Homeಪ್ರಪಂಚಮತ್ತಷ್ಟು ಜೈವಿಕ ಸಂಗತಿಗಳು

ಮತ್ತಷ್ಟು ಜೈವಿಕ ಸಂಗತಿಗಳು

- Advertisement -
- Advertisement -

ಎಕ್ಸ್-ವಾಯ್ ಮಕ್ಕಳು ಟೆಸ್ಟೊಸ್ಟೆರಾನ್ ಉತ್ಪತ್ತಿ ಮಾಡಿದರೂ ಟೆಸ್ಟೊಸ್ಟೆರಾನ್‌ಗೆ ಸ್ಪಂದಿಸುವ ಅಣುಗಳನ್ನು ಸಂಪೂರ್ಣವಾಗಿ  ಅಥವಾ ಭಾಗಶಃವಾಗಿ  ಹೊಂದದೇ ಇರಬಹುದು. ಇದರಿಂದ ಗಂಡಿನ ಲಕ್ಷಣಗಳ ಬೆಳವಣಿಗೆಯಲ್ಲಿ ಅನೇಕ ವಿಧದ ಬದಲಾವಣೆಗಳಾಗಬಹುದು. ಕೆಲವರು ಗರ್ಭಾಶಯದಲ್ಲಿದ್ದಾಗ ಟೆಸ್ಟೊಸ್ಟೆರಾನ್ ಹಾರ್ಮೋನಿಗೆ ಒಂದು ತರಹ ಪ್ರತಿಕ್ರಿಯಿಸಿ, ಹದಿವಯಸ್ಸಿನಲ್ಲಿ ಇನ್ನೊಂದು ತರಹ ಪ್ರತಿಕ್ರಿಯಿಸಬಹುದು. ಜನ್ಮದ ಸಮಯದಲ್ಲಿ ಅವರ ದೇಹ ವೈದ್ಯರಿಗೆ ಹೆಣ್ಣಾಗಿ ಕಂಡರೂ ಪ್ರೌಢಾವಸ್ಥೆಯ ನಂತರ ‘ಗಂಡಿನಂತೆ’ ಬದಲಾವಣೆಯಾಗಬಹುದು. ಅದರಂತೆಯೇ ಎಕ್ಸ್ಎಕ್ಸ್ ಮಕ್ಕಳು ಹಲವಾರು ಕಾರಣಗಳಿಂದಾಗಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಟೆಸ್ಟೊÃಸ್ಟೆರಾನ್ (ಪ್ರೊಜೆಸ್ಟೆರಾನ್ ಎನ್ನುವ ಸ್ತಿçà ಹಾರ್ಮೋನಿಂದ ಉತ್ಪತ್ತಿಯಾದ) ಉತ್ಪತ್ತಿ ಮಾಡಿದಲ್ಲಿ ಜನನಾಂಗಗಳು ವಿವಿಧ ಸ್ತರಗಳಲ್ಲಿ ಗಂಡಿನಂತೆ ಅಭಿವೃದ್ಧಿ ಹೊಂದಬಹುದು ಹಾಗೂ ಶಿಶ್ನದಂತೆ ಕಾಣುವ ಅಂಗದೊಂದಿಗೆ ಹುಟ್ಟಬಹುದು. ಹಾಗಾಗಿ, ಗಂಡು ಮತ್ತು ಹೆಣ್ಣು ಎನ್ನುವ ಸರಳ ವರ್ಗೀಕರಣದಿಂದ ಅನೇಕ ವಿಧಗಳಲ್ಲಿ ಇಂಟರ್‌ಸೆಕ್ಸ್ ಮಕ್ಕಳು ಬೇರೆಯಾಗಿರಬಹುದಾಗಿದೆ. ಜನಿಸಿದ 2000 ಮಕ್ಕಳಲ್ಲಿ 1 ಮಗುವಿನ ದೇಹದಲ್ಲಿ ಅಸ್ಪಷ್ಟವಾದ ಜನನಾಂಗಗಳು ಇರಬಹುದೆಂದು ಅಂದಾಜಿಸಲಾಗಿದೆ ಹಾಗೂ ಅವರನ್ನು ಇಂಟರ್‌ಸೆಕ್ಸ್ ಎಂದು ವರ್ಗೀಕರಿಸಲಾಗುತ್ತದೆ. ಆದರೆ ನಾವು ನೋಡಿದಂತೆ, ಹಲವಾರು ಇಂಟರ್‌ಸೆಕ್ಸ್ ವಿಧಗಳಲ್ಲಿ ಜನನಾಂಗಗಳು ಸ್ಪಷ್ಟವಾಗಿ ಗಂಡು ಅಥವಾ ಹೆಣ್ಣಿನಂತೆ ತೋರಬಹುದು, ಆದರೆ ಇದು ಅವರ ಅನುವಂಶಿಕ ರಚನೆಯಿಂದ ಬೇರೆಯಾಗಿರಬಹದು. ಆನ್ ಫಾಸ್ಟೊà ಸ್ಟರ್ಲಿಂಗ್‌ನಂತಹ ವಿಜ್ಞಾನಿಗಳು ಸೂಚಿಸುವುದೇನೆಂದರೆ, ಒಟ್ಟಾರೆ ಜನಸಂಖ್ಯೆಯ ಶೇಕಡಾ ಎರಡರಷ್ಟು ಜನರು ಎದ್ದುಕಾಣದ, ಗೌಣವಾಗಿರುವ ಇಂಟರ್‌ಸೆಕ್ಸ್ ವಿಧಗಳನ್ನು ಹೊಂದಿರಬಹುದು.
