Homeಮುಖಪುಟ4 ದಿನಗಳ ಟೆಸ್ಟ್ ನಿಯಮಗಳೇನು? ವಿರೋಧವೇಕೆ?

4 ದಿನಗಳ ಟೆಸ್ಟ್ ನಿಯಮಗಳೇನು? ವಿರೋಧವೇಕೆ?

- Advertisement -
- Advertisement -

ಟೆಸ್ಟ್ ಪಂದ್ಯ ಕ್ರಿಕೆಟ್‍ನ ಪರಿಶುದ್ಧ ರೂಪ. ಇದು ಕ್ರಿಕೆಟ್‍ನ ಆತ್ಮವೂ ಹೌದು. ಕ್ರಿಕೆಟ್ ಆಟಗಾರರ ಅಸಲಿ ತಾಕತ್ತನ್ನು ಹೊರತರುವ ಮಾದರಿ. ಆದ್ರೆ ಇದೀಗ ಈ ಟೆಸ್ಟ್‍ನ ಸ್ವರೂಪವನ್ನೇ ಬದಲಿಸಲು ಐಸಿಸಿ ಮುಂದಾಗಿದೆ. ಟೆಸ್ಟ್ ಪಂದ್ಯಗಳನ್ನು ಐದು ದಿನಗಳ ಬದಲಿಗೆ ನಾಲ್ಕು ದಿನಕ್ಕೆ ಸೀಮಿತಗೊಳಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಚಿಂತನೆ ನಡೆಸಿದೆ. ಆದ್ರೆ ಐಸಿಸಿಯ ಈ ಕಲ್ಪನೆಗೆ ಕ್ರಿಕೆಟ್ ಪ್ರಪಂಚದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

ಏನಿದು 4 ದಿನಗಳ ಟೆಸ್ಟ್? ನಿಯಮಗಳೇನು?

ಟೆಸ್ಟ್ ಪಂದ್ಯಗಳನ್ನು ಐದು ದಿನಗಳ ಬದಲಿಗೆ ನಾಲ್ಕು ದಿನಕ್ಕೆ ಸೀಮಿತಗೊಳಿಸುವ ಐಸಿಸಿ ಕಲ್ಪನೆಯ ಈ ಪಂದ್ಯದಲ್ಲಿ ನೂತನ ನಿಯಮಗಳು ಅನ್ವಯವಾಗಲಿವೆ. 5 ದಿನಗಳ ಪಂದ್ಯಗಳಲ್ಲಿ ಪ್ರತಿ ದಿನ 90 ಓವರ್‍ಗಳ ಆಟ ನಡೆಯಲಿದ್ದು, ‘4 ದಿನಗಳ ಟೆಸ್ಟ್’ನಲ್ಲಿ ದಿನಕ್ಕೆ 98 ಓವರ್‍ಗಳ ಆಟವನ್ನು ನಿಗದಿಪಡಿಸಲಾಗಿದೆ.

ಪಂದ್ಯದಲ್ಲಿ ಒಟ್ಟಾರೆ 392 ಓವರ್ ಆಟಕ್ಕೆ ಅವಕಾಶವಿದ್ದು, 5 ದಿನಗಳ ಟೆಸ್ಟ್’ಗಳಿಗಿಂತ 58 ಓವರ್ ಕಡಿಮೆ ಆಟ ನಡೆಯಲಿದೆ. ದಿನವೊಂದರಲ್ಲಿ 90ರ ಬದಲು 98 ಓವರ್ ಪೂರ್ಣಗೊಳಿಸಬೇಕಿರುವ ಕಾರಣ, ಹೆಚ್ಚುವರಿ 8 ಓವರ್‍ಗಾಗಿ ದಿನದಾಟವನ್ನು ಅರ್ಧಗಂಟೆ ಹೆಚ್ಚಿಸಲಾಗುತ್ತದೆ. ಮೊದಲೆರಡು ಅವಧಿಗಳನ್ನು 2 ಗಂಟೆ ಬದಲು 2 ಗಂಟೆ 15 ನಿಮಿಷ ನಡೆಸುವುದಾಗಿ ಐಸಿಸಿ ತಿಳಿಸಿದೆ.

