Homeಕರ್ನಾಟಕಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

- Advertisement -
- Advertisement -

ಪಠ್ಯಪುಸ್ತಕ ಪರಿಶೀಲನೆ ಹಾಗೂ ಪರಿಷ್ಕರಣೆ ವೇಳೆ ರೋಹಿತ್‌ ಚಕ್ರತೀರ್ಥ ಅವರು ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಪಠ್ಯಗಳನ್ನು ರೂಪಿಸಿದ್ದಾರೆಂಬ ಸಂಗತಿ ಹೊರಬಿದ್ದಿದೆ.

ರೋಹಿತ್‌ ಚಕ್ರತೀರ್ಥರ ಸಮಿತಿಯಲ್ಲಿನ ಸದಸ್ಯರನ್ನು ಸಂಪರ್ಕಿಸಿ ಈ ಕುರಿತು ಸ್ಪಷ್ಟನೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸುತ್ತಿದ್ದು, ಕೆಲವು ಸದಸ್ಯರು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಪ್ರತಿಕ್ರಿಯೆ ನೀಡಿದವರು ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ವಿವಿಎಸ್ ಶಾಲೆ ನಿವೃತ್ತ ಮುಖ್ಯೋಪಾಧ್ಯಾಯರಾದ ಡಾ.ಎನ್‌.ಸತ್ಯಪ್ರಕಾಶ್‌ ಸಮಿತಿ ಸದಸ್ಯರಾಗಿದ್ದರು. ಈಗ ಉಂಟಾಗಿರುವ ವಿವಾದದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, “ನಾನು ಸಮಾಜ ವಿಜ್ಞಾನ ಪಠ್ಯಪುಸ್ತಕ ರಚನೆಯಲ್ಲಿದ್ದೆ. ಈಗ ಆಗಿರುವ ತಪ್ಪುಗಳು ಕನ್ನಡ ಪಠ್ಯಪುಸ್ತಕದಲ್ಲಿವೆ” ಎಂದರು.

“ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕ ರಚನೆ ಮಾಡಿದ್ದೇನೆ” ಎಂದು ಅವರು ಹೇಳಿದರು.

ಮುಂದುವರಿದು, “ಕನ್ನಡ ಪಠ್ಯಪುಸ್ತಕ ರಚನೆಗೆ ಒಂದು ಸಮಿತಿ, ಸಮಾಜ ವಿಜ್ಞಾನ ಪಠ್ಯ ರಚನೆಗೆ ಒಂದು ಸಮಿತಿ ಮಾಡಿದ್ದರು. ಒಂದೊಂದು ಸಮಿತಿಯಲ್ಲೂ ಹತ್ತರಿಂದ ಹದಿನೈದು ಜನ ಇದ್ದರು. ಕನ್ನಡ ಪಠ್ಯಪುಸ್ತಕ ಸಮಿತಿಯಲ್ಲಿದ್ದವರು ಎಲ್ಲೆಲ್ಲಿ ಭೇಟಿ ಮಾಡಿದ್ದಾರೆ ಎಂಬುದು ಗೊತ್ತಿಲ್ಲ” ಎಂದರು.

ಇದನ್ನೂ ಓದಿರಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

“ನಾವು ನೀಡಿದ ವರದಿ ಆಧಾರದಲ್ಲಿ ಪಠ್ಯಪುಸ್ತಕ ರಚಿಸಲಾಗಿದೆ. ಕನ್ನಡ ಪಠ್ಯಪುಸ್ತಕ ಸಮಿತಿ ಸದಸ್ಯರು ನೀಡಿದ ಸಲಹೆಗಳನ್ನೇ ಜಾರಿ ಮಾಡಿದ್ದಾರೆ. ಅಧ್ಯಕ್ಷರು ವೈಯಕ್ತಿಕವಾಗಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲರೂ ಸಹಿ ಮಾಡಿರುತ್ತೇವೆ. ಎರಡು ಮೂರು ತಪ್ಪುಗಳಾಗಿವೆಯಷ್ಟೇ. ಇದನ್ನೇ ದೊಡ್ಡದ್ದಾಗಿ ಬಿಂಬಿಸುತ್ತಿದ್ದಾರೆ” ಎಂದರು.

ಸತ್ಯಪ್ರಕಾಶ್ ಅವರ ಹೇಳಿಕೆಗಳು ಗೊಂದಲಕಾರಿಯಾಗಿದ್ದವು.

