Homeಮುಖಪುಟ'ಭಯೋತ್ಪಾದನಾ ಕೇಂದ್ರಗಳ ನಾಶದ ಹಕ್ಕು ಬಳಸಿದ್ದೇವೆ' | ಆಪರೇಷನ್ ಸಿಂಧೂರ್ ಸಮರ್ಥಿಸಿದ ಭಾರತ

‘ಭಯೋತ್ಪಾದನಾ ಕೇಂದ್ರಗಳ ನಾಶದ ಹಕ್ಕು ಬಳಸಿದ್ದೇವೆ’ | ಆಪರೇಷನ್ ಸಿಂಧೂರ್ ಸಮರ್ಥಿಸಿದ ಭಾರತ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನದ ವಿರುದ್ಧ ಬುಧವಾರ ತೀಕ್ಷ್ಣವಾದ ರಾಜತಾಂತ್ರಿಕ ಮತ್ತು ಮಿಲಿಟರಿ ದಾಳಿಯನ್ನು ನಡೆಸಿದೆ. ಈ ದಾಳಿಯನ್ನು ದೃಢಪಡಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ನೆರಳುಗಳಿದ್ದು, ಅದು ಜಮ್ಮು ಕಾಶ್ಮೀರದಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಕೋಮು ಸಾಮರಸ್ಯವನ್ನು ಭಂಗಗೊಳಿಸುವ ಉದ್ದೇಶವನ್ನು ಹೊಂದಿತ್ತು ಎಂದು ಹೇಳಿದ್ದಾರೆ. ಭಯೋತ್ಪಾದನಾ ಕೇಂದ್ರ

ಭಾರತ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿದ ಕೆಲವು ಗಂಟೆಗಳ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಿಸ್ರಿ, ಪಹಲ್ಗಾಮ್ ಹತ್ಯಾಕಾಂಡವನ್ನು “ತೀವ್ರ ಅನಾಗರಿಕ ದಾಳಿ” ಎಂದು ಬಣ್ಣಿಸಿದ್ದಾರೆ.

“ದಾಳಿಯ ವೇಳೆ ಸಂತ್ರಸ್ತರನ್ನು ಅವರ ಕುಟುಂಬ ಸದಸ್ಯರ ಮುಂದೆಯೇ ಹತ್ತಿರದಿಂದ ತಲೆಗೆ ಗುಂಡು ಹಾರಿಸಲಾಯಿತು. ಉದ್ದೇಶಪೂರ್ವಕವಾಗಿ ಅವರನ್ನು ಆಘಾತಗೊಳಿಸಲಾಯಿತು. ಕೋಮು ವೈಷಮ್ಯವನ್ನು ಪ್ರಚೋದಿಸುವ ಮತ್ತು ಕಾಶ್ಮೀರ ಸಹಜ ಸ್ಥಿತಿಗೆ ಮರಳುವುದನ್ನು ಹಳಿತಪ್ಪಿಸುವ ಗುರಿಯನ್ನು ಈ ದಾಳಿಯ ವಿಧಾನ ಹೊಂದಿತ್ತು” ಎಂದು ಅವರು ಹೇಳಿದ್ದಾರೆ.

“ಇದು ಕೇವಲ ಜನರ ಮೇಲಿನ ದಾಳಿಯಲ್ಲ, ದಾಳಿಯಿಂದ ಬದುಕಿ ಹಿಂತಿರುಗಿ ಹೋಗುವ ಸಂತ್ರಸ್ತರಿಗೆ ಸಂದೇಶ ರವಾನಿಸುವುದು ಕೂಡಾ ಈ ದಾಳಿಯ ಉದ್ದೇಶವಾಗಿತ್ತು. ಆದರೆ ಭಾರತವು ಸ್ಪಷ್ಟ ಮತ್ತು ದೃಢನಿಶ್ಚಯದಿಂದ ಪ್ರತಿಕ್ರಿಯಿಸಿದೆ” ಎಂದು ಮಿಸ್ರಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತ ಮುಂಜಾನೆ ನಡೆಸಿದ ನಿಖರ ದಾಳಿಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.

“ಪಹಲ್ಗಾಮ್ ದಾಳಿಯು ಪಾಕಿಸ್ತಾನ ಮತ್ತು ಭಯೋತ್ಪಾದಕರ ನಡುವಿನ ಸಂಪರ್ಕವನ್ನು ಬಹಿರಂಗಪಡಿಸಿದೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವವರನ್ನು ಮತ್ತು ಮಾಸ್ಟರ್ ಮೈಂಡ್‌ಗಳನ್ನು ನಮ್ಮ ಗುಪ್ತಚರ ಸಂಸ್ಥೆಗಳು ಗುರುತಿಸಿವೆ. ಜವಾಬ್ದಾರಿಯನ್ನು ಹೊತ್ತಿರುವ ಗುಂಪು, ದಿ ರೆಸಿಸ್ಟೆನ್ಸ್ ಫ್ರಂಟ್ (TRF), ಲಷ್ಕರ್-ಎ-ತೈಬಾದ ಪ್ರತಿನಿಧಿ, ಈ ಸಂಘಟನೆ ಪಾಕಿಸ್ತಾನದಿಂದ ಸಂಪೂರ್ಣವಾಗಿ ಬೆಂಬಲಿತವಾಗಿದೆ.” ಎಂದು ಮಿಶ್ರಿ ಹೇಳಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ರಾಜತಾಂತ್ರಿಕ ತಂತ್ರವನ್ನು ಸೂಚಿಸಿದ ಅವರು, “ಏಪ್ರಿಲ್ 25 ರಂದು, ಪಾಕಿಸ್ತಾನವು ತನ್ನ ಹೇಳಿಕೆಯಿಂದ TRF ಉಲ್ಲೇಖವನ್ನು ತೆಗೆದುಹಾಕುವಂತೆ UNSC ಮೇಲೆ ಒತ್ತಡ ಹೇರಿತು. ಇದನ್ನು ಸಹ ನಿರ್ಲಕ್ಷಿಸಬಾರದು” ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನವು ತನ್ನ ನೆಲದಲ್ಲಿ ಭಯೋತ್ಪಾದಕ ಮೂಲಸೌಕರ್ಯವನ್ನು ಕೆಡವಲು ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂಬುದು ಸ್ಪಷ್ಟವಾದ ನಂತರವೇ ಭಾರತವು ಈ ಕ್ರಮಗಳನ್ನು “ಅಳದು ತೂಗಿ” ನಡೆಸಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಮಿಶ್ರಿ ಒತ್ತಿ ಹೇಳಿದ್ದಾರೆ.

“ಭಾರತಕ್ಕೆ ಹಾನಿ ಮಾಡಲು ದೀರ್ಘಕಾಲದಿಂದ ಬಳಸಲಾಗುತ್ತಿರುವ ಭಯೋತ್ಪಾದಕ ಮೂಲಸೌಕರ್ಯವನ್ನು ಇಂದು ಬೆಳಿಗ್ಗೆ ಕೆಡವುವ ಮೂಲಕ ನಮ್ಮ ಹಕ್ಕನ್ನು ನಾವು ಚಲಾಯಿಸಿದ್ದೇವೆ” ಎಂದು ಹೇಳುವ ಮೂಲಕ ಮಿಶ್ರಿ ಭಯೋತ್ಪಾದನಾ ಬೆದರಿಕೆಗಳಿಗೆ ನಿರ್ಣಾಯಕವಾಗಿ ಪ್ರತಿಕ್ರಿಯಿಸುವ ಹಕ್ಕನ್ನು ಭಾರತ ಕಾಯ್ದಿರಿಸಿದೆ ಎಂದು ಹೇಳಿದ್ದಾರೆ.

ವಿದೇಶಾಂಗ ಕಾರ್ಯದರ್ಶಿಯೊಂದಿಗೆ ವರದಿಗಾರರಿಗೆ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಷಿ, “ಆಪರೇಷನ್ ಸಿಂಧೂರ್‌ ನಡೆಸುವ ವೇಳೆ, ದಾಳಿಯ ಗುರಿಗಳನ್ನು ಗಡಿಯಾಚೆಗೆ ಭಯೋತ್ಪಾದನೆಯಲ್ಲಿ ನೇರವಾಗಿ ಪಾಲ್ಗೊಳ್ಳುತ್ತಿರುವವ ಬಗ್ಗೆ ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ. ಇವು ಸಕ್ರಿಯ ಭಯೋತ್ಪಾದಕ ಉಡಾವಣಾ ನೆಲೆಗಳು ಮತ್ತು ತರಬೇತಿ ಶಿಬಿರಗಳಾಗಿದ್ದವು” ಎಂದು  ಹೇಳಿದ್ದಾರೆ. ಭಯೋತ್ಪಾದನಾ ಕೇಂದ್ರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...