Homeಅಂತರಾಷ್ಟ್ರೀಯಟೆಕ್ಸಾಸ್ ಪ್ರವಾಹ: ಕನಿಷ್ಠ 13 ಮಂದಿ ಸಾವು, 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆ

ಟೆಕ್ಸಾಸ್ ಪ್ರವಾಹ: ಕನಿಷ್ಠ 13 ಮಂದಿ ಸಾವು, 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆ

- Advertisement -
- Advertisement -

ಯುನೈಟೆಡ್ ಸ್ಟೇಟ್ಸ್‌ನ ದಕ್ಷಿಣ ಮಧ್ಯ ಪ್ರದೇಶ ಟೆಕ್ಸಾಸ್ ಹಿಲ್ ಕಂಟ್ರಿಯಲ್ಲಿ ಕೆಲವೇ ಗಂಟೆಗಳಲ್ಲಿ ಕಾಲ ಸುರಿದ ಭಾರೀ ಮಳೆಯಿಂದಾಗಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದ 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆಯಾಗಿದ್ದು, ವೇಗವಾಗಿ ಚಲಿಸುತ್ತಿರುವ ಪ್ರವಾಹದ ನೀರಿನಲ್ಲಿ ದೋಣಿ ಮತ್ತು ಹೆಲಿಕಾಪ್ಟರ್ ಬಳಸುವ ಮೂಲಕ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಪ್ರವಾಹ ವಲಯದಲ್ಲಿ ಸಿಲುಕಿರುವ ಜನರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗುತ್ತಿಲ್ಲ ಎಂದು ಕಾಣೆಯಾದವರ ಹಲವು ಸಂಬಂಧಿಕರು ಹತಾಶರಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಬಲಿಪಶುಗಳಿಗಾಗಿ ತೀವ್ರ ಹುಡುಕಾಟದಲ್ಲಿ ಇಲ್ಲಿಯವರೆಗೆ 6 ರಿಂದ 10 ಶವಗಳು ಪತ್ತೆಯಾಗಿವೆ ಎಂದು ಲೆಫ್ಟಿನೆಂಟ್ ಗವರ್ನರ್ ಡ್ಯಾನ್ ಪ್ಯಾಟ್ರಿಕ್ ಹೇಳಿದ್ದಾರೆ. ಈ ಮಧ್ಯೆ, ಪ್ಯಾಟ್ರಿಕ್ ಅವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ಕೆರ್ ಕೌಂಟಿ ಶೆರಿಫ್ ಲ್ಯಾರಿ ಲೀಥಾ ಪ್ರವಾಹದಿಂದ 13 ಸಾವುಗಳು ಸಂಭವಿಸಿವೆ ಎಂದು ಹೇಳಿದ್ದಾರೆ.

ಮಧ್ಯ ಕೆರ್ ಕೌಂಟಿಯಲ್ಲಿ ರಾತ್ರಿಯಿಡೀ ಕನಿಷ್ಠ 10 ಇಂಚು ಮಳೆ ಸುರಿದಿದ್ದು, ಗ್ವಾಡಾಲುಪೆ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ ಕಾಣೆಯಾದವರ ಬಗ್ಗೆ ಮಾಹಿತಿಗಾಗಿ ಸಂಬಂಧಿಕರ ಹತಾಶ ಮನವಿಗಳು ಕೇಳಿಬಂದಿವೆ.

ಸತ್ತವರಲ್ಲಿ ಕೆಲವರು ವಯಸ್ಕರು, ಇನ್ನೂ ಕೆಲವರು ಮಕ್ಕಳು, ಆ ಶವಗಳು ಎಲ್ಲಿಂದ ಬಂದವು ಎಂಬುದು ನಮಗೆ ತಿಳಿದಿಲ್ಲ ಎಂದು ಪ್ಯಾಟ್ರಿಕ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಡಜನ್‌ಗಟ್ಟಲೆ ತಂಡಗಳು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಿದವು, ತುರ್ತು ಪ್ರತಿಕ್ರಿಯೆ ನೀಡುವವರು ಪತ್ತೆಯಾಗದವರನ್ನು ಹುಡುಕುತ್ತಲೇ ಇದ್ದರು. ಇದರಲ್ಲಿ ಬೇಸಿಗೆ ಶಿಬಿರಗಳಿಂದ ಕಾಣೆಯಾದ 20 ಕ್ಕೂ ಹೆಚ್ಚು ಹುಡುಗಿಯರು ಸೇರಿದ್ದಾರೆ.

