Homeಸಿನಿಮಾಕ್ರೀಡೆಟೆಸ್ಟ್ ಸರಣಿಯಲ್ಲಿ ಮುನ್ನಡೆ: ಇಂಗ್ಲೆಂಡ್ ನಲ್ಲಿ ಟೀಮ್ ಇಂಡಿಯಾದ ಪರಾಕ್ರಮ

ಟೆಸ್ಟ್ ಸರಣಿಯಲ್ಲಿ ಮುನ್ನಡೆ: ಇಂಗ್ಲೆಂಡ್ ನಲ್ಲಿ ಟೀಮ್ ಇಂಡಿಯಾದ ಪರಾಕ್ರಮ

- Advertisement -
- Advertisement -

ದಶಕಗಳ ಬಳಿಕ ಇಂಗ್ಲೆಂಡ್ ನಲ್ಲಿ ಟೀಮ್ ಇಂಡಿಯಾದ ಟೆಸ್ಟ್ ಸರಣಿ ಗೆಲುವಿನ ವಾಸನೆ ಮೂಗಿನ ಹತ್ತಿರಕ್ಕೆ ಬಂದರೂ, ಅದರ ಸಿಹಿ ಮಾತ್ರ ಬಾಯಿಗೆ ತಾಗಲಿಲ್ಲ. ಕಾರಣ ಭಾರತ ತಂಡದ ಸದಸ್ಯರೊಬ್ಬರಲ್ಲಿ ಕೋವಿಡ್-19 ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಆರಂಭಕ್ಕೂ ಎರಡು ಗಂಟೆಯ ಮುನ್ನ ಪಂದ್ಯವನ್ನು ಸ್ಥಗಿತ ಗೊಳಿಸಲಾಯಿತು. ಪರಿಣಾಮ ಕೊನೆಯ ಐದನೇ ಟೆಸ್ಟ್ ಪಂದ್ಯ ಮುಂದೂಡಲ್ಪಟ್ಟಿತು.

ಈ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಮುನ್ನಡೆ ಸಾಧಿಸಲು ತಂಡದ ಸಾಂಘಿಕ ಆಟದ ಬಲ ಎದ್ದು ಕಾಣುತ್ತಿತ್ತು. ಯುವ ಆಟಗಾರರು ಸಿಕ್ಕ ಅವಕಾಶಗಳನ್ನು ಎರಡೂ ಕೈಗಳಿಂದ ಬಳಿಸಿಕೊಂಡ ತಮ್ಮ ಮೇಲೆ ಬಿಳಿ ಜೆರ್ಸಿ ಕಾಯಂ ಇರುವಂತೆ ಪ್ರದರ್ಶನ ನೀಡಿದ್ದರು. ಪಂದ್ಯದಲ್ಲಿ ಅನುಭವಿ ಆಟಗಾರರ ಆಟ ಆರಂಭದಲ್ಲಿ ಮಂಕಾಗಿದ್ದರೂ, ನಂತರ ಹದಕ್ಕೆ ಬಂದಿತು. ವಿರಾಟ್ ಕೊಹ್ಲಿ ಶತಕ ಬಾರಸದೇ ಇದ್ದರೂ, ರನ್ ಕಲೆ ಹಾಕಿ ಮಿಂಚಿದ್ದರು.

ಮಧ್ಯಮ ಕ್ರಮಾಂಕದ ಆಟಗಾರರು ಸಿಕ್ಕ ಅವಕಾಶವನ್ನು ಚೆನ್ನಾಗಿ ಸದುಪಯೋಗ ಪಡಿಸಿಕೊಳ್ಳಲಿಲ್ಲ ಎಂಬ ಕೂಗು ಕೇಳಿಬರುತ್ತಿದೆ. ಆದರೆ ವಾಸ್ತವಾಗಿ ಟೀಮ್ ಇಂಡಿಯಾದ ಟೆಸ್ಟ್ ಸ್ಪೇಷಲಿಸ್ಟ್ ಚೇತೇಶ್ವರ್ ಪೂಜರ ಹಾಗೂ ಅಂಜಿಕ್ಯ ರಹಾನೆ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾದರೂ ಸಹ ಪಂದ್ಯಗೆಲ್ಲಿಸುವಲ್ಲಿ ಇವರ ಪ್ರದರ್ಶನ ಸಾಕಾಯಿತು. ತಂಡಕ್ಕೆ ಅಗತ್ಯ ಇದ್ದಾಗ ಈ ಅನುಭವಿ ಬ್ಯಾಟ್ಸ್ ಮನ್ ಗಳು ನೆಲಕಚ್ಚಿ ನಿಂತು ಬ್ಯಾಟ್ ಮಾಡಿ ರನ್ ಮಹಲ್ ಕಟ್ಟಿದ್ದೂ ಇದೆ. ಲಾರ್ಡ್ಸ್ ಅಂಗಳದಲ್ಲಿ ಪೂಜಾರ, ರಹಾನೆ ಆಡಿದ ರೀತಿಗೆ ವಿಶ್ವವೇ ಸಲಾಂ ಎಂದಿದೆ. ಒತ್ತಡವನ್ನು ಮೆಟ್ಟಿ ನಿಂತು ರನ್ ಮಹಲ್ ಕಟ್ಟಿದ ಪರಿ ಯುವ ಆಟಗಾರರಿಗೆ ಮಾದರಿ.

