Homeಮುಖಪುಟ4 ದಿನಗಳ ಟೆಸ್ಟ್ ನಿಯಮಗಳೇನು? ವಿರೋಧವೇಕೆ?

4 ದಿನಗಳ ಟೆಸ್ಟ್ ನಿಯಮಗಳೇನು? ವಿರೋಧವೇಕೆ?

- Advertisement -
- Advertisement -

ಟೆಸ್ಟ್ ಪಂದ್ಯ ಕ್ರಿಕೆಟ್‍ನ ಪರಿಶುದ್ಧ ರೂಪ. ಇದು ಕ್ರಿಕೆಟ್‍ನ ಆತ್ಮವೂ ಹೌದು. ಕ್ರಿಕೆಟ್ ಆಟಗಾರರ ಅಸಲಿ ತಾಕತ್ತನ್ನು ಹೊರತರುವ ಮಾದರಿ. ಆದ್ರೆ ಇದೀಗ ಈ ಟೆಸ್ಟ್‍ನ ಸ್ವರೂಪವನ್ನೇ ಬದಲಿಸಲು ಐಸಿಸಿ ಮುಂದಾಗಿದೆ. ಟೆಸ್ಟ್ ಪಂದ್ಯಗಳನ್ನು ಐದು ದಿನಗಳ ಬದಲಿಗೆ ನಾಲ್ಕು ದಿನಕ್ಕೆ ಸೀಮಿತಗೊಳಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಚಿಂತನೆ ನಡೆಸಿದೆ. ಆದ್ರೆ ಐಸಿಸಿಯ ಈ ಕಲ್ಪನೆಗೆ ಕ್ರಿಕೆಟ್ ಪ್ರಪಂಚದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

ಏನಿದು 4 ದಿನಗಳ ಟೆಸ್ಟ್? ನಿಯಮಗಳೇನು?

ಟೆಸ್ಟ್ ಪಂದ್ಯಗಳನ್ನು ಐದು ದಿನಗಳ ಬದಲಿಗೆ ನಾಲ್ಕು ದಿನಕ್ಕೆ ಸೀಮಿತಗೊಳಿಸುವ ಐಸಿಸಿ ಕಲ್ಪನೆಯ ಈ ಪಂದ್ಯದಲ್ಲಿ ನೂತನ ನಿಯಮಗಳು ಅನ್ವಯವಾಗಲಿವೆ. 5 ದಿನಗಳ ಪಂದ್ಯಗಳಲ್ಲಿ ಪ್ರತಿ ದಿನ 90 ಓವರ್‍ಗಳ ಆಟ ನಡೆಯಲಿದ್ದು, ‘4 ದಿನಗಳ ಟೆಸ್ಟ್’ನಲ್ಲಿ ದಿನಕ್ಕೆ 98 ಓವರ್‍ಗಳ ಆಟವನ್ನು ನಿಗದಿಪಡಿಸಲಾಗಿದೆ.

ಪಂದ್ಯದಲ್ಲಿ ಒಟ್ಟಾರೆ 392 ಓವರ್ ಆಟಕ್ಕೆ ಅವಕಾಶವಿದ್ದು, 5 ದಿನಗಳ ಟೆಸ್ಟ್’ಗಳಿಗಿಂತ 58 ಓವರ್ ಕಡಿಮೆ ಆಟ ನಡೆಯಲಿದೆ. ದಿನವೊಂದರಲ್ಲಿ 90ರ ಬದಲು 98 ಓವರ್ ಪೂರ್ಣಗೊಳಿಸಬೇಕಿರುವ ಕಾರಣ, ಹೆಚ್ಚುವರಿ 8 ಓವರ್‍ಗಾಗಿ ದಿನದಾಟವನ್ನು ಅರ್ಧಗಂಟೆ ಹೆಚ್ಚಿಸಲಾಗುತ್ತದೆ. ಮೊದಲೆರಡು ಅವಧಿಗಳನ್ನು 2 ಗಂಟೆ ಬದಲು 2 ಗಂಟೆ 15 ನಿಮಿಷ ನಡೆಸುವುದಾಗಿ ಐಸಿಸಿ ತಿಳಿಸಿದೆ.

