Homeಕರ್ನಾಟಕಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

- Advertisement -
- Advertisement -

ಪಠ್ಯಪುಸ್ತಕ ಪರಿಶೀಲನೆ ಹಾಗೂ ಪರಿಷ್ಕರಣೆ ವೇಳೆ ರೋಹಿತ್‌ ಚಕ್ರತೀರ್ಥ ಅವರು ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಪಠ್ಯಗಳನ್ನು ರೂಪಿಸಿದ್ದಾರೆಂಬ ಸಂಗತಿ ಹೊರಬಿದ್ದಿದೆ.

ರೋಹಿತ್‌ ಚಕ್ರತೀರ್ಥರ ಸಮಿತಿಯಲ್ಲಿನ ಸದಸ್ಯರನ್ನು ಸಂಪರ್ಕಿಸಿ ಈ ಕುರಿತು ಸ್ಪಷ್ಟನೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸುತ್ತಿದ್ದು, ಕೆಲವು ಸದಸ್ಯರು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಪ್ರತಿಕ್ರಿಯೆ ನೀಡಿದವರು ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ವಿವಿಎಸ್ ಶಾಲೆ ನಿವೃತ್ತ ಮುಖ್ಯೋಪಾಧ್ಯಾಯರಾದ ಡಾ.ಎನ್‌.ಸತ್ಯಪ್ರಕಾಶ್‌ ಸಮಿತಿ ಸದಸ್ಯರಾಗಿದ್ದರು. ಈಗ ಉಂಟಾಗಿರುವ ವಿವಾದದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, “ನಾನು ಸಮಾಜ ವಿಜ್ಞಾನ ಪಠ್ಯಪುಸ್ತಕ ರಚನೆಯಲ್ಲಿದ್ದೆ. ಈಗ ಆಗಿರುವ ತಪ್ಪುಗಳು ಕನ್ನಡ ಪಠ್ಯಪುಸ್ತಕದಲ್ಲಿವೆ” ಎಂದರು.

“ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕ ರಚನೆ ಮಾಡಿದ್ದೇನೆ” ಎಂದು ಅವರು ಹೇಳಿದರು.

ಮುಂದುವರಿದು, “ಕನ್ನಡ ಪಠ್ಯಪುಸ್ತಕ ರಚನೆಗೆ ಒಂದು ಸಮಿತಿ, ಸಮಾಜ ವಿಜ್ಞಾನ ಪಠ್ಯ ರಚನೆಗೆ ಒಂದು ಸಮಿತಿ ಮಾಡಿದ್ದರು. ಒಂದೊಂದು ಸಮಿತಿಯಲ್ಲೂ ಹತ್ತರಿಂದ ಹದಿನೈದು ಜನ ಇದ್ದರು. ಕನ್ನಡ ಪಠ್ಯಪುಸ್ತಕ ಸಮಿತಿಯಲ್ಲಿದ್ದವರು ಎಲ್ಲೆಲ್ಲಿ ಭೇಟಿ ಮಾಡಿದ್ದಾರೆ ಎಂಬುದು ಗೊತ್ತಿಲ್ಲ” ಎಂದರು.

ಇದನ್ನೂ ಓದಿರಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

“ನಾವು ನೀಡಿದ ವರದಿ ಆಧಾರದಲ್ಲಿ ಪಠ್ಯಪುಸ್ತಕ ರಚಿಸಲಾಗಿದೆ. ಕನ್ನಡ ಪಠ್ಯಪುಸ್ತಕ ಸಮಿತಿ ಸದಸ್ಯರು ನೀಡಿದ ಸಲಹೆಗಳನ್ನೇ ಜಾರಿ ಮಾಡಿದ್ದಾರೆ. ಅಧ್ಯಕ್ಷರು ವೈಯಕ್ತಿಕವಾಗಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲರೂ ಸಹಿ ಮಾಡಿರುತ್ತೇವೆ. ಎರಡು ಮೂರು ತಪ್ಪುಗಳಾಗಿವೆಯಷ್ಟೇ. ಇದನ್ನೇ ದೊಡ್ಡದ್ದಾಗಿ ಬಿಂಬಿಸುತ್ತಿದ್ದಾರೆ” ಎಂದರು.

ಸತ್ಯಪ್ರಕಾಶ್ ಅವರ ಹೇಳಿಕೆಗಳು ಗೊಂದಲಕಾರಿಯಾಗಿದ್ದವು.

