Homeಸಿನಿಮಾಕ್ರೀಡೆಟೆಸ್ಟ್ ಸರಣಿಯಲ್ಲಿ ಮುನ್ನಡೆ: ಇಂಗ್ಲೆಂಡ್ ನಲ್ಲಿ ಟೀಮ್ ಇಂಡಿಯಾದ ಪರಾಕ್ರಮ

ಟೆಸ್ಟ್ ಸರಣಿಯಲ್ಲಿ ಮುನ್ನಡೆ: ಇಂಗ್ಲೆಂಡ್ ನಲ್ಲಿ ಟೀಮ್ ಇಂಡಿಯಾದ ಪರಾಕ್ರಮ

- Advertisement -
- Advertisement -

ದಶಕಗಳ ಬಳಿಕ ಇಂಗ್ಲೆಂಡ್ ನಲ್ಲಿ ಟೀಮ್ ಇಂಡಿಯಾದ ಟೆಸ್ಟ್ ಸರಣಿ ಗೆಲುವಿನ ವಾಸನೆ ಮೂಗಿನ ಹತ್ತಿರಕ್ಕೆ ಬಂದರೂ, ಅದರ ಸಿಹಿ ಮಾತ್ರ ಬಾಯಿಗೆ ತಾಗಲಿಲ್ಲ. ಕಾರಣ ಭಾರತ ತಂಡದ ಸದಸ್ಯರೊಬ್ಬರಲ್ಲಿ ಕೋವಿಡ್-19 ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಆರಂಭಕ್ಕೂ ಎರಡು ಗಂಟೆಯ ಮುನ್ನ ಪಂದ್ಯವನ್ನು ಸ್ಥಗಿತ ಗೊಳಿಸಲಾಯಿತು. ಪರಿಣಾಮ ಕೊನೆಯ ಐದನೇ ಟೆಸ್ಟ್ ಪಂದ್ಯ ಮುಂದೂಡಲ್ಪಟ್ಟಿತು.

ಈ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಮುನ್ನಡೆ ಸಾಧಿಸಲು ತಂಡದ ಸಾಂಘಿಕ ಆಟದ ಬಲ ಎದ್ದು ಕಾಣುತ್ತಿತ್ತು. ಯುವ ಆಟಗಾರರು ಸಿಕ್ಕ ಅವಕಾಶಗಳನ್ನು ಎರಡೂ ಕೈಗಳಿಂದ ಬಳಿಸಿಕೊಂಡ ತಮ್ಮ ಮೇಲೆ ಬಿಳಿ ಜೆರ್ಸಿ ಕಾಯಂ ಇರುವಂತೆ ಪ್ರದರ್ಶನ ನೀಡಿದ್ದರು. ಪಂದ್ಯದಲ್ಲಿ ಅನುಭವಿ ಆಟಗಾರರ ಆಟ ಆರಂಭದಲ್ಲಿ ಮಂಕಾಗಿದ್ದರೂ, ನಂತರ ಹದಕ್ಕೆ ಬಂದಿತು. ವಿರಾಟ್ ಕೊಹ್ಲಿ ಶತಕ ಬಾರಸದೇ ಇದ್ದರೂ, ರನ್ ಕಲೆ ಹಾಕಿ ಮಿಂಚಿದ್ದರು.

ಮಧ್ಯಮ ಕ್ರಮಾಂಕದ ಆಟಗಾರರು ಸಿಕ್ಕ ಅವಕಾಶವನ್ನು ಚೆನ್ನಾಗಿ ಸದುಪಯೋಗ ಪಡಿಸಿಕೊಳ್ಳಲಿಲ್ಲ ಎಂಬ ಕೂಗು ಕೇಳಿಬರುತ್ತಿದೆ. ಆದರೆ ವಾಸ್ತವಾಗಿ ಟೀಮ್ ಇಂಡಿಯಾದ ಟೆಸ್ಟ್ ಸ್ಪೇಷಲಿಸ್ಟ್ ಚೇತೇಶ್ವರ್ ಪೂಜರ ಹಾಗೂ ಅಂಜಿಕ್ಯ ರಹಾನೆ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾದರೂ ಸಹ ಪಂದ್ಯಗೆಲ್ಲಿಸುವಲ್ಲಿ ಇವರ ಪ್ರದರ್ಶನ ಸಾಕಾಯಿತು. ತಂಡಕ್ಕೆ ಅಗತ್ಯ ಇದ್ದಾಗ ಈ ಅನುಭವಿ ಬ್ಯಾಟ್ಸ್ ಮನ್ ಗಳು ನೆಲಕಚ್ಚಿ ನಿಂತು ಬ್ಯಾಟ್ ಮಾಡಿ ರನ್ ಮಹಲ್ ಕಟ್ಟಿದ್ದೂ ಇದೆ. ಲಾರ್ಡ್ಸ್ ಅಂಗಳದಲ್ಲಿ ಪೂಜಾರ, ರಹಾನೆ ಆಡಿದ ರೀತಿಗೆ ವಿಶ್ವವೇ ಸಲಾಂ ಎಂದಿದೆ. ಒತ್ತಡವನ್ನು ಮೆಟ್ಟಿ ನಿಂತು ರನ್ ಮಹಲ್ ಕಟ್ಟಿದ ಪರಿ ಯುವ ಆಟಗಾರರಿಗೆ ಮಾದರಿ.