ಇನ್ನು ಆರಂಭಿಕ ಸ್ಥಾನವನ್ನು ಗಟ್ಟಿ ಪಡಿಸಿಕೊಳ್ಳುವಲ್ಲಿ ರೋಹಿತ್ ಶರ್ಮಾ ಸಫಲರಾಗಿದ್ದಾರೆ ಎಂದರೆ ತಪ್ಪಾಗಲಾರದರು. ಇವರು ಮೊದಲ ಪಂದ್ಯದಿಂದಲೂ ಸಮಯೋಚಿತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಅಂಗಳದಲ್ಲಿ ಅವರ ನೆಚ್ಚಿನ ನಟರಾಜ ಶಾಟ್, ಆನ್ ಡ್ರೈವ್, ಆಫ್ ಡ್ರೈವ್ ಮನಮೋಹಕವಾಗಿದ್ದವು. ಇವರು ಸಮಯೋಚಿತ ಪ್ರದರ್ಶನ ನೀಡಿದ ಬಲದಿಂದ ಟೀಮ್ ಇಂಡಿಯಾ ಪಂದ್ಯಗಳಲ್ಲಿ ಬೃಹತ್ ಮೊತ್ತ ದಾಖಲಿಸುವಲ್ಲಿ ನೆರವಾಯಿತು. ಅದರಲ್ಲೂ ನಾಲ್ಕನೇ ಟೆಸ್ಟ್ ನಲ್ಲಿ ಒತ್ತಡವನ್ನು ಮೆಟ್ಟಿನಿಂತು ರೋಹಿತ್ ಆಡಿದ ಧಾಟಿ ನಿಜಕ್ಕೂ ಇವರಲ್ಲಿನ ಕಲಾತ್ಮಕತೆಗೆ ಹಿಡಿದ ಕೈಗನ್ನಡಿಯಾಗಿದೆ. ಹಿಟ್ ಮ್ಯಾನ್ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಸರಣಿಯಲ್ಲಿ ಟೀಮ್ ಇಂಡಿಯಾದ ಪರ ಗರಿಷ್ಠ ರನ್ ಸಾಧಕರ ಪಟ್ಟಿಯಲ್ಲಿ ಕಾಣಿಸಿಕೊಂಡರು.

ನಿಜಕ್ಕೂ ರಿಷಭ್ ಪಂತ್ ಅವರು ತಮ್ಮ ನೈಜ ಆಟವನ್ನು ಆಡುವಲ್ಲಿ ವಿಫಲರಾದಂತೆ ಕಂಡರೂ, ಅವರ ಆಟದ ಶೈಲಿ ಬದಲಿಸಿಕೊಂಡಿದ್ದು ಎದ್ದು ಕಾಣುತ್ತಿತ್ತು. ರಕ್ಷಣಾತ್ಮಕ ಆಟಕ್ಕೆ ಮಣೆ ಹಾಕಿ ದೊಡ್ಡ ಇನ್ನಿಂಗ್ಸ್ ಕಟ್ಟುವ ಕಲೆಯನ್ನು ಪಂತ್ ಕರಗತ ಮಾಡಿಕೊಳ್ಳುತ್ತಿದ್ದಾರೆ ಎಂದು ಗೋಚರಿಸುತ್ತಿತ್ತು. ಅಲ್ಲದೆ ಇವರು ವಿಕೆಟ್ ಹಿಂದೆ ಮನಮೋಹಕವಾಗಿ ಪ್ರದರ್ಶನ ನೀಡಿದರು. ಸರಣಿಯಲ್ಲಿ ಪಂತ್ ಹಲವು ಬಾರಿ ಅದ್ಭುತ ಎನ್ನುವಂತಹ ಕ್ಯಾಚ್ ಗಳನ್ನು ಪಡೆದು ಟೀಕಾಕರ ಬಾಯಿ ಮುಚ್ಚಿಸಿದ್ದಾರೆ.

