Homeಮುಖಪುಟ4 ದಿನಗಳ ಟೆಸ್ಟ್ ನಿಯಮಗಳೇನು? ವಿರೋಧವೇಕೆ?

4 ದಿನಗಳ ಟೆಸ್ಟ್ ನಿಯಮಗಳೇನು? ವಿರೋಧವೇಕೆ?

- Advertisement -
- Advertisement -

ಟೆಸ್ಟ್ ಪಂದ್ಯ ಕ್ರಿಕೆಟ್‍ನ ಪರಿಶುದ್ಧ ರೂಪ. ಇದು ಕ್ರಿಕೆಟ್‍ನ ಆತ್ಮವೂ ಹೌದು. ಕ್ರಿಕೆಟ್ ಆಟಗಾರರ ಅಸಲಿ ತಾಕತ್ತನ್ನು ಹೊರತರುವ ಮಾದರಿ. ಆದ್ರೆ ಇದೀಗ ಈ ಟೆಸ್ಟ್‍ನ ಸ್ವರೂಪವನ್ನೇ ಬದಲಿಸಲು ಐಸಿಸಿ ಮುಂದಾಗಿದೆ. ಟೆಸ್ಟ್ ಪಂದ್ಯಗಳನ್ನು ಐದು ದಿನಗಳ ಬದಲಿಗೆ ನಾಲ್ಕು ದಿನಕ್ಕೆ ಸೀಮಿತಗೊಳಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಚಿಂತನೆ ನಡೆಸಿದೆ. ಆದ್ರೆ ಐಸಿಸಿಯ ಈ ಕಲ್ಪನೆಗೆ ಕ್ರಿಕೆಟ್ ಪ್ರಪಂಚದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

ಏನಿದು 4 ದಿನಗಳ ಟೆಸ್ಟ್? ನಿಯಮಗಳೇನು?

ಟೆಸ್ಟ್ ಪಂದ್ಯಗಳನ್ನು ಐದು ದಿನಗಳ ಬದಲಿಗೆ ನಾಲ್ಕು ದಿನಕ್ಕೆ ಸೀಮಿತಗೊಳಿಸುವ ಐಸಿಸಿ ಕಲ್ಪನೆಯ ಈ ಪಂದ್ಯದಲ್ಲಿ ನೂತನ ನಿಯಮಗಳು ಅನ್ವಯವಾಗಲಿವೆ. 5 ದಿನಗಳ ಪಂದ್ಯಗಳಲ್ಲಿ ಪ್ರತಿ ದಿನ 90 ಓವರ್‍ಗಳ ಆಟ ನಡೆಯಲಿದ್ದು, ‘4 ದಿನಗಳ ಟೆಸ್ಟ್’ನಲ್ಲಿ ದಿನಕ್ಕೆ 98 ಓವರ್‍ಗಳ ಆಟವನ್ನು ನಿಗದಿಪಡಿಸಲಾಗಿದೆ.

ಪಂದ್ಯದಲ್ಲಿ ಒಟ್ಟಾರೆ 392 ಓವರ್ ಆಟಕ್ಕೆ ಅವಕಾಶವಿದ್ದು, 5 ದಿನಗಳ ಟೆಸ್ಟ್’ಗಳಿಗಿಂತ 58 ಓವರ್ ಕಡಿಮೆ ಆಟ ನಡೆಯಲಿದೆ. ದಿನವೊಂದರಲ್ಲಿ 90ರ ಬದಲು 98 ಓವರ್ ಪೂರ್ಣಗೊಳಿಸಬೇಕಿರುವ ಕಾರಣ, ಹೆಚ್ಚುವರಿ 8 ಓವರ್‍ಗಾಗಿ ದಿನದಾಟವನ್ನು ಅರ್ಧಗಂಟೆ ಹೆಚ್ಚಿಸಲಾಗುತ್ತದೆ. ಮೊದಲೆರಡು ಅವಧಿಗಳನ್ನು 2 ಗಂಟೆ ಬದಲು 2 ಗಂಟೆ 15 ನಿಮಿಷ ನಡೆಸುವುದಾಗಿ ಐಸಿಸಿ ತಿಳಿಸಿದೆ.

