Homeಕರ್ನಾಟಕಪಠ್ಯ ಪುಸ್ತಕ ಅದ್ವಾನ: ‘#ನಾಡದ್ರೋಹಿBJPಸರ್ಕಾರ’ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌

ಪಠ್ಯ ಪುಸ್ತಕ ಅದ್ವಾನ: ‘#ನಾಡದ್ರೋಹಿBJPಸರ್ಕಾರ’ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

ರಾಜ್ಯ ಸರ್ಕಾರ ನಡೆಸಿರುವ ‘ಪಠ್ಯಪುಸ್ತಕ ಹಗರಣ’ವನ್ನು ವಿರೋಧಿಸಿ ಜೂನ್‌ 18ರ ಶನಿವಾರದಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್‌ ಪ್ರತಿಭಟನಾ ರ್‍ಯಾಲಿಯ ಮುನ್ನವಾಗಿ ‘#ನಾಡದ್ರೋಹಿBJPಸರ್ಕಾರ’, ‘#BoycottRSStextbooks’ ಹ್ಯಾಷ್‌ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಟ್ರೆಂಡ್ ಆಗಿವೆ.

ಈ ಹ್ಯಾಷ್‌ಟ್ಯಾಗ್‌ನಲ್ಲಿ ಸಾವಿರಾರು ಟ್ವೀಟ್‌ಗಳನ್ನು ಮಾಡಲಾಗಿದೆ.

ಈ ಕುರಿತು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, “ಒಂದು ವೇಳೆ ಸರ್ಕಾರ ಕೂಡಲೇ ಪರಿಷ್ಕೃತ ಪಠ್ಯಗಳನ್ನು ಹಿಂದಕ್ಕೆ ಪಡೆಯದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುವುದು ಖಚಿತ. ಇಡೀ ರಾಜ್ಯದ ಶಾಂತಿ ಕದಡಿ ಹೋಗುತ್ತದೆ. ಅದರ ಹೊಣೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ. ಜನರನ್ನು ಎದುರುಹಾಕಿಕೊಂಡ ಸರ್ಕಾರಗಳು ಉಳಿಯುವುದಿಲ್ಲ. ಇದನ್ನು ಮರೆಯಬೇಡಿ” ಎಂದು ಎಚ್ಚರಿಸಿದ್ದಾರೆ.

“ಬಸವಣ್ಣ, ಅಲ್ಲಮಪ್ರಭು, ವಾಲ್ಮೀಕಿ, ಕನಕದಾಸ, ಪುರಂದರದಾಸ, ಶಂಕರಾಚಾರ್ಯ, ಶಿಶುನಾಳ ಶರೀಫ, ಕುವೆಂಪು ಮೊದಲುಗೊಂಡು ಕರ್ನಾಟಕದ ದಾರ್ಶನಿಕರು, ಸಂತರಿಗೆ ಪರಿಷ್ಕೃತ ಪಠ್ಯದಲ್ಲಿ ಅಪಮಾನಿಸಲಾಗಿದೆ. ಕನ್ನಡತನ, ಕನ್ನಡಾಭಿಮಾನಕ್ಕೆ ಕುತ್ತು ತರಲಾಗಿದೆ. ಇದನ್ನು ಒಪ್ಪಿಕೊಳ್ಳುವುದು ಸಾಧ್ಯವೇ ಇಲ್ಲ” ಎಂದಿದ್ದಾರೆ.

 

“ನಾಡ ದ್ರೋಹಿ ಕಪಟಿಗಳ ವಿರುದ್ಧ ನಡೆಯಲಿರುವ ನಾಳಿನ ಹೋರಾಟ ಪಕ್ಷಾತೀತವಾದದ್ದು. ಸರ್ವ ಜಾತಿ ಜನಾಂಗಗಳ ಹೋರಾಟ. ಬನ್ನಿ ಕೈ ಜೋಡಿಸಿ. ನಾಡ ರಕ್ಷಣೆಗೆ ಮುಂದಾಗಿ” ಎಂದು ಕಾಂಗ್ರೆಸ್ ನಾಯಕ ಪ್ರಕಾಶ್ ರಾಥೋಡ್ ಮನವಿ ಮಾಡಿದ್ದಾರೆ.

