Homeಮುಖಪುಟ4 ದಿನಗಳ ಟೆಸ್ಟ್ ನಿಯಮಗಳೇನು? ವಿರೋಧವೇಕೆ?

4 ದಿನಗಳ ಟೆಸ್ಟ್ ನಿಯಮಗಳೇನು? ವಿರೋಧವೇಕೆ?

- Advertisement -
- Advertisement -

ಟೆಸ್ಟ್ ಪಂದ್ಯ ಕ್ರಿಕೆಟ್‍ನ ಪರಿಶುದ್ಧ ರೂಪ. ಇದು ಕ್ರಿಕೆಟ್‍ನ ಆತ್ಮವೂ ಹೌದು. ಕ್ರಿಕೆಟ್ ಆಟಗಾರರ ಅಸಲಿ ತಾಕತ್ತನ್ನು ಹೊರತರುವ ಮಾದರಿ. ಆದ್ರೆ ಇದೀಗ ಈ ಟೆಸ್ಟ್‍ನ ಸ್ವರೂಪವನ್ನೇ ಬದಲಿಸಲು ಐಸಿಸಿ ಮುಂದಾಗಿದೆ. ಟೆಸ್ಟ್ ಪಂದ್ಯಗಳನ್ನು ಐದು ದಿನಗಳ ಬದಲಿಗೆ ನಾಲ್ಕು ದಿನಕ್ಕೆ ಸೀಮಿತಗೊಳಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಚಿಂತನೆ ನಡೆಸಿದೆ. ಆದ್ರೆ ಐಸಿಸಿಯ ಈ ಕಲ್ಪನೆಗೆ ಕ್ರಿಕೆಟ್ ಪ್ರಪಂಚದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

ಏನಿದು 4 ದಿನಗಳ ಟೆಸ್ಟ್? ನಿಯಮಗಳೇನು?

ಟೆಸ್ಟ್ ಪಂದ್ಯಗಳನ್ನು ಐದು ದಿನಗಳ ಬದಲಿಗೆ ನಾಲ್ಕು ದಿನಕ್ಕೆ ಸೀಮಿತಗೊಳಿಸುವ ಐಸಿಸಿ ಕಲ್ಪನೆಯ ಈ ಪಂದ್ಯದಲ್ಲಿ ನೂತನ ನಿಯಮಗಳು ಅನ್ವಯವಾಗಲಿವೆ. 5 ದಿನಗಳ ಪಂದ್ಯಗಳಲ್ಲಿ ಪ್ರತಿ ದಿನ 90 ಓವರ್‍ಗಳ ಆಟ ನಡೆಯಲಿದ್ದು, ‘4 ದಿನಗಳ ಟೆಸ್ಟ್’ನಲ್ಲಿ ದಿನಕ್ಕೆ 98 ಓವರ್‍ಗಳ ಆಟವನ್ನು ನಿಗದಿಪಡಿಸಲಾಗಿದೆ.

ಪಂದ್ಯದಲ್ಲಿ ಒಟ್ಟಾರೆ 392 ಓವರ್ ಆಟಕ್ಕೆ ಅವಕಾಶವಿದ್ದು, 5 ದಿನಗಳ ಟೆಸ್ಟ್’ಗಳಿಗಿಂತ 58 ಓವರ್ ಕಡಿಮೆ ಆಟ ನಡೆಯಲಿದೆ. ದಿನವೊಂದರಲ್ಲಿ 90ರ ಬದಲು 98 ಓವರ್ ಪೂರ್ಣಗೊಳಿಸಬೇಕಿರುವ ಕಾರಣ, ಹೆಚ್ಚುವರಿ 8 ಓವರ್‍ಗಾಗಿ ದಿನದಾಟವನ್ನು ಅರ್ಧಗಂಟೆ ಹೆಚ್ಚಿಸಲಾಗುತ್ತದೆ. ಮೊದಲೆರಡು ಅವಧಿಗಳನ್ನು 2 ಗಂಟೆ ಬದಲು 2 ಗಂಟೆ 15 ನಿಮಿಷ ನಡೆಸುವುದಾಗಿ ಐಸಿಸಿ ತಿಳಿಸಿದೆ.

