Homeಕರ್ನಾಟಕಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

- Advertisement -
- Advertisement -

ಪಠ್ಯಪುಸ್ತಕ ಪರಿಶೀಲನೆ ಹಾಗೂ ಪರಿಷ್ಕರಣೆ ವೇಳೆ ರೋಹಿತ್‌ ಚಕ್ರತೀರ್ಥ ಅವರು ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಪಠ್ಯಗಳನ್ನು ರೂಪಿಸಿದ್ದಾರೆಂಬ ಸಂಗತಿ ಹೊರಬಿದ್ದಿದೆ.

ರೋಹಿತ್‌ ಚಕ್ರತೀರ್ಥರ ಸಮಿತಿಯಲ್ಲಿನ ಸದಸ್ಯರನ್ನು ಸಂಪರ್ಕಿಸಿ ಈ ಕುರಿತು ಸ್ಪಷ್ಟನೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸುತ್ತಿದ್ದು, ಕೆಲವು ಸದಸ್ಯರು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಪ್ರತಿಕ್ರಿಯೆ ನೀಡಿದವರು ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ವಿವಿಎಸ್ ಶಾಲೆ ನಿವೃತ್ತ ಮುಖ್ಯೋಪಾಧ್ಯಾಯರಾದ ಡಾ.ಎನ್‌.ಸತ್ಯಪ್ರಕಾಶ್‌ ಸಮಿತಿ ಸದಸ್ಯರಾಗಿದ್ದರು. ಈಗ ಉಂಟಾಗಿರುವ ವಿವಾದದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, “ನಾನು ಸಮಾಜ ವಿಜ್ಞಾನ ಪಠ್ಯಪುಸ್ತಕ ರಚನೆಯಲ್ಲಿದ್ದೆ. ಈಗ ಆಗಿರುವ ತಪ್ಪುಗಳು ಕನ್ನಡ ಪಠ್ಯಪುಸ್ತಕದಲ್ಲಿವೆ” ಎಂದರು.

“ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕ ರಚನೆ ಮಾಡಿದ್ದೇನೆ” ಎಂದು ಅವರು ಹೇಳಿದರು.

ಮುಂದುವರಿದು, “ಕನ್ನಡ ಪಠ್ಯಪುಸ್ತಕ ರಚನೆಗೆ ಒಂದು ಸಮಿತಿ, ಸಮಾಜ ವಿಜ್ಞಾನ ಪಠ್ಯ ರಚನೆಗೆ ಒಂದು ಸಮಿತಿ ಮಾಡಿದ್ದರು. ಒಂದೊಂದು ಸಮಿತಿಯಲ್ಲೂ ಹತ್ತರಿಂದ ಹದಿನೈದು ಜನ ಇದ್ದರು. ಕನ್ನಡ ಪಠ್ಯಪುಸ್ತಕ ಸಮಿತಿಯಲ್ಲಿದ್ದವರು ಎಲ್ಲೆಲ್ಲಿ ಭೇಟಿ ಮಾಡಿದ್ದಾರೆ ಎಂಬುದು ಗೊತ್ತಿಲ್ಲ” ಎಂದರು.

ಇದನ್ನೂ ಓದಿರಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

“ನಾವು ನೀಡಿದ ವರದಿ ಆಧಾರದಲ್ಲಿ ಪಠ್ಯಪುಸ್ತಕ ರಚಿಸಲಾಗಿದೆ. ಕನ್ನಡ ಪಠ್ಯಪುಸ್ತಕ ಸಮಿತಿ ಸದಸ್ಯರು ನೀಡಿದ ಸಲಹೆಗಳನ್ನೇ ಜಾರಿ ಮಾಡಿದ್ದಾರೆ. ಅಧ್ಯಕ್ಷರು ವೈಯಕ್ತಿಕವಾಗಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲರೂ ಸಹಿ ಮಾಡಿರುತ್ತೇವೆ. ಎರಡು ಮೂರು ತಪ್ಪುಗಳಾಗಿವೆಯಷ್ಟೇ. ಇದನ್ನೇ ದೊಡ್ಡದ್ದಾಗಿ ಬಿಂಬಿಸುತ್ತಿದ್ದಾರೆ” ಎಂದರು.

ಸತ್ಯಪ್ರಕಾಶ್ ಅವರ ಹೇಳಿಕೆಗಳು ಗೊಂದಲಕಾರಿಯಾಗಿದ್ದವು.

