Homeಮುಖಪುಟಪಠ್ಯ ವಿವಾದ: ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ 4 ಸುಳ್ಳುಗಳು

ಪಠ್ಯ ವಿವಾದ: ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ 4 ಸುಳ್ಳುಗಳು

- Advertisement -
- Advertisement -

ಬಿಜೆಪಿ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುನರ್ ಪರಿಷ್ಕರಣೆ ಸಮಿತಿ ಮಾಡಿರುವ ಬದಲಾವಣೆಗಳು ವಿವಾದದ ಬಿರುಗಾಳಿಯೆಬ್ಬಿಸಿವೆ. ಒಂದೇ ಜಾತಿಯ ಸದಸ್ಯರನ್ನೊಳಗೊಂಡ ಸಮಿತಿಯು ಅವರದೇ ಜಾತಿ ಲೇಖಕರ ಪಠ್ಯಗಳನ್ನು ತುಂಬಿದ್ದು, ದಲಿತ – ಶೂದ್ರ ಲೇಖಕರ ಪಠ್ಯಗಳನ್ನು ಕೈಬಿಟ್ಟಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆಗಳು ವ್ಯಕ್ತವಾಗಿವೆ. ಭಗತ್ ಸಿಂಗ್ ಪಠ್ಯ ಕೈಬಿಟ್ಟು ಹೆಡಗೇವಾರ್ ಪಠ್ಯ ಸೇರಿಸಿದ್ದಕ್ಕೆ ತೀವ್ರ ವಿರೋಧ ಕೇಳಿಬಂದಿದೆ. ಈ ಪಠ್ಯ ಪುನರ್ ಪರಿಷ್ಕರಣೆಯನ್ನು ಸಂಪೂರ್ಣವಾಗಿ ಕೈಬಿಡಬೇಕು ಮತ್ತು ಹಳೆಯ ಪಠ್ಯಗಳನ್ನೆ ಮುಂದುವರೆಸಬೇಕೆಂದು ಟ್ವಿಟರ್ ಟ್ರೆಂಡ್ ಸಹ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಮೇ 23ರ ಸೋಮವಾರದಂದು ಸ್ಪಷ್ಟನೆ ನೀಡುವುದಕ್ಕಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಪತ್ರಿಕಾಗೋಷ್ಟಿ ನಡೆಸಿದ್ದರು. ಆದರೆ ಅಲ್ಲಿ ಸ್ಪಷ್ಟನೆ ನೀಡುವುದಕ್ಕೆ ಬದಲು ಹಿಂದಿನ ಸಮಿತಿಯನ್ನು ದೂಷಿಸುವ, ಸುಳ್ಳು ಮತ್ತು ಅರ್ಧ ಸುಳ್ಳುಗಳನ್ನು ಹೇಳಿದ್ದಾರೆ ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ಸೇರಿದಂತೆ ಇತರರು ಆರೋಪಿಸಿದ್ದಾರೆ. ಶಿಕ್ಷಣ ಸಚಿವರು ಹೇಳಿದ ನಾಲ್ಕು ಸುಳ್ಳುಗಳು ಇಲ್ಲಿವೆ.

