Homeಅಂತರಾಷ್ಟ್ರೀಯಅಮೆರಿಕಾ: ಟ್ರ್ಯಾಕ್ಟರ್ ಟ್ರೇಲರ್‌ನಲ್ಲಿ 46 ಅಕ್ರಮ ವಲಸಿಗರ ಮೃತದೇಹ ಪತ್ತೆ, 16 ಮಂದಿ ಗಂಭೀರ

ಅಮೆರಿಕಾ: ಟ್ರ್ಯಾಕ್ಟರ್ ಟ್ರೇಲರ್‌ನಲ್ಲಿ 46 ಅಕ್ರಮ ವಲಸಿಗರ ಮೃತದೇಹ ಪತ್ತೆ, 16 ಮಂದಿ ಗಂಭೀರ

- Advertisement -
- Advertisement -

ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಲ್ಲಿ ಸೋಮವಾರ ಅಕ್ರಮ ವಲಸಿಗರನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರೇಲರ್‌ನಲ್ಲಿ 46 ವಲಸಿಗರ ಮೃತದೇಹಗಳು ಪತ್ತೆಯಾಗಿವೆ. 16 ಜನರು ಗಂಭೀರ ಸ್ಥಿತಿಯಲ್ಲಿದ್ದು, ಅವರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುಎಸ್-ಮೆಕ್ಸಿಕೊ ಗಡಿಯಲ್ಲಿ ಮಾನವ ಕಳ್ಳಸಾಗಣೆ ಹೆಚ್ಚಾಗಿ ನಡೆಯುತ್ತಿದೆ ಎನ್ನಲಾಗಿದೆ. ಪೊಲೀಸರು ಟ್ರಕ್‌ ಕಂಡು ಹಿಡಿಯುವ ಸ್ವಲ್ಪ ಸಮಯದಲ್ಲಿ ಚಾಲಕ ಅಲ್ಲಿಂದ ಪರಾರಿಯಾಗಿರಬಹುದು ಎಂದು, ಚಾಲಕನ ಹುಡುಕಾಟವನ್ನು ನಡೆಸಲಾಗುತ್ತಿದೆ.

ಟ್ರೈಲರ್‌ನಲ್ಲಿಮೃತದೇಹಗಳ ಜೊತೆಗೆ ಪತ್ತೆಯಾದದ ಇತರ ಹದಿನಾರು ಜನರು ವಿಪರೀತ ಉಷ್ಣಾಂಶ ಮತ್ತು ಬಳಲಿಕೆಯಿಂದ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಇದರಲ್ಲಿ ನಾಲ್ಕು ಮಂದಿ ಅಪ್ರಾಪ್ತ ವಯಸ್ಕರು ಇದ್ದಾರೆ. ಮೃತರಲ್ಲಿ ಅಪ್ರಾಪ್ತರಿಲ್ಲ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಗಲಭೆಗಳಿಗೆ ಪ್ರಚೋದನೆ ಆರೋಪ: ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಬಂಧನ

ಮೆಕ್ಸಿಕನ್ ಗಡಿಯಿಂದ ಸುಮಾರು 250 ಕಿಮೀ ದೂರದಲ್ಲಿರುವ ಸ್ಯಾನ್ ಆಂಟೋನಿಯೊದಲ್ಲಿನ ಜೂನ್ ತಿಂಗಳಲ್ಲಿ ಹೆಚ್ಚಿನ ಉಷ್ಣ ವಾತಾವರಣವಿರುತ್ತದೆ. ಸೋಮವಾರ 39.4 ಡಿಗ್ರಿ ಸೆಲ್ಸಿಯಸ್‌ ಉಷ್ಣ ವಾತಾವರಣವಿತ್ತು ಎಂದು ವರದಿಯಾಗಿದೆ.

ಆದರೂ 46 ಮಂದಿಯ ಸಾವಿಗೆ ಸ್ಪಷ್ಟ ಕಾರಣವಿನ್ನು ಸಿಕ್ಕಿಲ್ಲ. ಈ ರೀತಿ ಅಕ್ರಮ ವಲಸಿಗರು ಮೃತಪಟ್ಟಿರುವುದು ಅತಿದೊಡ್ಡ ಘಟನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂಹದ್ದೆ ಪ್ರಕರಣಗಳಲ್ಲಿ ಈವರೆಗೆ ಮೂರು ಮಂದಿ ಬಂಧನದಲ್ಲಿದ್ದಾರೆ. ಆದರೆ, ಅವರಿಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇನ್ವೆಸ್ಟಿಗೇಷನ್ಸ್ ವಿಭಾಗವು ಸ್ಥಳೀಯ ಪೋಲೀಸ್‌ನೊಂದಿಗೆ ಸಮನ್ವಯ ಸಾಧಿಸಿ “ಅಕ್ರಮ ಮಾನವ ಕಳ್ಳಸಾಗಣೆ ಘಟನೆ” ಯನ್ನು ತನಿಖೆ ನಡೆಸುತ್ತಿದೆ ಎಂದು ಯುಎಸ್‌ ವಲಸೆ ಮತ್ತು ಕಸ್ಟಮ್ಸ್ ಎನ್‌ಫೋರ್ಸ್‌ಮೆಂಟ್ (ICE) ವಕ್ತಾರರು ತಿಳಿಸಿದ್ದಾರೆ.

ಜುಲೈ 2017 ರಲ್ಲಿ, 10 ವಲಸಿಗರು ಟ್ರ್ಯಾಕ್ಟರ್-ಟ್ರೇಲರ್‌ನಲ್ಲಿ ಸಾಗಿಸುತ್ತಿದ್ದಾಗ ಸಾವನ್ನಪ್ಪಿದರು, ಇದನ್ನು ಸ್ಯಾನ್ ಆಂಟೋನಿಯೊ ಪೊಲೀಸರು ಪಾರ್ಕಿಂಗ್ ಸ್ಥಳದಲ್ಲಿ ಪತ್ತೆ ಮಾಡಿದ್ದರು. ಪ್ರಕರಣದಲ್ಲಿ ಟ್ರಕ್ ಚಾಲಕನಿಗೆ ಮಾನವ ಕಳ್ಳಸಾಗಣೆ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆ ನೀಡಲಾಗಿತ್ತು.


ಇದನ್ನೂ ಓದಿ: ಗುಜರಾತ್‌: NEP ಮೂಲಕ 1ನೇ ತರಗತಿಯಿಂದಲೇ ಸಂಸ್ಕೃತ ಕಡ್ಡಾಯಕ್ಕೆ ಪ್ರಯತ್ನಿಸುತ್ತಿರುವ ಆರೆಸ್ಸೆಸ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...