Homeಅಂತರಾಷ್ಟ್ರೀಯಟೆಕ್ಸಾಸ್ ಪ್ರವಾಹ: ಕನಿಷ್ಠ 13 ಮಂದಿ ಸಾವು, 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆ

ಟೆಕ್ಸಾಸ್ ಪ್ರವಾಹ: ಕನಿಷ್ಠ 13 ಮಂದಿ ಸಾವು, 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆ

- Advertisement -
- Advertisement -

ಯುನೈಟೆಡ್ ಸ್ಟೇಟ್ಸ್‌ನ ದಕ್ಷಿಣ ಮಧ್ಯ ಪ್ರದೇಶ ಟೆಕ್ಸಾಸ್ ಹಿಲ್ ಕಂಟ್ರಿಯಲ್ಲಿ ಕೆಲವೇ ಗಂಟೆಗಳಲ್ಲಿ ಕಾಲ ಸುರಿದ ಭಾರೀ ಮಳೆಯಿಂದಾಗಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದ 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆಯಾಗಿದ್ದು, ವೇಗವಾಗಿ ಚಲಿಸುತ್ತಿರುವ ಪ್ರವಾಹದ ನೀರಿನಲ್ಲಿ ದೋಣಿ ಮತ್ತು ಹೆಲಿಕಾಪ್ಟರ್ ಬಳಸುವ ಮೂಲಕ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಪ್ರವಾಹ ವಲಯದಲ್ಲಿ ಸಿಲುಕಿರುವ ಜನರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗುತ್ತಿಲ್ಲ ಎಂದು ಕಾಣೆಯಾದವರ ಹಲವು ಸಂಬಂಧಿಕರು ಹತಾಶರಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಬಲಿಪಶುಗಳಿಗಾಗಿ ತೀವ್ರ ಹುಡುಕಾಟದಲ್ಲಿ ಇಲ್ಲಿಯವರೆಗೆ 6 ರಿಂದ 10 ಶವಗಳು ಪತ್ತೆಯಾಗಿವೆ ಎಂದು ಲೆಫ್ಟಿನೆಂಟ್ ಗವರ್ನರ್ ಡ್ಯಾನ್ ಪ್ಯಾಟ್ರಿಕ್ ಹೇಳಿದ್ದಾರೆ. ಈ ಮಧ್ಯೆ, ಪ್ಯಾಟ್ರಿಕ್ ಅವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ಕೆರ್ ಕೌಂಟಿ ಶೆರಿಫ್ ಲ್ಯಾರಿ ಲೀಥಾ ಪ್ರವಾಹದಿಂದ 13 ಸಾವುಗಳು ಸಂಭವಿಸಿವೆ ಎಂದು ಹೇಳಿದ್ದಾರೆ.

ಮಧ್ಯ ಕೆರ್ ಕೌಂಟಿಯಲ್ಲಿ ರಾತ್ರಿಯಿಡೀ ಕನಿಷ್ಠ 10 ಇಂಚು ಮಳೆ ಸುರಿದಿದ್ದು, ಗ್ವಾಡಾಲುಪೆ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ ಕಾಣೆಯಾದವರ ಬಗ್ಗೆ ಮಾಹಿತಿಗಾಗಿ ಸಂಬಂಧಿಕರ ಹತಾಶ ಮನವಿಗಳು ಕೇಳಿಬಂದಿವೆ.

ಸತ್ತವರಲ್ಲಿ ಕೆಲವರು ವಯಸ್ಕರು, ಇನ್ನೂ ಕೆಲವರು ಮಕ್ಕಳು, ಆ ಶವಗಳು ಎಲ್ಲಿಂದ ಬಂದವು ಎಂಬುದು ನಮಗೆ ತಿಳಿದಿಲ್ಲ ಎಂದು ಪ್ಯಾಟ್ರಿಕ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಡಜನ್‌ಗಟ್ಟಲೆ ತಂಡಗಳು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಿದವು, ತುರ್ತು ಪ್ರತಿಕ್ರಿಯೆ ನೀಡುವವರು ಪತ್ತೆಯಾಗದವರನ್ನು ಹುಡುಕುತ್ತಲೇ ಇದ್ದರು. ಇದರಲ್ಲಿ ಬೇಸಿಗೆ ಶಿಬಿರಗಳಿಂದ ಕಾಣೆಯಾದ 20 ಕ್ಕೂ ಹೆಚ್ಚು ಹುಡುಗಿಯರು ಸೇರಿದ್ದಾರೆ.