  1. ಕುವೆಂಪು ಪಠ್ಯ ಕೈಬಿಟ್ಟ ಬರಗೂರು ಸಮಿತಿ

ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯ ಸಮಿತಿಯು ಕುವೆಂಪು, ಮಹಾತ್ಮ ಗಾಂಧಿ, ಬಾಬಾ ಸಾಹೇಬ್ ಅಂಬೇಡ್ಕರ್, ಮೈಸೂರು ಮಹಾರಾಜರು, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ, ಮದಕರಿ ನಾಯಕ ಮುಂತಾದ ಮಹನೀಯರ ಪಾಠಗಳನ್ನು ಕೈ ಬಿಟ್ಟಿತ್ತು ಎಂಬ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಬರಗೂರು ರಾಮಚಂದ್ರಪ್ಪನವರು “ಶಿಕ್ಷಣ ಸಚಿವರು ಅಪ್ಪಟ ತಪ್ಪು ಮಾಹಿತಿ ನೀಡುತ್ತಿದ್ದಾರೆ. ನಾವು ಅವರು ಉಲ್ಲೇಖಿಸಿರುವ ಯಾವ ಪಠ್ಯವನ್ನು ಕೈಬಿಟ್ಟಿಲ್ಲ. ಬದಲಿಗೆ ಮತ್ತಷ್ಟು ಸೇರಿಸಿ ಎಲ್ಲಾ ತರಗತಿ ಮಕ್ಕಳಿಗೂ ಪಾಠ ಇಟ್ಟಿದ್ದೇವೆ” ಎಂದಿದ್ದಾರೆ.

ಕುವೆಂಪು ಅವರ ರಚನೆಗಳು 10 ಮತ್ತು 7ನೇ ತರಗತಿಯ ಕನ್ನಡ ಪಠ್ಯಪುಸ್ತಕಗಳಲ್ಲಿ ಇವೆ. ಖಂಡಿತ ಕೈ ಬಿಟ್ಟಿಲ್ಲ. ಪ್ರೌಢಶಾಲೆ ಹಂತದಲ್ಲಿ ಇದ್ದ ಕುವೆಂಪು ಅವರ “ಭರತ ಭೂಮಿ ನಮ್ಮ ತಾಯಿ” ಎಂಬ ಪದ್ಯವನ್ನು ಚಿಕ್ಕಂದಿನಲ್ಲೇ ದೇಶಪ್ರೇಮದ ಭಾವನೆ ಬೆಳೆಯಲಿ ಎಂಬ ದೃಷ್ಟಿಯಿಂದ 7ನೇ ತರಗತಿಗೆ ಅಳವಡಿಸಲು ನಾವು ಸೂಚಿಸಿದ್ದೆವು ಅಷ್ಟೇ. ಇನ್ನು, 7ನೇ ತರಗತಿಯ 2ನೇ ಭಾಗ ಮತ್ತು 10ನೇ ತರಗತಿಯ 2ನೇ ಭಾಗದ ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲಿ ಗಾಂಧಿ ಕುರಿತು ಸಾಕಷ್ಟು ವಿವರಗಳಿವೆ. ಸಮಾಜ ವಿಜ್ಞಾನದ 8ನೇ ತರಗತಿಯ ಭಾಗ-1 ಮತ್ತು 10ನೇ ತರಗತಿಯ ಭಾಗ-2ರಲ್ಲಿ ಡಾ.ಅಂಬೇಡ್ಕರ್‌ ಪಾಠಗಳಿವೆ. 9ನೇ ತರಗತಿಯ ಪಠ್ಯದಲ್ಲಿ ‘ನಮ್ಮ ಸಂವಿಧಾನ’ ಎ೦ಬ ಪಾಠವಿದ್ದು ಅಲ್ಲಿಯೂ ಡಾ.ಅಂಬೇಡ್ಕರ್‌ ಅವರನ್ನು ಕುರಿತ ವಿವರಗಳಿವೆ ಎಂದು ಬರಗೂರು ಹೇಳಿದ್ದಾರೆ.

2. 1930 ರಲ್ಲಿ ತ್ರಿವರ್ಣ ಧ್ವಜ ಇರಲಿಲ್ಲ

ಹೆಡಗೇವಾರ್‌ರವರನ್ನು ಪಠ್ಯದಲ್ಲಿ ಸೇರಿಸಿದ್ದೀರಿ. ಅವರು ಭಾರತದ ತ್ರಿವರ್ಣ ಧ್ವಜಕ್ಕೆ ಬದಲಾಗಿ ಭಗವಾಧ್ವಜ ಬೆಂಬಲಿಸಿದ್ದರು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ನಾಗೇಶ್‌ರವರು, ನಮಗೆ ಸ್ವಾತಂತ್ರ್ಯ ಬಂದಿದ್ದು 1947ರಲ್ಲಿ. ಅಲ್ಲಿಂದ ತ್ರಿವರ್ಣ ಧ್ವಜಕ್ಕೆ ಮಾನ್ಯತೆ ಇದೆ ಹೊರತು 1930ರಲ್ಲಿ ತ್ರಿವರ್ಣ ಧ್ವಜ ಇರಲಿಲ್ಲ ಎಂದು ಹೆಡಗೇವಾರ್‌ರನ್ನು ಸಮರ್ಥಿಸಿಕೊಂಡರು.

