Homeಕರ್ನಾಟಕಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

- Advertisement -
- Advertisement -

ಪಠ್ಯಪುಸ್ತಕ ಪರಿಶೀಲನೆ ಹಾಗೂ ಪರಿಷ್ಕರಣೆ ವೇಳೆ ರೋಹಿತ್‌ ಚಕ್ರತೀರ್ಥ ಅವರು ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಪಠ್ಯಗಳನ್ನು ರೂಪಿಸಿದ್ದಾರೆಂಬ ಸಂಗತಿ ಹೊರಬಿದ್ದಿದೆ.

ರೋಹಿತ್‌ ಚಕ್ರತೀರ್ಥರ ಸಮಿತಿಯಲ್ಲಿನ ಸದಸ್ಯರನ್ನು ಸಂಪರ್ಕಿಸಿ ಈ ಕುರಿತು ಸ್ಪಷ್ಟನೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸುತ್ತಿದ್ದು, ಕೆಲವು ಸದಸ್ಯರು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಪ್ರತಿಕ್ರಿಯೆ ನೀಡಿದವರು ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ವಿವಿಎಸ್ ಶಾಲೆ ನಿವೃತ್ತ ಮುಖ್ಯೋಪಾಧ್ಯಾಯರಾದ ಡಾ.ಎನ್‌.ಸತ್ಯಪ್ರಕಾಶ್‌ ಸಮಿತಿ ಸದಸ್ಯರಾಗಿದ್ದರು. ಈಗ ಉಂಟಾಗಿರುವ ವಿವಾದದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, “ನಾನು ಸಮಾಜ ವಿಜ್ಞಾನ ಪಠ್ಯಪುಸ್ತಕ ರಚನೆಯಲ್ಲಿದ್ದೆ. ಈಗ ಆಗಿರುವ ತಪ್ಪುಗಳು ಕನ್ನಡ ಪಠ್ಯಪುಸ್ತಕದಲ್ಲಿವೆ” ಎಂದರು.

“ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕ ರಚನೆ ಮಾಡಿದ್ದೇನೆ” ಎಂದು ಅವರು ಹೇಳಿದರು.

ಮುಂದುವರಿದು, “ಕನ್ನಡ ಪಠ್ಯಪುಸ್ತಕ ರಚನೆಗೆ ಒಂದು ಸಮಿತಿ, ಸಮಾಜ ವಿಜ್ಞಾನ ಪಠ್ಯ ರಚನೆಗೆ ಒಂದು ಸಮಿತಿ ಮಾಡಿದ್ದರು. ಒಂದೊಂದು ಸಮಿತಿಯಲ್ಲೂ ಹತ್ತರಿಂದ ಹದಿನೈದು ಜನ ಇದ್ದರು. ಕನ್ನಡ ಪಠ್ಯಪುಸ್ತಕ ಸಮಿತಿಯಲ್ಲಿದ್ದವರು ಎಲ್ಲೆಲ್ಲಿ ಭೇಟಿ ಮಾಡಿದ್ದಾರೆ ಎಂಬುದು ಗೊತ್ತಿಲ್ಲ” ಎಂದರು.

ಇದನ್ನೂ ಓದಿರಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

“ನಾವು ನೀಡಿದ ವರದಿ ಆಧಾರದಲ್ಲಿ ಪಠ್ಯಪುಸ್ತಕ ರಚಿಸಲಾಗಿದೆ. ಕನ್ನಡ ಪಠ್ಯಪುಸ್ತಕ ಸಮಿತಿ ಸದಸ್ಯರು ನೀಡಿದ ಸಲಹೆಗಳನ್ನೇ ಜಾರಿ ಮಾಡಿದ್ದಾರೆ. ಅಧ್ಯಕ್ಷರು ವೈಯಕ್ತಿಕವಾಗಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲರೂ ಸಹಿ ಮಾಡಿರುತ್ತೇವೆ. ಎರಡು ಮೂರು ತಪ್ಪುಗಳಾಗಿವೆಯಷ್ಟೇ. ಇದನ್ನೇ ದೊಡ್ಡದ್ದಾಗಿ ಬಿಂಬಿಸುತ್ತಿದ್ದಾರೆ” ಎಂದರು.

ಸತ್ಯಪ್ರಕಾಶ್ ಅವರ ಹೇಳಿಕೆಗಳು ಗೊಂದಲಕಾರಿಯಾಗಿದ್ದವು.

