Homeಕರ್ನಾಟಕಪಠ್ಯ ಪುಸ್ತಕ ಅದ್ವಾನ: ‘#ನಾಡದ್ರೋಹಿBJPಸರ್ಕಾರ’ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌

ಪಠ್ಯ ಪುಸ್ತಕ ಅದ್ವಾನ: ‘#ನಾಡದ್ರೋಹಿBJPಸರ್ಕಾರ’ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

ರಾಜ್ಯ ಸರ್ಕಾರ ನಡೆಸಿರುವ ‘ಪಠ್ಯಪುಸ್ತಕ ಹಗರಣ’ವನ್ನು ವಿರೋಧಿಸಿ ಜೂನ್‌ 18ರ ಶನಿವಾರದಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್‌ ಪ್ರತಿಭಟನಾ ರ್‍ಯಾಲಿಯ ಮುನ್ನವಾಗಿ ‘#ನಾಡದ್ರೋಹಿBJPಸರ್ಕಾರ’, ‘#BoycottRSStextbooks’ ಹ್ಯಾಷ್‌ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಟ್ರೆಂಡ್ ಆಗಿವೆ.

ಈ ಹ್ಯಾಷ್‌ಟ್ಯಾಗ್‌ನಲ್ಲಿ ಸಾವಿರಾರು ಟ್ವೀಟ್‌ಗಳನ್ನು ಮಾಡಲಾಗಿದೆ.

ಈ ಕುರಿತು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, “ಒಂದು ವೇಳೆ ಸರ್ಕಾರ ಕೂಡಲೇ ಪರಿಷ್ಕೃತ ಪಠ್ಯಗಳನ್ನು ಹಿಂದಕ್ಕೆ ಪಡೆಯದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುವುದು ಖಚಿತ. ಇಡೀ ರಾಜ್ಯದ ಶಾಂತಿ ಕದಡಿ ಹೋಗುತ್ತದೆ. ಅದರ ಹೊಣೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ. ಜನರನ್ನು ಎದುರುಹಾಕಿಕೊಂಡ ಸರ್ಕಾರಗಳು ಉಳಿಯುವುದಿಲ್ಲ. ಇದನ್ನು ಮರೆಯಬೇಡಿ” ಎಂದು ಎಚ್ಚರಿಸಿದ್ದಾರೆ.

“ಬಸವಣ್ಣ, ಅಲ್ಲಮಪ್ರಭು, ವಾಲ್ಮೀಕಿ, ಕನಕದಾಸ, ಪುರಂದರದಾಸ, ಶಂಕರಾಚಾರ್ಯ, ಶಿಶುನಾಳ ಶರೀಫ, ಕುವೆಂಪು ಮೊದಲುಗೊಂಡು ಕರ್ನಾಟಕದ ದಾರ್ಶನಿಕರು, ಸಂತರಿಗೆ ಪರಿಷ್ಕೃತ ಪಠ್ಯದಲ್ಲಿ ಅಪಮಾನಿಸಲಾಗಿದೆ. ಕನ್ನಡತನ, ಕನ್ನಡಾಭಿಮಾನಕ್ಕೆ ಕುತ್ತು ತರಲಾಗಿದೆ. ಇದನ್ನು ಒಪ್ಪಿಕೊಳ್ಳುವುದು ಸಾಧ್ಯವೇ ಇಲ್ಲ” ಎಂದಿದ್ದಾರೆ.

 

“ನಾಡ ದ್ರೋಹಿ ಕಪಟಿಗಳ ವಿರುದ್ಧ ನಡೆಯಲಿರುವ ನಾಳಿನ ಹೋರಾಟ ಪಕ್ಷಾತೀತವಾದದ್ದು. ಸರ್ವ ಜಾತಿ ಜನಾಂಗಗಳ ಹೋರಾಟ. ಬನ್ನಿ ಕೈ ಜೋಡಿಸಿ. ನಾಡ ರಕ್ಷಣೆಗೆ ಮುಂದಾಗಿ” ಎಂದು ಕಾಂಗ್ರೆಸ್ ನಾಯಕ ಪ್ರಕಾಶ್ ರಾಥೋಡ್ ಮನವಿ ಮಾಡಿದ್ದಾರೆ.