ವಾಸ್ತವ ಏನೆಂದರೆ, ಸ್ವಾತಂತ್ರ್ಯ ಚಳವಳಿಯು 1930ರ ಜನವರಿ 26ರಂದು ದೇಶದ ಎಲ್ಲಾ ಕಡೆ ಸಂಪೂರ್ಣ ಸ್ವಾತಂತ್ರ್ಯ ಘೋಷಣೆ ಮಾಡಿ ತ್ರಿವರ್ಣ ಧ್ವಜ ಹಾರಿಸಬೇಕೆಂದು ಕರೆ ನೀಡಿದ್ದಾಗ ಹೆಡಗೇವಾರರು ಸಂಘದಲ್ಲಿ ಕೇವಲ ಭಗವಾ ಧ್ವಜವನ್ನು ಮಾತ್ರ ಹಾರಿಸಬೇಕೆಂದು ಕರೆ ನೀಡುತ್ತಾರೆ. 1931ರಲ್ಲಿ ದಂಡಿ ಸತ್ಯಾಗ್ರಹದ ಕರೆ ಇಡೀ ದೇಶವನ್ನು ಆವರಿಸುತ್ತಿದ್ದಾಗ ಆರೆಸ್ಸೆಸ್ ಸಹ ಒಂದು ನಿಲುವು ತೆಗೆದುಕೊಳ್ಳಲೇಬೇಕಾದ ಸಂದರ್ಭ ಬಂದಾಗ ಆರೆಸ್ಸೆಸ್ಸಿನ ಕಾರ್ಯಕರ್ತರು ವೈಯಕ್ತಿಕ ನೆಲೆಯಲ್ಲಿ ಸತ್ಯಾಗ್ರಹದಲ್ಲಿ ಭಾಗವಹಿಸಬಹುದೇ ವಿನಾ ಆರೆಸ್ಸೆಸ್ ಒಂದು ಸಂಘವಾಗಿ ಸತ್ಯಾಗ್ರಹದಲ್ಲಿ ಭಾಗವಹಿಸುವುದಿಲ್ಲ ಎಂಬ ನಿಲುವು ತೆಗೆದುಕೊಳ್ಳುತ್ತಾರೆ ಎಂದು ಸ್ವಾತಂತ್ರ್ಯ ಚಳವಳಿಯ ಬಗ್ಗೆ ಗಂಭೀರವಾಗಿ ಅಧ್ಯಯನ ಮಾಡಿರುವ ಚಿಂತಕ ಶಿವಸುಂದರ್‌ ಅಭಿಪ್ರಾಯಪಟ್ಟಿದ್ದಾರೆ. ಆದರೆ ನಾಗೇಶ್‌ರವರು ಹೆಡಗೇವಾರ್ ಸಮರ್ಥಿಸುವ ಬರದಲ್ಲಿ ಸುಳ್ಳಿಗೆ ಮೊರೆ ಹೋಗಿದ್ದಾರೆ.

3. ಸಾಹಿತಿಗಳ ಜಾತಿ ಹುಡಕಬಾರದು, ಕಂಟೆಂಟ್ ನೋಡಿ

ಯಾವ ಯಾವ ಸಾಹಿತಿಗಳ ಪಠ್ಯ ಸೇರ್ಪಡೆಯಾಗಿದೆಯೋ ಅವರ ಜಾತಿ ನೋಡಬಾರದು, ಬದಲಿಗೆ ಅವರ ಕಂಟಂಟ್ ನೋಡಿದರೆ ಒಳ್ಳೆಯದು ಕಾಣುತ್ತದೆ ಎಂದು ಸಚಿವ ನಾಗೇಶ್ ಹೇಳಿದರು.

