Homeಕರ್ನಾಟಕಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

- Advertisement -
- Advertisement -

ಪಠ್ಯಪುಸ್ತಕ ಪರಿಶೀಲನೆ ಹಾಗೂ ಪರಿಷ್ಕರಣೆ ವೇಳೆ ರೋಹಿತ್‌ ಚಕ್ರತೀರ್ಥ ಅವರು ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಪಠ್ಯಗಳನ್ನು ರೂಪಿಸಿದ್ದಾರೆಂಬ ಸಂಗತಿ ಹೊರಬಿದ್ದಿದೆ.

ರೋಹಿತ್‌ ಚಕ್ರತೀರ್ಥರ ಸಮಿತಿಯಲ್ಲಿನ ಸದಸ್ಯರನ್ನು ಸಂಪರ್ಕಿಸಿ ಈ ಕುರಿತು ಸ್ಪಷ್ಟನೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸುತ್ತಿದ್ದು, ಕೆಲವು ಸದಸ್ಯರು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಪ್ರತಿಕ್ರಿಯೆ ನೀಡಿದವರು ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ವಿವಿಎಸ್ ಶಾಲೆ ನಿವೃತ್ತ ಮುಖ್ಯೋಪಾಧ್ಯಾಯರಾದ ಡಾ.ಎನ್‌.ಸತ್ಯಪ್ರಕಾಶ್‌ ಸಮಿತಿ ಸದಸ್ಯರಾಗಿದ್ದರು. ಈಗ ಉಂಟಾಗಿರುವ ವಿವಾದದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, “ನಾನು ಸಮಾಜ ವಿಜ್ಞಾನ ಪಠ್ಯಪುಸ್ತಕ ರಚನೆಯಲ್ಲಿದ್ದೆ. ಈಗ ಆಗಿರುವ ತಪ್ಪುಗಳು ಕನ್ನಡ ಪಠ್ಯಪುಸ್ತಕದಲ್ಲಿವೆ” ಎಂದರು.

“ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕ ರಚನೆ ಮಾಡಿದ್ದೇನೆ” ಎಂದು ಅವರು ಹೇಳಿದರು.

ಮುಂದುವರಿದು, “ಕನ್ನಡ ಪಠ್ಯಪುಸ್ತಕ ರಚನೆಗೆ ಒಂದು ಸಮಿತಿ, ಸಮಾಜ ವಿಜ್ಞಾನ ಪಠ್ಯ ರಚನೆಗೆ ಒಂದು ಸಮಿತಿ ಮಾಡಿದ್ದರು. ಒಂದೊಂದು ಸಮಿತಿಯಲ್ಲೂ ಹತ್ತರಿಂದ ಹದಿನೈದು ಜನ ಇದ್ದರು. ಕನ್ನಡ ಪಠ್ಯಪುಸ್ತಕ ಸಮಿತಿಯಲ್ಲಿದ್ದವರು ಎಲ್ಲೆಲ್ಲಿ ಭೇಟಿ ಮಾಡಿದ್ದಾರೆ ಎಂಬುದು ಗೊತ್ತಿಲ್ಲ” ಎಂದರು.

ಇದನ್ನೂ ಓದಿರಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

“ನಾವು ನೀಡಿದ ವರದಿ ಆಧಾರದಲ್ಲಿ ಪಠ್ಯಪುಸ್ತಕ ರಚಿಸಲಾಗಿದೆ. ಕನ್ನಡ ಪಠ್ಯಪುಸ್ತಕ ಸಮಿತಿ ಸದಸ್ಯರು ನೀಡಿದ ಸಲಹೆಗಳನ್ನೇ ಜಾರಿ ಮಾಡಿದ್ದಾರೆ. ಅಧ್ಯಕ್ಷರು ವೈಯಕ್ತಿಕವಾಗಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲರೂ ಸಹಿ ಮಾಡಿರುತ್ತೇವೆ. ಎರಡು ಮೂರು ತಪ್ಪುಗಳಾಗಿವೆಯಷ್ಟೇ. ಇದನ್ನೇ ದೊಡ್ಡದ್ದಾಗಿ ಬಿಂಬಿಸುತ್ತಿದ್ದಾರೆ” ಎಂದರು.

ಸತ್ಯಪ್ರಕಾಶ್ ಅವರ ಹೇಳಿಕೆಗಳು ಗೊಂದಲಕಾರಿಯಾಗಿದ್ದವು.