ನಾನುಗೌರಿ: ‘ಸಮಾಜ ವಿಜ್ಞಾನ’ ಪಠ್ಯಪುಸ್ತಕದಲ್ಲಿ ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನು ಕಿತ್ತು ಹಾಕಿದ್ದೀರಲ್ಲ?

ಎನ್.ಸತ್ಯಪ್ರಕಾಶ್‌: ಇಲ್ಲ. ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಈ ತಪ್ಪಾಗಿಲ್ಲ. ಅದು ಕನ್ನಡ ಪಠ್ಯಪುಸ್ತಕದಲ್ಲಿ ಆಗಿರುವ ತಪ್ಪಷ್ಟೇ.

ನಾನುಗೌರಿ: 9ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಈ ತಪ್ಪಾಗಿದೆ. ಈ ಕುರಿತು ನಾವೇ ವರದಿ ಮಾಡಿದ್ದೇವೆ.

ಸತ್ಯಪ್ರಕಾಶ್‌: ಓಹ್, ಒಂಬತ್ತನೇ ತರಗತಿಯದ್ದಾ?

ನಾನುಗೌರಿ: ಇಷ್ಟೇ ಅಲ್ಲ. ಸಾಕಷ್ಟು ಬದಲಾವಣೆಗಳನ್ನು ಮಾಡಿದ್ದೀರಿ.

ಸತ್ಯಪ್ರಕಾಶ್: ಸಾಕಷ್ಟು ಎಂಬ ಪದ ಉಪಯೋಗಿಸಬೇಡಿ. ಯಾವುದೆಂದು ಹೇಳಿ.

ನಾನುಗೌರಿ: ‘ಸಿಂಧೂ ಬಯಲಿನ ನಾಗರಿಕತೆ’ ಎಂಬುದನ್ನು ‘ಸಿಂಧೂ ಸರಸ್ವತಿ ನಾಗರಿಕತೆ’ ಎಂದು ಮಾಡಿದ್ದೀರಿ. ನಾವು ಇಲ್ಲಿಯವರೆಗೂ ಇದನ್ನು ಓದಿಯೇ ಇರಲಿಲ್ಲ.

ಸತ್ಯಪ್ರಕಾಶ್‌: ಹಾಗೇನಿಲ್ಲ, ಹೀಗೆ ಬದಲಾವಣೆ ಆಗಬಾರದೆಂದೇನೂ ಇಲ್ಲ. ‘ಸಿಂಧೂ ಸರಸ್ವತಿ ನಾಗರಿಕತೆ’ ಎಂದರೆ- ಭಾರತೀಯ ಇತಿಹಾಸ, ದ್ರಾವಿಡ ಸಂಸ್ಕೃತಿ ಎಲ್ಲವೂ ಆಗುತ್ತದೆ. ಇಂಗ್ಲಿಷ್‌ನವರು ಬರೆದದ್ದು ಇಟ್ಟುಕೊಳ್ಳಬೇಕಾ?

ನಾನುಗೌರಿ: ಇಷ್ಟೇ ಅಲ್ಲ. ಸಮಾಜ ವಿಜ್ಞಾನ ಪಠ್ಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆ. ಕನಕದಾಸ, ಪುರಂದರದಾಸ, ನಾರಾಯಣಗುರು- ಈ ಎಲ್ಲ ಮಹನೀಯರ ಪಠ್ಯಗಳನ್ನು ಕೈಬಿಡಲಾಗಿದೆ. ಇದಕ್ಕೆ ಕಾರಣವೇನು?

ಸತ್ಯಪ್ರಕಾಶ್‌: ಯಾವಾಗಲಾದರೂ ಬನ್ನಿ ಮಾತನಾಡೋಣ.

ನಾನುಗೌರಿ: ಪ್ರತಿಭಟನೆಗಳು ನಡೆದಿವೆ. ಪಠ್ಯಪುಸ್ತಕಗಳ ಅಧ್ವಾನಗಳ ಕುರಿತು ಚರ್ಚೆಯಾಗುತ್ತಿದೆ. ನಿಮ್ಮನ್ನು ಪ್ರಶ್ನಿಸಿದಾಗಲೆಲ್ಲ ಹೀಗೆಯೇ ಉತ್ತರಿಸುತ್ತೀರಿ. ಜನರಿಗೆ ಸ್ಪಷ್ಟನೆ ಸಿಗುವುದು ಯಾವಾಗ?