ವಿರೋಧ ಯಾಕೆ ಸ್ವಾಮಿ?

ಐಸಿಸಿಯ ಪ್ರಸ್ತಾವನೆ ಮೇಲ್ನೋಟಕ್ಕೆ ಸರಿ ಅನಿಸಿದರೂ, ಇದು ಕ್ರಿಕೆಟ್ ಆತ್ಮವನ್ನು ವಿರೂಪಗೊಳಿಸುವ ಪ್ರಯತ್ನ ಎನ್ನಲಾಗುತ್ತಿದೆ. ನಾಲ್ಕು ದಿನಗಳ ಟೆಸ್ಟ್ ಪಂದ್ಯ ಕ್ರಿಕೆಟ್ ಸ್ವರೂಪಕ್ಕೆ ವಿರುದ್ಧವಾದದ್ದು, ಇದು ಕ್ರಿಕೆಟ್‍ನ ಶುದ್ಧ ರೂಪವನ್ನು ಹಾಳು ಮಾಡುತ್ತದೆ ಎಂದು ಕ್ರಿಕೆಟ್ ದಿಗ್ಗಜರು ವಾದಿಸುತ್ತಿದ್ದಾರೆ. ಟೆಸ್ಟ್ ಕ್ರಿಕೆಟ್ ಅನ್ನು ನಾಲ್ಕು ದಿನಗಳಿಗೆ ಇಳಿಸಿದರೇ ಟೆಸ್ಟ್, ಅದರ ಸ್ವರೂಪವನ್ನು ಕಳೆದುಕೊಳ್ಳುತ್ತದೆ ಹಾಗೂ ಯುವ ಕ್ರಿಕೆಟಿಗರ ಮೇಲೆ ಇದು ವ್ಯತಿರಿಕ್ತ ಪ್ರಭಾವ ಬೀರುತ್ತದೆ ಎಂದು ಮಾಜಿ ಕ್ರಿಕೆಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟ್ ದೇವರಿಂದಲೂ ವಿರೋಧ!

“ಕ್ರಿಕೆಟ್‍ನ ಅತೀ ಶುದ್ಧ ರೂಪವೆಂದರೆ ಟೆಸ್ಟ್ ಪಂದ್ಯ. ಇದನ್ನು ಹದಗೆಡಿಸಬಾರದು. ನೀವು ಟಿ20ಯನ್ನು ಜಾರಿ ಮಾಡಿದಿರಿ, ಏಕದಿನ ತಂದಿರಿ, ಟಿ10 ಬಂತು. 100 ಎಸೆತಗಳ ಕ್ರಿಕೆಟ್ ಕೂಡ ಬಂತು. ಆದರೆ ಟೆಸ್ಟ್ ಕ್ರಿಕೆಟನ್ನು ಮಾತ್ರ ಬದಲಾಯಿಸಲು ಹೋಗಬೇಡಿ’ ಎಂದು ಸಚಿನ್ ಹೇಳಿದ್ದಾರೆ.