ನಾನುಗೌರಿ: ‘ಸಮಾಜ ವಿಜ್ಞಾನ’ ಪಠ್ಯಪುಸ್ತಕದಲ್ಲಿ ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನು ಕಿತ್ತು ಹಾಕಿದ್ದೀರಲ್ಲ?

ಎನ್.ಸತ್ಯಪ್ರಕಾಶ್‌: ಇಲ್ಲ. ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಈ ತಪ್ಪಾಗಿಲ್ಲ. ಅದು ಕನ್ನಡ ಪಠ್ಯಪುಸ್ತಕದಲ್ಲಿ ಆಗಿರುವ ತಪ್ಪಷ್ಟೇ.

ನಾನುಗೌರಿ: 9ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಈ ತಪ್ಪಾಗಿದೆ. ಈ ಕುರಿತು ನಾವೇ ವರದಿ ಮಾಡಿದ್ದೇವೆ.

ಸತ್ಯಪ್ರಕಾಶ್‌: ಓಹ್, ಒಂಬತ್ತನೇ ತರಗತಿಯದ್ದಾ?

ನಾನುಗೌರಿ: ಇಷ್ಟೇ ಅಲ್ಲ. ಸಾಕಷ್ಟು ಬದಲಾವಣೆಗಳನ್ನು ಮಾಡಿದ್ದೀರಿ.

ಸತ್ಯಪ್ರಕಾಶ್: ಸಾಕಷ್ಟು ಎಂಬ ಪದ ಉಪಯೋಗಿಸಬೇಡಿ. ಯಾವುದೆಂದು ಹೇಳಿ.

ನಾನುಗೌರಿ: ‘ಸಿಂಧೂ ಬಯಲಿನ ನಾಗರಿಕತೆ’ ಎಂಬುದನ್ನು ‘ಸಿಂಧೂ ಸರಸ್ವತಿ ನಾಗರಿಕತೆ’ ಎಂದು ಮಾಡಿದ್ದೀರಿ. ನಾವು ಇಲ್ಲಿಯವರೆಗೂ ಇದನ್ನು ಓದಿಯೇ ಇರಲಿಲ್ಲ.

ಸತ್ಯಪ್ರಕಾಶ್‌: ಹಾಗೇನಿಲ್ಲ, ಹೀಗೆ ಬದಲಾವಣೆ ಆಗಬಾರದೆಂದೇನೂ ಇಲ್ಲ. ‘ಸಿಂಧೂ ಸರಸ್ವತಿ ನಾಗರಿಕತೆ’ ಎಂದರೆ- ಭಾರತೀಯ ಇತಿಹಾಸ, ದ್ರಾವಿಡ ಸಂಸ್ಕೃತಿ ಎಲ್ಲವೂ ಆಗುತ್ತದೆ. ಇಂಗ್ಲಿಷ್‌ನವರು ಬರೆದದ್ದು ಇಟ್ಟುಕೊಳ್ಳಬೇಕಾ?

ನಾನುಗೌರಿ: ಇಷ್ಟೇ ಅಲ್ಲ. ಸಮಾಜ ವಿಜ್ಞಾನ ಪಠ್ಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆ. ಕನಕದಾಸ, ಪುರಂದರದಾಸ, ನಾರಾಯಣಗುರು- ಈ ಎಲ್ಲ ಮಹನೀಯರ ಪಠ್ಯಗಳನ್ನು ಕೈಬಿಡಲಾಗಿದೆ. ಇದಕ್ಕೆ ಕಾರಣವೇನು?

ಸತ್ಯಪ್ರಕಾಶ್‌: ಯಾವಾಗಲಾದರೂ ಬನ್ನಿ ಮಾತನಾಡೋಣ.

ನಾನುಗೌರಿ: ಪ್ರತಿಭಟನೆಗಳು ನಡೆದಿವೆ. ಪಠ್ಯಪುಸ್ತಕಗಳ ಅಧ್ವಾನಗಳ ಕುರಿತು ಚರ್ಚೆಯಾಗುತ್ತಿದೆ. ನಿಮ್ಮನ್ನು ಪ್ರಶ್ನಿಸಿದಾಗಲೆಲ್ಲ ಹೀಗೆಯೇ ಉತ್ತರಿಸುತ್ತೀರಿ. ಜನರಿಗೆ ಸ್ಪಷ್ಟನೆ ಸಿಗುವುದು ಯಾವಾಗ?