“ಬಸವಣ್ಣ ಅವರ ಬಗ್ಗೆ ಪರಿಷ್ಕೃತ ಪಠ್ಯದಲ್ಲಿ ಬರೆದಿರುವ ಮಾಹಿತಿ ತಪ್ಪು ಗ್ರಹಿಕೆಯಿಂದ ಕೂಡಿವೆ. ಸಂಸ್ಕೃತ ತೊರೆದು ಕನ್ನಡದ ಮೂಲಕ ದೇವರನ್ನು ಪೂಜಿಸುವ ಬಗೆ ತೋರಿದ್ದು ಬಸವಣ್ಣ. ವೀರಶೈವ ಮತ ಅಭಿವೃದ್ದಿ ಪಡಿಸಲಿಲ್ಲ ಬದಲಾಗಿ ವೈದಿಕ ಧರ್ಮಕ್ಕೆ ವಿರುದ್ಧವಾಗಿ ಲಿಂಗಾಯತ ಧರ್ಮ ಸ್ಥಾಪನೆ ಮಾಡಿದರು” ಎಂದು ಹಿರಿಯ ಪತ್ರಕರ್ತ ಬಸವರಾಜು ತಿಳಿಸಿದ್ದಾರೆ.

“ಬಿಟ್ಟಿ ಉಪದೇಶ ಹೇಳುವುದು, ಹಿಂದೂ ನಾವೆಲ್ಲ ಒಂದು. 10 ಜನ ಪಠ್ಯಪುಸ್ತಕ ಸಮಿತಿ ಸದಸ್ಯರಲ್ಲಿ 9 ಜನ ಬ್ರಾಹ್ಮಣರು. ಬೇರೆ ಜಾತಿಯಲ್ಲಿ ಶಿಕ್ಷಣ ತಜ್ಞರು ಇಲ್ಲವೇ!? ಬೇರೆ ಜಾತಿಯವರೆಲ್ಲಾ ದಡ್ಡರೂ ಅನ್ನುವ ಭಾವನೆ ಬಿಜೆಪಿಗರದ್ದೇ!?” ಎಂದು ‘ಬೆಳಗಾವಿ ರಾಯಣ್ಣ’ ಹೆಸರಿನ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

“ಟಿಪ್ಪು ಚರಿತ್ರೆ ತಿರುಚಿದ್ರು, ಸಂತ ಶರೀಫರನ್ನು ಆಚೆ ಇಟ್ರು, ಆಗ ಇದು ಸಾಬರ ವಿಷಯ ಅಂತ ಸುಮ್ನಾದ್ರು. ಈಗ ನಾರಾಯಣ ಗುರುಗಳ ವಿಷಯ ಬಂದಾಗ ಒಕ್ಕಲಿಗರು ಸುಮ್ನಾದ್ರೆ ನಾಳೆ ಕೆಂಪೇಗೌಡ ಬೆಂಗಳೂರು ಕಟ್ಟೆ ಇಲ್ಲ ಅಂತಾರೆ” ಎಂದು ಕನ್ನಡ ಕುಡಿ ಟ್ವಿಟರ್‌ ಖಾತೆ ಅಭಿಪ್ರಾಯಪಟ್ಟಿದೆ.

“ಸಾವಿತ್ರಿಬಾಯಿಫುಲೆ ಸೇರಿ ಮಹಿಳಾ ಸಮಾಜ ಸುಧಾರಕಿಯರ ಪಠ್ಯ ಕೈಬಿಟ್ಟ ಮಹಿಳಾ ವಿರೋಧಿ ಸರ್ಕಾರಕ್ಕೆ ಧಿಕ್ಕಾರ” ಎಂದು ಜೆ.ಎಸ್.ಪಾಟೀಲ್ ಟ್ವೀಟ್ ಮಾಡಿದ್ದಾರೆ.

“ಪದೇ ಪದೇ ನಾರಾಯಣಗುರುಗಳಿಗೆ ಅವಮಾನ ಮಾಡುವ ಮೂಲಕ ಬಿಜೆಪಿ ಸರ್ಕಾರ ಜನರ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ಜನಾಕ್ರೋಶದ ಕಟ್ಟೆಯೊಡೆದರೆ ಬಿಜೆಪಿಗೆ ಉಳಿಗಾಲವಿಲ್ಲ ಎನ್ನುವುದನ್ನು ಜೂನ್ 18ರ ಪ್ರತಿಭಟನೆಯಲ್ಲಿ ತೋರಿಸೋಣ” ಎಂದು ಉಮ್ಮರ್‌ ಬ್ಯಾರಿ ಸಾಲೆತ್ತೂರು ಹೇಳಿದ್ದಾರೆ.