ಇನ್ನು ಆರಂಭಿಕ ಸ್ಥಾನವನ್ನು ಗಟ್ಟಿ ಪಡಿಸಿಕೊಳ್ಳುವಲ್ಲಿ ರೋಹಿತ್ ಶರ್ಮಾ ಸಫಲರಾಗಿದ್ದಾರೆ ಎಂದರೆ ತಪ್ಪಾಗಲಾರದರು. ಇವರು ಮೊದಲ ಪಂದ್ಯದಿಂದಲೂ ಸಮಯೋಚಿತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಅಂಗಳದಲ್ಲಿ ಅವರ ನೆಚ್ಚಿನ ನಟರಾಜ ಶಾಟ್, ಆನ್ ಡ್ರೈವ್, ಆಫ್ ಡ್ರೈವ್ ಮನಮೋಹಕವಾಗಿದ್ದವು. ಇವರು ಸಮಯೋಚಿತ ಪ್ರದರ್ಶನ ನೀಡಿದ ಬಲದಿಂದ ಟೀಮ್ ಇಂಡಿಯಾ ಪಂದ್ಯಗಳಲ್ಲಿ ಬೃಹತ್ ಮೊತ್ತ ದಾಖಲಿಸುವಲ್ಲಿ ನೆರವಾಯಿತು. ಅದರಲ್ಲೂ ನಾಲ್ಕನೇ ಟೆಸ್ಟ್ ನಲ್ಲಿ ಒತ್ತಡವನ್ನು ಮೆಟ್ಟಿನಿಂತು ರೋಹಿತ್ ಆಡಿದ ಧಾಟಿ ನಿಜಕ್ಕೂ ಇವರಲ್ಲಿನ ಕಲಾತ್ಮಕತೆಗೆ ಹಿಡಿದ ಕೈಗನ್ನಡಿಯಾಗಿದೆ. ಹಿಟ್ ಮ್ಯಾನ್ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಸರಣಿಯಲ್ಲಿ ಟೀಮ್ ಇಂಡಿಯಾದ ಪರ ಗರಿಷ್ಠ ರನ್ ಸಾಧಕರ ಪಟ್ಟಿಯಲ್ಲಿ ಕಾಣಿಸಿಕೊಂಡರು.

ನಿಜಕ್ಕೂ ರಿಷಭ್ ಪಂತ್ ಅವರು ತಮ್ಮ ನೈಜ ಆಟವನ್ನು ಆಡುವಲ್ಲಿ ವಿಫಲರಾದಂತೆ ಕಂಡರೂ, ಅವರ ಆಟದ ಶೈಲಿ ಬದಲಿಸಿಕೊಂಡಿದ್ದು ಎದ್ದು ಕಾಣುತ್ತಿತ್ತು. ರಕ್ಷಣಾತ್ಮಕ ಆಟಕ್ಕೆ ಮಣೆ ಹಾಕಿ ದೊಡ್ಡ ಇನ್ನಿಂಗ್ಸ್ ಕಟ್ಟುವ ಕಲೆಯನ್ನು ಪಂತ್ ಕರಗತ ಮಾಡಿಕೊಳ್ಳುತ್ತಿದ್ದಾರೆ ಎಂದು ಗೋಚರಿಸುತ್ತಿತ್ತು. ಅಲ್ಲದೆ ಇವರು ವಿಕೆಟ್ ಹಿಂದೆ ಮನಮೋಹಕವಾಗಿ ಪ್ರದರ್ಶನ ನೀಡಿದರು. ಸರಣಿಯಲ್ಲಿ ಪಂತ್ ಹಲವು ಬಾರಿ ಅದ್ಭುತ ಎನ್ನುವಂತಹ ಕ್ಯಾಚ್ ಗಳನ್ನು ಪಡೆದು ಟೀಕಾಕರ ಬಾಯಿ ಮುಚ್ಚಿಸಿದ್ದಾರೆ.

