Homeಸಿನಿಮಾಕ್ರೀಡೆಟೆಸ್ಟ್ ಸರಣಿಯಲ್ಲಿ ಮುನ್ನಡೆ: ಇಂಗ್ಲೆಂಡ್ ನಲ್ಲಿ ಟೀಮ್ ಇಂಡಿಯಾದ ಪರಾಕ್ರಮ

ಟೆಸ್ಟ್ ಸರಣಿಯಲ್ಲಿ ಮುನ್ನಡೆ: ಇಂಗ್ಲೆಂಡ್ ನಲ್ಲಿ ಟೀಮ್ ಇಂಡಿಯಾದ ಪರಾಕ್ರಮ

- Advertisement -
- Advertisement -

ದಶಕಗಳ ಬಳಿಕ ಇಂಗ್ಲೆಂಡ್ ನಲ್ಲಿ ಟೀಮ್ ಇಂಡಿಯಾದ ಟೆಸ್ಟ್ ಸರಣಿ ಗೆಲುವಿನ ವಾಸನೆ ಮೂಗಿನ ಹತ್ತಿರಕ್ಕೆ ಬಂದರೂ, ಅದರ ಸಿಹಿ ಮಾತ್ರ ಬಾಯಿಗೆ ತಾಗಲಿಲ್ಲ. ಕಾರಣ ಭಾರತ ತಂಡದ ಸದಸ್ಯರೊಬ್ಬರಲ್ಲಿ ಕೋವಿಡ್-19 ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಆರಂಭಕ್ಕೂ ಎರಡು ಗಂಟೆಯ ಮುನ್ನ ಪಂದ್ಯವನ್ನು ಸ್ಥಗಿತ ಗೊಳಿಸಲಾಯಿತು. ಪರಿಣಾಮ ಕೊನೆಯ ಐದನೇ ಟೆಸ್ಟ್ ಪಂದ್ಯ ಮುಂದೂಡಲ್ಪಟ್ಟಿತು.

ಈ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಮುನ್ನಡೆ ಸಾಧಿಸಲು ತಂಡದ ಸಾಂಘಿಕ ಆಟದ ಬಲ ಎದ್ದು ಕಾಣುತ್ತಿತ್ತು. ಯುವ ಆಟಗಾರರು ಸಿಕ್ಕ ಅವಕಾಶಗಳನ್ನು ಎರಡೂ ಕೈಗಳಿಂದ ಬಳಿಸಿಕೊಂಡ ತಮ್ಮ ಮೇಲೆ ಬಿಳಿ ಜೆರ್ಸಿ ಕಾಯಂ ಇರುವಂತೆ ಪ್ರದರ್ಶನ ನೀಡಿದ್ದರು. ಪಂದ್ಯದಲ್ಲಿ ಅನುಭವಿ ಆಟಗಾರರ ಆಟ ಆರಂಭದಲ್ಲಿ ಮಂಕಾಗಿದ್ದರೂ, ನಂತರ ಹದಕ್ಕೆ ಬಂದಿತು. ವಿರಾಟ್ ಕೊಹ್ಲಿ ಶತಕ ಬಾರಸದೇ ಇದ್ದರೂ, ರನ್ ಕಲೆ ಹಾಕಿ ಮಿಂಚಿದ್ದರು.

ಮಧ್ಯಮ ಕ್ರಮಾಂಕದ ಆಟಗಾರರು ಸಿಕ್ಕ ಅವಕಾಶವನ್ನು ಚೆನ್ನಾಗಿ ಸದುಪಯೋಗ ಪಡಿಸಿಕೊಳ್ಳಲಿಲ್ಲ ಎಂಬ ಕೂಗು ಕೇಳಿಬರುತ್ತಿದೆ. ಆದರೆ ವಾಸ್ತವಾಗಿ ಟೀಮ್ ಇಂಡಿಯಾದ ಟೆಸ್ಟ್ ಸ್ಪೇಷಲಿಸ್ಟ್ ಚೇತೇಶ್ವರ್ ಪೂಜರ ಹಾಗೂ ಅಂಜಿಕ್ಯ ರಹಾನೆ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾದರೂ ಸಹ ಪಂದ್ಯಗೆಲ್ಲಿಸುವಲ್ಲಿ ಇವರ ಪ್ರದರ್ಶನ ಸಾಕಾಯಿತು. ತಂಡಕ್ಕೆ ಅಗತ್ಯ ಇದ್ದಾಗ ಈ ಅನುಭವಿ ಬ್ಯಾಟ್ಸ್ ಮನ್ ಗಳು ನೆಲಕಚ್ಚಿ ನಿಂತು ಬ್ಯಾಟ್ ಮಾಡಿ ರನ್ ಮಹಲ್ ಕಟ್ಟಿದ್ದೂ ಇದೆ. ಲಾರ್ಡ್ಸ್ ಅಂಗಳದಲ್ಲಿ ಪೂಜಾರ, ರಹಾನೆ ಆಡಿದ ರೀತಿಗೆ ವಿಶ್ವವೇ ಸಲಾಂ ಎಂದಿದೆ. ಒತ್ತಡವನ್ನು ಮೆಟ್ಟಿ ನಿಂತು ರನ್ ಮಹಲ್ ಕಟ್ಟಿದ ಪರಿ ಯುವ ಆಟಗಾರರಿಗೆ ಮಾದರಿ.