ವಿರೋಧ ಯಾಕೆ ಸ್ವಾಮಿ?

ಐಸಿಸಿಯ ಪ್ರಸ್ತಾವನೆ ಮೇಲ್ನೋಟಕ್ಕೆ ಸರಿ ಅನಿಸಿದರೂ, ಇದು ಕ್ರಿಕೆಟ್ ಆತ್ಮವನ್ನು ವಿರೂಪಗೊಳಿಸುವ ಪ್ರಯತ್ನ ಎನ್ನಲಾಗುತ್ತಿದೆ. ನಾಲ್ಕು ದಿನಗಳ ಟೆಸ್ಟ್ ಪಂದ್ಯ ಕ್ರಿಕೆಟ್ ಸ್ವರೂಪಕ್ಕೆ ವಿರುದ್ಧವಾದದ್ದು, ಇದು ಕ್ರಿಕೆಟ್‍ನ ಶುದ್ಧ ರೂಪವನ್ನು ಹಾಳು ಮಾಡುತ್ತದೆ ಎಂದು ಕ್ರಿಕೆಟ್ ದಿಗ್ಗಜರು ವಾದಿಸುತ್ತಿದ್ದಾರೆ. ಟೆಸ್ಟ್ ಕ್ರಿಕೆಟ್ ಅನ್ನು ನಾಲ್ಕು ದಿನಗಳಿಗೆ ಇಳಿಸಿದರೇ ಟೆಸ್ಟ್, ಅದರ ಸ್ವರೂಪವನ್ನು ಕಳೆದುಕೊಳ್ಳುತ್ತದೆ ಹಾಗೂ ಯುವ ಕ್ರಿಕೆಟಿಗರ ಮೇಲೆ ಇದು ವ್ಯತಿರಿಕ್ತ ಪ್ರಭಾವ ಬೀರುತ್ತದೆ ಎಂದು ಮಾಜಿ ಕ್ರಿಕೆಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟ್ ದೇವರಿಂದಲೂ ವಿರೋಧ!

“ಕ್ರಿಕೆಟ್‍ನ ಅತೀ ಶುದ್ಧ ರೂಪವೆಂದರೆ ಟೆಸ್ಟ್ ಪಂದ್ಯ. ಇದನ್ನು ಹದಗೆಡಿಸಬಾರದು. ನೀವು ಟಿ20ಯನ್ನು ಜಾರಿ ಮಾಡಿದಿರಿ, ಏಕದಿನ ತಂದಿರಿ, ಟಿ10 ಬಂತು. 100 ಎಸೆತಗಳ ಕ್ರಿಕೆಟ್ ಕೂಡ ಬಂತು. ಆದರೆ ಟೆಸ್ಟ್ ಕ್ರಿಕೆಟನ್ನು ಮಾತ್ರ ಬದಲಾಯಿಸಲು ಹೋಗಬೇಡಿ’ ಎಂದು ಸಚಿನ್ ಹೇಳಿದ್ದಾರೆ.