ಇವೆಲ್ಲದಕ್ಕೂ ಮತ್ತು ಟ್ರಾನ್ಸ್ಜೆಂಡರ್ (ಅಂತರಲಿಂಗಿ) ಆಗಿರುವುದಕ್ಕೂ ಸಂಬಂಧವೇನು? ಮೆದುಳು. ಗಂಡು ಹಾರ್ಮೋನ್ ಆದ ಟೆಸ್ಟೊÃಸ್ಟೆರಾನ್ ಮತ್ತು ಹೆಣ್ಣು ಹಾರ್ಮೋನ್ ಈಸ್ಟೊçÃಜೆನ್‌ಗಳಿಗೆ ಸ್ಪಂದಿಸುವುದಕ್ಕಾಗಿ ಮೆದುಳಿನಲ್ಲಿ ಕೆಲವು ಕ್ಷೆÃತ್ರಗಳಿವೆ ಹಾಗೂ ಈ ಹಾರ್ಮೋನುಗಳು ಮೆದುಳಿನ ಮೇಲೆ ಹೇಗೆ ಪರಿಣಾಮ ಬೀರುತ್ತೆ ಎನ್ನುವುದು ಕೆಲವು ವಂಶವಾಹಿ (ಜೀನ್)ಗಳ ಮೇಲೆ ಅವಲಂಬಿಸಿರುತ್ತೆ. ಆದುದರಿಂದ ಟ್ರಾನ್ಸ್ಜೆಂಡರ್ ಗುರುತು ಇದಕ್ಕೆ ಸಂಬಂಧಿಸಿರುತ್ತೆ. ಹಾಗಾಗಿ, ಹುಟ್ಟಿನ ಸಮಯದಲ್ಲಿ ವೈದ್ಯರು ಗಂಡು ಅಥವಾ ಹೆಣ್ಣು ಎಂದು ವರ್ಗೀಕರಿಸಿದರೂ, ಅವರು ಬೆಳೆಯುತ್ತ ಹೋದಂತೆ ಅವರ ಮಿದುಳಿನ ಮೇಲೆ ಅವರ ಜೈವಿಕ ಲಿಂಗಕ್ಕೆ ವಿರುದ್ಧವಾದ ಹಾರ್ಮೋನ್ ಪ್ರಭಾವ ಬೀರಬಹದು. ಎಕ್ಸ್ ಎಕ್ಸ್ ಮಕ್ಕಳಲ್ಲಿ ಅವರ ಬೆಳವಣಿಗೆಯ ನಿರ್ಣಾಯಕ ಹಂತಗಳಲ್ಲಿ ಗಂಡಿನ ಹಾರ್ಮೋನುಗಳು ಪ್ರಭಾವ ಬೀರಿದಾಗ (ತಾಯಿಯ ಗರ್ಭದಿಂದ ಅಥವಾ ಮಗುವಿನ ತನ್ನದೇ ಕೋಶಗಳಿಂದ) ಎಕ್ಸ್ವೈ ಮಕ್ಕಳಿಗೆ ಹೋಲುವ ಬೆಳವಣಿಗೆಗಳು ಕಾಣಿಸಿಕೊಳ್ಳಬಹುದು. ಅದರಂತೆ, ಎಕ್ಸ್ವೈ ಮಕ್ಕಳಲ್ಲಿ ಹೆಣ್ಣಿನ ಹಾರ್ಮೋನುಗಳು ಇದ್ದರೆ ಅಥವಾ ಗಂಡಿನ ಹಾರ್ಮೋನುಗಳಿಗೆ ಮೆದುಳು ಸ್ಪಂದಿಸದೇ ಇದ್ದರೆ ಆ ಎಕ್ಸ್ವೈ ಮಕ್ಕಳು ಹೆಣ್ಣಿನ ಸ್ವರೂಪವನ್ನು ಬೆಳೆಸಿಕೊಳ್ಳಬಹುದು. ಇವರುಗಳ ಮೆದುಳು ಎಕ್ಸ್ಎಕ್ಸ್ ಹೆಣ್ಣುಗಳ ಮೆದುಳಿನÀ ಹಾಗೆಯೇ ಬದಲಾವಣೆ ಹೊಂದಬಹುದು. ಮೆದುಳಿನ ಈ ಕ್ಷೆÃತ್ರಗಳ ಬಗ್ಗೆ ಹಾಗು ಟ್ರಾನ್ಸ್ಜೆಂಡರ್ ಮಕ್ಕಳು ಮತ್ತು ವಯಸ್ಕರು ತಮ್ಮ ದೇಹದ ಬಗ್ಗೆ ಪ್ರಬಲವಾದ ಭಾವನೆಗಳನ್ನು ಹೇಗೆ ಹೊಂದಿರುತ್ತಾರೆ ಎನ್ನುವುದರ ಬಗ್ಗೆ ನಂತರ ವಿವರಿಸುವೆ. ಆದರೆ, ಸದ್ಯಕ್ಕೆ ಒಂದೇ ಒಂದು ಜೈವಿಕ ಲಿಂಗವನ್ನು ಹೊಂದದೇ ಇರುವುದಕ್ಕೆ ಅನೇಕ ಕಾರಣಗಳು ಮತ್ತು ಸಾಧ್ಯತೆಗಳಿವೆ ಎನ್ನುವುದನ್ನು ನೆನಪಿನಲ್ಲಿಟ್ಟುಕೊಳ್ಳೊÃಣ.
ನಮ್ಮ ಕ್ರೊÃಮೊಸೋಮ್‌ಗಳು, ವೃಷಣ/ಅಂಡಾಶಯಗಳ ರಚನೆ, ಜನ್ಮದ ಸಮಯದಲ್ಲಿ ಹಾರ್ಮೋನುಗಳು, ಜನನಾಂಗಗಳು ಮತ್ತು ಪ್ರೌಢಾವಸ್ಥೆಯಲ್ಲಿ ಹಾರ್ಮೋನುಗಳು, ಇವೆಲ್ಲವುಗಳೂ ನಮ್ಮ ದೇಹ ಮತ್ತು ಮಿದುಳಿನ ಬೆಳವಣಿಗೆಯಲ್ಲಿ ಪರಿಣಾಮ ಬೀರುತ್ತವೆ. ಒಂದು ವೇಳೆ ಇವುಗಳು ಅಸ್ಪಷ್ಟ ಜನನಾಂಗಗಳನ್ನು ಅಥವಾ ಅಸ್ಪಷ್ಟ ಲೈಂಗಿಕ ಲಕ್ಷಣಗಳನ್ನು ಸೃಷ್ಟಿಸಲು ಕಾರಣವಾದರೆ ಹಾಗೂ ಇವಗಳನ್ನು ವೈದ್ಯರು ಗುರುತಿಸಿದರೆ ಆ ಮಕ್ಕಳನ್ನು ಇಂಟರ್‌ಸೆಕ್ಸ್ ಎಂದು ಕರೆಯಲಾಗುತ್ತದೆ; ಆದರೆ, ನಮ್ಮಲ್ಲಿ ಅನೇಕರು ವೈದ್ಯಕೀಯವಾಗಿ ಇಂಟರ್‌ಸೆಕ್ಸ್ ಆಗಿದ್ದರೂ ಆ ವಾಸ್ತವದ ಅರಿವು ಇಲ್ಲದೇ ಇರಬಹುದು.

– ಕಾರ್ತಿಕ್ ಬಿಟ್ಟು
ಅನುವಾದ: ರಾಜಶೇಖರ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...