ಇನ್ನು ಆರಂಭಿಕ ಸ್ಥಾನವನ್ನು ಗಟ್ಟಿ ಪಡಿಸಿಕೊಳ್ಳುವಲ್ಲಿ ರೋಹಿತ್ ಶರ್ಮಾ ಸಫಲರಾಗಿದ್ದಾರೆ ಎಂದರೆ ತಪ್ಪಾಗಲಾರದರು. ಇವರು ಮೊದಲ ಪಂದ್ಯದಿಂದಲೂ ಸಮಯೋಚಿತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಅಂಗಳದಲ್ಲಿ ಅವರ ನೆಚ್ಚಿನ ನಟರಾಜ ಶಾಟ್, ಆನ್ ಡ್ರೈವ್, ಆಫ್ ಡ್ರೈವ್ ಮನಮೋಹಕವಾಗಿದ್ದವು. ಇವರು ಸಮಯೋಚಿತ ಪ್ರದರ್ಶನ ನೀಡಿದ ಬಲದಿಂದ ಟೀಮ್ ಇಂಡಿಯಾ ಪಂದ್ಯಗಳಲ್ಲಿ ಬೃಹತ್ ಮೊತ್ತ ದಾಖಲಿಸುವಲ್ಲಿ ನೆರವಾಯಿತು. ಅದರಲ್ಲೂ ನಾಲ್ಕನೇ ಟೆಸ್ಟ್ ನಲ್ಲಿ ಒತ್ತಡವನ್ನು ಮೆಟ್ಟಿನಿಂತು ರೋಹಿತ್ ಆಡಿದ ಧಾಟಿ ನಿಜಕ್ಕೂ ಇವರಲ್ಲಿನ ಕಲಾತ್ಮಕತೆಗೆ ಹಿಡಿದ ಕೈಗನ್ನಡಿಯಾಗಿದೆ. ಹಿಟ್ ಮ್ಯಾನ್ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಸರಣಿಯಲ್ಲಿ ಟೀಮ್ ಇಂಡಿಯಾದ ಪರ ಗರಿಷ್ಠ ರನ್ ಸಾಧಕರ ಪಟ್ಟಿಯಲ್ಲಿ ಕಾಣಿಸಿಕೊಂಡರು.

ನಿಜಕ್ಕೂ ರಿಷಭ್ ಪಂತ್ ಅವರು ತಮ್ಮ ನೈಜ ಆಟವನ್ನು ಆಡುವಲ್ಲಿ ವಿಫಲರಾದಂತೆ ಕಂಡರೂ, ಅವರ ಆಟದ ಶೈಲಿ ಬದಲಿಸಿಕೊಂಡಿದ್ದು ಎದ್ದು ಕಾಣುತ್ತಿತ್ತು. ರಕ್ಷಣಾತ್ಮಕ ಆಟಕ್ಕೆ ಮಣೆ ಹಾಕಿ ದೊಡ್ಡ ಇನ್ನಿಂಗ್ಸ್ ಕಟ್ಟುವ ಕಲೆಯನ್ನು ಪಂತ್ ಕರಗತ ಮಾಡಿಕೊಳ್ಳುತ್ತಿದ್ದಾರೆ ಎಂದು ಗೋಚರಿಸುತ್ತಿತ್ತು. ಅಲ್ಲದೆ ಇವರು ವಿಕೆಟ್ ಹಿಂದೆ ಮನಮೋಹಕವಾಗಿ ಪ್ರದರ್ಶನ ನೀಡಿದರು. ಸರಣಿಯಲ್ಲಿ ಪಂತ್ ಹಲವು ಬಾರಿ ಅದ್ಭುತ ಎನ್ನುವಂತಹ ಕ್ಯಾಚ್ ಗಳನ್ನು ಪಡೆದು ಟೀಕಾಕರ ಬಾಯಿ ಮುಚ್ಚಿಸಿದ್ದಾರೆ.