ನಾನುಗೌರಿ: ‘ಸಮಾಜ ವಿಜ್ಞಾನ’ ಪಠ್ಯಪುಸ್ತಕದಲ್ಲಿ ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನು ಕಿತ್ತು ಹಾಕಿದ್ದೀರಲ್ಲ?

ಎನ್.ಸತ್ಯಪ್ರಕಾಶ್‌: ಇಲ್ಲ. ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಈ ತಪ್ಪಾಗಿಲ್ಲ. ಅದು ಕನ್ನಡ ಪಠ್ಯಪುಸ್ತಕದಲ್ಲಿ ಆಗಿರುವ ತಪ್ಪಷ್ಟೇ.

ನಾನುಗೌರಿ: 9ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಈ ತಪ್ಪಾಗಿದೆ. ಈ ಕುರಿತು ನಾವೇ ವರದಿ ಮಾಡಿದ್ದೇವೆ.

ಸತ್ಯಪ್ರಕಾಶ್‌: ಓಹ್, ಒಂಬತ್ತನೇ ತರಗತಿಯದ್ದಾ?

ನಾನುಗೌರಿ: ಇಷ್ಟೇ ಅಲ್ಲ. ಸಾಕಷ್ಟು ಬದಲಾವಣೆಗಳನ್ನು ಮಾಡಿದ್ದೀರಿ.

ಸತ್ಯಪ್ರಕಾಶ್: ಸಾಕಷ್ಟು ಎಂಬ ಪದ ಉಪಯೋಗಿಸಬೇಡಿ. ಯಾವುದೆಂದು ಹೇಳಿ.

ನಾನುಗೌರಿ: ‘ಸಿಂಧೂ ಬಯಲಿನ ನಾಗರಿಕತೆ’ ಎಂಬುದನ್ನು ‘ಸಿಂಧೂ ಸರಸ್ವತಿ ನಾಗರಿಕತೆ’ ಎಂದು ಮಾಡಿದ್ದೀರಿ. ನಾವು ಇಲ್ಲಿಯವರೆಗೂ ಇದನ್ನು ಓದಿಯೇ ಇರಲಿಲ್ಲ.

ಸತ್ಯಪ್ರಕಾಶ್‌: ಹಾಗೇನಿಲ್ಲ, ಹೀಗೆ ಬದಲಾವಣೆ ಆಗಬಾರದೆಂದೇನೂ ಇಲ್ಲ. ‘ಸಿಂಧೂ ಸರಸ್ವತಿ ನಾಗರಿಕತೆ’ ಎಂದರೆ- ಭಾರತೀಯ ಇತಿಹಾಸ, ದ್ರಾವಿಡ ಸಂಸ್ಕೃತಿ ಎಲ್ಲವೂ ಆಗುತ್ತದೆ. ಇಂಗ್ಲಿಷ್‌ನವರು ಬರೆದದ್ದು ಇಟ್ಟುಕೊಳ್ಳಬೇಕಾ?

ನಾನುಗೌರಿ: ಇಷ್ಟೇ ಅಲ್ಲ. ಸಮಾಜ ವಿಜ್ಞಾನ ಪಠ್ಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆ. ಕನಕದಾಸ, ಪುರಂದರದಾಸ, ನಾರಾಯಣಗುರು- ಈ ಎಲ್ಲ ಮಹನೀಯರ ಪಠ್ಯಗಳನ್ನು ಕೈಬಿಡಲಾಗಿದೆ. ಇದಕ್ಕೆ ಕಾರಣವೇನು?

ಸತ್ಯಪ್ರಕಾಶ್‌: ಯಾವಾಗಲಾದರೂ ಬನ್ನಿ ಮಾತನಾಡೋಣ.

ನಾನುಗೌರಿ: ಪ್ರತಿಭಟನೆಗಳು ನಡೆದಿವೆ. ಪಠ್ಯಪುಸ್ತಕಗಳ ಅಧ್ವಾನಗಳ ಕುರಿತು ಚರ್ಚೆಯಾಗುತ್ತಿದೆ. ನಿಮ್ಮನ್ನು ಪ್ರಶ್ನಿಸಿದಾಗಲೆಲ್ಲ ಹೀಗೆಯೇ ಉತ್ತರಿಸುತ್ತೀರಿ. ಜನರಿಗೆ ಸ್ಪಷ್ಟನೆ ಸಿಗುವುದು ಯಾವಾಗ?