ನಾನುಗೌರಿ: ‘ಸಮಾಜ ವಿಜ್ಞಾನ’ ಪಠ್ಯಪುಸ್ತಕದಲ್ಲಿ ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನು ಕಿತ್ತು ಹಾಕಿದ್ದೀರಲ್ಲ?

ಎನ್.ಸತ್ಯಪ್ರಕಾಶ್‌: ಇಲ್ಲ. ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಈ ತಪ್ಪಾಗಿಲ್ಲ. ಅದು ಕನ್ನಡ ಪಠ್ಯಪುಸ್ತಕದಲ್ಲಿ ಆಗಿರುವ ತಪ್ಪಷ್ಟೇ.

ನಾನುಗೌರಿ: 9ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಈ ತಪ್ಪಾಗಿದೆ. ಈ ಕುರಿತು ನಾವೇ ವರದಿ ಮಾಡಿದ್ದೇವೆ.

ಸತ್ಯಪ್ರಕಾಶ್‌: ಓಹ್, ಒಂಬತ್ತನೇ ತರಗತಿಯದ್ದಾ?

ನಾನುಗೌರಿ: ಇಷ್ಟೇ ಅಲ್ಲ. ಸಾಕಷ್ಟು ಬದಲಾವಣೆಗಳನ್ನು ಮಾಡಿದ್ದೀರಿ.

ಸತ್ಯಪ್ರಕಾಶ್: ಸಾಕಷ್ಟು ಎಂಬ ಪದ ಉಪಯೋಗಿಸಬೇಡಿ. ಯಾವುದೆಂದು ಹೇಳಿ.

ನಾನುಗೌರಿ: ‘ಸಿಂಧೂ ಬಯಲಿನ ನಾಗರಿಕತೆ’ ಎಂಬುದನ್ನು ‘ಸಿಂಧೂ ಸರಸ್ವತಿ ನಾಗರಿಕತೆ’ ಎಂದು ಮಾಡಿದ್ದೀರಿ. ನಾವು ಇಲ್ಲಿಯವರೆಗೂ ಇದನ್ನು ಓದಿಯೇ ಇರಲಿಲ್ಲ.

ಸತ್ಯಪ್ರಕಾಶ್‌: ಹಾಗೇನಿಲ್ಲ, ಹೀಗೆ ಬದಲಾವಣೆ ಆಗಬಾರದೆಂದೇನೂ ಇಲ್ಲ. ‘ಸಿಂಧೂ ಸರಸ್ವತಿ ನಾಗರಿಕತೆ’ ಎಂದರೆ- ಭಾರತೀಯ ಇತಿಹಾಸ, ದ್ರಾವಿಡ ಸಂಸ್ಕೃತಿ ಎಲ್ಲವೂ ಆಗುತ್ತದೆ. ಇಂಗ್ಲಿಷ್‌ನವರು ಬರೆದದ್ದು ಇಟ್ಟುಕೊಳ್ಳಬೇಕಾ?

ನಾನುಗೌರಿ: ಇಷ್ಟೇ ಅಲ್ಲ. ಸಮಾಜ ವಿಜ್ಞಾನ ಪಠ್ಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆ. ಕನಕದಾಸ, ಪುರಂದರದಾಸ, ನಾರಾಯಣಗುರು- ಈ ಎಲ್ಲ ಮಹನೀಯರ ಪಠ್ಯಗಳನ್ನು ಕೈಬಿಡಲಾಗಿದೆ. ಇದಕ್ಕೆ ಕಾರಣವೇನು?

ಸತ್ಯಪ್ರಕಾಶ್‌: ಯಾವಾಗಲಾದರೂ ಬನ್ನಿ ಮಾತನಾಡೋಣ.

ನಾನುಗೌರಿ: ಪ್ರತಿಭಟನೆಗಳು ನಡೆದಿವೆ. ಪಠ್ಯಪುಸ್ತಕಗಳ ಅಧ್ವಾನಗಳ ಕುರಿತು ಚರ್ಚೆಯಾಗುತ್ತಿದೆ. ನಿಮ್ಮನ್ನು ಪ್ರಶ್ನಿಸಿದಾಗಲೆಲ್ಲ ಹೀಗೆಯೇ ಉತ್ತರಿಸುತ್ತೀರಿ. ಜನರಿಗೆ ಸ್ಪಷ್ಟನೆ ಸಿಗುವುದು ಯಾವಾಗ?