“ತ್ಯಾಗ ಬಲಿದಾನಗಳಿಂದ ಕಟ್ಟಿದ ಈ ದೇಶವನ್ನು ಕೋಮುವಾದದಿಂದ ಉಳಿಸೋಣ..ನಾಳೆ ಜತೆಯಾಗಿ ನಡೆಯೋಣ.ನಮ್ಮ‌ವಿರೋಧವನ್ನು ದಾಖಲಿಸೋಣ” ಎಂದು ಗುಲಾಬಿ ಬಿಳಿಮಲೆಯವರು ತಿಳಿಸಿದ್ದಾರೆ.

“ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಸಾವಿರ ಕಂಬಗಳ ಬಸದಿ, ಧರ್ಮಸ್ಥಳ ಮಂಜುನಾಥ ದೇವಾಲಯ, ಉಲ್ಲಾಳ ಜುಮ್ಮಾ ಮಸೀದಿ, ಸಂತ ಅಲೋಸಿಯಸ್ ಚರ್ಚ್ ಕುರಿತ ಮಾಹಿತಿ ಕೈಬಿಟ್ಟ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ” ಮಧು ಕರೆಡೇವು ಕರವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಂಥ ಕನ್ನಡ ದ್ರೋಹಿಯನ್ನು ಪೋಷಿಸುತ್ತಿರುವ ಬಿಜೆಪಿ ಅಧಿಕಾರಕ್ಕೆ ಮತ್ತೆ ಬರದಿರಲಿ” ಎಂದು ಮನು ಟ್ವೀಟ್ ಎಚ್ಚರಿಸಿದ್ದಾರೆ.

“ಬುದ್ದ, ಕುವೆಂಪು, ಬಸವಣ್ಣ, ಅಂಬೇಡ್ಕರ್, ಕನ್ನಡ ನಾಡು, ನುಡಿ, ಬಾವುಟ, ಪ್ರಾದೇಶಿಕತೆಯ ಬಗ್ಗೆ ಕೀಳಾಗಿ ಮಾತನಾಡಿದ ಚಕ್ರತಿರ್ಥನ ಬಂಧನವಾಗಲಿ” ಎಂದು ದಿನೇಶ್ ದೊಡ್ಡಮನೆ ಆಗ್ರಹಿಸಿದ್ದಾರೆ.

“ಪದೇ ಪದೇ ನಾರಾಯಣಗುರುಗಳಿಗೆ ಅವಮಾನ ಮಾಡುವ ಮೂಲಕ ಬಿಜೆಪಿ ಸರ್ಕಾರ ಜನರ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ಜನಾಕ್ರೋಶದ ಕಟ್ಟೆಯೊಡೆದರೆ ಬಿಜೆಪಿಗೆ ಉಳಿಗಾಲವಿಲ್ಲ ಎನ್ನುವುದನ್ನು ಜೂನ್ 18ರ ಪ್ರತಿಭಟನೆಯಲ್ಲಿ ತೋರಿಸೋಣ” ಎಂದು ‘ಕೋಮುವಾದಿಗಳ ವಿರುದ್ಧ’ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಕಳ್ಳ ದೋಚಿಕೊಂಡು ಹೋದ ಮ್ಯಾಲೆ ದಿಡ್ಡಿ ಬಾಗಿಲು ಹಾಕಿದರಂತೆ . ಹಂಗಾಯ್ತು ಇವರ ಬಾಳು…. ಪರಿಷ್ಕ್ರುತ ಪಠ್ಯಪುಸ್ತಕ ಈಗಾಗಲೇ ಮಕ್ಕಳ ಕೈ ಸೇರಿ ಆಗಿದೆ… ಭಾಜಪದವರು ಒಳಗೊಳಗೆ ಎಲ್ಲಾ ಶಾಲೆಗಳಿಗೆ ಕಳುಹಿಸಿಕೊಟ್ಟಿದ್ದಾರೆ… ಇವರು ಇವತ್ತು ಒಂದು ದಿನ ಹೋರಾಟ ಮಾಡಿ ಸುಮ್ಮನಾಗ್ತಾರೆ. ಎಲ್ಲಾರೂ ಒಂದೇ ಬಿಡಿ. ನಾ ಹೊಡದಂಗ ಮಾಡ್ತೀನಿ… ನೀ ಅತ್ತಂಗ ಮಾಡು ಹಾಗಯ್ತು ಇವರ ಬಾಳು

  2. You are all opposing the revision of text book because the members of the committe are Brahmin. So your purpose is to oppose what ever Brahmins are doing. If you are really concerned then you must show before and after corrections and tell governament to reconsider it next year.
    Nanu gauri as a responsible media must be fair to all caste and community.

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...