ಇದನ್ನೂ ಓದಿರಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಸತ್ಯಪ್ರಕಾಶ್‌: ಸಮಿತಿ ಅಧ್ಯಕ್ಷರಿದ್ದಾರೆ. ವಿವಾದದ ಕುರಿತು ಪ್ರತಿಕ್ರಿಯೆ ನೀಡಲು ಎಲ್ಲರಿಗೂ ಅನುಮತಿ ನೀಡಿಲ್ಲ.

ನಾನುಗೌರಿ: ಪ್ರೊ.ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿಯಲ್ಲಿದ್ದವರೆಲ್ಲರೂ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಚಕ್ರತೀರ್ಥ ನೇತೃತ್ವದ ಸಮಿತಿಯವರ್‍ಯಾಕೆ ಮಾತನಾಡುತ್ತಿಲ್ಲವಲ್ಲ?

ಸತ್ಯಪ್ರಕಾಶ್‌: ಬರಗೂರರ ನೇತೃತ್ವದಲ್ಲಿ ಪಠ್ಯ ಪರಿಷ್ಕರಣೆಯಾದಾಗಲೂ ವಿವಾದವಾಗಿತ್ತು. ಹೊರಗೆ ಬರಲಿಲ್ಲವಷ್ಟೇ. ಈಗ ಎಲ್ಲರೂ ಮಾತನಾಡುತ್ತಿದ್ದಾರೆ. ನಾವು ಎಲ್ಲ ವರದಿಯನ್ನು ಸರ್ಕಾರಕ್ಕೆ ಕೊಟ್ಟಿದ್ದೇವೆ.

ಸತ್ಯಪ್ರಕಾಶ್ ಅವರು ತಮ್ಮ ಪ್ರತಿಕ್ರಿಯೆಯನ್ನು ಮೊಟುಕುಗೊಳಿಸಿದರು.

ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿದ್ದ ಮಿಥಿಕ್ ಸೊಸೈಟಿಯ ಸಂಶೋಧಕ ವಿಠಲ್ ಪೋತೇದಾರ್‌‌ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

ನಾನುಗೌರಿ: ನಿಮ್ಮ ಅಭಿಪ್ರಾಯಕ್ಕೆ ವಿರುದ್ಧವಾಗಿ ಪಠ್ಯ ರಚನೆಯಾಗಿದೆಯೇ?

ವಿಠಲ್: ಅದಕ್ಕೂ ನಮಗೂ ಸಂಬಂಧವಿಲ್ಲ. ಸಮಿತಿ ವಿಸರ್ಜನೆಯಾಗಿದೆ.

ನಾನುಗೌರಿ: ನಿಮ್ಮ ಸಮಿತಿಯಲ್ಲಿ ಈ ರೀತಿಯ ಗೊಂದಲ ಉಂಟಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಕೇಳುತ್ತಿದ್ದೇವೆ.

ವಿಠಲ್‌: ನಾನು ಆ ಸಮಿತಿಯಲ್ಲಿ ಇರಲಿಲ್ಲ. ಅದಕ್ಕೂ ನನಗೂ ಸಂಬಂಧವಿಲ್ಲ.

ನಾನುಗೌರಿ: ಸಮಿತಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಲ್ಲ?

ವಿಠಲ್‌: ಈಗ ಬಂದಿರುವ ಇದರೊಳಗೆ… ಸಮಿತಿ… (ಮಾತು ಅಸ್ಪಷ್ಟವಾಗಿತ್ತು)

ನಾನುಗೌರಿ: ನೀವು ಪಠ್ಯಪುಸ್ತಕ ಸಮಿತಿಯಲ್ಲೇ ಇರಲಿಲ್ಲವೇ?

ವಿಠಲ್: ನಾವು ವರದಿ ಕೊಟ್ಟಾಯಿತು. ವಿಸರ್ಜನೆಯೂ ಆಯಿತು.

ನಾನುಗೌರಿ: ನಿಜ. ಆದರೆ ನಿಮ್ಮ ಪಠ್ಯಪುಸ್ತಕ ವಿವಾದ ಇನ್ನೂ ಜೀವಂತವಾಗಿದೆ. ಅದೇ ಪಠ್ಯವನ್ನು ಮಕ್ಕಳಿಗೆ ಬೋಧಿಸಲು ಹೊರಟಿದ್ದಾರೆ.