ವಿರೋಧ ಯಾಕೆ ಸ್ವಾಮಿ?

ಐಸಿಸಿಯ ಪ್ರಸ್ತಾವನೆ ಮೇಲ್ನೋಟಕ್ಕೆ ಸರಿ ಅನಿಸಿದರೂ, ಇದು ಕ್ರಿಕೆಟ್ ಆತ್ಮವನ್ನು ವಿರೂಪಗೊಳಿಸುವ ಪ್ರಯತ್ನ ಎನ್ನಲಾಗುತ್ತಿದೆ. ನಾಲ್ಕು ದಿನಗಳ ಟೆಸ್ಟ್ ಪಂದ್ಯ ಕ್ರಿಕೆಟ್ ಸ್ವರೂಪಕ್ಕೆ ವಿರುದ್ಧವಾದದ್ದು, ಇದು ಕ್ರಿಕೆಟ್‍ನ ಶುದ್ಧ ರೂಪವನ್ನು ಹಾಳು ಮಾಡುತ್ತದೆ ಎಂದು ಕ್ರಿಕೆಟ್ ದಿಗ್ಗಜರು ವಾದಿಸುತ್ತಿದ್ದಾರೆ. ಟೆಸ್ಟ್ ಕ್ರಿಕೆಟ್ ಅನ್ನು ನಾಲ್ಕು ದಿನಗಳಿಗೆ ಇಳಿಸಿದರೇ ಟೆಸ್ಟ್, ಅದರ ಸ್ವರೂಪವನ್ನು ಕಳೆದುಕೊಳ್ಳುತ್ತದೆ ಹಾಗೂ ಯುವ ಕ್ರಿಕೆಟಿಗರ ಮೇಲೆ ಇದು ವ್ಯತಿರಿಕ್ತ ಪ್ರಭಾವ ಬೀರುತ್ತದೆ ಎಂದು ಮಾಜಿ ಕ್ರಿಕೆಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟ್ ದೇವರಿಂದಲೂ ವಿರೋಧ!

“ಕ್ರಿಕೆಟ್‍ನ ಅತೀ ಶುದ್ಧ ರೂಪವೆಂದರೆ ಟೆಸ್ಟ್ ಪಂದ್ಯ. ಇದನ್ನು ಹದಗೆಡಿಸಬಾರದು. ನೀವು ಟಿ20ಯನ್ನು ಜಾರಿ ಮಾಡಿದಿರಿ, ಏಕದಿನ ತಂದಿರಿ, ಟಿ10 ಬಂತು. 100 ಎಸೆತಗಳ ಕ್ರಿಕೆಟ್ ಕೂಡ ಬಂತು. ಆದರೆ ಟೆಸ್ಟ್ ಕ್ರಿಕೆಟನ್ನು ಮಾತ್ರ ಬದಲಾಯಿಸಲು ಹೋಗಬೇಡಿ’ ಎಂದು ಸಚಿನ್ ಹೇಳಿದ್ದಾರೆ.

