Homeಕರ್ನಾಟಕಪಠ್ಯ ಪುಸ್ತಕ ಅದ್ವಾನ: ‘#ನಾಡದ್ರೋಹಿBJPಸರ್ಕಾರ’ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌

ಪಠ್ಯ ಪುಸ್ತಕ ಅದ್ವಾನ: ‘#ನಾಡದ್ರೋಹಿBJPಸರ್ಕಾರ’ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

ರಾಜ್ಯ ಸರ್ಕಾರ ನಡೆಸಿರುವ ‘ಪಠ್ಯಪುಸ್ತಕ ಹಗರಣ’ವನ್ನು ವಿರೋಧಿಸಿ ಜೂನ್‌ 18ರ ಶನಿವಾರದಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್‌ ಪ್ರತಿಭಟನಾ ರ್‍ಯಾಲಿಯ ಮುನ್ನವಾಗಿ ‘#ನಾಡದ್ರೋಹಿBJPಸರ್ಕಾರ’, ‘#BoycottRSStextbooks’ ಹ್ಯಾಷ್‌ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಟ್ರೆಂಡ್ ಆಗಿವೆ.

ಈ ಹ್ಯಾಷ್‌ಟ್ಯಾಗ್‌ನಲ್ಲಿ ಸಾವಿರಾರು ಟ್ವೀಟ್‌ಗಳನ್ನು ಮಾಡಲಾಗಿದೆ.

ಈ ಕುರಿತು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, “ಒಂದು ವೇಳೆ ಸರ್ಕಾರ ಕೂಡಲೇ ಪರಿಷ್ಕೃತ ಪಠ್ಯಗಳನ್ನು ಹಿಂದಕ್ಕೆ ಪಡೆಯದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುವುದು ಖಚಿತ. ಇಡೀ ರಾಜ್ಯದ ಶಾಂತಿ ಕದಡಿ ಹೋಗುತ್ತದೆ. ಅದರ ಹೊಣೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ. ಜನರನ್ನು ಎದುರುಹಾಕಿಕೊಂಡ ಸರ್ಕಾರಗಳು ಉಳಿಯುವುದಿಲ್ಲ. ಇದನ್ನು ಮರೆಯಬೇಡಿ” ಎಂದು ಎಚ್ಚರಿಸಿದ್ದಾರೆ.

“ಬಸವಣ್ಣ, ಅಲ್ಲಮಪ್ರಭು, ವಾಲ್ಮೀಕಿ, ಕನಕದಾಸ, ಪುರಂದರದಾಸ, ಶಂಕರಾಚಾರ್ಯ, ಶಿಶುನಾಳ ಶರೀಫ, ಕುವೆಂಪು ಮೊದಲುಗೊಂಡು ಕರ್ನಾಟಕದ ದಾರ್ಶನಿಕರು, ಸಂತರಿಗೆ ಪರಿಷ್ಕೃತ ಪಠ್ಯದಲ್ಲಿ ಅಪಮಾನಿಸಲಾಗಿದೆ. ಕನ್ನಡತನ, ಕನ್ನಡಾಭಿಮಾನಕ್ಕೆ ಕುತ್ತು ತರಲಾಗಿದೆ. ಇದನ್ನು ಒಪ್ಪಿಕೊಳ್ಳುವುದು ಸಾಧ್ಯವೇ ಇಲ್ಲ” ಎಂದಿದ್ದಾರೆ.

 

“ನಾಡ ದ್ರೋಹಿ ಕಪಟಿಗಳ ವಿರುದ್ಧ ನಡೆಯಲಿರುವ ನಾಳಿನ ಹೋರಾಟ ಪಕ್ಷಾತೀತವಾದದ್ದು. ಸರ್ವ ಜಾತಿ ಜನಾಂಗಗಳ ಹೋರಾಟ. ಬನ್ನಿ ಕೈ ಜೋಡಿಸಿ. ನಾಡ ರಕ್ಷಣೆಗೆ ಮುಂದಾಗಿ” ಎಂದು ಕಾಂಗ್ರೆಸ್ ನಾಯಕ ಪ್ರಕಾಶ್ ರಾಥೋಡ್ ಮನವಿ ಮಾಡಿದ್ದಾರೆ.

