Homeಮುಖಪುಟ4 ದಿನಗಳ ಟೆಸ್ಟ್ ನಿಯಮಗಳೇನು? ವಿರೋಧವೇಕೆ?

4 ದಿನಗಳ ಟೆಸ್ಟ್ ನಿಯಮಗಳೇನು? ವಿರೋಧವೇಕೆ?

- Advertisement -
- Advertisement -

ಟೆಸ್ಟ್ ಪಂದ್ಯ ಕ್ರಿಕೆಟ್‍ನ ಪರಿಶುದ್ಧ ರೂಪ. ಇದು ಕ್ರಿಕೆಟ್‍ನ ಆತ್ಮವೂ ಹೌದು. ಕ್ರಿಕೆಟ್ ಆಟಗಾರರ ಅಸಲಿ ತಾಕತ್ತನ್ನು ಹೊರತರುವ ಮಾದರಿ. ಆದ್ರೆ ಇದೀಗ ಈ ಟೆಸ್ಟ್‍ನ ಸ್ವರೂಪವನ್ನೇ ಬದಲಿಸಲು ಐಸಿಸಿ ಮುಂದಾಗಿದೆ. ಟೆಸ್ಟ್ ಪಂದ್ಯಗಳನ್ನು ಐದು ದಿನಗಳ ಬದಲಿಗೆ ನಾಲ್ಕು ದಿನಕ್ಕೆ ಸೀಮಿತಗೊಳಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಚಿಂತನೆ ನಡೆಸಿದೆ. ಆದ್ರೆ ಐಸಿಸಿಯ ಈ ಕಲ್ಪನೆಗೆ ಕ್ರಿಕೆಟ್ ಪ್ರಪಂಚದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

ಏನಿದು 4 ದಿನಗಳ ಟೆಸ್ಟ್? ನಿಯಮಗಳೇನು?

ಟೆಸ್ಟ್ ಪಂದ್ಯಗಳನ್ನು ಐದು ದಿನಗಳ ಬದಲಿಗೆ ನಾಲ್ಕು ದಿನಕ್ಕೆ ಸೀಮಿತಗೊಳಿಸುವ ಐಸಿಸಿ ಕಲ್ಪನೆಯ ಈ ಪಂದ್ಯದಲ್ಲಿ ನೂತನ ನಿಯಮಗಳು ಅನ್ವಯವಾಗಲಿವೆ. 5 ದಿನಗಳ ಪಂದ್ಯಗಳಲ್ಲಿ ಪ್ರತಿ ದಿನ 90 ಓವರ್‍ಗಳ ಆಟ ನಡೆಯಲಿದ್ದು, ‘4 ದಿನಗಳ ಟೆಸ್ಟ್’ನಲ್ಲಿ ದಿನಕ್ಕೆ 98 ಓವರ್‍ಗಳ ಆಟವನ್ನು ನಿಗದಿಪಡಿಸಲಾಗಿದೆ.

ಪಂದ್ಯದಲ್ಲಿ ಒಟ್ಟಾರೆ 392 ಓವರ್ ಆಟಕ್ಕೆ ಅವಕಾಶವಿದ್ದು, 5 ದಿನಗಳ ಟೆಸ್ಟ್’ಗಳಿಗಿಂತ 58 ಓವರ್ ಕಡಿಮೆ ಆಟ ನಡೆಯಲಿದೆ. ದಿನವೊಂದರಲ್ಲಿ 90ರ ಬದಲು 98 ಓವರ್ ಪೂರ್ಣಗೊಳಿಸಬೇಕಿರುವ ಕಾರಣ, ಹೆಚ್ಚುವರಿ 8 ಓವರ್‍ಗಾಗಿ ದಿನದಾಟವನ್ನು ಅರ್ಧಗಂಟೆ ಹೆಚ್ಚಿಸಲಾಗುತ್ತದೆ. ಮೊದಲೆರಡು ಅವಧಿಗಳನ್ನು 2 ಗಂಟೆ ಬದಲು 2 ಗಂಟೆ 15 ನಿಮಿಷ ನಡೆಸುವುದಾಗಿ ಐಸಿಸಿ ತಿಳಿಸಿದೆ.

