Homeಚಳವಳಿಪಠ್ಯ ವಿವಾದ: ದಬ್ಬಾಳಿಕೆ ಬಿಡಿ, ಇದು ಮುಂದುವರಿಯಬಾರದು- ದೇವನೂರ ಮಹಾದೇವರ ಮತ್ತೊಂದು ಪತ್ರ

ಪಠ್ಯ ವಿವಾದ: ದಬ್ಬಾಳಿಕೆ ಬಿಡಿ, ಇದು ಮುಂದುವರಿಯಬಾರದು- ದೇವನೂರ ಮಹಾದೇವರ ಮತ್ತೊಂದು ಪತ್ರ

ಹಿಂದಿನ ಪಠ್ಯಪುಸ್ತಕವನ್ನೇ ಮುಂದುವರಿಸಿ ಎಂದು ಕೇಳಿಕೊಂಡರೂ ತಾವು ಅದನ್ನು ಕಾಲುಕಸ ಮಾಡಿ, ಲೆಕ್ಕಿಸದಿರುವುದನ್ನು ನೋಡಿದಾಗ ಇದು ನಾಡಿಗೆ ಕೇಡಿನ ಲಕ್ಷಣಗಳು ಎಂದೆನ್ನಿಸುತ್ತದೆ

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದ ನಾಡಿನ ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವರವರು ಶಿಕ್ಷಣ ಸಚಿವರಿಗೆ ಮತ್ತೊಂದು ಪತ್ರ ಬರೆದು ದಬ್ಬಾಳಿಕೆ ಬಿಡಿ, ಇದು ಮುಂದುವರಿಯಬಾರದು ಎಂದು ಮನವಿ ಮಾಡಿದ್ದಾರೆ.

“ಈ ಹಿಂದೆ, ಹತ್ತನೇ ತರಗತಿಯ ಪಠ್ಯ ಪುಸ್ತಕದಲ್ಲಿರುವ ನನ್ನ ಪಠ್ಯವನ್ನು ಕೈ ಬಿಡಬೇಕೆಂದು ತಮಗೆ ವಿನಂತಿಸಿ ದಿನಾಂಕ 26.05.2022ರಂದು ಪತ್ರ ಬರೆದು ಕೊರಿಯರ್ ಮುಖಾಂತರ ರವಾನಿಸಿದ್ದೆ. ಅದನ್ನು ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೂ, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರವರಿಗೂ ಕಳಿಸಿದ್ದೆ. ಆ ಪತ್ರದಲ್ಲಿ ನಾನು ಒಪ್ಪಿಗೆ ಇಲ್ಲದಿರುವುದಕ್ಕೆ ಸ್ಪಷ್ಟನೆ ನೀಡಿದ್ದೇನೆ. ಹೀಗಿದ್ದೂ ನನ್ನ ಮನವಿಯನ್ನು ತಾವು ಪರಿಗಣಿಸದೆ, ಇತ್ತೀಚಿನ ತಮ್ಮ ಹೇಳಿಕೆಯಲ್ಲಿ “ಪರಿಷ್ಕೃತ ಮುದ್ರಣವೇ ಜಾರಿಗೆ ಬರುತ್ತದೆ” ಎಂದಿದ್ದೀರಿ. ಕ್ಷಮಿಸಿ, ನಿಮ್ಮ ಈ ಧೋರಣೆ ನನಗೆ ದಬ್ಬಾಳಿಕೆ ಅನ್ನಿಸಿಬಿಟ್ಟಿತು” ಎಂದು ದೇವನೂರು ಬರೆದಿದ್ದಾರೆ.

ಚತುರ್ವರ್ಣ ವಿರೋಧಿ ಬಸವಣ್ಣನವರ ಪಾಠವನ್ನು ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಕತ್ತು ಹಿಚುಕಿರುವುದು, ಕುವೆಂಪು, ಅಂಬೇಡ್ಕರ್ ಅವರನ್ನು ಗೇಲಿ ಮಾಡುವ ಮನಸ್ಥಿತಿಯ ವ್ಯಕ್ತಿಯನ್ನೇ ಪಠ್ಯಮಸ್ತಕ ಪರಿಷ್ಕರಣೆಗೆ ಅಧ್ಯಕ್ಷನನ್ನಾಗಿಸಿರುವುದು ಹಾಗೂ ಒಂದು ಒಕ್ಕೂಟ ಸರ್ಕಾರದಲ್ಲಿ ಆ ಒಕ್ಕೂಟದ ಅಂಗವಾಗಿರುವ ಕರ್ನಾಟಕ ರಾಜ್ಯವು ತನಗೂ ಒಂದು ಧ್ವಜವೂ ಬೇಕು ಎಂದು ದನಿ ಎತ್ತಿದ ಸಂದರ್ಭದಲ್ಲಿ ಆ ಪರಿಕಲ್ಪನೆಯನ್ನು ತನ್ನ ಲಂಗೋಟಿಗೆ ಹೋಲಿಕೆ ಮಾಡಿದ ಹೀನ ಅಭಿರುಚಿಯ ವ್ಯಕ್ತಿಯನ್ನು ಮಕ್ಕಳ ಪಠ್ಯ ಪರಿಷ್ಕರಣೆ ಮಾಡಲು ಅಧ್ಯಕ್ಷನನ್ನಾಗಿಸಿರುವುದು ಮತ್ತು ಸಮರ್ಥಿಸುತ್ತಿರುವುದು, ಭಿನ್ನಾಭಿಪ್ರಾಯಗಳನ್ನು ಟೂಲ್‌ಕಿಟ್ ಎಂದು ರಾಜಕೀಯಗೊಳಿಸಿ ಪರಾರಿಯಾಗಲು ನೋಡುವುದು ಇವೆಲ್ಲ ಹಾಗೂ ನಾಡಿನ ಗಣ್ಯರು, ಮಠಾಧಿಪತಿಗಳು, ಲೇಖಕರು, ಪ್ರಜ್ಞಾವಂತರು ತಮ್ಮ ನೋವನ್ನು ವ್ಯಕ್ತಪಡಿಸಿ ಹಿಂದಿನ ಪಠ್ಯಪುಸ್ತಕವನ್ನೇ ಮುಂದುವರಿಸಿ ಎಂದು ಕೇಳಿಕೊಂಡರೂ ತಾವು ಅದನ್ನು ಕಾಲುಕಸ ಮಾಡಿ, ಲೆಕ್ಕಿಸದಿರುವುದನ್ನು ನೋಡಿದಾಗ ಇದು ನಾಡಿಗೆ ಕೇಡಿನ ಲಕ್ಷಣಗಳು ಎಂದೆನ್ನಿಸುತ್ತದೆ ಎಂದು ದೇವನೂರುರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊನೆಯದಾಗಿ ತಮ್ಮಲ್ಲಿ ಒಂದು ವಿನಂತಿ. ಇದು ಮುಂದುವರಿಯಬಾರದು. ದಯವಿಟ್ಟು ಮುಂದುವರಿಯಬಾರದು ಎಂದು ಮನವಿ ಮಾಡಿರುವ ಅವರು ಹಿಂದೆ ಶಿಕ್ಷಣ ಸಚಿವರಿಗೆ ಕಳಿಸಿದ್ದ ಪತ್ರವನ್ನು ಲಗತ್ತಿಸಿದ್ದಾರೆ.

ಇದನ್ನೂ ಓದಿ ; RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....