ಇದನ್ನೂ ಓದಿರಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಸತ್ಯಪ್ರಕಾಶ್‌: ಸಮಿತಿ ಅಧ್ಯಕ್ಷರಿದ್ದಾರೆ. ವಿವಾದದ ಕುರಿತು ಪ್ರತಿಕ್ರಿಯೆ ನೀಡಲು ಎಲ್ಲರಿಗೂ ಅನುಮತಿ ನೀಡಿಲ್ಲ.

ನಾನುಗೌರಿ: ಪ್ರೊ.ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿಯಲ್ಲಿದ್ದವರೆಲ್ಲರೂ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಚಕ್ರತೀರ್ಥ ನೇತೃತ್ವದ ಸಮಿತಿಯವರ್‍ಯಾಕೆ ಮಾತನಾಡುತ್ತಿಲ್ಲವಲ್ಲ?

ಸತ್ಯಪ್ರಕಾಶ್‌: ಬರಗೂರರ ನೇತೃತ್ವದಲ್ಲಿ ಪಠ್ಯ ಪರಿಷ್ಕರಣೆಯಾದಾಗಲೂ ವಿವಾದವಾಗಿತ್ತು. ಹೊರಗೆ ಬರಲಿಲ್ಲವಷ್ಟೇ. ಈಗ ಎಲ್ಲರೂ ಮಾತನಾಡುತ್ತಿದ್ದಾರೆ. ನಾವು ಎಲ್ಲ ವರದಿಯನ್ನು ಸರ್ಕಾರಕ್ಕೆ ಕೊಟ್ಟಿದ್ದೇವೆ.

ಸತ್ಯಪ್ರಕಾಶ್ ಅವರು ತಮ್ಮ ಪ್ರತಿಕ್ರಿಯೆಯನ್ನು ಮೊಟುಕುಗೊಳಿಸಿದರು.

ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿದ್ದ ಮಿಥಿಕ್ ಸೊಸೈಟಿಯ ಸಂಶೋಧಕ ವಿಠಲ್ ಪೋತೇದಾರ್‌‌ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

ನಾನುಗೌರಿ: ನಿಮ್ಮ ಅಭಿಪ್ರಾಯಕ್ಕೆ ವಿರುದ್ಧವಾಗಿ ಪಠ್ಯ ರಚನೆಯಾಗಿದೆಯೇ?

ವಿಠಲ್: ಅದಕ್ಕೂ ನಮಗೂ ಸಂಬಂಧವಿಲ್ಲ. ಸಮಿತಿ ವಿಸರ್ಜನೆಯಾಗಿದೆ.

ನಾನುಗೌರಿ: ನಿಮ್ಮ ಸಮಿತಿಯಲ್ಲಿ ಈ ರೀತಿಯ ಗೊಂದಲ ಉಂಟಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಕೇಳುತ್ತಿದ್ದೇವೆ.

ವಿಠಲ್‌: ನಾನು ಆ ಸಮಿತಿಯಲ್ಲಿ ಇರಲಿಲ್ಲ. ಅದಕ್ಕೂ ನನಗೂ ಸಂಬಂಧವಿಲ್ಲ.

ನಾನುಗೌರಿ: ಸಮಿತಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಲ್ಲ?

ವಿಠಲ್‌: ಈಗ ಬಂದಿರುವ ಇದರೊಳಗೆ… ಸಮಿತಿ… (ಮಾತು ಅಸ್ಪಷ್ಟವಾಗಿತ್ತು)

ನಾನುಗೌರಿ: ನೀವು ಪಠ್ಯಪುಸ್ತಕ ಸಮಿತಿಯಲ್ಲೇ ಇರಲಿಲ್ಲವೇ?

ವಿಠಲ್: ನಾವು ವರದಿ ಕೊಟ್ಟಾಯಿತು. ವಿಸರ್ಜನೆಯೂ ಆಯಿತು.

ನಾನುಗೌರಿ: ನಿಜ. ಆದರೆ ನಿಮ್ಮ ಪಠ್ಯಪುಸ್ತಕ ವಿವಾದ ಇನ್ನೂ ಜೀವಂತವಾಗಿದೆ. ಅದೇ ಪಠ್ಯವನ್ನು ಮಕ್ಕಳಿಗೆ ಬೋಧಿಸಲು ಹೊರಟಿದ್ದಾರೆ.