ಇದನ್ನೂ ಓದಿರಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಸತ್ಯಪ್ರಕಾಶ್‌: ಸಮಿತಿ ಅಧ್ಯಕ್ಷರಿದ್ದಾರೆ. ವಿವಾದದ ಕುರಿತು ಪ್ರತಿಕ್ರಿಯೆ ನೀಡಲು ಎಲ್ಲರಿಗೂ ಅನುಮತಿ ನೀಡಿಲ್ಲ.

ನಾನುಗೌರಿ: ಪ್ರೊ.ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿಯಲ್ಲಿದ್ದವರೆಲ್ಲರೂ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಚಕ್ರತೀರ್ಥ ನೇತೃತ್ವದ ಸಮಿತಿಯವರ್‍ಯಾಕೆ ಮಾತನಾಡುತ್ತಿಲ್ಲವಲ್ಲ?

ಸತ್ಯಪ್ರಕಾಶ್‌: ಬರಗೂರರ ನೇತೃತ್ವದಲ್ಲಿ ಪಠ್ಯ ಪರಿಷ್ಕರಣೆಯಾದಾಗಲೂ ವಿವಾದವಾಗಿತ್ತು. ಹೊರಗೆ ಬರಲಿಲ್ಲವಷ್ಟೇ. ಈಗ ಎಲ್ಲರೂ ಮಾತನಾಡುತ್ತಿದ್ದಾರೆ. ನಾವು ಎಲ್ಲ ವರದಿಯನ್ನು ಸರ್ಕಾರಕ್ಕೆ ಕೊಟ್ಟಿದ್ದೇವೆ.

ಸತ್ಯಪ್ರಕಾಶ್ ಅವರು ತಮ್ಮ ಪ್ರತಿಕ್ರಿಯೆಯನ್ನು ಮೊಟುಕುಗೊಳಿಸಿದರು.

ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿದ್ದ ಮಿಥಿಕ್ ಸೊಸೈಟಿಯ ಸಂಶೋಧಕ ವಿಠಲ್ ಪೋತೇದಾರ್‌‌ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

ನಾನುಗೌರಿ: ನಿಮ್ಮ ಅಭಿಪ್ರಾಯಕ್ಕೆ ವಿರುದ್ಧವಾಗಿ ಪಠ್ಯ ರಚನೆಯಾಗಿದೆಯೇ?

ವಿಠಲ್: ಅದಕ್ಕೂ ನಮಗೂ ಸಂಬಂಧವಿಲ್ಲ. ಸಮಿತಿ ವಿಸರ್ಜನೆಯಾಗಿದೆ.

ನಾನುಗೌರಿ: ನಿಮ್ಮ ಸಮಿತಿಯಲ್ಲಿ ಈ ರೀತಿಯ ಗೊಂದಲ ಉಂಟಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಕೇಳುತ್ತಿದ್ದೇವೆ.

ವಿಠಲ್‌: ನಾನು ಆ ಸಮಿತಿಯಲ್ಲಿ ಇರಲಿಲ್ಲ. ಅದಕ್ಕೂ ನನಗೂ ಸಂಬಂಧವಿಲ್ಲ.

ನಾನುಗೌರಿ: ಸಮಿತಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಲ್ಲ?

ವಿಠಲ್‌: ಈಗ ಬಂದಿರುವ ಇದರೊಳಗೆ… ಸಮಿತಿ… (ಮಾತು ಅಸ್ಪಷ್ಟವಾಗಿತ್ತು)

ನಾನುಗೌರಿ: ನೀವು ಪಠ್ಯಪುಸ್ತಕ ಸಮಿತಿಯಲ್ಲೇ ಇರಲಿಲ್ಲವೇ?

ವಿಠಲ್: ನಾವು ವರದಿ ಕೊಟ್ಟಾಯಿತು. ವಿಸರ್ಜನೆಯೂ ಆಯಿತು.

ನಾನುಗೌರಿ: ನಿಜ. ಆದರೆ ನಿಮ್ಮ ಪಠ್ಯಪುಸ್ತಕ ವಿವಾದ ಇನ್ನೂ ಜೀವಂತವಾಗಿದೆ. ಅದೇ ಪಠ್ಯವನ್ನು ಮಕ್ಕಳಿಗೆ ಬೋಧಿಸಲು ಹೊರಟಿದ್ದಾರೆ.