“ಬಸವಣ್ಣ ಅವರ ಬಗ್ಗೆ ಪರಿಷ್ಕೃತ ಪಠ್ಯದಲ್ಲಿ ಬರೆದಿರುವ ಮಾಹಿತಿ ತಪ್ಪು ಗ್ರಹಿಕೆಯಿಂದ ಕೂಡಿವೆ. ಸಂಸ್ಕೃತ ತೊರೆದು ಕನ್ನಡದ ಮೂಲಕ ದೇವರನ್ನು ಪೂಜಿಸುವ ಬಗೆ ತೋರಿದ್ದು ಬಸವಣ್ಣ. ವೀರಶೈವ ಮತ ಅಭಿವೃದ್ದಿ ಪಡಿಸಲಿಲ್ಲ ಬದಲಾಗಿ ವೈದಿಕ ಧರ್ಮಕ್ಕೆ ವಿರುದ್ಧವಾಗಿ ಲಿಂಗಾಯತ ಧರ್ಮ ಸ್ಥಾಪನೆ ಮಾಡಿದರು” ಎಂದು ಹಿರಿಯ ಪತ್ರಕರ್ತ ಬಸವರಾಜು ತಿಳಿಸಿದ್ದಾರೆ.

“ಬಿಟ್ಟಿ ಉಪದೇಶ ಹೇಳುವುದು, ಹಿಂದೂ ನಾವೆಲ್ಲ ಒಂದು. 10 ಜನ ಪಠ್ಯಪುಸ್ತಕ ಸಮಿತಿ ಸದಸ್ಯರಲ್ಲಿ 9 ಜನ ಬ್ರಾಹ್ಮಣರು. ಬೇರೆ ಜಾತಿಯಲ್ಲಿ ಶಿಕ್ಷಣ ತಜ್ಞರು ಇಲ್ಲವೇ!? ಬೇರೆ ಜಾತಿಯವರೆಲ್ಲಾ ದಡ್ಡರೂ ಅನ್ನುವ ಭಾವನೆ ಬಿಜೆಪಿಗರದ್ದೇ!?” ಎಂದು ‘ಬೆಳಗಾವಿ ರಾಯಣ್ಣ’ ಹೆಸರಿನ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

“ಟಿಪ್ಪು ಚರಿತ್ರೆ ತಿರುಚಿದ್ರು, ಸಂತ ಶರೀಫರನ್ನು ಆಚೆ ಇಟ್ರು, ಆಗ ಇದು ಸಾಬರ ವಿಷಯ ಅಂತ ಸುಮ್ನಾದ್ರು. ಈಗ ನಾರಾಯಣ ಗುರುಗಳ ವಿಷಯ ಬಂದಾಗ ಒಕ್ಕಲಿಗರು ಸುಮ್ನಾದ್ರೆ ನಾಳೆ ಕೆಂಪೇಗೌಡ ಬೆಂಗಳೂರು ಕಟ್ಟೆ ಇಲ್ಲ ಅಂತಾರೆ” ಎಂದು ಕನ್ನಡ ಕುಡಿ ಟ್ವಿಟರ್‌ ಖಾತೆ ಅಭಿಪ್ರಾಯಪಟ್ಟಿದೆ.

“ಸಾವಿತ್ರಿಬಾಯಿಫುಲೆ ಸೇರಿ ಮಹಿಳಾ ಸಮಾಜ ಸುಧಾರಕಿಯರ ಪಠ್ಯ ಕೈಬಿಟ್ಟ ಮಹಿಳಾ ವಿರೋಧಿ ಸರ್ಕಾರಕ್ಕೆ ಧಿಕ್ಕಾರ” ಎಂದು ಜೆ.ಎಸ್.ಪಾಟೀಲ್ ಟ್ವೀಟ್ ಮಾಡಿದ್ದಾರೆ.

“ಪದೇ ಪದೇ ನಾರಾಯಣಗುರುಗಳಿಗೆ ಅವಮಾನ ಮಾಡುವ ಮೂಲಕ ಬಿಜೆಪಿ ಸರ್ಕಾರ ಜನರ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ಜನಾಕ್ರೋಶದ ಕಟ್ಟೆಯೊಡೆದರೆ ಬಿಜೆಪಿಗೆ ಉಳಿಗಾಲವಿಲ್ಲ ಎನ್ನುವುದನ್ನು ಜೂನ್ 18ರ ಪ್ರತಿಭಟನೆಯಲ್ಲಿ ತೋರಿಸೋಣ” ಎಂದು ಉಮ್ಮರ್‌ ಬ್ಯಾರಿ ಸಾಲೆತ್ತೂರು ಹೇಳಿದ್ದಾರೆ.