ವಿರೋಧ ಯಾಕೆ ಸ್ವಾಮಿ?

ಐಸಿಸಿಯ ಪ್ರಸ್ತಾವನೆ ಮೇಲ್ನೋಟಕ್ಕೆ ಸರಿ ಅನಿಸಿದರೂ, ಇದು ಕ್ರಿಕೆಟ್ ಆತ್ಮವನ್ನು ವಿರೂಪಗೊಳಿಸುವ ಪ್ರಯತ್ನ ಎನ್ನಲಾಗುತ್ತಿದೆ. ನಾಲ್ಕು ದಿನಗಳ ಟೆಸ್ಟ್ ಪಂದ್ಯ ಕ್ರಿಕೆಟ್ ಸ್ವರೂಪಕ್ಕೆ ವಿರುದ್ಧವಾದದ್ದು, ಇದು ಕ್ರಿಕೆಟ್‍ನ ಶುದ್ಧ ರೂಪವನ್ನು ಹಾಳು ಮಾಡುತ್ತದೆ ಎಂದು ಕ್ರಿಕೆಟ್ ದಿಗ್ಗಜರು ವಾದಿಸುತ್ತಿದ್ದಾರೆ. ಟೆಸ್ಟ್ ಕ್ರಿಕೆಟ್ ಅನ್ನು ನಾಲ್ಕು ದಿನಗಳಿಗೆ ಇಳಿಸಿದರೇ ಟೆಸ್ಟ್, ಅದರ ಸ್ವರೂಪವನ್ನು ಕಳೆದುಕೊಳ್ಳುತ್ತದೆ ಹಾಗೂ ಯುವ ಕ್ರಿಕೆಟಿಗರ ಮೇಲೆ ಇದು ವ್ಯತಿರಿಕ್ತ ಪ್ರಭಾವ ಬೀರುತ್ತದೆ ಎಂದು ಮಾಜಿ ಕ್ರಿಕೆಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟ್ ದೇವರಿಂದಲೂ ವಿರೋಧ!

“ಕ್ರಿಕೆಟ್‍ನ ಅತೀ ಶುದ್ಧ ರೂಪವೆಂದರೆ ಟೆಸ್ಟ್ ಪಂದ್ಯ. ಇದನ್ನು ಹದಗೆಡಿಸಬಾರದು. ನೀವು ಟಿ20ಯನ್ನು ಜಾರಿ ಮಾಡಿದಿರಿ, ಏಕದಿನ ತಂದಿರಿ, ಟಿ10 ಬಂತು. 100 ಎಸೆತಗಳ ಕ್ರಿಕೆಟ್ ಕೂಡ ಬಂತು. ಆದರೆ ಟೆಸ್ಟ್ ಕ್ರಿಕೆಟನ್ನು ಮಾತ್ರ ಬದಲಾಯಿಸಲು ಹೋಗಬೇಡಿ’ ಎಂದು ಸಚಿನ್ ಹೇಳಿದ್ದಾರೆ.