ಪಠ್ಯ ಪುನರ್ ಪರಿಷ್ಕರಣಾ ಸಮಿತಿಯಲ್ಲಿ 7 ಜನ ಸದಸ್ಯರಿದ್ದು ಆ 7 ಜನರೂ ಬ್ರಾಹ್ಮಣ ಸಮುದಾಯಕ್ಕೆ ಸೇರಿದ್ದಾರೆ. ಎಸ್. ಎಲ್.ಭೈರಪ್ಪ, ಕೆ.ಬಿ.ಹೆಡ್ಗೇವಾರ್, ಗಜಾನನ ಶರ್ಮಾ, ಎನ್.ರಂಗನಾಥ ಶರ್ಮಾ, ಸುಶ್ರುತ ದೊಡ್ಡೇರಿ, ಎಸ್.ವಿ.ಪರಮೇಶ್ವರ ಭಟ್, ಗಣೇಶ್ ಶತಾವಧಾನಿ, ಬನ್ನಂಜೆ ಗೋವಿಂದಾಚಾರ್ಯ, ಶಿವಾನಂದ ಕಳವೆ, ಚಕ್ರವರ್ತಿ ಸೂಲಿಬೆಲೆಯವರ ಪಠ್ಯಗಳನ್ನು ಸೇರಿಸಲಾಗಿದೆ. ಇವರಲ್ಲಿ ಎಲ್ಲರೂ ಬ್ರಾಹ್ಮಣ ಜಾತಿಗೆ ಸೇರಿದ್ದಾರೆ. ಇವರ ಕಂಟೆಂಟ್‌ಗಳು ಹೇಗಿವೆ ಎಂಬುದನ್ನು ನೋಡಿದರೆ ಅದರಲ್ಲಿ ಒಳ್ಳೆಯದು ಕಾಣುವುದಿಲ್ಲ.

“ಈ ಸಿರಿಯೆಂಬ ಹೊಸ ಹೆಣ್ಣನ್ನು ಕಂಡು ಮರುಳಾಗದವರನ್ನು ನಾನು ಕಂಡಿಲ್ಲ. ಎಲ್ಲರೂ ಆಕೆಯತ್ತ ಆಕರ್ಷಿತರಾದವರೆ. ಎಲ್ಲರೂ ಆಕೆಯಿಂದ ಮೋಸಹೋಗುವವರೇ. ಯಾವುದೇ ಒಬ್ಬನನ್ನು ನಿರ್ವಂಚನೆಯಿಂದ ಪ್ರೇಮಿಸುವುದು ಆಕೆಯ ಜಾಯಮಾನಕ್ಕೆ ಸಲ್ಲದು”

ಇದು ಬನ್ನಂಜೆ ಗೋವಿಂದಚಾರ್ಯರ ಶುಕನಾಸನ ಉಪದೇಶ ಪಾಠ ಭಾಗ. ಮಹಿಳೆಯರನ್ನು ಇಷ್ಟು ಕೀಳು ಮಟ್ಟಕ್ಕೆ ಚಿತ್ರಿಸಿರುವ ಪಾಠವನ್ನು ಮಕ್ಕಳು ಓದಿದರೆ ಅವರಲ್ಲಿ ಯಾವ ಭಾವ ಬರಬಹುದು? ಇದನ್ನು ಒಳ್ಳೆಯ ಕಂಟೆಂಟ್‌ ಎನ್ನಲಾಗುತ್ತದೆಯೇ?