Photo Courtesy: Times of India

ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಎಲ್ಲರ ಬಾಯಲ್ಲಿ ಸದಾ ಇರುವಂತೆ ಮಾಡಿದ ಇನ್ನೊಂದು ಹೆಸರು ಯುವ ವೇಗಿ ಶಾರ್ದೂಲ್ ಠಾಕೂರ್. ತಮ್ಮ ಬಿಗುವಿನ ದಾಳಿ ಹಾಗೂ ಬಿರುಸಿನ ಬ್ಯಾಟಿಂಗ್ ನಿಂದಲೇ ಇವರು ತಂಡಕ್ಕೆ ನೆರವಾದ ಆಟಗಾರ. ಇನ್ನೊಂದು ವಿಶೇಷ ಎಂದರೆ ಸರಣಿಯಲ್ಲಿ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಗೆ ಅತಿ ಹೆಚ್ಚು ಕಾಡಿದ ಬೌಲರ್ ಗಳಲ್ಲಿ ಠಾಕೂರ್ ಗೆ ಅಗ್ರ ಸ್ಥಾನ. ಇವರ ಸ್ವಿಂಗ್ ಹಾಗೂ ಲೆಂತ್ ದಾಳಿಯನ್ನು ಗುರುತಿಸುವಲ್ಲಿ ರೂಟ್ ಎಡವಿದ್ದಾರೆ. ಇನ್ನು ತಂಡ ಸಂಕಷ್ಟದಲ್ಲಿದ್ದಾಗ ಟೆಸ್ಟ್ ಪಂದ್ಯಕ್ಕೆ ಚುಟುಕು ಪಂದ್ಯದ ಝಲಕ ನೀಡಿದ ಖ್ಯಾತಿ ಇವರಿಗೆ ಸಲ್ಲುತ್ತದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಸೂಪರ್ ಪ್ರದರ್ಶನ ನೀಡಿ ಠಾಕೂರ್ ಅಬ್ಬರಿಸಿದರು. ಇನ್ನು ಉಮೇಶ್ ಯಾದವ್ ಸಹ ಸಿಕ್ಕ ಅವಕಾಶದಲ್ಲಿ ತಮ್ಮ ಬೌಲಿಂಗ್ ನೈಪುಣ್ಯತೆಯ ಪ್ರದರ್ಶನ ಮಾಡಿದರು.

ದಿನ ಕಳೆದಂತೆ ಟೀಮ್ ಇಂಡಿಯಾದ ಕಾಯ್ದಿರಿಸಿದ ಆಟಗಾರರ ಪಟ್ಟಿ ಬೆಳೆಯುತ್ತಾ ಹೋದರೂ, ಗುಣಮಟ್ಟದ ಆಟಗಾರರು ತಯಾರಾಗುತ್ತಿದ್ದಾರೆ. ಅಲ್ಲದೆ ಟೀಮ್ ಇಂಡಿಯಾದಲ್ಲಿ ಸಿಕ್ಕ ಅವಕಾಶವನ್ನು ಬಳಸಿಕೊಂಡು ತಮ್ಮ ಕ್ಷಮತೆಯನ್ನು ಸಾಬೀತು ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ಪ್ರಸ್ತುತ ಅಂತ್ಯತ ಉತ್ತಮ ಬೌಲಿಂಗ್ ದಾಳಿಯನ್ನು ಹೊಂದಿರುವ ಕೀರ್ತಿ ಟೀಮ್ ಇಂಡಿಯಾದ್ದಾಗಿದೆ. ಬೌನ್ಸಿ ಟ್ರ್ಯಾಕ್ ಗಳಲ್ಲಿ ಕಮಾಲ್ ಪ್ರದರ್ಶನ ನೀಡಿದ ಯುವಕರು ಇದೀಗ ಟಿ-20 ಹಬ್ಬಕ್ಕೆ ಸಜ್ಜಾಗುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ವಿಶ್ವದ ಶ್ರೀಮಂತ ಲೀಗ್ ಯುಎಇನಲ್ಲಿ ಅನಾವರಣ ಗೊಳ್ಳಲಿದೆ. ಈ ಲೀಗ್ ನಲ್ಲಿ ಸ್ಟಾರ್ ಆಟಗಾರರು ತಮ್ಮ ತಮ್ಮ ತಂಡದ ಪರ ಭರ್ಜರಿ ಪ್ರದರ್ಶನ ನೀಡಲು ಆಂಗ್ಲರ ನಾಡು ವೇದಿಕೆ ಆಗಿದೆ ಎಂದರೆ ತಪ್ಪಾಗಲಾರದರು.


ಇದನ್ನೂ ಓದಿ: ಅಫ್ಘಾನ್: ಮಹಿಳೆಯರನ್ನು ಕ್ರಿಕೆಟ್ ಸೇರಿ ಹಲವು ಕ್ರೀಡೆಗಳಿಂದ ಹೊರಗಿಟ್ಟ ತಾಲಿಬಾನ್‌ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...