ಇದನ್ನೂ ಓದಿರಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಸತ್ಯಪ್ರಕಾಶ್‌: ಸಮಿತಿ ಅಧ್ಯಕ್ಷರಿದ್ದಾರೆ. ವಿವಾದದ ಕುರಿತು ಪ್ರತಿಕ್ರಿಯೆ ನೀಡಲು ಎಲ್ಲರಿಗೂ ಅನುಮತಿ ನೀಡಿಲ್ಲ.

ನಾನುಗೌರಿ: ಪ್ರೊ.ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿಯಲ್ಲಿದ್ದವರೆಲ್ಲರೂ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಚಕ್ರತೀರ್ಥ ನೇತೃತ್ವದ ಸಮಿತಿಯವರ್‍ಯಾಕೆ ಮಾತನಾಡುತ್ತಿಲ್ಲವಲ್ಲ?

ಸತ್ಯಪ್ರಕಾಶ್‌: ಬರಗೂರರ ನೇತೃತ್ವದಲ್ಲಿ ಪಠ್ಯ ಪರಿಷ್ಕರಣೆಯಾದಾಗಲೂ ವಿವಾದವಾಗಿತ್ತು. ಹೊರಗೆ ಬರಲಿಲ್ಲವಷ್ಟೇ. ಈಗ ಎಲ್ಲರೂ ಮಾತನಾಡುತ್ತಿದ್ದಾರೆ. ನಾವು ಎಲ್ಲ ವರದಿಯನ್ನು ಸರ್ಕಾರಕ್ಕೆ ಕೊಟ್ಟಿದ್ದೇವೆ.

ಸತ್ಯಪ್ರಕಾಶ್ ಅವರು ತಮ್ಮ ಪ್ರತಿಕ್ರಿಯೆಯನ್ನು ಮೊಟುಕುಗೊಳಿಸಿದರು.

ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿದ್ದ ಮಿಥಿಕ್ ಸೊಸೈಟಿಯ ಸಂಶೋಧಕ ವಿಠಲ್ ಪೋತೇದಾರ್‌‌ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

ನಾನುಗೌರಿ: ನಿಮ್ಮ ಅಭಿಪ್ರಾಯಕ್ಕೆ ವಿರುದ್ಧವಾಗಿ ಪಠ್ಯ ರಚನೆಯಾಗಿದೆಯೇ?

ವಿಠಲ್: ಅದಕ್ಕೂ ನಮಗೂ ಸಂಬಂಧವಿಲ್ಲ. ಸಮಿತಿ ವಿಸರ್ಜನೆಯಾಗಿದೆ.

ನಾನುಗೌರಿ: ನಿಮ್ಮ ಸಮಿತಿಯಲ್ಲಿ ಈ ರೀತಿಯ ಗೊಂದಲ ಉಂಟಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಕೇಳುತ್ತಿದ್ದೇವೆ.

ವಿಠಲ್‌: ನಾನು ಆ ಸಮಿತಿಯಲ್ಲಿ ಇರಲಿಲ್ಲ. ಅದಕ್ಕೂ ನನಗೂ ಸಂಬಂಧವಿಲ್ಲ.

ನಾನುಗೌರಿ: ಸಮಿತಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಲ್ಲ?

ವಿಠಲ್‌: ಈಗ ಬಂದಿರುವ ಇದರೊಳಗೆ… ಸಮಿತಿ… (ಮಾತು ಅಸ್ಪಷ್ಟವಾಗಿತ್ತು)

ನಾನುಗೌರಿ: ನೀವು ಪಠ್ಯಪುಸ್ತಕ ಸಮಿತಿಯಲ್ಲೇ ಇರಲಿಲ್ಲವೇ?

ವಿಠಲ್: ನಾವು ವರದಿ ಕೊಟ್ಟಾಯಿತು. ವಿಸರ್ಜನೆಯೂ ಆಯಿತು.

ನಾನುಗೌರಿ: ನಿಜ. ಆದರೆ ನಿಮ್ಮ ಪಠ್ಯಪುಸ್ತಕ ವಿವಾದ ಇನ್ನೂ ಜೀವಂತವಾಗಿದೆ. ಅದೇ ಪಠ್ಯವನ್ನು ಮಕ್ಕಳಿಗೆ ಬೋಧಿಸಲು ಹೊರಟಿದ್ದಾರೆ.