ಇನ್ನು ಭಾರತದ ರಸ್ತೆಗಳನ್ನು ಚಿನ್ನದಲ್ಲಿ ಮಾಡಬಹುದು, ಸೌದಿ ಪೆಟ್ರೋಲಿಯಂ ಸಚಿವನಿಗೆ ಮೋದಿ ಫೋನ್ ಮಾಡಿ ಪೆಟ್ರೋಲ್ ರೇಟ್ ಕಡಿಮೆ ಮಾಡುತ್ತಾರೆ. ಬೆಂಗಳೂರಿಂದ ಮಂಗಳೂರಿಗೆ ಬುಲೆಟ್ ಟ್ರೈನ್ ಬರುತ್ತೆ ಎಂದೆಲ್ಲ ಸುಳ್ಳು ಹೇಳಿಕೊಂಡು ತಿರುಗಿದ ಚಕ್ರವರ್ತಿ ಸೂಲಿಬೆಲೆಯವರ ಬಗ್ಗೆ ಮಕ್ಕಳು ಓದಬೇಕೆ? ಅವರು ಒಳ್ಳೆಯ ಕಂಟೆಂಟ್ ಬರೆಯುತ್ತಾರೆಯೇ?

4. ರೋಹಿತ್ ಚಕ್ರತೀರ್ಥ ಐಐಟಿ-ಸಿಇಟಿ ಪ್ರೊಫೆಸರ್ ಆಗಿದ್ದರು

ಪಠ್ಯ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಲು ರೋಹಿತ್ ಚಕ್ರತೀರ್ಥರಿಗಿರುವ ಅರ್ಹತೆಯೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಶಿಕ್ಷಣ ತಜ್ಞ ಎನ್ನುವುದಕ್ಕೆ ಎಲ್ಲಿಯಾದರೂ ಪ್ರಮಾಣ ಪತ್ರ ಇದೆಯಾ? ರೋಹಿತ್ ಚಕ್ರತೀರ್ಥ ಅವರ ಹಿನ್ನೆಲೆಯನ್ನು ಪ್ರಶ್ನೆ ಮಾಡುತ್ತಿರುವವರು ಅವರ ಹಿನ್ನೆಲೆ ಹೇಳಲಿ ನೋಡೋಣ. ಚಕ್ರತೀರ್ಥ ಈ ಹಿಂದೆ ಐಐಟಿ ಮತ್ತು ಸಿಇಟಿ ಪ್ರೊಫೆಸರ್ ಎಂಬುದನ್ನು ಮರೆಯಬಾರದು” ಎಂದು ರೋಹಿತ್‌ ಚಕ್ರತೀರ್ಥ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು.

ಈ ಕುರಿತು ಶೋಧನೆ ನಡೆಸಿದಾಗ ರೋಹಿತ್ ಚಕ್ರತೀರ್ಥರವರು ಯಾವುದೇ ಐಐಟಿಗೆ ಪ್ರೊಫೆಸರ್ ಆಗಿರುವುದು ಕಂಡುಬಂದಿಲ್ಲ. ಐಐಟಿ ಅಂದರೆ ‘ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ’ ಎಂಬುವುದು ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ದೇಶದಾದ್ಯಂತ 23 ಐಐಟಿ ಸಂಸ್ಥೆಗಳಿವೆ. ಕರ್ನಾಟಕದ ಧಾರವಾಡದಲ್ಲೂ ಐಐಟಿ ಇದೆ. ಆದರೆ ಈ ಯಾವ ವಿವಿಗಳಲ್ಲಿಯೂ ಪ್ರಾಧ್ಯಾಪಕರಾಗಿ ಅವರು ಹೆಸರು ಇಲ್ಲ.

ಇನ್ನು ಸಿಇಟಿ ಎಂಬ ಯಾವ ವಿಶ್ವವಿದ್ಯಾಲಯವೂ ಇಲ್ಲ. ಅದು ಪಿಯುಸಿ ನಂತರ ನಡೆಯುವ ಪ್ರವೇಶ (CET-Common Entrance Test) ಪರೀಕ್ಷೆಯಾಗಿದೆ. ಅದೊಂದು ಸಂಸ್ಥೆಯಾಗಲಿ, ಹುದ್ದೆಯಾಗಲಿ ಅಲ್ಲ. ಈ ಪರೀಕ್ಷೆ ಬರೆಯಲು ಸಾಮಾನ್ಯವಾಗಿ ಟ್ಯೂಷನ್‌ ಕೇಂದ್ರಗಳಲ್ಲಿ ತರಬೇತಿ ನೀಡಲಾಗುತ್ತದೆ. ಇಂತಹ ಟ್ಯೂಷನ್‌ ಕೇಂದ್ರಗಳಿಗೆ ಮಾನ್ಯತೆಯೂ ಇರುವುದಿಲ್ಲ.

