Homeಮುಖಪುಟ4 ದಿನಗಳ ಟೆಸ್ಟ್ ನಿಯಮಗಳೇನು? ವಿರೋಧವೇಕೆ?

4 ದಿನಗಳ ಟೆಸ್ಟ್ ನಿಯಮಗಳೇನು? ವಿರೋಧವೇಕೆ?

- Advertisement -
- Advertisement -

ಟೆಸ್ಟ್ ಪಂದ್ಯ ಕ್ರಿಕೆಟ್‍ನ ಪರಿಶುದ್ಧ ರೂಪ. ಇದು ಕ್ರಿಕೆಟ್‍ನ ಆತ್ಮವೂ ಹೌದು. ಕ್ರಿಕೆಟ್ ಆಟಗಾರರ ಅಸಲಿ ತಾಕತ್ತನ್ನು ಹೊರತರುವ ಮಾದರಿ. ಆದ್ರೆ ಇದೀಗ ಈ ಟೆಸ್ಟ್‍ನ ಸ್ವರೂಪವನ್ನೇ ಬದಲಿಸಲು ಐಸಿಸಿ ಮುಂದಾಗಿದೆ. ಟೆಸ್ಟ್ ಪಂದ್ಯಗಳನ್ನು ಐದು ದಿನಗಳ ಬದಲಿಗೆ ನಾಲ್ಕು ದಿನಕ್ಕೆ ಸೀಮಿತಗೊಳಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಚಿಂತನೆ ನಡೆಸಿದೆ. ಆದ್ರೆ ಐಸಿಸಿಯ ಈ ಕಲ್ಪನೆಗೆ ಕ್ರಿಕೆಟ್ ಪ್ರಪಂಚದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

ಏನಿದು 4 ದಿನಗಳ ಟೆಸ್ಟ್? ನಿಯಮಗಳೇನು?

ಟೆಸ್ಟ್ ಪಂದ್ಯಗಳನ್ನು ಐದು ದಿನಗಳ ಬದಲಿಗೆ ನಾಲ್ಕು ದಿನಕ್ಕೆ ಸೀಮಿತಗೊಳಿಸುವ ಐಸಿಸಿ ಕಲ್ಪನೆಯ ಈ ಪಂದ್ಯದಲ್ಲಿ ನೂತನ ನಿಯಮಗಳು ಅನ್ವಯವಾಗಲಿವೆ. 5 ದಿನಗಳ ಪಂದ್ಯಗಳಲ್ಲಿ ಪ್ರತಿ ದಿನ 90 ಓವರ್‍ಗಳ ಆಟ ನಡೆಯಲಿದ್ದು, ‘4 ದಿನಗಳ ಟೆಸ್ಟ್’ನಲ್ಲಿ ದಿನಕ್ಕೆ 98 ಓವರ್‍ಗಳ ಆಟವನ್ನು ನಿಗದಿಪಡಿಸಲಾಗಿದೆ.

ಪಂದ್ಯದಲ್ಲಿ ಒಟ್ಟಾರೆ 392 ಓವರ್ ಆಟಕ್ಕೆ ಅವಕಾಶವಿದ್ದು, 5 ದಿನಗಳ ಟೆಸ್ಟ್’ಗಳಿಗಿಂತ 58 ಓವರ್ ಕಡಿಮೆ ಆಟ ನಡೆಯಲಿದೆ. ದಿನವೊಂದರಲ್ಲಿ 90ರ ಬದಲು 98 ಓವರ್ ಪೂರ್ಣಗೊಳಿಸಬೇಕಿರುವ ಕಾರಣ, ಹೆಚ್ಚುವರಿ 8 ಓವರ್‍ಗಾಗಿ ದಿನದಾಟವನ್ನು ಅರ್ಧಗಂಟೆ ಹೆಚ್ಚಿಸಲಾಗುತ್ತದೆ. ಮೊದಲೆರಡು ಅವಧಿಗಳನ್ನು 2 ಗಂಟೆ ಬದಲು 2 ಗಂಟೆ 15 ನಿಮಿಷ ನಡೆಸುವುದಾಗಿ ಐಸಿಸಿ ತಿಳಿಸಿದೆ.

