಳೆ, ದಾಳಿಯ ಗುರಿಗಳನ್ನು ಗಡಿಯಾಚೆಗೆ ಭಯೋತ್ಪಾದನೆಯಲ್ಲಿ ನೇರವಾಗಿ ಪಾಲ್ಗೊಳ್ಳುತ್ತಿರುವವ ಬಗ್ಗೆ ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ. ಇವು ಸಕ್ರಿಯ ಭಯೋತ್ಪಾದಕ ಉಡಾವಣಾ ನೆಲೆಗಳು ಮತ್ತು ತರಬೇತಿ ಶಿಬಿರಗಳಾಗಿದ್ದವು” ಎಂದು  ಹೇಳಿದ್ದಾರೆ. ಭಯೋತ್ಪಾದನಾ ಕೇಂದ್ರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...