ಸಾಮಾಜಿಕ ಜಾಲತಾಣಗಳಲ್ಲಿ ಅವರ ಬಗ್ಗೆ ಹುಡುಕಿದಾಗಲೂ ಅವರೊಬ್ಬ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿ, ಬರಹಗಾರ ಮತ್ತು ವಿಜ್ಞಾನ ಸಂಬಂಧಿ ವಿಚಾರಗಳ ಲೇಖಕ ಎಂದಷ್ಟೇ ಮಾಹಿತಿ ಇದೆ. ಸ್ವತಃ ರೋಹಿತ್ ಚಕ್ರತೀರ್ಥ ತಮ್ಮ ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಯಲ್ಲಿ ತಮ್ಮನ್ನು ಶಿಕ್ಷಕ ಎಂದಷ್ಟೇ ಪರಿಚಯಿಸಿಕೊಂಡಿದ್ದಾರೆ.

ಅವರ ಬಗ್ಗೆ ತಿಳಿದಿದ್ದ ಕೆಲವರ ಬಳಿ ವಿಚಾರಿಸಲಾಗಿ, ಈ ಹಿಂದೆ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ರೋಹಿತ್ ಚಕ್ರತೀರ್ಥ ಗಣಿತ ಪಾಠ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ‘ಟೆಸ್ಲಾ ಎಜುಕೇಷನ್’ ಎಂಬ‌ ಆನ್‌ಲೈನ್‌ ಪಾಠ ಮಾಡುವ ಶಿಕ್ಷಣ ಸಂಸ್ಥೆ ಹೊಂದಿರುವ ರೋಹಿತ್ ಚಕ್ರತೀರ್ಥ ಯೂಟ್ಯೂಬ್‌ನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗಣಿತ ಮಾಡುವ ವಿಡಿಯೋ ಸಹ ಲಭ್ಯವಾಗಿದೆ.

ಸಚಿವ ನಾಗೇಶ್‌ ಅವರು ಹೇಳಿದಂತೆ ಯಾರಾದರೂ ಪ್ರೊಫೆಸರ್ ಸ್ಥಾನಕ್ಕೆ ಏರುವ ಪ್ರಕ್ರಿಯೆಯೂ ಅಷ್ಟು ಸುಲಭದ್ದಲ್ಲ. ಮೊದಲು ಅವರು ಶಿಕ್ಷಣ ಸಂಸ್ಥೆಯೊಂದರಲ್ಲಿ ಸಹಾಯಕ ಪ್ರಾಧ್ಯಾಪಕ (Assistant Professor) ಆಗಿ ಕೆಲಸಕ್ಕೆ ನಿಯುಕ್ತಿಯಾಗಬೇಕು. ನಂತರ ಅವರ ಅನುಭವದ ಆಧಾರದ ಮೇಲೆ ಸಹ ಪ್ರಾಧ್ಯಾಪಕ (Associate Professor ) ಆಗಿ ಬಡ್ತಿ ನೀಡಲಾಗುತ್ತದೆ. ಆನಂತರ, ಅವರ ಸೇವಾನುಭವ ಮತ್ತು ಪ್ರಕಟಿತ ಸಂಶೋಧನಾ ಬರಹಗಳ ಆಧಾರದಲ್ಲಿ ಪ್ರೊಫೆಸರ್ ಎಂಬ ಗೌರವವನ್ನು ನೀಡಲಾಗುತ್ತದೆ. ಒಟ್ಟಿನಲ್ಲಿ ರೋಹಿತ್ ಚಕ್ರತೀರ್ಥ ಪ್ರೊಫೆಸರ್ ಅಲ್ಲ ಎಂಬುದು ಮೇಲಿನ ವಿಷಯಗಳಿಂದ ಖಚಿತವಾಗುತ್ತದೆ.