ವಿರೋಧ ಯಾಕೆ ಸ್ವಾಮಿ?

ಐಸಿಸಿಯ ಪ್ರಸ್ತಾವನೆ ಮೇಲ್ನೋಟಕ್ಕೆ ಸರಿ ಅನಿಸಿದರೂ, ಇದು ಕ್ರಿಕೆಟ್ ಆತ್ಮವನ್ನು ವಿರೂಪಗೊಳಿಸುವ ಪ್ರಯತ್ನ ಎನ್ನಲಾಗುತ್ತಿದೆ. ನಾಲ್ಕು ದಿನಗಳ ಟೆಸ್ಟ್ ಪಂದ್ಯ ಕ್ರಿಕೆಟ್ ಸ್ವರೂಪಕ್ಕೆ ವಿರುದ್ಧವಾದದ್ದು, ಇದು ಕ್ರಿಕೆಟ್‍ನ ಶುದ್ಧ ರೂಪವನ್ನು ಹಾಳು ಮಾಡುತ್ತದೆ ಎಂದು ಕ್ರಿಕೆಟ್ ದಿಗ್ಗಜರು ವಾದಿಸುತ್ತಿದ್ದಾರೆ. ಟೆಸ್ಟ್ ಕ್ರಿಕೆಟ್ ಅನ್ನು ನಾಲ್ಕು ದಿನಗಳಿಗೆ ಇಳಿಸಿದರೇ ಟೆಸ್ಟ್, ಅದರ ಸ್ವರೂಪವನ್ನು ಕಳೆದುಕೊಳ್ಳುತ್ತದೆ ಹಾಗೂ ಯುವ ಕ್ರಿಕೆಟಿಗರ ಮೇಲೆ ಇದು ವ್ಯತಿರಿಕ್ತ ಪ್ರಭಾವ ಬೀರುತ್ತದೆ ಎಂದು ಮಾಜಿ ಕ್ರಿಕೆಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟ್ ದೇವರಿಂದಲೂ ವಿರೋಧ!

“ಕ್ರಿಕೆಟ್‍ನ ಅತೀ ಶುದ್ಧ ರೂಪವೆಂದರೆ ಟೆಸ್ಟ್ ಪಂದ್ಯ. ಇದನ್ನು ಹದಗೆಡಿಸಬಾರದು. ನೀವು ಟಿ20ಯನ್ನು ಜಾರಿ ಮಾಡಿದಿರಿ, ಏಕದಿನ ತಂದಿರಿ, ಟಿ10 ಬಂತು. 100 ಎಸೆತಗಳ ಕ್ರಿಕೆಟ್ ಕೂಡ ಬಂತು. ಆದರೆ ಟೆಸ್ಟ್ ಕ್ರಿಕೆಟನ್ನು ಮಾತ್ರ ಬದಲಾಯಿಸಲು ಹೋಗಬೇಡಿ’ ಎಂದು ಸಚಿನ್ ಹೇಳಿದ್ದಾರೆ.