ವಿರೋಧ ಯಾಕೆ ಸ್ವಾಮಿ?

ಐಸಿಸಿಯ ಪ್ರಸ್ತಾವನೆ ಮೇಲ್ನೋಟಕ್ಕೆ ಸರಿ ಅನಿಸಿದರೂ, ಇದು ಕ್ರಿಕೆಟ್ ಆತ್ಮವನ್ನು ವಿರೂಪಗೊಳಿಸುವ ಪ್ರಯತ್ನ ಎನ್ನಲಾಗುತ್ತಿದೆ. ನಾಲ್ಕು ದಿನಗಳ ಟೆಸ್ಟ್ ಪಂದ್ಯ ಕ್ರಿಕೆಟ್ ಸ್ವರೂಪಕ್ಕೆ ವಿರುದ್ಧವಾದದ್ದು, ಇದು ಕ್ರಿಕೆಟ್‍ನ ಶುದ್ಧ ರೂಪವನ್ನು ಹಾಳು ಮಾಡುತ್ತದೆ ಎಂದು ಕ್ರಿಕೆಟ್ ದಿಗ್ಗಜರು ವಾದಿಸುತ್ತಿದ್ದಾರೆ. ಟೆಸ್ಟ್ ಕ್ರಿಕೆಟ್ ಅನ್ನು ನಾಲ್ಕು ದಿನಗಳಿಗೆ ಇಳಿಸಿದರೇ ಟೆಸ್ಟ್, ಅದರ ಸ್ವರೂಪವನ್ನು ಕಳೆದುಕೊಳ್ಳುತ್ತದೆ ಹಾಗೂ ಯುವ ಕ್ರಿಕೆಟಿಗರ ಮೇಲೆ ಇದು ವ್ಯತಿರಿಕ್ತ ಪ್ರಭಾವ ಬೀರುತ್ತದೆ ಎಂದು ಮಾಜಿ ಕ್ರಿಕೆಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟ್ ದೇವರಿಂದಲೂ ವಿರೋಧ!

“ಕ್ರಿಕೆಟ್‍ನ ಅತೀ ಶುದ್ಧ ರೂಪವೆಂದರೆ ಟೆಸ್ಟ್ ಪಂದ್ಯ. ಇದನ್ನು ಹದಗೆಡಿಸಬಾರದು. ನೀವು ಟಿ20ಯನ್ನು ಜಾರಿ ಮಾಡಿದಿರಿ, ಏಕದಿನ ತಂದಿರಿ, ಟಿ10 ಬಂತು. 100 ಎಸೆತಗಳ ಕ್ರಿಕೆಟ್ ಕೂಡ ಬಂತು. ಆದರೆ ಟೆಸ್ಟ್ ಕ್ರಿಕೆಟನ್ನು ಮಾತ್ರ ಬದಲಾಯಿಸಲು ಹೋಗಬೇಡಿ’ ಎಂದು ಸಚಿನ್ ಹೇಳಿದ್ದಾರೆ.