ಇದನ್ನೂ ಓದಿ: ಜಿ.ರಾಮಕೃಷ್ಣ, ಲಂಕೇಶ್‌ರವರ ಜಾತಿ ಗೊತ್ತಿಲ್ಲ: ರೋಹಿತ್ ಚಕ್ರತೀರ್ಥ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಮ್ಮದನ್ನು ನಾವು ಕಲಿಯುವುದು ಬೇಡ,ಪರಕೀಯರ ಬಗ್ಗೆನೇ ಕಲಿಯಿರಿ ಎನ್ನುವುದು ನಿಮ್ಮ ವಾದ ವಲ್ಲವೇ?ನೆಹರು ಗಾಂಧಿ ಜಿನ್ನಾ ಮೋಗಳತಬ್ಬಗ್ಗೆ ಮಾತ್ರ ಒದಬೇಕಲ್ಲವೆ,ಅಬ್ಬಾ ಭಾರತೀಯತೆಯನ್ನು ಹತ್ತಿಕ್ಕಲು ಏಷ್ಟು ಹುನ್ನಾರ, ಪದೆ ಪದೇ ಹೇಳಿದ್ದನ್ನೇ ಪ್ರತಿಯೊಬ್ಬ ಪ್ರಗತಿ ಪರರು ಎಲ್ಲಾ ರೀತಿಯ ಮಾಧ್ಯಮಗಳನ್ನು ಬಳಸಿಕೊಂಡು ಎಲ್ಲಾ ಕೆಲ್ಸ ಬಿಟ್ಟು ಸಾರುತ್ತಿದ್ದಾರೆ ಮೆಚ್ಚಲೇ ಬೇಕು ಇವರ ದೇಶಿಯತೆಯನ್ನು,

  2. ನಮ್ಮದನ್ನು ನಾವು ಕಲಿಯುವುದು ಬೇಡ,ಪರಕೀಯರ ಬಗ್ಗೆನೇ ಕಲಿಯಿರಿ ಎನ್ನುವುದು ನಿಮ್ಮ ವಾದ ವಲ್ಲವೇ?ನೆಹರು ಗಾಂಧಿ ಜಿನ್ನಾ ಮೋಘಲರ ಬಗ್ಗೆಮಾತ್ರ ಒದಬೇಕಲ್ಲವೆ,ಅಬ್ಬಾ ಭಾರತೀಯತೆಯನ್ನು ಹತ್ತಿಕ್ಕಲು ಏಷ್ಟು ಹುನ್ನಾರ, ಪದೆ ಪದೇ ಹೇಳಿದ್ದನ್ನೇ ಪ್ರತಿಯೊಬ್ಬ ಪ್ರಗತಿ ಪರರು ಎಲ್ಲಾ ರೀತಿಯ ಮಾಧ್ಯಮಗಳನ್ನು ಬಳಸಿಕೊಂಡು ಎಲ್ಲಾ ಕೆಲ್ಸ ಬಿಟ್ಟು ಸಾರುತ್ತಿದ್ದಾರೆ ಮೆಚ್ಚಲೇ ಬೇಕು ಇವರ ದೇಶಿಯತೆಯನ್ನು,

  3. ಸ್ವಾತಂತ್ರ್ಯ ಸಿಕ್ಕು 75 ವರ್ಷ ಆದರು ಮತ್ತೆ ಗುಲಾಮರು ತರ ಬದುಕ ಬೇಕು ಅನ್ನುವ ನಿಮ್ಮ ಜನ್ಮಕ್ಕೆ ನಾಚಿಕೆ ಆಗಬೇಕು……ಥೂ ನಿಮ್ಮ ಜನ್ಮಕ್ಕೆ ಬೆಂಕಿ ಹಚ್ಚಾ .

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...