ಟೆಸ್ಟ್ ಕ್ರಿಕೆಟನ್ನು 4 ದಿನಗಳಿಗೆ ಇಳಿಸುವುದರಿಂದ ಆಟ ತನ್ನ ಸೊಬಗು ಕಳೆದುಕೊಳ್ಳಲಿದೆ. ‘ಟೆಸ್ಟ್ ಕ್ರಿಕೆಟ್‍ನ ಪ್ರೀತಿಸುವ ಅಭಿಮಾನಿಯಾಗಿ ಹೇಳುತ್ತಿದ್ದೇನೆ. ಆಟದ ಮಾದರಿಯಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಪಂದ್ಯವನ್ನು 4 ದಿನಗಳಿಗೆ ಇಳಿಸಿದರೆ, ಆಟಗಾರರು ಟೆಸ್ಟ್ ಕ್ರಿಕೆಟನ್ನು ನೋಡುವ ದೃಷ್ಟಿಯೇ ಬದಲಾಗಲಿದೆ’ ಎಂದು 200 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೂಡ 4 ದಿನಗಳ ಟೆಸ್ಟ್ ಬೇಡ ಎಂಬ ಧಾಟಿಯಲ್ಲಿ ಮಾತಾಡಿದ್ದಾರೆ. ಐಸಿಸಿ ನಿರ್ಧಾರ ಕ್ರಿಕೆಟ್ ಆತ್ಮವಾಗಿರುವ ಟೆಸ್ಟ್ ಕ್ರಿಕೆಟ್ ಸ್ವರೂಪಕ್ಕೆ ವಿರುದ್ಧವಾದದ್ದು ಎಂದು ರವಿಶಾಸ್ತ್ರಿ ಹೇಳಿದ್ದಾರೆ.

ಐಸಿಸಿ ವಾದವೇನು?

ಫಲಿತಾಂಶಕ್ಕೆ ಹೆಚ್ಚಿನ ಆದ್ಯತೆ: ಟೆಸ್ಟ್ ಕ್ರಿಕೆಟ್‍ಗೆ ಹೊಸ ರೂಪ ನೀಡಲು ಪ್ರಯೋಗಗಳನ್ನು ನಡೆಸುತ್ತಿರುವ ಐಸಿಸಿ, ಫಾಲೋ ಆನ್ ನಿಯಮವನ್ನು 200 ರನ್‍ಗಳಿಂದ 150ಕ್ಕಿಳಿಸಿದೆ. ಫಲಿತಾಂಶಕ್ಕೆ ಒತ್ತು ನೀಡುವ ತಂಡಗಳಿಗೆ ಈ ನಿಯಮ ಅನುಕೂಲವಾಗಲಿದೆ ಎಂದು ಐಸಿಸಿ ತಿಳಿಸಿದೆ. ಇನ್ನುಳಿದಂತೆ 5 ದಿನಗಳ ಟೆಸ್ಟ್ ನಿಯಮಗಳೆಲ್ಲವೂ ಅನ್ವಯವಾಗುತ್ತದೆ.

2023ರಿಂದ 2031ರ ನಡುವಿನ ಕ್ರಿಕೆಟ್ ಋತುಗಳಲ್ಲಿ ಟೆಸ್ಟ್ ಪಂದ್ಯಗಳನ್ನು 5 ದಿನಗಳಿಂದ 4 ದಿನಗಳಿಗೆ ಇಳಿಸುವುದರಿಂದ ಹೆಚ್ಚು ಜಾಗತಿಕ ಮಟ್ಟದ ಟೂರ್ನಿಗಳು, ಬಿಸಿಸಿಐ ಬೇಡಿಕೆಯಂತೆ ಮತ್ತಷ್ಟು ದ್ವಿಪಕ್ಷೀಯ ಸರಣಿಗಳ ಆಯೋಜನೆ, ವಿಶ್ವದಾದ್ಯಂತ ನಡೆಯುವ ಟಿ20 ಲೀಗ್‍ಗಳ ಪ್ರಸರಣ ಹಾಗೂ 5 ದಿನಗಳ ಪಂದ್ಯಗಳ ಆಯೋಜನೆಗೆ ತಗುಲುವ ವೆಚ್ಚವನ್ನು ಕಡಿಮೆ ಮಾಡಲು ನೆರವಾಗಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ. ಸದ್ಯ ಚಾಲ್ತಿಯಲ್ಲಿರುವ 2015-2023ರ ಅವಧಿಯಲ್ಲಿ 5 ದಿನಗಳ ಬದಲಿಗೆ 4 ದಿನಗಳ ಟೆಸ್ಟ್ ಪಂದ್ಯಗಳನ್ನು ನಡೆಸಿದರೆ 335 ದಿನಗಳು ಉಳಿಯುತ್ತಿದ್ದವು ಎಂದು ಐಸಿಸಿ ಅಂದಾಜಿಸಿದೆ.