ಟೆಸ್ಟ್ ಕ್ರಿಕೆಟನ್ನು 4 ದಿನಗಳಿಗೆ ಇಳಿಸುವುದರಿಂದ ಆಟ ತನ್ನ ಸೊಬಗು ಕಳೆದುಕೊಳ್ಳಲಿದೆ. ‘ಟೆಸ್ಟ್ ಕ್ರಿಕೆಟ್‍ನ ಪ್ರೀತಿಸುವ ಅಭಿಮಾನಿಯಾಗಿ ಹೇಳುತ್ತಿದ್ದೇನೆ. ಆಟದ ಮಾದರಿಯಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಪಂದ್ಯವನ್ನು 4 ದಿನಗಳಿಗೆ ಇಳಿಸಿದರೆ, ಆಟಗಾರರು ಟೆಸ್ಟ್ ಕ್ರಿಕೆಟನ್ನು ನೋಡುವ ದೃಷ್ಟಿಯೇ ಬದಲಾಗಲಿದೆ’ ಎಂದು 200 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೂಡ 4 ದಿನಗಳ ಟೆಸ್ಟ್ ಬೇಡ ಎಂಬ ಧಾಟಿಯಲ್ಲಿ ಮಾತಾಡಿದ್ದಾರೆ. ಐಸಿಸಿ ನಿರ್ಧಾರ ಕ್ರಿಕೆಟ್ ಆತ್ಮವಾಗಿರುವ ಟೆಸ್ಟ್ ಕ್ರಿಕೆಟ್ ಸ್ವರೂಪಕ್ಕೆ ವಿರುದ್ಧವಾದದ್ದು ಎಂದು ರವಿಶಾಸ್ತ್ರಿ ಹೇಳಿದ್ದಾರೆ.

ಐಸಿಸಿ ವಾದವೇನು?

ಫಲಿತಾಂಶಕ್ಕೆ ಹೆಚ್ಚಿನ ಆದ್ಯತೆ: ಟೆಸ್ಟ್ ಕ್ರಿಕೆಟ್‍ಗೆ ಹೊಸ ರೂಪ ನೀಡಲು ಪ್ರಯೋಗಗಳನ್ನು ನಡೆಸುತ್ತಿರುವ ಐಸಿಸಿ, ಫಾಲೋ ಆನ್ ನಿಯಮವನ್ನು 200 ರನ್‍ಗಳಿಂದ 150ಕ್ಕಿಳಿಸಿದೆ. ಫಲಿತಾಂಶಕ್ಕೆ ಒತ್ತು ನೀಡುವ ತಂಡಗಳಿಗೆ ಈ ನಿಯಮ ಅನುಕೂಲವಾಗಲಿದೆ ಎಂದು ಐಸಿಸಿ ತಿಳಿಸಿದೆ. ಇನ್ನುಳಿದಂತೆ 5 ದಿನಗಳ ಟೆಸ್ಟ್ ನಿಯಮಗಳೆಲ್ಲವೂ ಅನ್ವಯವಾಗುತ್ತದೆ.

2023ರಿಂದ 2031ರ ನಡುವಿನ ಕ್ರಿಕೆಟ್ ಋತುಗಳಲ್ಲಿ ಟೆಸ್ಟ್ ಪಂದ್ಯಗಳನ್ನು 5 ದಿನಗಳಿಂದ 4 ದಿನಗಳಿಗೆ ಇಳಿಸುವುದರಿಂದ ಹೆಚ್ಚು ಜಾಗತಿಕ ಮಟ್ಟದ ಟೂರ್ನಿಗಳು, ಬಿಸಿಸಿಐ ಬೇಡಿಕೆಯಂತೆ ಮತ್ತಷ್ಟು ದ್ವಿಪಕ್ಷೀಯ ಸರಣಿಗಳ ಆಯೋಜನೆ, ವಿಶ್ವದಾದ್ಯಂತ ನಡೆಯುವ ಟಿ20 ಲೀಗ್‍ಗಳ ಪ್ರಸರಣ ಹಾಗೂ 5 ದಿನಗಳ ಪಂದ್ಯಗಳ ಆಯೋಜನೆಗೆ ತಗುಲುವ ವೆಚ್ಚವನ್ನು ಕಡಿಮೆ ಮಾಡಲು ನೆರವಾಗಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ. ಸದ್ಯ ಚಾಲ್ತಿಯಲ್ಲಿರುವ 2015-2023ರ ಅವಧಿಯಲ್ಲಿ 5 ದಿನಗಳ ಬದಲಿಗೆ 4 ದಿನಗಳ ಟೆಸ್ಟ್ ಪಂದ್ಯಗಳನ್ನು ನಡೆಸಿದರೆ 335 ದಿನಗಳು ಉಳಿಯುತ್ತಿದ್ದವು ಎಂದು ಐಸಿಸಿ ಅಂದಾಜಿಸಿದೆ.