“ಬಸವಣ್ಣ ಅವರ ಬಗ್ಗೆ ಪರಿಷ್ಕೃತ ಪಠ್ಯದಲ್ಲಿ ಬರೆದಿರುವ ಮಾಹಿತಿ ತಪ್ಪು ಗ್ರಹಿಕೆಯಿಂದ ಕೂಡಿವೆ. ಸಂಸ್ಕೃತ ತೊರೆದು ಕನ್ನಡದ ಮೂಲಕ ದೇವರನ್ನು ಪೂಜಿಸುವ ಬಗೆ ತೋರಿದ್ದು ಬಸವಣ್ಣ. ವೀರಶೈವ ಮತ ಅಭಿವೃದ್ದಿ ಪಡಿಸಲಿಲ್ಲ ಬದಲಾಗಿ ವೈದಿಕ ಧರ್ಮಕ್ಕೆ ವಿರುದ್ಧವಾಗಿ ಲಿಂಗಾಯತ ಧರ್ಮ ಸ್ಥಾಪನೆ ಮಾಡಿದರು” ಎಂದು ಹಿರಿಯ ಪತ್ರಕರ್ತ ಬಸವರಾಜು ತಿಳಿಸಿದ್ದಾರೆ.

“ಬಿಟ್ಟಿ ಉಪದೇಶ ಹೇಳುವುದು, ಹಿಂದೂ ನಾವೆಲ್ಲ ಒಂದು. 10 ಜನ ಪಠ್ಯಪುಸ್ತಕ ಸಮಿತಿ ಸದಸ್ಯರಲ್ಲಿ 9 ಜನ ಬ್ರಾಹ್ಮಣರು. ಬೇರೆ ಜಾತಿಯಲ್ಲಿ ಶಿಕ್ಷಣ ತಜ್ಞರು ಇಲ್ಲವೇ!? ಬೇರೆ ಜಾತಿಯವರೆಲ್ಲಾ ದಡ್ಡರೂ ಅನ್ನುವ ಭಾವನೆ ಬಿಜೆಪಿಗರದ್ದೇ!?” ಎಂದು ‘ಬೆಳಗಾವಿ ರಾಯಣ್ಣ’ ಹೆಸರಿನ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

“ಟಿಪ್ಪು ಚರಿತ್ರೆ ತಿರುಚಿದ್ರು, ಸಂತ ಶರೀಫರನ್ನು ಆಚೆ ಇಟ್ರು, ಆಗ ಇದು ಸಾಬರ ವಿಷಯ ಅಂತ ಸುಮ್ನಾದ್ರು. ಈಗ ನಾರಾಯಣ ಗುರುಗಳ ವಿಷಯ ಬಂದಾಗ ಒಕ್ಕಲಿಗರು ಸುಮ್ನಾದ್ರೆ ನಾಳೆ ಕೆಂಪೇಗೌಡ ಬೆಂಗಳೂರು ಕಟ್ಟೆ ಇಲ್ಲ ಅಂತಾರೆ” ಎಂದು ಕನ್ನಡ ಕುಡಿ ಟ್ವಿಟರ್‌ ಖಾತೆ ಅಭಿಪ್ರಾಯಪಟ್ಟಿದೆ.

“ಸಾವಿತ್ರಿಬಾಯಿಫುಲೆ ಸೇರಿ ಮಹಿಳಾ ಸಮಾಜ ಸುಧಾರಕಿಯರ ಪಠ್ಯ ಕೈಬಿಟ್ಟ ಮಹಿಳಾ ವಿರೋಧಿ ಸರ್ಕಾರಕ್ಕೆ ಧಿಕ್ಕಾರ” ಎಂದು ಜೆ.ಎಸ್.ಪಾಟೀಲ್ ಟ್ವೀಟ್ ಮಾಡಿದ್ದಾರೆ.

“ಪದೇ ಪದೇ ನಾರಾಯಣಗುರುಗಳಿಗೆ ಅವಮಾನ ಮಾಡುವ ಮೂಲಕ ಬಿಜೆಪಿ ಸರ್ಕಾರ ಜನರ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ಜನಾಕ್ರೋಶದ ಕಟ್ಟೆಯೊಡೆದರೆ ಬಿಜೆಪಿಗೆ ಉಳಿಗಾಲವಿಲ್ಲ ಎನ್ನುವುದನ್ನು ಜೂನ್ 18ರ ಪ್ರತಿಭಟನೆಯಲ್ಲಿ ತೋರಿಸೋಣ” ಎಂದು ಉಮ್ಮರ್‌ ಬ್ಯಾರಿ ಸಾಲೆತ್ತೂರು ಹೇಳಿದ್ದಾರೆ.

