Homeಮುಖಪುಟ4 ದಿನಗಳ ಟೆಸ್ಟ್ ನಿಯಮಗಳೇನು? ವಿರೋಧವೇಕೆ?

4 ದಿನಗಳ ಟೆಸ್ಟ್ ನಿಯಮಗಳೇನು? ವಿರೋಧವೇಕೆ?

- Advertisement -
- Advertisement -

ಟೆಸ್ಟ್ ಪಂದ್ಯ ಕ್ರಿಕೆಟ್‍ನ ಪರಿಶುದ್ಧ ರೂಪ. ಇದು ಕ್ರಿಕೆಟ್‍ನ ಆತ್ಮವೂ ಹೌದು. ಕ್ರಿಕೆಟ್ ಆಟಗಾರರ ಅಸಲಿ ತಾಕತ್ತನ್ನು ಹೊರತರುವ ಮಾದರಿ. ಆದ್ರೆ ಇದೀಗ ಈ ಟೆಸ್ಟ್‍ನ ಸ್ವರೂಪವನ್ನೇ ಬದಲಿಸಲು ಐಸಿಸಿ ಮುಂದಾಗಿದೆ. ಟೆಸ್ಟ್ ಪಂದ್ಯಗಳನ್ನು ಐದು ದಿನಗಳ ಬದಲಿಗೆ ನಾಲ್ಕು ದಿನಕ್ಕೆ ಸೀಮಿತಗೊಳಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಚಿಂತನೆ ನಡೆಸಿದೆ. ಆದ್ರೆ ಐಸಿಸಿಯ ಈ ಕಲ್ಪನೆಗೆ ಕ್ರಿಕೆಟ್ ಪ್ರಪಂಚದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

ಏನಿದು 4 ದಿನಗಳ ಟೆಸ್ಟ್? ನಿಯಮಗಳೇನು?

ಟೆಸ್ಟ್ ಪಂದ್ಯಗಳನ್ನು ಐದು ದಿನಗಳ ಬದಲಿಗೆ ನಾಲ್ಕು ದಿನಕ್ಕೆ ಸೀಮಿತಗೊಳಿಸುವ ಐಸಿಸಿ ಕಲ್ಪನೆಯ ಈ ಪಂದ್ಯದಲ್ಲಿ ನೂತನ ನಿಯಮಗಳು ಅನ್ವಯವಾಗಲಿವೆ. 5 ದಿನಗಳ ಪಂದ್ಯಗಳಲ್ಲಿ ಪ್ರತಿ ದಿನ 90 ಓವರ್‍ಗಳ ಆಟ ನಡೆಯಲಿದ್ದು, ‘4 ದಿನಗಳ ಟೆಸ್ಟ್’ನಲ್ಲಿ ದಿನಕ್ಕೆ 98 ಓವರ್‍ಗಳ ಆಟವನ್ನು ನಿಗದಿಪಡಿಸಲಾಗಿದೆ.

ಪಂದ್ಯದಲ್ಲಿ ಒಟ್ಟಾರೆ 392 ಓವರ್ ಆಟಕ್ಕೆ ಅವಕಾಶವಿದ್ದು, 5 ದಿನಗಳ ಟೆಸ್ಟ್’ಗಳಿಗಿಂತ 58 ಓವರ್ ಕಡಿಮೆ ಆಟ ನಡೆಯಲಿದೆ. ದಿನವೊಂದರಲ್ಲಿ 90ರ ಬದಲು 98 ಓವರ್ ಪೂರ್ಣಗೊಳಿಸಬೇಕಿರುವ ಕಾರಣ, ಹೆಚ್ಚುವರಿ 8 ಓವರ್‍ಗಾಗಿ ದಿನದಾಟವನ್ನು ಅರ್ಧಗಂಟೆ ಹೆಚ್ಚಿಸಲಾಗುತ್ತದೆ. ಮೊದಲೆರಡು ಅವಧಿಗಳನ್ನು 2 ಗಂಟೆ ಬದಲು 2 ಗಂಟೆ 15 ನಿಮಿಷ ನಡೆಸುವುದಾಗಿ ಐಸಿಸಿ ತಿಳಿಸಿದೆ.