ವಿಠಲ್: ನಾವು ವೃತ್ತಿಪರರು. ಪಠ್ಯ ಪುಸ್ತಕ ರಚನೆ ಮಾಡಿ ಸರ್ಕಾರಕ್ಕೆ ಕೊಟ್ಟಿರುತ್ತೇವಷ್ಟೇ.

ನಾನುಗೌರಿ: ಈಗ ಬಂದಿರುವ ಪ್ರಶ್ನೆ ಇಷ್ಟೇ. ಕೆಲವು ಪಠ್ಯಗಳನ್ನು ಮುಂದುವರಿಸಬಹುದು ಎಂದು ಸದಸ್ಯರು ಹೇಳಿದ್ದರು. ಆದರೆ ಅದನ್ನು ಸಮಿತಿಯ ಅಧ್ಯಕ್ಷರು ಕಡೆಗಣಿಸಿದ್ದಾರೆಂದು ತಿಳಿದುಬಂದಿದೆ.

ವಿಠಲ್: ನಾವು ಏನು ಹೇಳಲು ಬರುವುದಿಲ್ಲ. ಇದು ಸರ್ಕಾರ ಮತ್ತು ಸಚಿವರು ತೆಗೆದುಕೊಳ್ಳುವ ನಿರ್ಧಾರವಷ್ಟೇ. ವರದಿ ಕೊಟ್ಟಿದ್ದೀವಿ. ಅದನ್ನು ಸ್ವೀಕರಿಸುವುದು ಅಥವಾ ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು.

ನಾನುಗೌರಿ: ಸರ್ಕಾರಕ್ಕೆ ಸಲ್ಲಿಸಿದ ವರದಿಯ ಕುರಿತು ಹೇಳುತ್ತಿಲ್ಲ. ನೀವು ಸಮಿತಿಯ ಅಧ್ಯಕ್ಷರಿಗೆ ನೀಡಿದ ಅಭಿಪ್ರಾಯಗಳನ್ನು ಅಧ್ಯಕ್ಷರು ಕಡೆಗಣಿಸಿದ್ದಾರೆಂದು ವರದಿಯಾಗಿದೆ. ಈ  ಕುರಿತು ಕೇಳುತ್ತಿದ್ದೇವೆ.

ಇದನ್ನೂ ಓದಿರಿ: ಸಂವಿಧಾನ ಒಬ್ಬರೇ ಬರೆದಿದ್ದು ಎಂದು ಹೇಗೆ ಹೇಳುತ್ತೀರಿ?: ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದ ಕೈಬಿಟ್ಟಿದ್ದಕ್ಕೆ ಪಠ್ಯ ಪರಿಶೀಲನೆ ಸಮಿತಿ ಸದಸ್ಯನ ಸಮರ್ಥನೆ

ವಿಠಲ್‌: ನಾವು ಕೊಟ್ಟಿದ್ದಲ್ಲ. ಬೇರೆ ಸಮಿತಿ ಕೊಟ್ಟಿರುವ ವರದಿ ಅದು.

ನಾನುಗೌರಿ: ಎಷ್ಟು ಸಮಿತಿ ಮಾಡಿದ್ದಿರಿ?

ವಿಠಲ್‌: ಅದನ್ನು ನಮಗೆ ಗೊತ್ತಿಲ್ಲ. ಕರ್ನಾಟಕ ಪಠ್ಯಪುಸ್ತಕ ಸಂಘದ (ಕೆಟಿಬಿಎಸ್) ಅಧಿಕಾರಿಗಳನ್ನು ಕೇಳಿದರೆ ಮಾಹಿತಿ ಸಿಗುತ್ತದೆ.

(ಕೆಟಿಬಿಎಸ್‌ ನಿರ್ದೇಶಕರ ಅಭಿಪ್ರಾಯಕ್ಕೆ ಸಂಪರ್ಕಿಸಲಾಗಿದೆ. ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು)

ಪ್ರತಿಕ್ರಿಯೆ ನೀಡಲು ನಿರಾಕರಣೆ

ಸಮಿತಿಯ ಮತ್ತೊಬ್ಬ ಸದಸ್ಯರಾದ ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟ ವಿವೇಕಾನಂದ ಗಿರಿಜನ ಪ್ರೌಢಶಾಲೆಯ ಬಿ.ಜಿ.ವಾಸುಕಿ ಅವರನ್ನು ಸಂಪರ್ಕಿಸಿದಾಗ, “ಈಗ ಸಮಿತಿ ವಿಸರ್ಜನೆಯಾಗಿದೆ. ನಾವು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಹೇಳಿದರು.‘

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...