Homeಚಳವಳಿಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

ಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

- Advertisement -
- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿ ಪಠ್ಯ ಕೋಮುವಾದೀಕರಣ ಮಾಡಿರುವುದನ್ನು ವಿರೋಧಿಸಿ ಪಠ್ಯ ಅನುಮತಿ ನಿರಾಕರಣೆ ಪರ್ವ ಮುಂದುವರೆದಿದೆ. ಹಿರಿಯ ಸಾಹಿತಿ ದೇವನೂರ ಮಹಾದೇವರಿಂದ ಆರಂಭಗೊಂಡ ನನ್ನ ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನರವರು ಸಹ ಕೈ ಜೋಡಿಸಿದ್ದಾರೆ.

ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರಿಗೆ ಪತ್ರ ಬರೆದಿರುವ ಪ್ರೊ. ಕೆ.ಎಸ್ ಮಧುಸೂದನರವರು, “ಕರ್ನಾಟಕ ರಾಜ್ಯದ 9ನೇ ತರಗತಿಯ ದ್ವೀತಿಯ ಭಾಷಾ ಕನ್ನಡ ಪುಸ್ತಕ “ತಿಳಿಗನ್ನಡ” ಪಠ್ಯ ಪುಸ್ತಕ ರಚನಾ ಸಮಿತಿ ಅಧ್ಯಕ್ಷನಾಗಿ ನಾನು ಕಾರ್ಯ ನಿರ್ವಹಿಸಿದ್ದೆನು. ಈಗಲೂ ನನ್ನ ಅಧ್ಯಕ್ಷತೆಯಲ್ಲಿ ಅದೇ ಪಠ್ಯ ಮುಂದುವರೆದಿದೆ ಎಂದು ತಿಳಿದು ಬಂದಿದೆ. ಕರ್ನಾಟಕದ ನಾಡು ನುಡು ಸಂಸ್ಕೃತಿಯ ಅಂತಃಸಾಕ್ಷಿಯಂತಿರುವ ಮಾನ್ಯ ಕುವೆಂಪುರವರನ್ನು ಈಗನ ಪಠ್ಯ ಪರಿಷ್ಕರಣ ಸಮಿತಿಯ ಅಧ್ಯಕ್ಷರು ಲಘುವಾಗಿ ಗೇಲಿ ಮಾಡಿದ್ದಕ್ಕೆ ಮನನೊಂದು ಹಾಗೂ ಪ್ರತಿಭಟಿಸುತ್ತಾ ಭಾಷಾ ಪಠ್ಯಪುಸ್ತಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.

ಮುಂದುವರಿದು, “ಪಠ್ಯದಲ್ಲಿ ನನ್ನ ಹೆಸರು ಮತ್ತು ನಾನು ಬರೆದ ಪಾಠ ಮುನ್ನ ಪ್ರಸ್ತಾವನೆಯನ್ನು ಸೇರಿಸಬಾರದು” ಎಂದು ಮನವಿ ಮಾಡಿದ್ದಾರೆ.

ಅದೇ ರೀತಿಯಾಗಿ ನಿವೃತ್ತ ತರ್ಕ ಶಾಸ್ತ್ರ ಉಪನ್ಯಾಸಕರಾದ ಚಂದ್ರಶೇಖರ ತಾಳ್ಯರವರು 6ನೇ ತರಗತಿಯ ದ್ವಿತೀಯ ಭಾಷಾ ಪಠ್ಯದಲ್ಲಿ ನನ್ನ ಒಂದು ಸೋಜಿಗದ ಪದ್ಯ ಎಂಬ ಕವಿತೆ ಸೇರ್ಪಡೆಯಾಗಿದೆ. ಅದನ್ನು ಪಠ್ಯವಾಗಿ ಬೋಧಿಸಲು ನನ್ನ ಅನುಮತಿಯನ್ನು ವಾಪಸ್ ಪಡೆಯುತ್ತಿರುವೆ ಎಂದು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

ತಮ್ಮ ಪತ್ರದಲ್ಲಿ “ನಮ್ಮ ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಶಿಕ್ಷಣ ಕ್ಷೇತ್ರದ ಮೇಲಿನ ಸಾಂಸ್ಕೃತಿಕ ಹಲ್ಲೆ ಮಿತಿ ಮೀರುತ್ತಿದೆ. ಅದೀಗ ಪಠ್ಯಕ್ರಮದ ಮೇಲೂ ತನ್ನ ಕರಿನೆರಳು ಚಾಚುತ್ತಿದೆ. ಅಸಾಂವಿಧಾನಿಕ ನಿರ್ಧಾರಗಳಿಂದ ಇಡೀ ಶೈಕ್ಷಣಿಕ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಅನೈತಿಕ ನಡೆ ನನ್ನಂಥ ಲೇಖಕನನ್ನು ಅಧೀರನನ್ನಾಗಿ ಮಾಡುತ್ತದೆ. ಇದು ಕನ್ನಡ ಪರಂಪರೆಯನ್ನು ಕುಬ್ಜಗೊಳಿಸುವ ಅಕ್ರಮ ನಡೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಪಠ್ಯ ಪರಿಷ್ಕರಣೆಯ ನೆಪದಲ್ಲಿ ನಡೆಯುತ್ತಿರುವ ಈ ಸಂಸ್ಕ್ರತಿ ತಿರುಚೀಕರಣ ನಮ್ಮ ಪರಂಪರಾಗತ ಸಂಸ್ಕೃತಿಯನ್ನೇ ವಿರೂಪಗೊಳಿಸವಂತಿಹುದು. ಇದನ್ನು ತಾವು ಗಮನಿಸಬೇಕು ಎನ್ನುವುದು ನನ್ನ ಆಗ್ರಹ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇನ್ನೂ ನಾಡಿನ ಸಾಹಿತಿಗಳು ಈ ಮರುಪರೀಕ್ಷೆಗೆ ಅಭಿಪ್ರಾಯ ಮಂಡಿಸಬೇಕು… ಮುಖ್ಯವಾಗಿ ನಮ್ಮ ಚೆಡ್ಡಿ ಸಾಹಿತಿ ಎಸ್. ಎಲ್ ಭೈರಪ್ಪ ಅವರ ಅಭಿಪ್ರಾಯ ಏನು ಅಂತಾ ತಿಳಿಯಬೇಕಾಗಿದೆ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...