ಟೆಸ್ಟ್ ಕ್ರಿಕೆಟನ್ನು 4 ದಿನಗಳಿಗೆ ಇಳಿಸುವುದರಿಂದ ಆಟ ತನ್ನ ಸೊಬಗು ಕಳೆದುಕೊಳ್ಳಲಿದೆ. ‘ಟೆಸ್ಟ್ ಕ್ರಿಕೆಟ್‍ನ ಪ್ರೀತಿಸುವ ಅಭಿಮಾನಿಯಾಗಿ ಹೇಳುತ್ತಿದ್ದೇನೆ. ಆಟದ ಮಾದರಿಯಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಪಂದ್ಯವನ್ನು 4 ದಿನಗಳಿಗೆ ಇಳಿಸಿದರೆ, ಆಟಗಾರರು ಟೆಸ್ಟ್ ಕ್ರಿಕೆಟನ್ನು ನೋಡುವ ದೃಷ್ಟಿಯೇ ಬದಲಾಗಲಿದೆ’ ಎಂದು 200 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೂಡ 4 ದಿನಗಳ ಟೆಸ್ಟ್ ಬೇಡ ಎಂಬ ಧಾಟಿಯಲ್ಲಿ ಮಾತಾಡಿದ್ದಾರೆ. ಐಸಿಸಿ ನಿರ್ಧಾರ ಕ್ರಿಕೆಟ್ ಆತ್ಮವಾಗಿರುವ ಟೆಸ್ಟ್ ಕ್ರಿಕೆಟ್ ಸ್ವರೂಪಕ್ಕೆ ವಿರುದ್ಧವಾದದ್ದು ಎಂದು ರವಿಶಾಸ್ತ್ರಿ ಹೇಳಿದ್ದಾರೆ.

ಐಸಿಸಿ ವಾದವೇನು?

ಫಲಿತಾಂಶಕ್ಕೆ ಹೆಚ್ಚಿನ ಆದ್ಯತೆ: ಟೆಸ್ಟ್ ಕ್ರಿಕೆಟ್‍ಗೆ ಹೊಸ ರೂಪ ನೀಡಲು ಪ್ರಯೋಗಗಳನ್ನು ನಡೆಸುತ್ತಿರುವ ಐಸಿಸಿ, ಫಾಲೋ ಆನ್ ನಿಯಮವನ್ನು 200 ರನ್‍ಗಳಿಂದ 150ಕ್ಕಿಳಿಸಿದೆ. ಫಲಿತಾಂಶಕ್ಕೆ ಒತ್ತು ನೀಡುವ ತಂಡಗಳಿಗೆ ಈ ನಿಯಮ ಅನುಕೂಲವಾಗಲಿದೆ ಎಂದು ಐಸಿಸಿ ತಿಳಿಸಿದೆ. ಇನ್ನುಳಿದಂತೆ 5 ದಿನಗಳ ಟೆಸ್ಟ್ ನಿಯಮಗಳೆಲ್ಲವೂ ಅನ್ವಯವಾಗುತ್ತದೆ.

2023ರಿಂದ 2031ರ ನಡುವಿನ ಕ್ರಿಕೆಟ್ ಋತುಗಳಲ್ಲಿ ಟೆಸ್ಟ್ ಪಂದ್ಯಗಳನ್ನು 5 ದಿನಗಳಿಂದ 4 ದಿನಗಳಿಗೆ ಇಳಿಸುವುದರಿಂದ ಹೆಚ್ಚು ಜಾಗತಿಕ ಮಟ್ಟದ ಟೂರ್ನಿಗಳು, ಬಿಸಿಸಿಐ ಬೇಡಿಕೆಯಂತೆ ಮತ್ತಷ್ಟು ದ್ವಿಪಕ್ಷೀಯ ಸರಣಿಗಳ ಆಯೋಜನೆ, ವಿಶ್ವದಾದ್ಯಂತ ನಡೆಯುವ ಟಿ20 ಲೀಗ್‍ಗಳ ಪ್ರಸರಣ ಹಾಗೂ 5 ದಿನಗಳ ಪಂದ್ಯಗಳ ಆಯೋಜನೆಗೆ ತಗುಲುವ ವೆಚ್ಚವನ್ನು ಕಡಿಮೆ ಮಾಡಲು ನೆರವಾಗಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ. ಸದ್ಯ ಚಾಲ್ತಿಯಲ್ಲಿರುವ 2015-2023ರ ಅವಧಿಯಲ್ಲಿ 5 ದಿನಗಳ ಬದಲಿಗೆ 4 ದಿನಗಳ ಟೆಸ್ಟ್ ಪಂದ್ಯಗಳನ್ನು ನಡೆಸಿದರೆ 335 ದಿನಗಳು ಉಳಿಯುತ್ತಿದ್ದವು ಎಂದು ಐಸಿಸಿ ಅಂದಾಜಿಸಿದೆ.