ಐಸಿಸಿಯ ಬೆಂಬಲಕ್ಕೆ ಮಂಡಳಿಗಳು!

ನಾಲ್ಕು ದಿನಗಳ ಟೆಸ್ಟ್ ಪ್ರಸ್ತಾವದ ಬಗ್ಗೆ ಈಗಾಗಲೇ ಪರ ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿವೆ. ಈ ಮಧ್ಯೆ ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಗಳು ಐಸಿಸಿಯ ಬೆಂಬಲಕ್ಕೆ ನಿಂತಿವೆ. ಆದ್ರೆ ಆಸ್ಟೇಲಿಯಾದ ಮಾಜಿ ಹಾಗೂ ಹಾಲಿ ಕ್ರಿಕೆಟ್ ಆಟಗಾರರು, ಐಸಿಸಿ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಹೊಸ ಯೋಜನೆಯಲ್ಲ

4 ದಿನಗಳ ಟೆಸ್ಟ್ ಹೊಸ ಯೋಜನೆ ಏನಲ್ಲ. ಈ ವರ್ಷ ಇಂಗ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳು 4 ದಿನಗಳ ಪಂದ್ಯವನ್ನು ಆಡಿದ್ದವು. ಈ ಹಿಂದೆ 2017ರಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಜಿಂಬಾಬ್ವೆ ಸಹ ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು.

ಬಿಸಿಸಿಐ ರೆಡ್ ಸಿಗ್ನಲ್

ನಾಲ್ಕು ದಿನಗಳ ಟೆಸ್ಟ್ ಮ್ಯಾಚ್ ನಡೆಸುವ ಬಗ್ಗೆ ಬಿಸಿಸಿಐ ರೆಡ್ ಪರ-ವಿರೋಧ ವಾದಗಳ ಮಧ್ಯೆ ಐಸಿಸಿಯ ಕ್ರಿಕೆಟ್ ಸಮಿತಿಯು ಮಾರ್ಚ್‍ನಲ್ಲಿ ನಾಲ್ಕು ದಿನಗಳ ಟೆಸ್ಟ್ ಪಂದ್ಯದ ಪ್ರಸ್ತಾವದ ಕುರಿತು ಚರ್ಚೆ ನಡೆಸಲು ಸಿದ್ಧತೆ ನಡೆಸಿದೆ. ದುಬೈನಲ್ಲಿ ಮಾರ್ಚ್ 27 ರಿಂದ 31 ರ ತನಕ ನಡೆಯುವ ಮುಂದಿನ ಸುತ್ತಿನ ಐಸಿಸಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಮಾಜಿ ಕ್ರಿಕೆಟಿಗ, ಕ್ರಿಕೆಟ್ ಸಮಿತಿಯ ಅಧ್ಯಕ್ಷ ಅನಿಲ್ ಕುಂಬ್ಳೆ ಹೇಳಿದ್ದಾರೆ. ಈ ಕ್ರಿಕೆಟ್ ಸಮಿತಿಯಲ್ಲಿ ಆಂಡ್ರೂ ಸ್ಟ್ರಾಸ್, ರಾಹುಲ್ ದ್ರಾವಿಡ್, ಮಹೇಲ ಜಯವರ್ಧನೆ ಹಾಗೂ ಶಾನ್ ಪೋಲಾಕ್ ಇದ್ದಾರೆ.

ಇತ್ತ ವಿಶ್ವದ ಅತ್ಯಂತ ಶ್ರೀಮಂತ ಮಂಡಳಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಸಿಸಿ ಪ್ರಸ್ತಾವಕ್ಕೆ ರೆಡ್ ಸಿಗ್ನಲ್ ನೀಡಲು ಸಜ್ಜಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...