ನಾನುಗೌರಿ: ‘ಸಮಾಜ ವಿಜ್ಞಾನ’ ಪಠ್ಯಪುಸ್ತಕದಲ್ಲಿ ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನು ಕಿತ್ತು ಹಾಕಿದ್ದೀರಲ್ಲ?

ಎನ್.ಸತ್ಯಪ್ರಕಾಶ್‌: ಇಲ್ಲ. ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಈ ತಪ್ಪಾಗಿಲ್ಲ. ಅದು ಕನ್ನಡ ಪಠ್ಯಪುಸ್ತಕದಲ್ಲಿ ಆಗಿರುವ ತಪ್ಪಷ್ಟೇ.

ನಾನುಗೌರಿ: 9ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಈ ತಪ್ಪಾಗಿದೆ. ಈ ಕುರಿತು ನಾವೇ ವರದಿ ಮಾಡಿದ್ದೇವೆ.

ಸತ್ಯಪ್ರಕಾಶ್‌: ಓಹ್, ಒಂಬತ್ತನೇ ತರಗತಿಯದ್ದಾ?

ನಾನುಗೌರಿ: ಇಷ್ಟೇ ಅಲ್ಲ. ಸಾಕಷ್ಟು ಬದಲಾವಣೆಗಳನ್ನು ಮಾಡಿದ್ದೀರಿ.

ಸತ್ಯಪ್ರಕಾಶ್: ಸಾಕಷ್ಟು ಎಂಬ ಪದ ಉಪಯೋಗಿಸಬೇಡಿ. ಯಾವುದೆಂದು ಹೇಳಿ.

ನಾನುಗೌರಿ: ‘ಸಿಂಧೂ ಬಯಲಿನ ನಾಗರಿಕತೆ’ ಎಂಬುದನ್ನು ‘ಸಿಂಧೂ ಸರಸ್ವತಿ ನಾಗರಿಕತೆ’ ಎಂದು ಮಾಡಿದ್ದೀರಿ. ನಾವು ಇಲ್ಲಿಯವರೆಗೂ ಇದನ್ನು ಓದಿಯೇ ಇರಲಿಲ್ಲ.

ಸತ್ಯಪ್ರಕಾಶ್‌: ಹಾಗೇನಿಲ್ಲ, ಹೀಗೆ ಬದಲಾವಣೆ ಆಗಬಾರದೆಂದೇನೂ ಇಲ್ಲ. ‘ಸಿಂಧೂ ಸರಸ್ವತಿ ನಾಗರಿಕತೆ’ ಎಂದರೆ- ಭಾರತೀಯ ಇತಿಹಾಸ, ದ್ರಾವಿಡ ಸಂಸ್ಕೃತಿ ಎಲ್ಲವೂ ಆಗುತ್ತದೆ. ಇಂಗ್ಲಿಷ್‌ನವರು ಬರೆದದ್ದು ಇಟ್ಟುಕೊಳ್ಳಬೇಕಾ?

ನಾನುಗೌರಿ: ಇಷ್ಟೇ ಅಲ್ಲ. ಸಮಾಜ ವಿಜ್ಞಾನ ಪಠ್ಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆ. ಕನಕದಾಸ, ಪುರಂದರದಾಸ, ನಾರಾಯಣಗುರು- ಈ ಎಲ್ಲ ಮಹನೀಯರ ಪಠ್ಯಗಳನ್ನು ಕೈಬಿಡಲಾಗಿದೆ. ಇದಕ್ಕೆ ಕಾರಣವೇನು?

ಸತ್ಯಪ್ರಕಾಶ್‌: ಯಾವಾಗಲಾದರೂ ಬನ್ನಿ ಮಾತನಾಡೋಣ.

ನಾನುಗೌರಿ: ಪ್ರತಿಭಟನೆಗಳು ನಡೆದಿವೆ. ಪಠ್ಯಪುಸ್ತಕಗಳ ಅಧ್ವಾನಗಳ ಕುರಿತು ಚರ್ಚೆಯಾಗುತ್ತಿದೆ. ನಿಮ್ಮನ್ನು ಪ್ರಶ್ನಿಸಿದಾಗಲೆಲ್ಲ ಹೀಗೆಯೇ ಉತ್ತರಿಸುತ್ತೀರಿ. ಜನರಿಗೆ ಸ್ಪಷ್ಟನೆ ಸಿಗುವುದು ಯಾವಾಗ?