ವಿರೋಧ ಯಾಕೆ ಸ್ವಾಮಿ?

ಐಸಿಸಿಯ ಪ್ರಸ್ತಾವನೆ ಮೇಲ್ನೋಟಕ್ಕೆ ಸರಿ ಅನಿಸಿದರೂ, ಇದು ಕ್ರಿಕೆಟ್ ಆತ್ಮವನ್ನು ವಿರೂಪಗೊಳಿಸುವ ಪ್ರಯತ್ನ ಎನ್ನಲಾಗುತ್ತಿದೆ. ನಾಲ್ಕು ದಿನಗಳ ಟೆಸ್ಟ್ ಪಂದ್ಯ ಕ್ರಿಕೆಟ್ ಸ್ವರೂಪಕ್ಕೆ ವಿರುದ್ಧವಾದದ್ದು, ಇದು ಕ್ರಿಕೆಟ್‍ನ ಶುದ್ಧ ರೂಪವನ್ನು ಹಾಳು ಮಾಡುತ್ತದೆ ಎಂದು ಕ್ರಿಕೆಟ್ ದಿಗ್ಗಜರು ವಾದಿಸುತ್ತಿದ್ದಾರೆ. ಟೆಸ್ಟ್ ಕ್ರಿಕೆಟ್ ಅನ್ನು ನಾಲ್ಕು ದಿನಗಳಿಗೆ ಇಳಿಸಿದರೇ ಟೆಸ್ಟ್, ಅದರ ಸ್ವರೂಪವನ್ನು ಕಳೆದುಕೊಳ್ಳುತ್ತದೆ ಹಾಗೂ ಯುವ ಕ್ರಿಕೆಟಿಗರ ಮೇಲೆ ಇದು ವ್ಯತಿರಿಕ್ತ ಪ್ರಭಾವ ಬೀರುತ್ತದೆ ಎಂದು ಮಾಜಿ ಕ್ರಿಕೆಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟ್ ದೇವರಿಂದಲೂ ವಿರೋಧ!

“ಕ್ರಿಕೆಟ್‍ನ ಅತೀ ಶುದ್ಧ ರೂಪವೆಂದರೆ ಟೆಸ್ಟ್ ಪಂದ್ಯ. ಇದನ್ನು ಹದಗೆಡಿಸಬಾರದು. ನೀವು ಟಿ20ಯನ್ನು ಜಾರಿ ಮಾಡಿದಿರಿ, ಏಕದಿನ ತಂದಿರಿ, ಟಿ10 ಬಂತು. 100 ಎಸೆತಗಳ ಕ್ರಿಕೆಟ್ ಕೂಡ ಬಂತು. ಆದರೆ ಟೆಸ್ಟ್ ಕ್ರಿಕೆಟನ್ನು ಮಾತ್ರ ಬದಲಾಯಿಸಲು ಹೋಗಬೇಡಿ’ ಎಂದು ಸಚಿನ್ ಹೇಳಿದ್ದಾರೆ.