“ಟೆಕ್ಸಾಸ್‌ನ ಜನರನ್ನು ನಾನು ಕೇಳುತ್ತಿದ್ದೇನೆ, ಇಂದು ಮಧ್ಯಾಹ್ನ ಸ್ವಲ್ಪ ಗಂಭೀರವಾಗಿ ಪ್ರಾರ್ಥನೆ ಮಾಡಿ. ಈ ಯುವತಿಯರನ್ನು ನಾವು ಹುಡುಕಬೇಕು, ನಿಮ್ಮ ಮೊಣಕಾಲುಗಳ ಮೇಲೆ ನಿಂತು ಪ್ರಾರ್ಥಿಸಿ” ಎಂದು ಪ್ಯಾಟ್ರಿಕ್ ಹೇಳಿದರು.

ಕೆರ್ ಕೌಂಟಿ ಶೆರಿಫ್ ಕಚೇರಿಯ ಫೇಸ್‌ಬುಕ್ ಪೋಸ್ಟ್‌ನಲ ಕಾಮೆಂಟ್‌ನಲ್ಲಿ, ಪ್ರವಾಹ ವಲಯದಲ್ಲಿ ಸಿಲುಕಿರುವ ಜನರ ಫೋಟೋಗಳಿಂದ ತುಂಬಿದ್ದವು.

ತನ್ನ ಪತಿ ಮತ್ತು ಇಬ್ಬರು ಮಕ್ಕಳಿಗಾಗಿ ಹಂಟ್‌ನಲ್ಲಿ ಕ್ಯಾಬಿನ್ ಅನ್ನು ಬಾಡಿಗೆಗೆ ಪಡೆದಿದ್ದ ತನ್ನ ಮಗಳನ್ನು ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಒಬ್ಬ ಮಹಿಳೆ ಹೇಳಿದ್ದಾರೆ. ಈಗಾಗಲೇ ಸ್ಥಳಾಂತರಿಸಲ್ಪಟ್ಟವರ ಹೆಸರುಗಳನ್ನು ಯಾರಾದರೂ ಪೋಸ್ಟ್ ಮಾಡುವಂತೆ ಅವರು ಬೇಡಿಕೊಂಡರು.

ಕೌಂಟಿಯ ಮುಖ್ಯ ಚುನಾಯಿತ ಅಧಿಕಾರಿ ನ್ಯಾಯಾಧೀಶ ರಾಬ್ ಕೆಲ್ಲಿ, ಪ್ರವಾಹದಿಂದ ಸಾವುನೋವುಗಳು ಮತ್ತು ಇಲ್ಲಿಯವರೆಗೆ ಡಜನ್‌ಗಟ್ಟಲೆ ಜನರನ್ನು ಪ್ರವಾಹದಿಂದ ರಕ್ಷಿಸಲಾಗಿದೆ ಎಂದು ದೃಢಪಡಿಸಿದರು. ನಿರ್ದಿಷ್ಟ ಸಂಖ್ಯೆಗಳನ್ನು ಉಲ್ಲೇಖಿಸದಂತೆ ತನಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು. ಪ್ರಾಣ ಕಳೆದುಕೊಂಡವರನ್ನು ಗುರುತಿಸಲು ಅಧಿಕಾರಿಗಳು ಇನ್ನೂ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

“ಪತತ್ತೆಯಾದ ದೇಹಗಳಲ್ಲಿ ಹೆಚ್ಚಿನವರು ಯಾರೆಂದು ನಮಗೆ ತಿಳಿದಿಲ್ಲ” ಎಂದು ಕೆಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. “ಅವರಲ್ಲಿ ಒಬ್ಬರು ಸಂಪೂರ್ಣವಾಗಿ ಬೆತ್ತಲೆಯಾಗಿದ್ದರು, ಅವರ ಬಳಿ ಯಾವುದೇ ಗುರುತಿನ ಚೀಟಿ ಇರಲಿಲ್ಲ. ನಾವು ಈ ಜನರ ಗುರುತನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ, ಆದರೆ ನಮಗೆ ಇನ್ನೂ ಅದು ಸಿಕ್ಕಿಲ್ಲ” ಎಂದರು.

5 ಹುಲಿಗಳ ಸಾವಿನ ಪ್ರಕರಣ: ಸಂಬಂಧಪಟ್ಟ ಇಬ್ಬರು ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...