Homeಚಳವಳಿಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

ಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

- Advertisement -
- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿ ಪಠ್ಯ ಕೋಮುವಾದೀಕರಣ ಮಾಡಿರುವುದನ್ನು ವಿರೋಧಿಸಿ ಪಠ್ಯ ಅನುಮತಿ ನಿರಾಕರಣೆ ಪರ್ವ ಮುಂದುವರೆದಿದೆ. ಹಿರಿಯ ಸಾಹಿತಿ ದೇವನೂರ ಮಹಾದೇವರಿಂದ ಆರಂಭಗೊಂಡ ನನ್ನ ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನರವರು ಸಹ ಕೈ ಜೋಡಿಸಿದ್ದಾರೆ.

ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರಿಗೆ ಪತ್ರ ಬರೆದಿರುವ ಪ್ರೊ. ಕೆ.ಎಸ್ ಮಧುಸೂದನರವರು, “ಕರ್ನಾಟಕ ರಾಜ್ಯದ 9ನೇ ತರಗತಿಯ ದ್ವೀತಿಯ ಭಾಷಾ ಕನ್ನಡ ಪುಸ್ತಕ “ತಿಳಿಗನ್ನಡ” ಪಠ್ಯ ಪುಸ್ತಕ ರಚನಾ ಸಮಿತಿ ಅಧ್ಯಕ್ಷನಾಗಿ ನಾನು ಕಾರ್ಯ ನಿರ್ವಹಿಸಿದ್ದೆನು. ಈಗಲೂ ನನ್ನ ಅಧ್ಯಕ್ಷತೆಯಲ್ಲಿ ಅದೇ ಪಠ್ಯ ಮುಂದುವರೆದಿದೆ ಎಂದು ತಿಳಿದು ಬಂದಿದೆ. ಕರ್ನಾಟಕದ ನಾಡು ನುಡು ಸಂಸ್ಕೃತಿಯ ಅಂತಃಸಾಕ್ಷಿಯಂತಿರುವ ಮಾನ್ಯ ಕುವೆಂಪುರವರನ್ನು ಈಗನ ಪಠ್ಯ ಪರಿಷ್ಕರಣ ಸಮಿತಿಯ ಅಧ್ಯಕ್ಷರು ಲಘುವಾಗಿ ಗೇಲಿ ಮಾಡಿದ್ದಕ್ಕೆ ಮನನೊಂದು ಹಾಗೂ ಪ್ರತಿಭಟಿಸುತ್ತಾ ಭಾಷಾ ಪಠ್ಯಪುಸ್ತಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.

ಮುಂದುವರಿದು, “ಪಠ್ಯದಲ್ಲಿ ನನ್ನ ಹೆಸರು ಮತ್ತು ನಾನು ಬರೆದ ಪಾಠ ಮುನ್ನ ಪ್ರಸ್ತಾವನೆಯನ್ನು ಸೇರಿಸಬಾರದು” ಎಂದು ಮನವಿ ಮಾಡಿದ್ದಾರೆ.

ಅದೇ ರೀತಿಯಾಗಿ ನಿವೃತ್ತ ತರ್ಕ ಶಾಸ್ತ್ರ ಉಪನ್ಯಾಸಕರಾದ ಚಂದ್ರಶೇಖರ ತಾಳ್ಯರವರು 6ನೇ ತರಗತಿಯ ದ್ವಿತೀಯ ಭಾಷಾ ಪಠ್ಯದಲ್ಲಿ ನನ್ನ ಒಂದು ಸೋಜಿಗದ ಪದ್ಯ ಎಂಬ ಕವಿತೆ ಸೇರ್ಪಡೆಯಾಗಿದೆ. ಅದನ್ನು ಪಠ್ಯವಾಗಿ ಬೋಧಿಸಲು ನನ್ನ ಅನುಮತಿಯನ್ನು ವಾಪಸ್ ಪಡೆಯುತ್ತಿರುವೆ ಎಂದು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

ತಮ್ಮ ಪತ್ರದಲ್ಲಿ “ನಮ್ಮ ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಶಿಕ್ಷಣ ಕ್ಷೇತ್ರದ ಮೇಲಿನ ಸಾಂಸ್ಕೃತಿಕ ಹಲ್ಲೆ ಮಿತಿ ಮೀರುತ್ತಿದೆ. ಅದೀಗ ಪಠ್ಯಕ್ರಮದ ಮೇಲೂ ತನ್ನ ಕರಿನೆರಳು ಚಾಚುತ್ತಿದೆ. ಅಸಾಂವಿಧಾನಿಕ ನಿರ್ಧಾರಗಳಿಂದ ಇಡೀ ಶೈಕ್ಷಣಿಕ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಅನೈತಿಕ ನಡೆ ನನ್ನಂಥ ಲೇಖಕನನ್ನು ಅಧೀರನನ್ನಾಗಿ ಮಾಡುತ್ತದೆ. ಇದು ಕನ್ನಡ ಪರಂಪರೆಯನ್ನು ಕುಬ್ಜಗೊಳಿಸುವ ಅಕ್ರಮ ನಡೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಪಠ್ಯ ಪರಿಷ್ಕರಣೆಯ ನೆಪದಲ್ಲಿ ನಡೆಯುತ್ತಿರುವ ಈ ಸಂಸ್ಕ್ರತಿ ತಿರುಚೀಕರಣ ನಮ್ಮ ಪರಂಪರಾಗತ ಸಂಸ್ಕೃತಿಯನ್ನೇ ವಿರೂಪಗೊಳಿಸವಂತಿಹುದು. ಇದನ್ನು ತಾವು ಗಮನಿಸಬೇಕು ಎನ್ನುವುದು ನನ್ನ ಆಗ್ರಹ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇನ್ನೂ ನಾಡಿನ ಸಾಹಿತಿಗಳು ಈ ಮರುಪರೀಕ್ಷೆಗೆ ಅಭಿಪ್ರಾಯ ಮಂಡಿಸಬೇಕು… ಮುಖ್ಯವಾಗಿ ನಮ್ಮ ಚೆಡ್ಡಿ ಸಾಹಿತಿ ಎಸ್. ಎಲ್ ಭೈರಪ್ಪ ಅವರ ಅಭಿಪ್ರಾಯ ಏನು ಅಂತಾ ತಿಳಿಯಬೇಕಾಗಿದೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...