ಟೆಸ್ಟ್ ಕ್ರಿಕೆಟನ್ನು 4 ದಿನಗಳಿಗೆ ಇಳಿಸುವುದರಿಂದ ಆಟ ತನ್ನ ಸೊಬಗು ಕಳೆದುಕೊಳ್ಳಲಿದೆ. ‘ಟೆಸ್ಟ್ ಕ್ರಿಕೆಟ್‍ನ ಪ್ರೀತಿಸುವ ಅಭಿಮಾನಿಯಾಗಿ ಹೇಳುತ್ತಿದ್ದೇನೆ. ಆಟದ ಮಾದರಿಯಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಪಂದ್ಯವನ್ನು 4 ದಿನಗಳಿಗೆ ಇಳಿಸಿದರೆ, ಆಟಗಾರರು ಟೆಸ್ಟ್ ಕ್ರಿಕೆಟನ್ನು ನೋಡುವ ದೃಷ್ಟಿಯೇ ಬದಲಾಗಲಿದೆ’ ಎಂದು 200 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೂಡ 4 ದಿನಗಳ ಟೆಸ್ಟ್ ಬೇಡ ಎಂಬ ಧಾಟಿಯಲ್ಲಿ ಮಾತಾಡಿದ್ದಾರೆ. ಐಸಿಸಿ ನಿರ್ಧಾರ ಕ್ರಿಕೆಟ್ ಆತ್ಮವಾಗಿರುವ ಟೆಸ್ಟ್ ಕ್ರಿಕೆಟ್ ಸ್ವರೂಪಕ್ಕೆ ವಿರುದ್ಧವಾದದ್ದು ಎಂದು ರವಿಶಾಸ್ತ್ರಿ ಹೇಳಿದ್ದಾರೆ.

ಐಸಿಸಿ ವಾದವೇನು?

ಫಲಿತಾಂಶಕ್ಕೆ ಹೆಚ್ಚಿನ ಆದ್ಯತೆ: ಟೆಸ್ಟ್ ಕ್ರಿಕೆಟ್‍ಗೆ ಹೊಸ ರೂಪ ನೀಡಲು ಪ್ರಯೋಗಗಳನ್ನು ನಡೆಸುತ್ತಿರುವ ಐಸಿಸಿ, ಫಾಲೋ ಆನ್ ನಿಯಮವನ್ನು 200 ರನ್‍ಗಳಿಂದ 150ಕ್ಕಿಳಿಸಿದೆ. ಫಲಿತಾಂಶಕ್ಕೆ ಒತ್ತು ನೀಡುವ ತಂಡಗಳಿಗೆ ಈ ನಿಯಮ ಅನುಕೂಲವಾಗಲಿದೆ ಎಂದು ಐಸಿಸಿ ತಿಳಿಸಿದೆ. ಇನ್ನುಳಿದಂತೆ 5 ದಿನಗಳ ಟೆಸ್ಟ್ ನಿಯಮಗಳೆಲ್ಲವೂ ಅನ್ವಯವಾಗುತ್ತದೆ.

2023ರಿಂದ 2031ರ ನಡುವಿನ ಕ್ರಿಕೆಟ್ ಋತುಗಳಲ್ಲಿ ಟೆಸ್ಟ್ ಪಂದ್ಯಗಳನ್ನು 5 ದಿನಗಳಿಂದ 4 ದಿನಗಳಿಗೆ ಇಳಿಸುವುದರಿಂದ ಹೆಚ್ಚು ಜಾಗತಿಕ ಮಟ್ಟದ ಟೂರ್ನಿಗಳು, ಬಿಸಿಸಿಐ ಬೇಡಿಕೆಯಂತೆ ಮತ್ತಷ್ಟು ದ್ವಿಪಕ್ಷೀಯ ಸರಣಿಗಳ ಆಯೋಜನೆ, ವಿಶ್ವದಾದ್ಯಂತ ನಡೆಯುವ ಟಿ20 ಲೀಗ್‍ಗಳ ಪ್ರಸರಣ ಹಾಗೂ 5 ದಿನಗಳ ಪಂದ್ಯಗಳ ಆಯೋಜನೆಗೆ ತಗುಲುವ ವೆಚ್ಚವನ್ನು ಕಡಿಮೆ ಮಾಡಲು ನೆರವಾಗಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ. ಸದ್ಯ ಚಾಲ್ತಿಯಲ್ಲಿರುವ 2015-2023ರ ಅವಧಿಯಲ್ಲಿ 5 ದಿನಗಳ ಬದಲಿಗೆ 4 ದಿನಗಳ ಟೆಸ್ಟ್ ಪಂದ್ಯಗಳನ್ನು ನಡೆಸಿದರೆ 335 ದಿನಗಳು ಉಳಿಯುತ್ತಿದ್ದವು ಎಂದು ಐಸಿಸಿ ಅಂದಾಜಿಸಿದೆ.

