Homeಅಂತರಾಷ್ಟ್ರೀಯಟೆಕ್ಸಾಸ್ ಪ್ರವಾಹ: ಕನಿಷ್ಠ 13 ಮಂದಿ ಸಾವು, 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆ

ಟೆಕ್ಸಾಸ್ ಪ್ರವಾಹ: ಕನಿಷ್ಠ 13 ಮಂದಿ ಸಾವು, 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆ

- Advertisement -
- Advertisement -

ಯುನೈಟೆಡ್ ಸ್ಟೇಟ್ಸ್‌ನ ದಕ್ಷಿಣ ಮಧ್ಯ ಪ್ರದೇಶ ಟೆಕ್ಸಾಸ್ ಹಿಲ್ ಕಂಟ್ರಿಯಲ್ಲಿ ಕೆಲವೇ ಗಂಟೆಗಳಲ್ಲಿ ಕಾಲ ಸುರಿದ ಭಾರೀ ಮಳೆಯಿಂದಾಗಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದ 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆಯಾಗಿದ್ದು, ವೇಗವಾಗಿ ಚಲಿಸುತ್ತಿರುವ ಪ್ರವಾಹದ ನೀರಿನಲ್ಲಿ ದೋಣಿ ಮತ್ತು ಹೆಲಿಕಾಪ್ಟರ್ ಬಳಸುವ ಮೂಲಕ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಪ್ರವಾಹ ವಲಯದಲ್ಲಿ ಸಿಲುಕಿರುವ ಜನರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗುತ್ತಿಲ್ಲ ಎಂದು ಕಾಣೆಯಾದವರ ಹಲವು ಸಂಬಂಧಿಕರು ಹತಾಶರಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಬಲಿಪಶುಗಳಿಗಾಗಿ ತೀವ್ರ ಹುಡುಕಾಟದಲ್ಲಿ ಇಲ್ಲಿಯವರೆಗೆ 6 ರಿಂದ 10 ಶವಗಳು ಪತ್ತೆಯಾಗಿವೆ ಎಂದು ಲೆಫ್ಟಿನೆಂಟ್ ಗವರ್ನರ್ ಡ್ಯಾನ್ ಪ್ಯಾಟ್ರಿಕ್ ಹೇಳಿದ್ದಾರೆ. ಈ ಮಧ್ಯೆ, ಪ್ಯಾಟ್ರಿಕ್ ಅವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ಕೆರ್ ಕೌಂಟಿ ಶೆರಿಫ್ ಲ್ಯಾರಿ ಲೀಥಾ ಪ್ರವಾಹದಿಂದ 13 ಸಾವುಗಳು ಸಂಭವಿಸಿವೆ ಎಂದು ಹೇಳಿದ್ದಾರೆ.

ಮಧ್ಯ ಕೆರ್ ಕೌಂಟಿಯಲ್ಲಿ ರಾತ್ರಿಯಿಡೀ ಕನಿಷ್ಠ 10 ಇಂಚು ಮಳೆ ಸುರಿದಿದ್ದು, ಗ್ವಾಡಾಲುಪೆ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ ಕಾಣೆಯಾದವರ ಬಗ್ಗೆ ಮಾಹಿತಿಗಾಗಿ ಸಂಬಂಧಿಕರ ಹತಾಶ ಮನವಿಗಳು ಕೇಳಿಬಂದಿವೆ.

ಸತ್ತವರಲ್ಲಿ ಕೆಲವರು ವಯಸ್ಕರು, ಇನ್ನೂ ಕೆಲವರು ಮಕ್ಕಳು, ಆ ಶವಗಳು ಎಲ್ಲಿಂದ ಬಂದವು ಎಂಬುದು ನಮಗೆ ತಿಳಿದಿಲ್ಲ ಎಂದು ಪ್ಯಾಟ್ರಿಕ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಡಜನ್‌ಗಟ್ಟಲೆ ತಂಡಗಳು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಿದವು, ತುರ್ತು ಪ್ರತಿಕ್ರಿಯೆ ನೀಡುವವರು ಪತ್ತೆಯಾಗದವರನ್ನು ಹುಡುಕುತ್ತಲೇ ಇದ್ದರು. ಇದರಲ್ಲಿ ಬೇಸಿಗೆ ಶಿಬಿರಗಳಿಂದ ಕಾಣೆಯಾದ 20 ಕ್ಕೂ ಹೆಚ್ಚು ಹುಡುಗಿಯರು ಸೇರಿದ್ದಾರೆ.