ಇದನ್ನೂ ಓದಿರಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಸತ್ಯಪ್ರಕಾಶ್‌: ಸಮಿತಿ ಅಧ್ಯಕ್ಷರಿದ್ದಾರೆ. ವಿವಾದದ ಕುರಿತು ಪ್ರತಿಕ್ರಿಯೆ ನೀಡಲು ಎಲ್ಲರಿಗೂ ಅನುಮತಿ ನೀಡಿಲ್ಲ.

ನಾನುಗೌರಿ: ಪ್ರೊ.ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿಯಲ್ಲಿದ್ದವರೆಲ್ಲರೂ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಚಕ್ರತೀರ್ಥ ನೇತೃತ್ವದ ಸಮಿತಿಯವರ್‍ಯಾಕೆ ಮಾತನಾಡುತ್ತಿಲ್ಲವಲ್ಲ?

ಸತ್ಯಪ್ರಕಾಶ್‌: ಬರಗೂರರ ನೇತೃತ್ವದಲ್ಲಿ ಪಠ್ಯ ಪರಿಷ್ಕರಣೆಯಾದಾಗಲೂ ವಿವಾದವಾಗಿತ್ತು. ಹೊರಗೆ ಬರಲಿಲ್ಲವಷ್ಟೇ. ಈಗ ಎಲ್ಲರೂ ಮಾತನಾಡುತ್ತಿದ್ದಾರೆ. ನಾವು ಎಲ್ಲ ವರದಿಯನ್ನು ಸರ್ಕಾರಕ್ಕೆ ಕೊಟ್ಟಿದ್ದೇವೆ.

ಸತ್ಯಪ್ರಕಾಶ್ ಅವರು ತಮ್ಮ ಪ್ರತಿಕ್ರಿಯೆಯನ್ನು ಮೊಟುಕುಗೊಳಿಸಿದರು.

ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿದ್ದ ಮಿಥಿಕ್ ಸೊಸೈಟಿಯ ಸಂಶೋಧಕ ವಿಠಲ್ ಪೋತೇದಾರ್‌‌ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

ನಾನುಗೌರಿ: ನಿಮ್ಮ ಅಭಿಪ್ರಾಯಕ್ಕೆ ವಿರುದ್ಧವಾಗಿ ಪಠ್ಯ ರಚನೆಯಾಗಿದೆಯೇ?

ವಿಠಲ್: ಅದಕ್ಕೂ ನಮಗೂ ಸಂಬಂಧವಿಲ್ಲ. ಸಮಿತಿ ವಿಸರ್ಜನೆಯಾಗಿದೆ.

ನಾನುಗೌರಿ: ನಿಮ್ಮ ಸಮಿತಿಯಲ್ಲಿ ಈ ರೀತಿಯ ಗೊಂದಲ ಉಂಟಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಕೇಳುತ್ತಿದ್ದೇವೆ.

ವಿಠಲ್‌: ನಾನು ಆ ಸಮಿತಿಯಲ್ಲಿ ಇರಲಿಲ್ಲ. ಅದಕ್ಕೂ ನನಗೂ ಸಂಬಂಧವಿಲ್ಲ.

ನಾನುಗೌರಿ: ಸಮಿತಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಲ್ಲ?

ವಿಠಲ್‌: ಈಗ ಬಂದಿರುವ ಇದರೊಳಗೆ… ಸಮಿತಿ… (ಮಾತು ಅಸ್ಪಷ್ಟವಾಗಿತ್ತು)

ನಾನುಗೌರಿ: ನೀವು ಪಠ್ಯಪುಸ್ತಕ ಸಮಿತಿಯಲ್ಲೇ ಇರಲಿಲ್ಲವೇ?

ವಿಠಲ್: ನಾವು ವರದಿ ಕೊಟ್ಟಾಯಿತು. ವಿಸರ್ಜನೆಯೂ ಆಯಿತು.

ನಾನುಗೌರಿ: ನಿಜ. ಆದರೆ ನಿಮ್ಮ ಪಠ್ಯಪುಸ್ತಕ ವಿವಾದ ಇನ್ನೂ ಜೀವಂತವಾಗಿದೆ. ಅದೇ ಪಠ್ಯವನ್ನು ಮಕ್ಕಳಿಗೆ ಬೋಧಿಸಲು ಹೊರಟಿದ್ದಾರೆ.

