Homeಅಂತರಾಷ್ಟ್ರೀಯಟೆಕ್ಸಾಸ್ ಪ್ರವಾಹ: ಕನಿಷ್ಠ 13 ಮಂದಿ ಸಾವು, 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆ

ಟೆಕ್ಸಾಸ್ ಪ್ರವಾಹ: ಕನಿಷ್ಠ 13 ಮಂದಿ ಸಾವು, 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆ

- Advertisement -
- Advertisement -

ಯುನೈಟೆಡ್ ಸ್ಟೇಟ್ಸ್‌ನ ದಕ್ಷಿಣ ಮಧ್ಯ ಪ್ರದೇಶ ಟೆಕ್ಸಾಸ್ ಹಿಲ್ ಕಂಟ್ರಿಯಲ್ಲಿ ಕೆಲವೇ ಗಂಟೆಗಳಲ್ಲಿ ಕಾಲ ಸುರಿದ ಭಾರೀ ಮಳೆಯಿಂದಾಗಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದ 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆಯಾಗಿದ್ದು, ವೇಗವಾಗಿ ಚಲಿಸುತ್ತಿರುವ ಪ್ರವಾಹದ ನೀರಿನಲ್ಲಿ ದೋಣಿ ಮತ್ತು ಹೆಲಿಕಾಪ್ಟರ್ ಬಳಸುವ ಮೂಲಕ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಪ್ರವಾಹ ವಲಯದಲ್ಲಿ ಸಿಲುಕಿರುವ ಜನರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗುತ್ತಿಲ್ಲ ಎಂದು ಕಾಣೆಯಾದವರ ಹಲವು ಸಂಬಂಧಿಕರು ಹತಾಶರಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಬಲಿಪಶುಗಳಿಗಾಗಿ ತೀವ್ರ ಹುಡುಕಾಟದಲ್ಲಿ ಇಲ್ಲಿಯವರೆಗೆ 6 ರಿಂದ 10 ಶವಗಳು ಪತ್ತೆಯಾಗಿವೆ ಎಂದು ಲೆಫ್ಟಿನೆಂಟ್ ಗವರ್ನರ್ ಡ್ಯಾನ್ ಪ್ಯಾಟ್ರಿಕ್ ಹೇಳಿದ್ದಾರೆ. ಈ ಮಧ್ಯೆ, ಪ್ಯಾಟ್ರಿಕ್ ಅವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ಕೆರ್ ಕೌಂಟಿ ಶೆರಿಫ್ ಲ್ಯಾರಿ ಲೀಥಾ ಪ್ರವಾಹದಿಂದ 13 ಸಾವುಗಳು ಸಂಭವಿಸಿವೆ ಎಂದು ಹೇಳಿದ್ದಾರೆ.

ಮಧ್ಯ ಕೆರ್ ಕೌಂಟಿಯಲ್ಲಿ ರಾತ್ರಿಯಿಡೀ ಕನಿಷ್ಠ 10 ಇಂಚು ಮಳೆ ಸುರಿದಿದ್ದು, ಗ್ವಾಡಾಲುಪೆ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ ಕಾಣೆಯಾದವರ ಬಗ್ಗೆ ಮಾಹಿತಿಗಾಗಿ ಸಂಬಂಧಿಕರ ಹತಾಶ ಮನವಿಗಳು ಕೇಳಿಬಂದಿವೆ.

ಸತ್ತವರಲ್ಲಿ ಕೆಲವರು ವಯಸ್ಕರು, ಇನ್ನೂ ಕೆಲವರು ಮಕ್ಕಳು, ಆ ಶವಗಳು ಎಲ್ಲಿಂದ ಬಂದವು ಎಂಬುದು ನಮಗೆ ತಿಳಿದಿಲ್ಲ ಎಂದು ಪ್ಯಾಟ್ರಿಕ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಡಜನ್‌ಗಟ್ಟಲೆ ತಂಡಗಳು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಿದವು, ತುರ್ತು ಪ್ರತಿಕ್ರಿಯೆ ನೀಡುವವರು ಪತ್ತೆಯಾಗದವರನ್ನು ಹುಡುಕುತ್ತಲೇ ಇದ್ದರು. ಇದರಲ್ಲಿ ಬೇಸಿಗೆ ಶಿಬಿರಗಳಿಂದ ಕಾಣೆಯಾದ 20 ಕ್ಕೂ ಹೆಚ್ಚು ಹುಡುಗಿಯರು ಸೇರಿದ್ದಾರೆ.