ವಿಠಲ್: ನಾವು ವೃತ್ತಿಪರರು. ಪಠ್ಯ ಪುಸ್ತಕ ರಚನೆ ಮಾಡಿ ಸರ್ಕಾರಕ್ಕೆ ಕೊಟ್ಟಿರುತ್ತೇವಷ್ಟೇ.

ನಾನುಗೌರಿ: ಈಗ ಬಂದಿರುವ ಪ್ರಶ್ನೆ ಇಷ್ಟೇ. ಕೆಲವು ಪಠ್ಯಗಳನ್ನು ಮುಂದುವರಿಸಬಹುದು ಎಂದು ಸದಸ್ಯರು ಹೇಳಿದ್ದರು. ಆದರೆ ಅದನ್ನು ಸಮಿತಿಯ ಅಧ್ಯಕ್ಷರು ಕಡೆಗಣಿಸಿದ್ದಾರೆಂದು ತಿಳಿದುಬಂದಿದೆ.

ವಿಠಲ್: ನಾವು ಏನು ಹೇಳಲು ಬರುವುದಿಲ್ಲ. ಇದು ಸರ್ಕಾರ ಮತ್ತು ಸಚಿವರು ತೆಗೆದುಕೊಳ್ಳುವ ನಿರ್ಧಾರವಷ್ಟೇ. ವರದಿ ಕೊಟ್ಟಿದ್ದೀವಿ. ಅದನ್ನು ಸ್ವೀಕರಿಸುವುದು ಅಥವಾ ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು.

ನಾನುಗೌರಿ: ಸರ್ಕಾರಕ್ಕೆ ಸಲ್ಲಿಸಿದ ವರದಿಯ ಕುರಿತು ಹೇಳುತ್ತಿಲ್ಲ. ನೀವು ಸಮಿತಿಯ ಅಧ್ಯಕ್ಷರಿಗೆ ನೀಡಿದ ಅಭಿಪ್ರಾಯಗಳನ್ನು ಅಧ್ಯಕ್ಷರು ಕಡೆಗಣಿಸಿದ್ದಾರೆಂದು ವರದಿಯಾಗಿದೆ. ಈ  ಕುರಿತು ಕೇಳುತ್ತಿದ್ದೇವೆ.

ಇದನ್ನೂ ಓದಿರಿ: ಸಂವಿಧಾನ ಒಬ್ಬರೇ ಬರೆದಿದ್ದು ಎಂದು ಹೇಗೆ ಹೇಳುತ್ತೀರಿ?: ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದ ಕೈಬಿಟ್ಟಿದ್ದಕ್ಕೆ ಪಠ್ಯ ಪರಿಶೀಲನೆ ಸಮಿತಿ ಸದಸ್ಯನ ಸಮರ್ಥನೆ

ವಿಠಲ್‌: ನಾವು ಕೊಟ್ಟಿದ್ದಲ್ಲ. ಬೇರೆ ಸಮಿತಿ ಕೊಟ್ಟಿರುವ ವರದಿ ಅದು.

ನಾನುಗೌರಿ: ಎಷ್ಟು ಸಮಿತಿ ಮಾಡಿದ್ದಿರಿ?

ವಿಠಲ್‌: ಅದನ್ನು ನಮಗೆ ಗೊತ್ತಿಲ್ಲ. ಕರ್ನಾಟಕ ಪಠ್ಯಪುಸ್ತಕ ಸಂಘದ (ಕೆಟಿಬಿಎಸ್) ಅಧಿಕಾರಿಗಳನ್ನು ಕೇಳಿದರೆ ಮಾಹಿತಿ ಸಿಗುತ್ತದೆ.

(ಕೆಟಿಬಿಎಸ್‌ ನಿರ್ದೇಶಕರ ಅಭಿಪ್ರಾಯಕ್ಕೆ ಸಂಪರ್ಕಿಸಲಾಗಿದೆ. ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು)

ಪ್ರತಿಕ್ರಿಯೆ ನೀಡಲು ನಿರಾಕರಣೆ

ಸಮಿತಿಯ ಮತ್ತೊಬ್ಬ ಸದಸ್ಯರಾದ ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟ ವಿವೇಕಾನಂದ ಗಿರಿಜನ ಪ್ರೌಢಶಾಲೆಯ ಬಿ.ಜಿ.ವಾಸುಕಿ ಅವರನ್ನು ಸಂಪರ್ಕಿಸಿದಾಗ, “ಈಗ ಸಮಿತಿ ವಿಸರ್ಜನೆಯಾಗಿದೆ. ನಾವು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಹೇಳಿದರು.‘

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...