“ತ್ಯಾಗ ಬಲಿದಾನಗಳಿಂದ ಕಟ್ಟಿದ ಈ ದೇಶವನ್ನು ಕೋಮುವಾದದಿಂದ ಉಳಿಸೋಣ..ನಾಳೆ ಜತೆಯಾಗಿ ನಡೆಯೋಣ.ನಮ್ಮ‌ವಿರೋಧವನ್ನು ದಾಖಲಿಸೋಣ” ಎಂದು ಗುಲಾಬಿ ಬಿಳಿಮಲೆಯವರು ತಿಳಿಸಿದ್ದಾರೆ.

“ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಸಾವಿರ ಕಂಬಗಳ ಬಸದಿ, ಧರ್ಮಸ್ಥಳ ಮಂಜುನಾಥ ದೇವಾಲಯ, ಉಲ್ಲಾಳ ಜುಮ್ಮಾ ಮಸೀದಿ, ಸಂತ ಅಲೋಸಿಯಸ್ ಚರ್ಚ್ ಕುರಿತ ಮಾಹಿತಿ ಕೈಬಿಟ್ಟ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ” ಮಧು ಕರೆಡೇವು ಕರವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಂಥ ಕನ್ನಡ ದ್ರೋಹಿಯನ್ನು ಪೋಷಿಸುತ್ತಿರುವ ಬಿಜೆಪಿ ಅಧಿಕಾರಕ್ಕೆ ಮತ್ತೆ ಬರದಿರಲಿ” ಎಂದು ಮನು ಟ್ವೀಟ್ ಎಚ್ಚರಿಸಿದ್ದಾರೆ.

“ಬುದ್ದ, ಕುವೆಂಪು, ಬಸವಣ್ಣ, ಅಂಬೇಡ್ಕರ್, ಕನ್ನಡ ನಾಡು, ನುಡಿ, ಬಾವುಟ, ಪ್ರಾದೇಶಿಕತೆಯ ಬಗ್ಗೆ ಕೀಳಾಗಿ ಮಾತನಾಡಿದ ಚಕ್ರತಿರ್ಥನ ಬಂಧನವಾಗಲಿ” ಎಂದು ದಿನೇಶ್ ದೊಡ್ಡಮನೆ ಆಗ್ರಹಿಸಿದ್ದಾರೆ.

“ಪದೇ ಪದೇ ನಾರಾಯಣಗುರುಗಳಿಗೆ ಅವಮಾನ ಮಾಡುವ ಮೂಲಕ ಬಿಜೆಪಿ ಸರ್ಕಾರ ಜನರ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ಜನಾಕ್ರೋಶದ ಕಟ್ಟೆಯೊಡೆದರೆ ಬಿಜೆಪಿಗೆ ಉಳಿಗಾಲವಿಲ್ಲ ಎನ್ನುವುದನ್ನು ಜೂನ್ 18ರ ಪ್ರತಿಭಟನೆಯಲ್ಲಿ ತೋರಿಸೋಣ” ಎಂದು ‘ಕೋಮುವಾದಿಗಳ ವಿರುದ್ಧ’ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಕಳ್ಳ ದೋಚಿಕೊಂಡು ಹೋದ ಮ್ಯಾಲೆ ದಿಡ್ಡಿ ಬಾಗಿಲು ಹಾಕಿದರಂತೆ . ಹಂಗಾಯ್ತು ಇವರ ಬಾಳು…. ಪರಿಷ್ಕ್ರುತ ಪಠ್ಯಪುಸ್ತಕ ಈಗಾಗಲೇ ಮಕ್ಕಳ ಕೈ ಸೇರಿ ಆಗಿದೆ… ಭಾಜಪದವರು ಒಳಗೊಳಗೆ ಎಲ್ಲಾ ಶಾಲೆಗಳಿಗೆ ಕಳುಹಿಸಿಕೊಟ್ಟಿದ್ದಾರೆ… ಇವರು ಇವತ್ತು ಒಂದು ದಿನ ಹೋರಾಟ ಮಾಡಿ ಸುಮ್ಮನಾಗ್ತಾರೆ. ಎಲ್ಲಾರೂ ಒಂದೇ ಬಿಡಿ. ನಾ ಹೊಡದಂಗ ಮಾಡ್ತೀನಿ… ನೀ ಅತ್ತಂಗ ಮಾಡು ಹಾಗಯ್ತು ಇವರ ಬಾಳು

  2. You are all opposing the revision of text book because the members of the committe are Brahmin. So your purpose is to oppose what ever Brahmins are doing. If you are really concerned then you must show before and after corrections and tell governament to reconsider it next year.
    Nanu gauri as a responsible media must be fair to all caste and community.

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....