“ಟೆಕ್ಸಾಸ್‌ನ ಜನರನ್ನು ನಾನು ಕೇಳುತ್ತಿದ್ದೇನೆ, ಇಂದು ಮಧ್ಯಾಹ್ನ ಸ್ವಲ್ಪ ಗಂಭೀರವಾಗಿ ಪ್ರಾರ್ಥನೆ ಮಾಡಿ. ಈ ಯುವತಿಯರನ್ನು ನಾವು ಹುಡುಕಬೇಕು, ನಿಮ್ಮ ಮೊಣಕಾಲುಗಳ ಮೇಲೆ ನಿಂತು ಪ್ರಾರ್ಥಿಸಿ” ಎಂದು ಪ್ಯಾಟ್ರಿಕ್ ಹೇಳಿದರು.

ಕೆರ್ ಕೌಂಟಿ ಶೆರಿಫ್ ಕಚೇರಿಯ ಫೇಸ್‌ಬುಕ್ ಪೋಸ್ಟ್‌ನಲ ಕಾಮೆಂಟ್‌ನಲ್ಲಿ, ಪ್ರವಾಹ ವಲಯದಲ್ಲಿ ಸಿಲುಕಿರುವ ಜನರ ಫೋಟೋಗಳಿಂದ ತುಂಬಿದ್ದವು.

ತನ್ನ ಪತಿ ಮತ್ತು ಇಬ್ಬರು ಮಕ್ಕಳಿಗಾಗಿ ಹಂಟ್‌ನಲ್ಲಿ ಕ್ಯಾಬಿನ್ ಅನ್ನು ಬಾಡಿಗೆಗೆ ಪಡೆದಿದ್ದ ತನ್ನ ಮಗಳನ್ನು ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಒಬ್ಬ ಮಹಿಳೆ ಹೇಳಿದ್ದಾರೆ. ಈಗಾಗಲೇ ಸ್ಥಳಾಂತರಿಸಲ್ಪಟ್ಟವರ ಹೆಸರುಗಳನ್ನು ಯಾರಾದರೂ ಪೋಸ್ಟ್ ಮಾಡುವಂತೆ ಅವರು ಬೇಡಿಕೊಂಡರು.

ಕೌಂಟಿಯ ಮುಖ್ಯ ಚುನಾಯಿತ ಅಧಿಕಾರಿ ನ್ಯಾಯಾಧೀಶ ರಾಬ್ ಕೆಲ್ಲಿ, ಪ್ರವಾಹದಿಂದ ಸಾವುನೋವುಗಳು ಮತ್ತು ಇಲ್ಲಿಯವರೆಗೆ ಡಜನ್‌ಗಟ್ಟಲೆ ಜನರನ್ನು ಪ್ರವಾಹದಿಂದ ರಕ್ಷಿಸಲಾಗಿದೆ ಎಂದು ದೃಢಪಡಿಸಿದರು. ನಿರ್ದಿಷ್ಟ ಸಂಖ್ಯೆಗಳನ್ನು ಉಲ್ಲೇಖಿಸದಂತೆ ತನಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು. ಪ್ರಾಣ ಕಳೆದುಕೊಂಡವರನ್ನು ಗುರುತಿಸಲು ಅಧಿಕಾರಿಗಳು ಇನ್ನೂ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

“ಪತತ್ತೆಯಾದ ದೇಹಗಳಲ್ಲಿ ಹೆಚ್ಚಿನವರು ಯಾರೆಂದು ನಮಗೆ ತಿಳಿದಿಲ್ಲ” ಎಂದು ಕೆಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. “ಅವರಲ್ಲಿ ಒಬ್ಬರು ಸಂಪೂರ್ಣವಾಗಿ ಬೆತ್ತಲೆಯಾಗಿದ್ದರು, ಅವರ ಬಳಿ ಯಾವುದೇ ಗುರುತಿನ ಚೀಟಿ ಇರಲಿಲ್ಲ. ನಾವು ಈ ಜನರ ಗುರುತನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ, ಆದರೆ ನಮಗೆ ಇನ್ನೂ ಅದು ಸಿಕ್ಕಿಲ್ಲ” ಎಂದರು.

5 ಹುಲಿಗಳ ಸಾವಿನ ಪ್ರಕರಣ: ಸಂಬಂಧಪಟ್ಟ ಇಬ್ಬರು ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...