ಐಸಿಸಿಯ ಬೆಂಬಲಕ್ಕೆ ಮಂಡಳಿಗಳು!

ನಾಲ್ಕು ದಿನಗಳ ಟೆಸ್ಟ್ ಪ್ರಸ್ತಾವದ ಬಗ್ಗೆ ಈಗಾಗಲೇ ಪರ ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿವೆ. ಈ ಮಧ್ಯೆ ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಗಳು ಐಸಿಸಿಯ ಬೆಂಬಲಕ್ಕೆ ನಿಂತಿವೆ. ಆದ್ರೆ ಆಸ್ಟೇಲಿಯಾದ ಮಾಜಿ ಹಾಗೂ ಹಾಲಿ ಕ್ರಿಕೆಟ್ ಆಟಗಾರರು, ಐಸಿಸಿ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಹೊಸ ಯೋಜನೆಯಲ್ಲ

4 ದಿನಗಳ ಟೆಸ್ಟ್ ಹೊಸ ಯೋಜನೆ ಏನಲ್ಲ. ಈ ವರ್ಷ ಇಂಗ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳು 4 ದಿನಗಳ ಪಂದ್ಯವನ್ನು ಆಡಿದ್ದವು. ಈ ಹಿಂದೆ 2017ರಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಜಿಂಬಾಬ್ವೆ ಸಹ ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು.

ಬಿಸಿಸಿಐ ರೆಡ್ ಸಿಗ್ನಲ್

ನಾಲ್ಕು ದಿನಗಳ ಟೆಸ್ಟ್ ಮ್ಯಾಚ್ ನಡೆಸುವ ಬಗ್ಗೆ ಬಿಸಿಸಿಐ ರೆಡ್ ಪರ-ವಿರೋಧ ವಾದಗಳ ಮಧ್ಯೆ ಐಸಿಸಿಯ ಕ್ರಿಕೆಟ್ ಸಮಿತಿಯು ಮಾರ್ಚ್‍ನಲ್ಲಿ ನಾಲ್ಕು ದಿನಗಳ ಟೆಸ್ಟ್ ಪಂದ್ಯದ ಪ್ರಸ್ತಾವದ ಕುರಿತು ಚರ್ಚೆ ನಡೆಸಲು ಸಿದ್ಧತೆ ನಡೆಸಿದೆ. ದುಬೈನಲ್ಲಿ ಮಾರ್ಚ್ 27 ರಿಂದ 31 ರ ತನಕ ನಡೆಯುವ ಮುಂದಿನ ಸುತ್ತಿನ ಐಸಿಸಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಮಾಜಿ ಕ್ರಿಕೆಟಿಗ, ಕ್ರಿಕೆಟ್ ಸಮಿತಿಯ ಅಧ್ಯಕ್ಷ ಅನಿಲ್ ಕುಂಬ್ಳೆ ಹೇಳಿದ್ದಾರೆ. ಈ ಕ್ರಿಕೆಟ್ ಸಮಿತಿಯಲ್ಲಿ ಆಂಡ್ರೂ ಸ್ಟ್ರಾಸ್, ರಾಹುಲ್ ದ್ರಾವಿಡ್, ಮಹೇಲ ಜಯವರ್ಧನೆ ಹಾಗೂ ಶಾನ್ ಪೋಲಾಕ್ ಇದ್ದಾರೆ.

ಇತ್ತ ವಿಶ್ವದ ಅತ್ಯಂತ ಶ್ರೀಮಂತ ಮಂಡಳಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಸಿಸಿ ಪ್ರಸ್ತಾವಕ್ಕೆ ರೆಡ್ ಸಿಗ್ನಲ್ ನೀಡಲು ಸಜ್ಜಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...