“ತ್ಯಾಗ ಬಲಿದಾನಗಳಿಂದ ಕಟ್ಟಿದ ಈ ದೇಶವನ್ನು ಕೋಮುವಾದದಿಂದ ಉಳಿಸೋಣ..ನಾಳೆ ಜತೆಯಾಗಿ ನಡೆಯೋಣ.ನಮ್ಮ‌ವಿರೋಧವನ್ನು ದಾಖಲಿಸೋಣ” ಎಂದು ಗುಲಾಬಿ ಬಿಳಿಮಲೆಯವರು ತಿಳಿಸಿದ್ದಾರೆ.

“ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಸಾವಿರ ಕಂಬಗಳ ಬಸದಿ, ಧರ್ಮಸ್ಥಳ ಮಂಜುನಾಥ ದೇವಾಲಯ, ಉಲ್ಲಾಳ ಜುಮ್ಮಾ ಮಸೀದಿ, ಸಂತ ಅಲೋಸಿಯಸ್ ಚರ್ಚ್ ಕುರಿತ ಮಾಹಿತಿ ಕೈಬಿಟ್ಟ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ” ಮಧು ಕರೆಡೇವು ಕರವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಂಥ ಕನ್ನಡ ದ್ರೋಹಿಯನ್ನು ಪೋಷಿಸುತ್ತಿರುವ ಬಿಜೆಪಿ ಅಧಿಕಾರಕ್ಕೆ ಮತ್ತೆ ಬರದಿರಲಿ” ಎಂದು ಮನು ಟ್ವೀಟ್ ಎಚ್ಚರಿಸಿದ್ದಾರೆ.

“ಬುದ್ದ, ಕುವೆಂಪು, ಬಸವಣ್ಣ, ಅಂಬೇಡ್ಕರ್, ಕನ್ನಡ ನಾಡು, ನುಡಿ, ಬಾವುಟ, ಪ್ರಾದೇಶಿಕತೆಯ ಬಗ್ಗೆ ಕೀಳಾಗಿ ಮಾತನಾಡಿದ ಚಕ್ರತಿರ್ಥನ ಬಂಧನವಾಗಲಿ” ಎಂದು ದಿನೇಶ್ ದೊಡ್ಡಮನೆ ಆಗ್ರಹಿಸಿದ್ದಾರೆ.

“ಪದೇ ಪದೇ ನಾರಾಯಣಗುರುಗಳಿಗೆ ಅವಮಾನ ಮಾಡುವ ಮೂಲಕ ಬಿಜೆಪಿ ಸರ್ಕಾರ ಜನರ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ಜನಾಕ್ರೋಶದ ಕಟ್ಟೆಯೊಡೆದರೆ ಬಿಜೆಪಿಗೆ ಉಳಿಗಾಲವಿಲ್ಲ ಎನ್ನುವುದನ್ನು ಜೂನ್ 18ರ ಪ್ರತಿಭಟನೆಯಲ್ಲಿ ತೋರಿಸೋಣ” ಎಂದು ‘ಕೋಮುವಾದಿಗಳ ವಿರುದ್ಧ’ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಕಳ್ಳ ದೋಚಿಕೊಂಡು ಹೋದ ಮ್ಯಾಲೆ ದಿಡ್ಡಿ ಬಾಗಿಲು ಹಾಕಿದರಂತೆ . ಹಂಗಾಯ್ತು ಇವರ ಬಾಳು…. ಪರಿಷ್ಕ್ರುತ ಪಠ್ಯಪುಸ್ತಕ ಈಗಾಗಲೇ ಮಕ್ಕಳ ಕೈ ಸೇರಿ ಆಗಿದೆ… ಭಾಜಪದವರು ಒಳಗೊಳಗೆ ಎಲ್ಲಾ ಶಾಲೆಗಳಿಗೆ ಕಳುಹಿಸಿಕೊಟ್ಟಿದ್ದಾರೆ… ಇವರು ಇವತ್ತು ಒಂದು ದಿನ ಹೋರಾಟ ಮಾಡಿ ಸುಮ್ಮನಾಗ್ತಾರೆ. ಎಲ್ಲಾರೂ ಒಂದೇ ಬಿಡಿ. ನಾ ಹೊಡದಂಗ ಮಾಡ್ತೀನಿ… ನೀ ಅತ್ತಂಗ ಮಾಡು ಹಾಗಯ್ತು ಇವರ ಬಾಳು

  2. You are all opposing the revision of text book because the members of the committe are Brahmin. So your purpose is to oppose what ever Brahmins are doing. If you are really concerned then you must show before and after corrections and tell governament to reconsider it next year.
    Nanu gauri as a responsible media must be fair to all caste and community.

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...