ಟೆಸ್ಟ್ ಕ್ರಿಕೆಟನ್ನು 4 ದಿನಗಳಿಗೆ ಇಳಿಸುವುದರಿಂದ ಆಟ ತನ್ನ ಸೊಬಗು ಕಳೆದುಕೊಳ್ಳಲಿದೆ. ‘ಟೆಸ್ಟ್ ಕ್ರಿಕೆಟ್‍ನ ಪ್ರೀತಿಸುವ ಅಭಿಮಾನಿಯಾಗಿ ಹೇಳುತ್ತಿದ್ದೇನೆ. ಆಟದ ಮಾದರಿಯಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಪಂದ್ಯವನ್ನು 4 ದಿನಗಳಿಗೆ ಇಳಿಸಿದರೆ, ಆಟಗಾರರು ಟೆಸ್ಟ್ ಕ್ರಿಕೆಟನ್ನು ನೋಡುವ ದೃಷ್ಟಿಯೇ ಬದಲಾಗಲಿದೆ’ ಎಂದು 200 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೂಡ 4 ದಿನಗಳ ಟೆಸ್ಟ್ ಬೇಡ ಎಂಬ ಧಾಟಿಯಲ್ಲಿ ಮಾತಾಡಿದ್ದಾರೆ. ಐಸಿಸಿ ನಿರ್ಧಾರ ಕ್ರಿಕೆಟ್ ಆತ್ಮವಾಗಿರುವ ಟೆಸ್ಟ್ ಕ್ರಿಕೆಟ್ ಸ್ವರೂಪಕ್ಕೆ ವಿರುದ್ಧವಾದದ್ದು ಎಂದು ರವಿಶಾಸ್ತ್ರಿ ಹೇಳಿದ್ದಾರೆ.

ಐಸಿಸಿ ವಾದವೇನು?

ಫಲಿತಾಂಶಕ್ಕೆ ಹೆಚ್ಚಿನ ಆದ್ಯತೆ: ಟೆಸ್ಟ್ ಕ್ರಿಕೆಟ್‍ಗೆ ಹೊಸ ರೂಪ ನೀಡಲು ಪ್ರಯೋಗಗಳನ್ನು ನಡೆಸುತ್ತಿರುವ ಐಸಿಸಿ, ಫಾಲೋ ಆನ್ ನಿಯಮವನ್ನು 200 ರನ್‍ಗಳಿಂದ 150ಕ್ಕಿಳಿಸಿದೆ. ಫಲಿತಾಂಶಕ್ಕೆ ಒತ್ತು ನೀಡುವ ತಂಡಗಳಿಗೆ ಈ ನಿಯಮ ಅನುಕೂಲವಾಗಲಿದೆ ಎಂದು ಐಸಿಸಿ ತಿಳಿಸಿದೆ. ಇನ್ನುಳಿದಂತೆ 5 ದಿನಗಳ ಟೆಸ್ಟ್ ನಿಯಮಗಳೆಲ್ಲವೂ ಅನ್ವಯವಾಗುತ್ತದೆ.

2023ರಿಂದ 2031ರ ನಡುವಿನ ಕ್ರಿಕೆಟ್ ಋತುಗಳಲ್ಲಿ ಟೆಸ್ಟ್ ಪಂದ್ಯಗಳನ್ನು 5 ದಿನಗಳಿಂದ 4 ದಿನಗಳಿಗೆ ಇಳಿಸುವುದರಿಂದ ಹೆಚ್ಚು ಜಾಗತಿಕ ಮಟ್ಟದ ಟೂರ್ನಿಗಳು, ಬಿಸಿಸಿಐ ಬೇಡಿಕೆಯಂತೆ ಮತ್ತಷ್ಟು ದ್ವಿಪಕ್ಷೀಯ ಸರಣಿಗಳ ಆಯೋಜನೆ, ವಿಶ್ವದಾದ್ಯಂತ ನಡೆಯುವ ಟಿ20 ಲೀಗ್‍ಗಳ ಪ್ರಸರಣ ಹಾಗೂ 5 ದಿನಗಳ ಪಂದ್ಯಗಳ ಆಯೋಜನೆಗೆ ತಗುಲುವ ವೆಚ್ಚವನ್ನು ಕಡಿಮೆ ಮಾಡಲು ನೆರವಾಗಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ. ಸದ್ಯ ಚಾಲ್ತಿಯಲ್ಲಿರುವ 2015-2023ರ ಅವಧಿಯಲ್ಲಿ 5 ದಿನಗಳ ಬದಲಿಗೆ 4 ದಿನಗಳ ಟೆಸ್ಟ್ ಪಂದ್ಯಗಳನ್ನು ನಡೆಸಿದರೆ 335 ದಿನಗಳು ಉಳಿಯುತ್ತಿದ್ದವು ಎಂದು ಐಸಿಸಿ ಅಂದಾಜಿಸಿದೆ.