ಟೆಸ್ಟ್ ಕ್ರಿಕೆಟನ್ನು 4 ದಿನಗಳಿಗೆ ಇಳಿಸುವುದರಿಂದ ಆಟ ತನ್ನ ಸೊಬಗು ಕಳೆದುಕೊಳ್ಳಲಿದೆ. ‘ಟೆಸ್ಟ್ ಕ್ರಿಕೆಟ್‍ನ ಪ್ರೀತಿಸುವ ಅಭಿಮಾನಿಯಾಗಿ ಹೇಳುತ್ತಿದ್ದೇನೆ. ಆಟದ ಮಾದರಿಯಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಪಂದ್ಯವನ್ನು 4 ದಿನಗಳಿಗೆ ಇಳಿಸಿದರೆ, ಆಟಗಾರರು ಟೆಸ್ಟ್ ಕ್ರಿಕೆಟನ್ನು ನೋಡುವ ದೃಷ್ಟಿಯೇ ಬದಲಾಗಲಿದೆ’ ಎಂದು 200 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೂಡ 4 ದಿನಗಳ ಟೆಸ್ಟ್ ಬೇಡ ಎಂಬ ಧಾಟಿಯಲ್ಲಿ ಮಾತಾಡಿದ್ದಾರೆ. ಐಸಿಸಿ ನಿರ್ಧಾರ ಕ್ರಿಕೆಟ್ ಆತ್ಮವಾಗಿರುವ ಟೆಸ್ಟ್ ಕ್ರಿಕೆಟ್ ಸ್ವರೂಪಕ್ಕೆ ವಿರುದ್ಧವಾದದ್ದು ಎಂದು ರವಿಶಾಸ್ತ್ರಿ ಹೇಳಿದ್ದಾರೆ.

ಐಸಿಸಿ ವಾದವೇನು?

ಫಲಿತಾಂಶಕ್ಕೆ ಹೆಚ್ಚಿನ ಆದ್ಯತೆ: ಟೆಸ್ಟ್ ಕ್ರಿಕೆಟ್‍ಗೆ ಹೊಸ ರೂಪ ನೀಡಲು ಪ್ರಯೋಗಗಳನ್ನು ನಡೆಸುತ್ತಿರುವ ಐಸಿಸಿ, ಫಾಲೋ ಆನ್ ನಿಯಮವನ್ನು 200 ರನ್‍ಗಳಿಂದ 150ಕ್ಕಿಳಿಸಿದೆ. ಫಲಿತಾಂಶಕ್ಕೆ ಒತ್ತು ನೀಡುವ ತಂಡಗಳಿಗೆ ಈ ನಿಯಮ ಅನುಕೂಲವಾಗಲಿದೆ ಎಂದು ಐಸಿಸಿ ತಿಳಿಸಿದೆ. ಇನ್ನುಳಿದಂತೆ 5 ದಿನಗಳ ಟೆಸ್ಟ್ ನಿಯಮಗಳೆಲ್ಲವೂ ಅನ್ವಯವಾಗುತ್ತದೆ.

2023ರಿಂದ 2031ರ ನಡುವಿನ ಕ್ರಿಕೆಟ್ ಋತುಗಳಲ್ಲಿ ಟೆಸ್ಟ್ ಪಂದ್ಯಗಳನ್ನು 5 ದಿನಗಳಿಂದ 4 ದಿನಗಳಿಗೆ ಇಳಿಸುವುದರಿಂದ ಹೆಚ್ಚು ಜಾಗತಿಕ ಮಟ್ಟದ ಟೂರ್ನಿಗಳು, ಬಿಸಿಸಿಐ ಬೇಡಿಕೆಯಂತೆ ಮತ್ತಷ್ಟು ದ್ವಿಪಕ್ಷೀಯ ಸರಣಿಗಳ ಆಯೋಜನೆ, ವಿಶ್ವದಾದ್ಯಂತ ನಡೆಯುವ ಟಿ20 ಲೀಗ್‍ಗಳ ಪ್ರಸರಣ ಹಾಗೂ 5 ದಿನಗಳ ಪಂದ್ಯಗಳ ಆಯೋಜನೆಗೆ ತಗುಲುವ ವೆಚ್ಚವನ್ನು ಕಡಿಮೆ ಮಾಡಲು ನೆರವಾಗಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ. ಸದ್ಯ ಚಾಲ್ತಿಯಲ್ಲಿರುವ 2015-2023ರ ಅವಧಿಯಲ್ಲಿ 5 ದಿನಗಳ ಬದಲಿಗೆ 4 ದಿನಗಳ ಟೆಸ್ಟ್ ಪಂದ್ಯಗಳನ್ನು ನಡೆಸಿದರೆ 335 ದಿನಗಳು ಉಳಿಯುತ್ತಿದ್ದವು ಎಂದು ಐಸಿಸಿ ಅಂದಾಜಿಸಿದೆ.