ಟೆಸ್ಟ್ ಕ್ರಿಕೆಟನ್ನು 4 ದಿನಗಳಿಗೆ ಇಳಿಸುವುದರಿಂದ ಆಟ ತನ್ನ ಸೊಬಗು ಕಳೆದುಕೊಳ್ಳಲಿದೆ. ‘ಟೆಸ್ಟ್ ಕ್ರಿಕೆಟ್‍ನ ಪ್ರೀತಿಸುವ ಅಭಿಮಾನಿಯಾಗಿ ಹೇಳುತ್ತಿದ್ದೇನೆ. ಆಟದ ಮಾದರಿಯಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಪಂದ್ಯವನ್ನು 4 ದಿನಗಳಿಗೆ ಇಳಿಸಿದರೆ, ಆಟಗಾರರು ಟೆಸ್ಟ್ ಕ್ರಿಕೆಟನ್ನು ನೋಡುವ ದೃಷ್ಟಿಯೇ ಬದಲಾಗಲಿದೆ’ ಎಂದು 200 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೂಡ 4 ದಿನಗಳ ಟೆಸ್ಟ್ ಬೇಡ ಎಂಬ ಧಾಟಿಯಲ್ಲಿ ಮಾತಾಡಿದ್ದಾರೆ. ಐಸಿಸಿ ನಿರ್ಧಾರ ಕ್ರಿಕೆಟ್ ಆತ್ಮವಾಗಿರುವ ಟೆಸ್ಟ್ ಕ್ರಿಕೆಟ್ ಸ್ವರೂಪಕ್ಕೆ ವಿರುದ್ಧವಾದದ್ದು ಎಂದು ರವಿಶಾಸ್ತ್ರಿ ಹೇಳಿದ್ದಾರೆ.

ಐಸಿಸಿ ವಾದವೇನು?

ಫಲಿತಾಂಶಕ್ಕೆ ಹೆಚ್ಚಿನ ಆದ್ಯತೆ: ಟೆಸ್ಟ್ ಕ್ರಿಕೆಟ್‍ಗೆ ಹೊಸ ರೂಪ ನೀಡಲು ಪ್ರಯೋಗಗಳನ್ನು ನಡೆಸುತ್ತಿರುವ ಐಸಿಸಿ, ಫಾಲೋ ಆನ್ ನಿಯಮವನ್ನು 200 ರನ್‍ಗಳಿಂದ 150ಕ್ಕಿಳಿಸಿದೆ. ಫಲಿತಾಂಶಕ್ಕೆ ಒತ್ತು ನೀಡುವ ತಂಡಗಳಿಗೆ ಈ ನಿಯಮ ಅನುಕೂಲವಾಗಲಿದೆ ಎಂದು ಐಸಿಸಿ ತಿಳಿಸಿದೆ. ಇನ್ನುಳಿದಂತೆ 5 ದಿನಗಳ ಟೆಸ್ಟ್ ನಿಯಮಗಳೆಲ್ಲವೂ ಅನ್ವಯವಾಗುತ್ತದೆ.

2023ರಿಂದ 2031ರ ನಡುವಿನ ಕ್ರಿಕೆಟ್ ಋತುಗಳಲ್ಲಿ ಟೆಸ್ಟ್ ಪಂದ್ಯಗಳನ್ನು 5 ದಿನಗಳಿಂದ 4 ದಿನಗಳಿಗೆ ಇಳಿಸುವುದರಿಂದ ಹೆಚ್ಚು ಜಾಗತಿಕ ಮಟ್ಟದ ಟೂರ್ನಿಗಳು, ಬಿಸಿಸಿಐ ಬೇಡಿಕೆಯಂತೆ ಮತ್ತಷ್ಟು ದ್ವಿಪಕ್ಷೀಯ ಸರಣಿಗಳ ಆಯೋಜನೆ, ವಿಶ್ವದಾದ್ಯಂತ ನಡೆಯುವ ಟಿ20 ಲೀಗ್‍ಗಳ ಪ್ರಸರಣ ಹಾಗೂ 5 ದಿನಗಳ ಪಂದ್ಯಗಳ ಆಯೋಜನೆಗೆ ತಗುಲುವ ವೆಚ್ಚವನ್ನು ಕಡಿಮೆ ಮಾಡಲು ನೆರವಾಗಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ. ಸದ್ಯ ಚಾಲ್ತಿಯಲ್ಲಿರುವ 2015-2023ರ ಅವಧಿಯಲ್ಲಿ 5 ದಿನಗಳ ಬದಲಿಗೆ 4 ದಿನಗಳ ಟೆಸ್ಟ್ ಪಂದ್ಯಗಳನ್ನು ನಡೆಸಿದರೆ 335 ದಿನಗಳು ಉಳಿಯುತ್ತಿದ್ದವು ಎಂದು ಐಸಿಸಿ ಅಂದಾಜಿಸಿದೆ.