ಐಸಿಸಿಯ ಬೆಂಬಲಕ್ಕೆ ಮಂಡಳಿಗಳು!

ನಾಲ್ಕು ದಿನಗಳ ಟೆಸ್ಟ್ ಪ್ರಸ್ತಾವದ ಬಗ್ಗೆ ಈಗಾಗಲೇ ಪರ ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿವೆ. ಈ ಮಧ್ಯೆ ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಗಳು ಐಸಿಸಿಯ ಬೆಂಬಲಕ್ಕೆ ನಿಂತಿವೆ. ಆದ್ರೆ ಆಸ್ಟೇಲಿಯಾದ ಮಾಜಿ ಹಾಗೂ ಹಾಲಿ ಕ್ರಿಕೆಟ್ ಆಟಗಾರರು, ಐಸಿಸಿ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಹೊಸ ಯೋಜನೆಯಲ್ಲ

4 ದಿನಗಳ ಟೆಸ್ಟ್ ಹೊಸ ಯೋಜನೆ ಏನಲ್ಲ. ಈ ವರ್ಷ ಇಂಗ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳು 4 ದಿನಗಳ ಪಂದ್ಯವನ್ನು ಆಡಿದ್ದವು. ಈ ಹಿಂದೆ 2017ರಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಜಿಂಬಾಬ್ವೆ ಸಹ ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು.

ಬಿಸಿಸಿಐ ರೆಡ್ ಸಿಗ್ನಲ್

ನಾಲ್ಕು ದಿನಗಳ ಟೆಸ್ಟ್ ಮ್ಯಾಚ್ ನಡೆಸುವ ಬಗ್ಗೆ ಬಿಸಿಸಿಐ ರೆಡ್ ಪರ-ವಿರೋಧ ವಾದಗಳ ಮಧ್ಯೆ ಐಸಿಸಿಯ ಕ್ರಿಕೆಟ್ ಸಮಿತಿಯು ಮಾರ್ಚ್‍ನಲ್ಲಿ ನಾಲ್ಕು ದಿನಗಳ ಟೆಸ್ಟ್ ಪಂದ್ಯದ ಪ್ರಸ್ತಾವದ ಕುರಿತು ಚರ್ಚೆ ನಡೆಸಲು ಸಿದ್ಧತೆ ನಡೆಸಿದೆ. ದುಬೈನಲ್ಲಿ ಮಾರ್ಚ್ 27 ರಿಂದ 31 ರ ತನಕ ನಡೆಯುವ ಮುಂದಿನ ಸುತ್ತಿನ ಐಸಿಸಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಮಾಜಿ ಕ್ರಿಕೆಟಿಗ, ಕ್ರಿಕೆಟ್ ಸಮಿತಿಯ ಅಧ್ಯಕ್ಷ ಅನಿಲ್ ಕುಂಬ್ಳೆ ಹೇಳಿದ್ದಾರೆ. ಈ ಕ್ರಿಕೆಟ್ ಸಮಿತಿಯಲ್ಲಿ ಆಂಡ್ರೂ ಸ್ಟ್ರಾಸ್, ರಾಹುಲ್ ದ್ರಾವಿಡ್, ಮಹೇಲ ಜಯವರ್ಧನೆ ಹಾಗೂ ಶಾನ್ ಪೋಲಾಕ್ ಇದ್ದಾರೆ.

ಇತ್ತ ವಿಶ್ವದ ಅತ್ಯಂತ ಶ್ರೀಮಂತ ಮಂಡಳಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಸಿಸಿ ಪ್ರಸ್ತಾವಕ್ಕೆ ರೆಡ್ ಸಿಗ್ನಲ್ ನೀಡಲು ಸಜ್ಜಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...