ಐಸಿಸಿಯ ಬೆಂಬಲಕ್ಕೆ ಮಂಡಳಿಗಳು!

ನಾಲ್ಕು ದಿನಗಳ ಟೆಸ್ಟ್ ಪ್ರಸ್ತಾವದ ಬಗ್ಗೆ ಈಗಾಗಲೇ ಪರ ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿವೆ. ಈ ಮಧ್ಯೆ ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಗಳು ಐಸಿಸಿಯ ಬೆಂಬಲಕ್ಕೆ ನಿಂತಿವೆ. ಆದ್ರೆ ಆಸ್ಟೇಲಿಯಾದ ಮಾಜಿ ಹಾಗೂ ಹಾಲಿ ಕ್ರಿಕೆಟ್ ಆಟಗಾರರು, ಐಸಿಸಿ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಹೊಸ ಯೋಜನೆಯಲ್ಲ

4 ದಿನಗಳ ಟೆಸ್ಟ್ ಹೊಸ ಯೋಜನೆ ಏನಲ್ಲ. ಈ ವರ್ಷ ಇಂಗ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳು 4 ದಿನಗಳ ಪಂದ್ಯವನ್ನು ಆಡಿದ್ದವು. ಈ ಹಿಂದೆ 2017ರಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಜಿಂಬಾಬ್ವೆ ಸಹ ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು.

ಬಿಸಿಸಿಐ ರೆಡ್ ಸಿಗ್ನಲ್

ನಾಲ್ಕು ದಿನಗಳ ಟೆಸ್ಟ್ ಮ್ಯಾಚ್ ನಡೆಸುವ ಬಗ್ಗೆ ಬಿಸಿಸಿಐ ರೆಡ್ ಪರ-ವಿರೋಧ ವಾದಗಳ ಮಧ್ಯೆ ಐಸಿಸಿಯ ಕ್ರಿಕೆಟ್ ಸಮಿತಿಯು ಮಾರ್ಚ್‍ನಲ್ಲಿ ನಾಲ್ಕು ದಿನಗಳ ಟೆಸ್ಟ್ ಪಂದ್ಯದ ಪ್ರಸ್ತಾವದ ಕುರಿತು ಚರ್ಚೆ ನಡೆಸಲು ಸಿದ್ಧತೆ ನಡೆಸಿದೆ. ದುಬೈನಲ್ಲಿ ಮಾರ್ಚ್ 27 ರಿಂದ 31 ರ ತನಕ ನಡೆಯುವ ಮುಂದಿನ ಸುತ್ತಿನ ಐಸಿಸಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಮಾಜಿ ಕ್ರಿಕೆಟಿಗ, ಕ್ರಿಕೆಟ್ ಸಮಿತಿಯ ಅಧ್ಯಕ್ಷ ಅನಿಲ್ ಕುಂಬ್ಳೆ ಹೇಳಿದ್ದಾರೆ. ಈ ಕ್ರಿಕೆಟ್ ಸಮಿತಿಯಲ್ಲಿ ಆಂಡ್ರೂ ಸ್ಟ್ರಾಸ್, ರಾಹುಲ್ ದ್ರಾವಿಡ್, ಮಹೇಲ ಜಯವರ್ಧನೆ ಹಾಗೂ ಶಾನ್ ಪೋಲಾಕ್ ಇದ್ದಾರೆ.

ಇತ್ತ ವಿಶ್ವದ ಅತ್ಯಂತ ಶ್ರೀಮಂತ ಮಂಡಳಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಸಿಸಿ ಪ್ರಸ್ತಾವಕ್ಕೆ ರೆಡ್ ಸಿಗ್ನಲ್ ನೀಡಲು ಸಜ್ಜಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...