ಐಸಿಸಿಯ ಬೆಂಬಲಕ್ಕೆ ಮಂಡಳಿಗಳು!

ನಾಲ್ಕು ದಿನಗಳ ಟೆಸ್ಟ್ ಪ್ರಸ್ತಾವದ ಬಗ್ಗೆ ಈಗಾಗಲೇ ಪರ ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿವೆ. ಈ ಮಧ್ಯೆ ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಗಳು ಐಸಿಸಿಯ ಬೆಂಬಲಕ್ಕೆ ನಿಂತಿವೆ. ಆದ್ರೆ ಆಸ್ಟೇಲಿಯಾದ ಮಾಜಿ ಹಾಗೂ ಹಾಲಿ ಕ್ರಿಕೆಟ್ ಆಟಗಾರರು, ಐಸಿಸಿ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಹೊಸ ಯೋಜನೆಯಲ್ಲ

4 ದಿನಗಳ ಟೆಸ್ಟ್ ಹೊಸ ಯೋಜನೆ ಏನಲ್ಲ. ಈ ವರ್ಷ ಇಂಗ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳು 4 ದಿನಗಳ ಪಂದ್ಯವನ್ನು ಆಡಿದ್ದವು. ಈ ಹಿಂದೆ 2017ರಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಜಿಂಬಾಬ್ವೆ ಸಹ ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು.

ಬಿಸಿಸಿಐ ರೆಡ್ ಸಿಗ್ನಲ್

ನಾಲ್ಕು ದಿನಗಳ ಟೆಸ್ಟ್ ಮ್ಯಾಚ್ ನಡೆಸುವ ಬಗ್ಗೆ ಬಿಸಿಸಿಐ ರೆಡ್ ಪರ-ವಿರೋಧ ವಾದಗಳ ಮಧ್ಯೆ ಐಸಿಸಿಯ ಕ್ರಿಕೆಟ್ ಸಮಿತಿಯು ಮಾರ್ಚ್‍ನಲ್ಲಿ ನಾಲ್ಕು ದಿನಗಳ ಟೆಸ್ಟ್ ಪಂದ್ಯದ ಪ್ರಸ್ತಾವದ ಕುರಿತು ಚರ್ಚೆ ನಡೆಸಲು ಸಿದ್ಧತೆ ನಡೆಸಿದೆ. ದುಬೈನಲ್ಲಿ ಮಾರ್ಚ್ 27 ರಿಂದ 31 ರ ತನಕ ನಡೆಯುವ ಮುಂದಿನ ಸುತ್ತಿನ ಐಸಿಸಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಮಾಜಿ ಕ್ರಿಕೆಟಿಗ, ಕ್ರಿಕೆಟ್ ಸಮಿತಿಯ ಅಧ್ಯಕ್ಷ ಅನಿಲ್ ಕುಂಬ್ಳೆ ಹೇಳಿದ್ದಾರೆ. ಈ ಕ್ರಿಕೆಟ್ ಸಮಿತಿಯಲ್ಲಿ ಆಂಡ್ರೂ ಸ್ಟ್ರಾಸ್, ರಾಹುಲ್ ದ್ರಾವಿಡ್, ಮಹೇಲ ಜಯವರ್ಧನೆ ಹಾಗೂ ಶಾನ್ ಪೋಲಾಕ್ ಇದ್ದಾರೆ.

ಇತ್ತ ವಿಶ್ವದ ಅತ್ಯಂತ ಶ್ರೀಮಂತ ಮಂಡಳಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಸಿಸಿ ಪ್ರಸ್ತಾವಕ್ಕೆ ರೆಡ್ ಸಿಗ್ನಲ್ ನೀಡಲು ಸಜ್ಜಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...