ವಿಠಲ್: ನಾವು ವೃತ್ತಿಪರರು. ಪಠ್ಯ ಪುಸ್ತಕ ರಚನೆ ಮಾಡಿ ಸರ್ಕಾರಕ್ಕೆ ಕೊಟ್ಟಿರುತ್ತೇವಷ್ಟೇ.

ನಾನುಗೌರಿ: ಈಗ ಬಂದಿರುವ ಪ್ರಶ್ನೆ ಇಷ್ಟೇ. ಕೆಲವು ಪಠ್ಯಗಳನ್ನು ಮುಂದುವರಿಸಬಹುದು ಎಂದು ಸದಸ್ಯರು ಹೇಳಿದ್ದರು. ಆದರೆ ಅದನ್ನು ಸಮಿತಿಯ ಅಧ್ಯಕ್ಷರು ಕಡೆಗಣಿಸಿದ್ದಾರೆಂದು ತಿಳಿದುಬಂದಿದೆ.

ವಿಠಲ್: ನಾವು ಏನು ಹೇಳಲು ಬರುವುದಿಲ್ಲ. ಇದು ಸರ್ಕಾರ ಮತ್ತು ಸಚಿವರು ತೆಗೆದುಕೊಳ್ಳುವ ನಿರ್ಧಾರವಷ್ಟೇ. ವರದಿ ಕೊಟ್ಟಿದ್ದೀವಿ. ಅದನ್ನು ಸ್ವೀಕರಿಸುವುದು ಅಥವಾ ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು.

ನಾನುಗೌರಿ: ಸರ್ಕಾರಕ್ಕೆ ಸಲ್ಲಿಸಿದ ವರದಿಯ ಕುರಿತು ಹೇಳುತ್ತಿಲ್ಲ. ನೀವು ಸಮಿತಿಯ ಅಧ್ಯಕ್ಷರಿಗೆ ನೀಡಿದ ಅಭಿಪ್ರಾಯಗಳನ್ನು ಅಧ್ಯಕ್ಷರು ಕಡೆಗಣಿಸಿದ್ದಾರೆಂದು ವರದಿಯಾಗಿದೆ. ಈ  ಕುರಿತು ಕೇಳುತ್ತಿದ್ದೇವೆ.

ಇದನ್ನೂ ಓದಿರಿ: ಸಂವಿಧಾನ ಒಬ್ಬರೇ ಬರೆದಿದ್ದು ಎಂದು ಹೇಗೆ ಹೇಳುತ್ತೀರಿ?: ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದ ಕೈಬಿಟ್ಟಿದ್ದಕ್ಕೆ ಪಠ್ಯ ಪರಿಶೀಲನೆ ಸಮಿತಿ ಸದಸ್ಯನ ಸಮರ್ಥನೆ

ವಿಠಲ್‌: ನಾವು ಕೊಟ್ಟಿದ್ದಲ್ಲ. ಬೇರೆ ಸಮಿತಿ ಕೊಟ್ಟಿರುವ ವರದಿ ಅದು.

ನಾನುಗೌರಿ: ಎಷ್ಟು ಸಮಿತಿ ಮಾಡಿದ್ದಿರಿ?

ವಿಠಲ್‌: ಅದನ್ನು ನಮಗೆ ಗೊತ್ತಿಲ್ಲ. ಕರ್ನಾಟಕ ಪಠ್ಯಪುಸ್ತಕ ಸಂಘದ (ಕೆಟಿಬಿಎಸ್) ಅಧಿಕಾರಿಗಳನ್ನು ಕೇಳಿದರೆ ಮಾಹಿತಿ ಸಿಗುತ್ತದೆ.

(ಕೆಟಿಬಿಎಸ್‌ ನಿರ್ದೇಶಕರ ಅಭಿಪ್ರಾಯಕ್ಕೆ ಸಂಪರ್ಕಿಸಲಾಗಿದೆ. ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು)

ಪ್ರತಿಕ್ರಿಯೆ ನೀಡಲು ನಿರಾಕರಣೆ

ಸಮಿತಿಯ ಮತ್ತೊಬ್ಬ ಸದಸ್ಯರಾದ ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟ ವಿವೇಕಾನಂದ ಗಿರಿಜನ ಪ್ರೌಢಶಾಲೆಯ ಬಿ.ಜಿ.ವಾಸುಕಿ ಅವರನ್ನು ಸಂಪರ್ಕಿಸಿದಾಗ, “ಈಗ ಸಮಿತಿ ವಿಸರ್ಜನೆಯಾಗಿದೆ. ನಾವು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಹೇಳಿದರು.‘

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...