Photo Courtesy: Times of India

ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಎಲ್ಲರ ಬಾಯಲ್ಲಿ ಸದಾ ಇರುವಂತೆ ಮಾಡಿದ ಇನ್ನೊಂದು ಹೆಸರು ಯುವ ವೇಗಿ ಶಾರ್ದೂಲ್ ಠಾಕೂರ್. ತಮ್ಮ ಬಿಗುವಿನ ದಾಳಿ ಹಾಗೂ ಬಿರುಸಿನ ಬ್ಯಾಟಿಂಗ್ ನಿಂದಲೇ ಇವರು ತಂಡಕ್ಕೆ ನೆರವಾದ ಆಟಗಾರ. ಇನ್ನೊಂದು ವಿಶೇಷ ಎಂದರೆ ಸರಣಿಯಲ್ಲಿ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಗೆ ಅತಿ ಹೆಚ್ಚು ಕಾಡಿದ ಬೌಲರ್ ಗಳಲ್ಲಿ ಠಾಕೂರ್ ಗೆ ಅಗ್ರ ಸ್ಥಾನ. ಇವರ ಸ್ವಿಂಗ್ ಹಾಗೂ ಲೆಂತ್ ದಾಳಿಯನ್ನು ಗುರುತಿಸುವಲ್ಲಿ ರೂಟ್ ಎಡವಿದ್ದಾರೆ. ಇನ್ನು ತಂಡ ಸಂಕಷ್ಟದಲ್ಲಿದ್ದಾಗ ಟೆಸ್ಟ್ ಪಂದ್ಯಕ್ಕೆ ಚುಟುಕು ಪಂದ್ಯದ ಝಲಕ ನೀಡಿದ ಖ್ಯಾತಿ ಇವರಿಗೆ ಸಲ್ಲುತ್ತದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಸೂಪರ್ ಪ್ರದರ್ಶನ ನೀಡಿ ಠಾಕೂರ್ ಅಬ್ಬರಿಸಿದರು. ಇನ್ನು ಉಮೇಶ್ ಯಾದವ್ ಸಹ ಸಿಕ್ಕ ಅವಕಾಶದಲ್ಲಿ ತಮ್ಮ ಬೌಲಿಂಗ್ ನೈಪುಣ್ಯತೆಯ ಪ್ರದರ್ಶನ ಮಾಡಿದರು.

ದಿನ ಕಳೆದಂತೆ ಟೀಮ್ ಇಂಡಿಯಾದ ಕಾಯ್ದಿರಿಸಿದ ಆಟಗಾರರ ಪಟ್ಟಿ ಬೆಳೆಯುತ್ತಾ ಹೋದರೂ, ಗುಣಮಟ್ಟದ ಆಟಗಾರರು ತಯಾರಾಗುತ್ತಿದ್ದಾರೆ. ಅಲ್ಲದೆ ಟೀಮ್ ಇಂಡಿಯಾದಲ್ಲಿ ಸಿಕ್ಕ ಅವಕಾಶವನ್ನು ಬಳಸಿಕೊಂಡು ತಮ್ಮ ಕ್ಷಮತೆಯನ್ನು ಸಾಬೀತು ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ಪ್ರಸ್ತುತ ಅಂತ್ಯತ ಉತ್ತಮ ಬೌಲಿಂಗ್ ದಾಳಿಯನ್ನು ಹೊಂದಿರುವ ಕೀರ್ತಿ ಟೀಮ್ ಇಂಡಿಯಾದ್ದಾಗಿದೆ. ಬೌನ್ಸಿ ಟ್ರ್ಯಾಕ್ ಗಳಲ್ಲಿ ಕಮಾಲ್ ಪ್ರದರ್ಶನ ನೀಡಿದ ಯುವಕರು ಇದೀಗ ಟಿ-20 ಹಬ್ಬಕ್ಕೆ ಸಜ್ಜಾಗುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ವಿಶ್ವದ ಶ್ರೀಮಂತ ಲೀಗ್ ಯುಎಇನಲ್ಲಿ ಅನಾವರಣ ಗೊಳ್ಳಲಿದೆ. ಈ ಲೀಗ್ ನಲ್ಲಿ ಸ್ಟಾರ್ ಆಟಗಾರರು ತಮ್ಮ ತಮ್ಮ ತಂಡದ ಪರ ಭರ್ಜರಿ ಪ್ರದರ್ಶನ ನೀಡಲು ಆಂಗ್ಲರ ನಾಡು ವೇದಿಕೆ ಆಗಿದೆ ಎಂದರೆ ತಪ್ಪಾಗಲಾರದರು.


ಇದನ್ನೂ ಓದಿ: ಅಫ್ಘಾನ್: ಮಹಿಳೆಯರನ್ನು ಕ್ರಿಕೆಟ್ ಸೇರಿ ಹಲವು ಕ್ರೀಡೆಗಳಿಂದ ಹೊರಗಿಟ್ಟ ತಾಲಿಬಾನ್‌ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....