“ಟೆಕ್ಸಾಸ್‌ನ ಜನರನ್ನು ನಾನು ಕೇಳುತ್ತಿದ್ದೇನೆ, ಇಂದು ಮಧ್ಯಾಹ್ನ ಸ್ವಲ್ಪ ಗಂಭೀರವಾಗಿ ಪ್ರಾರ್ಥನೆ ಮಾಡಿ. ಈ ಯುವತಿಯರನ್ನು ನಾವು ಹುಡುಕಬೇಕು, ನಿಮ್ಮ ಮೊಣಕಾಲುಗಳ ಮೇಲೆ ನಿಂತು ಪ್ರಾರ್ಥಿಸಿ” ಎಂದು ಪ್ಯಾಟ್ರಿಕ್ ಹೇಳಿದರು.

ಕೆರ್ ಕೌಂಟಿ ಶೆರಿಫ್ ಕಚೇರಿಯ ಫೇಸ್‌ಬುಕ್ ಪೋಸ್ಟ್‌ನಲ ಕಾಮೆಂಟ್‌ನಲ್ಲಿ, ಪ್ರವಾಹ ವಲಯದಲ್ಲಿ ಸಿಲುಕಿರುವ ಜನರ ಫೋಟೋಗಳಿಂದ ತುಂಬಿದ್ದವು.

ತನ್ನ ಪತಿ ಮತ್ತು ಇಬ್ಬರು ಮಕ್ಕಳಿಗಾಗಿ ಹಂಟ್‌ನಲ್ಲಿ ಕ್ಯಾಬಿನ್ ಅನ್ನು ಬಾಡಿಗೆಗೆ ಪಡೆದಿದ್ದ ತನ್ನ ಮಗಳನ್ನು ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಒಬ್ಬ ಮಹಿಳೆ ಹೇಳಿದ್ದಾರೆ. ಈಗಾಗಲೇ ಸ್ಥಳಾಂತರಿಸಲ್ಪಟ್ಟವರ ಹೆಸರುಗಳನ್ನು ಯಾರಾದರೂ ಪೋಸ್ಟ್ ಮಾಡುವಂತೆ ಅವರು ಬೇಡಿಕೊಂಡರು.

ಕೌಂಟಿಯ ಮುಖ್ಯ ಚುನಾಯಿತ ಅಧಿಕಾರಿ ನ್ಯಾಯಾಧೀಶ ರಾಬ್ ಕೆಲ್ಲಿ, ಪ್ರವಾಹದಿಂದ ಸಾವುನೋವುಗಳು ಮತ್ತು ಇಲ್ಲಿಯವರೆಗೆ ಡಜನ್‌ಗಟ್ಟಲೆ ಜನರನ್ನು ಪ್ರವಾಹದಿಂದ ರಕ್ಷಿಸಲಾಗಿದೆ ಎಂದು ದೃಢಪಡಿಸಿದರು. ನಿರ್ದಿಷ್ಟ ಸಂಖ್ಯೆಗಳನ್ನು ಉಲ್ಲೇಖಿಸದಂತೆ ತನಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು. ಪ್ರಾಣ ಕಳೆದುಕೊಂಡವರನ್ನು ಗುರುತಿಸಲು ಅಧಿಕಾರಿಗಳು ಇನ್ನೂ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

“ಪತತ್ತೆಯಾದ ದೇಹಗಳಲ್ಲಿ ಹೆಚ್ಚಿನವರು ಯಾರೆಂದು ನಮಗೆ ತಿಳಿದಿಲ್ಲ” ಎಂದು ಕೆಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. “ಅವರಲ್ಲಿ ಒಬ್ಬರು ಸಂಪೂರ್ಣವಾಗಿ ಬೆತ್ತಲೆಯಾಗಿದ್ದರು, ಅವರ ಬಳಿ ಯಾವುದೇ ಗುರುತಿನ ಚೀಟಿ ಇರಲಿಲ್ಲ. ನಾವು ಈ ಜನರ ಗುರುತನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ, ಆದರೆ ನಮಗೆ ಇನ್ನೂ ಅದು ಸಿಕ್ಕಿಲ್ಲ” ಎಂದರು.

5 ಹುಲಿಗಳ ಸಾವಿನ ಪ್ರಕರಣ: ಸಂಬಂಧಪಟ್ಟ ಇಬ್ಬರು ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...