“ಟೆಕ್ಸಾಸ್‌ನ ಜನರನ್ನು ನಾನು ಕೇಳುತ್ತಿದ್ದೇನೆ, ಇಂದು ಮಧ್ಯಾಹ್ನ ಸ್ವಲ್ಪ ಗಂಭೀರವಾಗಿ ಪ್ರಾರ್ಥನೆ ಮಾಡಿ. ಈ ಯುವತಿಯರನ್ನು ನಾವು ಹುಡುಕಬೇಕು, ನಿಮ್ಮ ಮೊಣಕಾಲುಗಳ ಮೇಲೆ ನಿಂತು ಪ್ರಾರ್ಥಿಸಿ” ಎಂದು ಪ್ಯಾಟ್ರಿಕ್ ಹೇಳಿದರು.

ಕೆರ್ ಕೌಂಟಿ ಶೆರಿಫ್ ಕಚೇರಿಯ ಫೇಸ್‌ಬುಕ್ ಪೋಸ್ಟ್‌ನಲ ಕಾಮೆಂಟ್‌ನಲ್ಲಿ, ಪ್ರವಾಹ ವಲಯದಲ್ಲಿ ಸಿಲುಕಿರುವ ಜನರ ಫೋಟೋಗಳಿಂದ ತುಂಬಿದ್ದವು.

ತನ್ನ ಪತಿ ಮತ್ತು ಇಬ್ಬರು ಮಕ್ಕಳಿಗಾಗಿ ಹಂಟ್‌ನಲ್ಲಿ ಕ್ಯಾಬಿನ್ ಅನ್ನು ಬಾಡಿಗೆಗೆ ಪಡೆದಿದ್ದ ತನ್ನ ಮಗಳನ್ನು ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಒಬ್ಬ ಮಹಿಳೆ ಹೇಳಿದ್ದಾರೆ. ಈಗಾಗಲೇ ಸ್ಥಳಾಂತರಿಸಲ್ಪಟ್ಟವರ ಹೆಸರುಗಳನ್ನು ಯಾರಾದರೂ ಪೋಸ್ಟ್ ಮಾಡುವಂತೆ ಅವರು ಬೇಡಿಕೊಂಡರು.

ಕೌಂಟಿಯ ಮುಖ್ಯ ಚುನಾಯಿತ ಅಧಿಕಾರಿ ನ್ಯಾಯಾಧೀಶ ರಾಬ್ ಕೆಲ್ಲಿ, ಪ್ರವಾಹದಿಂದ ಸಾವುನೋವುಗಳು ಮತ್ತು ಇಲ್ಲಿಯವರೆಗೆ ಡಜನ್‌ಗಟ್ಟಲೆ ಜನರನ್ನು ಪ್ರವಾಹದಿಂದ ರಕ್ಷಿಸಲಾಗಿದೆ ಎಂದು ದೃಢಪಡಿಸಿದರು. ನಿರ್ದಿಷ್ಟ ಸಂಖ್ಯೆಗಳನ್ನು ಉಲ್ಲೇಖಿಸದಂತೆ ತನಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು. ಪ್ರಾಣ ಕಳೆದುಕೊಂಡವರನ್ನು ಗುರುತಿಸಲು ಅಧಿಕಾರಿಗಳು ಇನ್ನೂ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

“ಪತತ್ತೆಯಾದ ದೇಹಗಳಲ್ಲಿ ಹೆಚ್ಚಿನವರು ಯಾರೆಂದು ನಮಗೆ ತಿಳಿದಿಲ್ಲ” ಎಂದು ಕೆಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. “ಅವರಲ್ಲಿ ಒಬ್ಬರು ಸಂಪೂರ್ಣವಾಗಿ ಬೆತ್ತಲೆಯಾಗಿದ್ದರು, ಅವರ ಬಳಿ ಯಾವುದೇ ಗುರುತಿನ ಚೀಟಿ ಇರಲಿಲ್ಲ. ನಾವು ಈ ಜನರ ಗುರುತನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ, ಆದರೆ ನಮಗೆ ಇನ್ನೂ ಅದು ಸಿಕ್ಕಿಲ್ಲ” ಎಂದರು.

5 ಹುಲಿಗಳ ಸಾವಿನ ಪ್ರಕರಣ: ಸಂಬಂಧಪಟ್ಟ ಇಬ್ಬರು ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...