ವಿಠಲ್: ನಾವು ವೃತ್ತಿಪರರು. ಪಠ್ಯ ಪುಸ್ತಕ ರಚನೆ ಮಾಡಿ ಸರ್ಕಾರಕ್ಕೆ ಕೊಟ್ಟಿರುತ್ತೇವಷ್ಟೇ.

ನಾನುಗೌರಿ: ಈಗ ಬಂದಿರುವ ಪ್ರಶ್ನೆ ಇಷ್ಟೇ. ಕೆಲವು ಪಠ್ಯಗಳನ್ನು ಮುಂದುವರಿಸಬಹುದು ಎಂದು ಸದಸ್ಯರು ಹೇಳಿದ್ದರು. ಆದರೆ ಅದನ್ನು ಸಮಿತಿಯ ಅಧ್ಯಕ್ಷರು ಕಡೆಗಣಿಸಿದ್ದಾರೆಂದು ತಿಳಿದುಬಂದಿದೆ.

ವಿಠಲ್: ನಾವು ಏನು ಹೇಳಲು ಬರುವುದಿಲ್ಲ. ಇದು ಸರ್ಕಾರ ಮತ್ತು ಸಚಿವರು ತೆಗೆದುಕೊಳ್ಳುವ ನಿರ್ಧಾರವಷ್ಟೇ. ವರದಿ ಕೊಟ್ಟಿದ್ದೀವಿ. ಅದನ್ನು ಸ್ವೀಕರಿಸುವುದು ಅಥವಾ ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು.

ನಾನುಗೌರಿ: ಸರ್ಕಾರಕ್ಕೆ ಸಲ್ಲಿಸಿದ ವರದಿಯ ಕುರಿತು ಹೇಳುತ್ತಿಲ್ಲ. ನೀವು ಸಮಿತಿಯ ಅಧ್ಯಕ್ಷರಿಗೆ ನೀಡಿದ ಅಭಿಪ್ರಾಯಗಳನ್ನು ಅಧ್ಯಕ್ಷರು ಕಡೆಗಣಿಸಿದ್ದಾರೆಂದು ವರದಿಯಾಗಿದೆ. ಈ  ಕುರಿತು ಕೇಳುತ್ತಿದ್ದೇವೆ.

ಇದನ್ನೂ ಓದಿರಿ: ಸಂವಿಧಾನ ಒಬ್ಬರೇ ಬರೆದಿದ್ದು ಎಂದು ಹೇಗೆ ಹೇಳುತ್ತೀರಿ?: ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದ ಕೈಬಿಟ್ಟಿದ್ದಕ್ಕೆ ಪಠ್ಯ ಪರಿಶೀಲನೆ ಸಮಿತಿ ಸದಸ್ಯನ ಸಮರ್ಥನೆ

ವಿಠಲ್‌: ನಾವು ಕೊಟ್ಟಿದ್ದಲ್ಲ. ಬೇರೆ ಸಮಿತಿ ಕೊಟ್ಟಿರುವ ವರದಿ ಅದು.

ನಾನುಗೌರಿ: ಎಷ್ಟು ಸಮಿತಿ ಮಾಡಿದ್ದಿರಿ?

ವಿಠಲ್‌: ಅದನ್ನು ನಮಗೆ ಗೊತ್ತಿಲ್ಲ. ಕರ್ನಾಟಕ ಪಠ್ಯಪುಸ್ತಕ ಸಂಘದ (ಕೆಟಿಬಿಎಸ್) ಅಧಿಕಾರಿಗಳನ್ನು ಕೇಳಿದರೆ ಮಾಹಿತಿ ಸಿಗುತ್ತದೆ.

(ಕೆಟಿಬಿಎಸ್‌ ನಿರ್ದೇಶಕರ ಅಭಿಪ್ರಾಯಕ್ಕೆ ಸಂಪರ್ಕಿಸಲಾಗಿದೆ. ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು)

ಪ್ರತಿಕ್ರಿಯೆ ನೀಡಲು ನಿರಾಕರಣೆ

ಸಮಿತಿಯ ಮತ್ತೊಬ್ಬ ಸದಸ್ಯರಾದ ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟ ವಿವೇಕಾನಂದ ಗಿರಿಜನ ಪ್ರೌಢಶಾಲೆಯ ಬಿ.ಜಿ.ವಾಸುಕಿ ಅವರನ್ನು ಸಂಪರ್ಕಿಸಿದಾಗ, “ಈಗ ಸಮಿತಿ ವಿಸರ್ಜನೆಯಾಗಿದೆ. ನಾವು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಹೇಳಿದರು.‘

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...