ಐಸಿಸಿಯ ಬೆಂಬಲಕ್ಕೆ ಮಂಡಳಿಗಳು!

ನಾಲ್ಕು ದಿನಗಳ ಟೆಸ್ಟ್ ಪ್ರಸ್ತಾವದ ಬಗ್ಗೆ ಈಗಾಗಲೇ ಪರ ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿವೆ. ಈ ಮಧ್ಯೆ ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಗಳು ಐಸಿಸಿಯ ಬೆಂಬಲಕ್ಕೆ ನಿಂತಿವೆ. ಆದ್ರೆ ಆಸ್ಟೇಲಿಯಾದ ಮಾಜಿ ಹಾಗೂ ಹಾಲಿ ಕ್ರಿಕೆಟ್ ಆಟಗಾರರು, ಐಸಿಸಿ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಹೊಸ ಯೋಜನೆಯಲ್ಲ

4 ದಿನಗಳ ಟೆಸ್ಟ್ ಹೊಸ ಯೋಜನೆ ಏನಲ್ಲ. ಈ ವರ್ಷ ಇಂಗ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳು 4 ದಿನಗಳ ಪಂದ್ಯವನ್ನು ಆಡಿದ್ದವು. ಈ ಹಿಂದೆ 2017ರಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಜಿಂಬಾಬ್ವೆ ಸಹ ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು.

ಬಿಸಿಸಿಐ ರೆಡ್ ಸಿಗ್ನಲ್

ನಾಲ್ಕು ದಿನಗಳ ಟೆಸ್ಟ್ ಮ್ಯಾಚ್ ನಡೆಸುವ ಬಗ್ಗೆ ಬಿಸಿಸಿಐ ರೆಡ್ ಪರ-ವಿರೋಧ ವಾದಗಳ ಮಧ್ಯೆ ಐಸಿಸಿಯ ಕ್ರಿಕೆಟ್ ಸಮಿತಿಯು ಮಾರ್ಚ್‍ನಲ್ಲಿ ನಾಲ್ಕು ದಿನಗಳ ಟೆಸ್ಟ್ ಪಂದ್ಯದ ಪ್ರಸ್ತಾವದ ಕುರಿತು ಚರ್ಚೆ ನಡೆಸಲು ಸಿದ್ಧತೆ ನಡೆಸಿದೆ. ದುಬೈನಲ್ಲಿ ಮಾರ್ಚ್ 27 ರಿಂದ 31 ರ ತನಕ ನಡೆಯುವ ಮುಂದಿನ ಸುತ್ತಿನ ಐಸಿಸಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಮಾಜಿ ಕ್ರಿಕೆಟಿಗ, ಕ್ರಿಕೆಟ್ ಸಮಿತಿಯ ಅಧ್ಯಕ್ಷ ಅನಿಲ್ ಕುಂಬ್ಳೆ ಹೇಳಿದ್ದಾರೆ. ಈ ಕ್ರಿಕೆಟ್ ಸಮಿತಿಯಲ್ಲಿ ಆಂಡ್ರೂ ಸ್ಟ್ರಾಸ್, ರಾಹುಲ್ ದ್ರಾವಿಡ್, ಮಹೇಲ ಜಯವರ್ಧನೆ ಹಾಗೂ ಶಾನ್ ಪೋಲಾಕ್ ಇದ್ದಾರೆ.

ಇತ್ತ ವಿಶ್ವದ ಅತ್ಯಂತ ಶ್ರೀಮಂತ ಮಂಡಳಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಸಿಸಿ ಪ್ರಸ್ತಾವಕ್ಕೆ ರೆಡ್ ಸಿಗ್ನಲ್ ನೀಡಲು ಸಜ್ಜಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...