ಐಸಿಸಿಯ ಬೆಂಬಲಕ್ಕೆ ಮಂಡಳಿಗಳು!

ನಾಲ್ಕು ದಿನಗಳ ಟೆಸ್ಟ್ ಪ್ರಸ್ತಾವದ ಬಗ್ಗೆ ಈಗಾಗಲೇ ಪರ ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿವೆ. ಈ ಮಧ್ಯೆ ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಗಳು ಐಸಿಸಿಯ ಬೆಂಬಲಕ್ಕೆ ನಿಂತಿವೆ. ಆದ್ರೆ ಆಸ್ಟೇಲಿಯಾದ ಮಾಜಿ ಹಾಗೂ ಹಾಲಿ ಕ್ರಿಕೆಟ್ ಆಟಗಾರರು, ಐಸಿಸಿ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಹೊಸ ಯೋಜನೆಯಲ್ಲ

4 ದಿನಗಳ ಟೆಸ್ಟ್ ಹೊಸ ಯೋಜನೆ ಏನಲ್ಲ. ಈ ವರ್ಷ ಇಂಗ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳು 4 ದಿನಗಳ ಪಂದ್ಯವನ್ನು ಆಡಿದ್ದವು. ಈ ಹಿಂದೆ 2017ರಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಜಿಂಬಾಬ್ವೆ ಸಹ ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು.

ಬಿಸಿಸಿಐ ರೆಡ್ ಸಿಗ್ನಲ್

ನಾಲ್ಕು ದಿನಗಳ ಟೆಸ್ಟ್ ಮ್ಯಾಚ್ ನಡೆಸುವ ಬಗ್ಗೆ ಬಿಸಿಸಿಐ ರೆಡ್ ಪರ-ವಿರೋಧ ವಾದಗಳ ಮಧ್ಯೆ ಐಸಿಸಿಯ ಕ್ರಿಕೆಟ್ ಸಮಿತಿಯು ಮಾರ್ಚ್‍ನಲ್ಲಿ ನಾಲ್ಕು ದಿನಗಳ ಟೆಸ್ಟ್ ಪಂದ್ಯದ ಪ್ರಸ್ತಾವದ ಕುರಿತು ಚರ್ಚೆ ನಡೆಸಲು ಸಿದ್ಧತೆ ನಡೆಸಿದೆ. ದುಬೈನಲ್ಲಿ ಮಾರ್ಚ್ 27 ರಿಂದ 31 ರ ತನಕ ನಡೆಯುವ ಮುಂದಿನ ಸುತ್ತಿನ ಐಸಿಸಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಮಾಜಿ ಕ್ರಿಕೆಟಿಗ, ಕ್ರಿಕೆಟ್ ಸಮಿತಿಯ ಅಧ್ಯಕ್ಷ ಅನಿಲ್ ಕುಂಬ್ಳೆ ಹೇಳಿದ್ದಾರೆ. ಈ ಕ್ರಿಕೆಟ್ ಸಮಿತಿಯಲ್ಲಿ ಆಂಡ್ರೂ ಸ್ಟ್ರಾಸ್, ರಾಹುಲ್ ದ್ರಾವಿಡ್, ಮಹೇಲ ಜಯವರ್ಧನೆ ಹಾಗೂ ಶಾನ್ ಪೋಲಾಕ್ ಇದ್ದಾರೆ.

ಇತ್ತ ವಿಶ್ವದ ಅತ್ಯಂತ ಶ್ರೀಮಂತ ಮಂಡಳಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಸಿಸಿ ಪ್ರಸ್ತಾವಕ್ಕೆ ರೆಡ್ ಸಿಗ್ನಲ್ ನೀಡಲು ಸಜ್ಜಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...