ವಿಠಲ್: ನಾವು ವೃತ್ತಿಪರರು. ಪಠ್ಯ ಪುಸ್ತಕ ರಚನೆ ಮಾಡಿ ಸರ್ಕಾರಕ್ಕೆ ಕೊಟ್ಟಿರುತ್ತೇವಷ್ಟೇ.

ನಾನುಗೌರಿ: ಈಗ ಬಂದಿರುವ ಪ್ರಶ್ನೆ ಇಷ್ಟೇ. ಕೆಲವು ಪಠ್ಯಗಳನ್ನು ಮುಂದುವರಿಸಬಹುದು ಎಂದು ಸದಸ್ಯರು ಹೇಳಿದ್ದರು. ಆದರೆ ಅದನ್ನು ಸಮಿತಿಯ ಅಧ್ಯಕ್ಷರು ಕಡೆಗಣಿಸಿದ್ದಾರೆಂದು ತಿಳಿದುಬಂದಿದೆ.

ವಿಠಲ್: ನಾವು ಏನು ಹೇಳಲು ಬರುವುದಿಲ್ಲ. ಇದು ಸರ್ಕಾರ ಮತ್ತು ಸಚಿವರು ತೆಗೆದುಕೊಳ್ಳುವ ನಿರ್ಧಾರವಷ್ಟೇ. ವರದಿ ಕೊಟ್ಟಿದ್ದೀವಿ. ಅದನ್ನು ಸ್ವೀಕರಿಸುವುದು ಅಥವಾ ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು.

ನಾನುಗೌರಿ: ಸರ್ಕಾರಕ್ಕೆ ಸಲ್ಲಿಸಿದ ವರದಿಯ ಕುರಿತು ಹೇಳುತ್ತಿಲ್ಲ. ನೀವು ಸಮಿತಿಯ ಅಧ್ಯಕ್ಷರಿಗೆ ನೀಡಿದ ಅಭಿಪ್ರಾಯಗಳನ್ನು ಅಧ್ಯಕ್ಷರು ಕಡೆಗಣಿಸಿದ್ದಾರೆಂದು ವರದಿಯಾಗಿದೆ. ಈ  ಕುರಿತು ಕೇಳುತ್ತಿದ್ದೇವೆ.

ಇದನ್ನೂ ಓದಿರಿ: ಸಂವಿಧಾನ ಒಬ್ಬರೇ ಬರೆದಿದ್ದು ಎಂದು ಹೇಗೆ ಹೇಳುತ್ತೀರಿ?: ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದ ಕೈಬಿಟ್ಟಿದ್ದಕ್ಕೆ ಪಠ್ಯ ಪರಿಶೀಲನೆ ಸಮಿತಿ ಸದಸ್ಯನ ಸಮರ್ಥನೆ

ವಿಠಲ್‌: ನಾವು ಕೊಟ್ಟಿದ್ದಲ್ಲ. ಬೇರೆ ಸಮಿತಿ ಕೊಟ್ಟಿರುವ ವರದಿ ಅದು.

ನಾನುಗೌರಿ: ಎಷ್ಟು ಸಮಿತಿ ಮಾಡಿದ್ದಿರಿ?

ವಿಠಲ್‌: ಅದನ್ನು ನಮಗೆ ಗೊತ್ತಿಲ್ಲ. ಕರ್ನಾಟಕ ಪಠ್ಯಪುಸ್ತಕ ಸಂಘದ (ಕೆಟಿಬಿಎಸ್) ಅಧಿಕಾರಿಗಳನ್ನು ಕೇಳಿದರೆ ಮಾಹಿತಿ ಸಿಗುತ್ತದೆ.

(ಕೆಟಿಬಿಎಸ್‌ ನಿರ್ದೇಶಕರ ಅಭಿಪ್ರಾಯಕ್ಕೆ ಸಂಪರ್ಕಿಸಲಾಗಿದೆ. ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು)

ಪ್ರತಿಕ್ರಿಯೆ ನೀಡಲು ನಿರಾಕರಣೆ

ಸಮಿತಿಯ ಮತ್ತೊಬ್ಬ ಸದಸ್ಯರಾದ ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟ ವಿವೇಕಾನಂದ ಗಿರಿಜನ ಪ್ರೌಢಶಾಲೆಯ ಬಿ.ಜಿ.ವಾಸುಕಿ ಅವರನ್ನು ಸಂಪರ್ಕಿಸಿದಾಗ, “ಈಗ ಸಮಿತಿ ವಿಸರ್ಜನೆಯಾಗಿದೆ. ನಾವು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಹೇಳಿದರು.‘

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...