Photo Courtesy: Times of India

ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಎಲ್ಲರ ಬಾಯಲ್ಲಿ ಸದಾ ಇರುವಂತೆ ಮಾಡಿದ ಇನ್ನೊಂದು ಹೆಸರು ಯುವ ವೇಗಿ ಶಾರ್ದೂಲ್ ಠಾಕೂರ್. ತಮ್ಮ ಬಿಗುವಿನ ದಾಳಿ ಹಾಗೂ ಬಿರುಸಿನ ಬ್ಯಾಟಿಂಗ್ ನಿಂದಲೇ ಇವರು ತಂಡಕ್ಕೆ ನೆರವಾದ ಆಟಗಾರ. ಇನ್ನೊಂದು ವಿಶೇಷ ಎಂದರೆ ಸರಣಿಯಲ್ಲಿ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಗೆ ಅತಿ ಹೆಚ್ಚು ಕಾಡಿದ ಬೌಲರ್ ಗಳಲ್ಲಿ ಠಾಕೂರ್ ಗೆ ಅಗ್ರ ಸ್ಥಾನ. ಇವರ ಸ್ವಿಂಗ್ ಹಾಗೂ ಲೆಂತ್ ದಾಳಿಯನ್ನು ಗುರುತಿಸುವಲ್ಲಿ ರೂಟ್ ಎಡವಿದ್ದಾರೆ. ಇನ್ನು ತಂಡ ಸಂಕಷ್ಟದಲ್ಲಿದ್ದಾಗ ಟೆಸ್ಟ್ ಪಂದ್ಯಕ್ಕೆ ಚುಟುಕು ಪಂದ್ಯದ ಝಲಕ ನೀಡಿದ ಖ್ಯಾತಿ ಇವರಿಗೆ ಸಲ್ಲುತ್ತದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಸೂಪರ್ ಪ್ರದರ್ಶನ ನೀಡಿ ಠಾಕೂರ್ ಅಬ್ಬರಿಸಿದರು. ಇನ್ನು ಉಮೇಶ್ ಯಾದವ್ ಸಹ ಸಿಕ್ಕ ಅವಕಾಶದಲ್ಲಿ ತಮ್ಮ ಬೌಲಿಂಗ್ ನೈಪುಣ್ಯತೆಯ ಪ್ರದರ್ಶನ ಮಾಡಿದರು.

ದಿನ ಕಳೆದಂತೆ ಟೀಮ್ ಇಂಡಿಯಾದ ಕಾಯ್ದಿರಿಸಿದ ಆಟಗಾರರ ಪಟ್ಟಿ ಬೆಳೆಯುತ್ತಾ ಹೋದರೂ, ಗುಣಮಟ್ಟದ ಆಟಗಾರರು ತಯಾರಾಗುತ್ತಿದ್ದಾರೆ. ಅಲ್ಲದೆ ಟೀಮ್ ಇಂಡಿಯಾದಲ್ಲಿ ಸಿಕ್ಕ ಅವಕಾಶವನ್ನು ಬಳಸಿಕೊಂಡು ತಮ್ಮ ಕ್ಷಮತೆಯನ್ನು ಸಾಬೀತು ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ಪ್ರಸ್ತುತ ಅಂತ್ಯತ ಉತ್ತಮ ಬೌಲಿಂಗ್ ದಾಳಿಯನ್ನು ಹೊಂದಿರುವ ಕೀರ್ತಿ ಟೀಮ್ ಇಂಡಿಯಾದ್ದಾಗಿದೆ. ಬೌನ್ಸಿ ಟ್ರ್ಯಾಕ್ ಗಳಲ್ಲಿ ಕಮಾಲ್ ಪ್ರದರ್ಶನ ನೀಡಿದ ಯುವಕರು ಇದೀಗ ಟಿ-20 ಹಬ್ಬಕ್ಕೆ ಸಜ್ಜಾಗುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ವಿಶ್ವದ ಶ್ರೀಮಂತ ಲೀಗ್ ಯುಎಇನಲ್ಲಿ ಅನಾವರಣ ಗೊಳ್ಳಲಿದೆ. ಈ ಲೀಗ್ ನಲ್ಲಿ ಸ್ಟಾರ್ ಆಟಗಾರರು ತಮ್ಮ ತಮ್ಮ ತಂಡದ ಪರ ಭರ್ಜರಿ ಪ್ರದರ್ಶನ ನೀಡಲು ಆಂಗ್ಲರ ನಾಡು ವೇದಿಕೆ ಆಗಿದೆ ಎಂದರೆ ತಪ್ಪಾಗಲಾರದರು.


ಇದನ್ನೂ ಓದಿ: ಅಫ್ಘಾನ್: ಮಹಿಳೆಯರನ್ನು ಕ್ರಿಕೆಟ್ ಸೇರಿ ಹಲವು ಕ್ರೀಡೆಗಳಿಂದ ಹೊರಗಿಟ್ಟ ತಾಲಿಬಾನ್‌ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...