Homeಕರ್ನಾಟಕಪಠ್ಯ ಪುಸ್ತಕ ಹಗರಣ - ಸಚಿವ ಬಿಸಿ ನಾಗೇಶ್‌ ‘ಮೂರ್ಖ’: ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ

ಪಠ್ಯ ಪುಸ್ತಕ ಹಗರಣ – ಸಚಿವ ಬಿಸಿ ನಾಗೇಶ್‌ ‘ಮೂರ್ಖ’: ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ

- Advertisement -
- Advertisement -

ರಾಜ್ಯದ ಪಠ್ಯ ಪುಸ್ತಕ ಹಗರಣದ ಕುರಿತು ಮಾತನಾಡಿದ ಹಿರಿಯ ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ ಅವರು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರನ್ನು ‘ಮೂರ್ಖ’ ಎಂದು ಬುಧವಾರ ಕರೆದಿದ್ದು, ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಕಲಾನಿಕೇತನ ಆಯೋಜಿಸಿದ್ದ ಪಠ್ಯ ಪುಸ್ತಕಗಳ ಪರಿಷ್ಕರಣೆ ಕುರಿತ ಸಂವಾದದಲ್ಲಿ ಮಾತನಾಡಿದ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ನಿರಂಜನಾರಾಧ್ಯ ಅವರು, ‘‘ಸಚಿವ ಬಿ ಸಿ ನಾಗೇಶ್ ಅವರು ಎಷ್ಟು ಮೂರ್ಖರೆಂದರೆ ಅವರಿಗೆ ಶಿಕ್ಷಣದ ಬಗ್ಗೆ ಜ್ಞಾನವೇ ಇಲ್ಲ’’ ಎಂದು ಕಿಡಿಕಾರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘‘ಸಚಿವರಿಗೆ ಕನಿಷ್ಠ ಸಾಮಾನ್ಯ ಜ್ಞಾನವಿದ್ದರೆ, ಪಠ್ಯಕ್ರಮದ ಚೌಕಟ್ಟು ಲಭ್ಯವಿಲ್ಲ ಎಂಬ ಕಾರಣ ನೀಡಿ ಪಠ್ಯಪುಸ್ತಕ ಪರಿಷ್ಕರಣೆಗೆ ನೇಮಕಗೊಂಡ ವ್ಯಕ್ತಿಯನ್ನು ತಡೆಯುತ್ತಿದ್ದರು. ಈ ಸಮಿತಿಯನ್ನು ಹಿಂದಿನ ಸಚಿವರು ರಚಿಸಿದ್ದರು. ಆದರೆ ಸಚಿವ ಸ್ಥಾನವನ್ನು ಬಿಸಿ ನಾಗೇಶ್‌ ವಹಿಸಿಕೊಂಡ ನಂತರ, ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಯಾವುದಾದರೂ ನಿಯಮಗಳಿವೆಯೇ ಎಂಬುವುದನ್ನು ಕೂಡಾ ಅವರು ಪರಿಶೀಲಿಸಿಲ್ಲ” ಎಂದು ನಿರಂಜನಾರಾಧ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಅವರು ಉದ್ದೇಶಪೂರ್ವಕವಾಗಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿದ್ದಾರೆ ಎಂದು ಸಚಿವರ ಈ ದುರಹಂಕಾರವೇ  ಎತ್ತಿ ತೋರಿಸುತ್ತದೆ” ಎಂದು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ಉಲ್ಲೇಖಿಸಿ ನಿರಂಜನಾರಾಧ್ಯ ಹೇಳಿದ್ದಾರೆ.

ಪರಿಷ್ಕೃತ ಪಠ್ಯಪುಸ್ತಕಗಳನ್ನು ಶಾಲಾ ಮಕ್ಕಳಿಗೆ ವಿತರಿಸಲು ಸರಕಾರಕ್ಕೆ ಯಾವ ನೈತಿಕತೆ ಇದೆ ಎಂದು ನಿರಂಜನಾರಾಧ್ಯ ಪ್ರಶ್ನಿಸಿದ್ದು, ‘‘ಪರಿಷ್ಕರಣೆ ಬಳಿಕ ಯಾವುದೇ ಸಮಸ್ಯೆಗಳಿದ್ದರೆ ಸಮಿತಿ ಅಧ್ಯಕ್ಷರೇ ಹೊಣೆಗಾರರಾಗುತ್ತಾರೆ ಎಂದು ಸರಕಾರವೇ ತನ್ನ ಆದೇಶದಲ್ಲಿ ಹೇಳಿರುವಾಗ, ಇಷ್ಟೊಂದು ಆಕ್ಷೇಪಣೆಗಳು ವ್ಯಕ್ತವಾಗುತ್ತಿದ್ದರೂ ಇಲಾಖೆ ಯಾವ ಪ್ರಮಾಣದಲ್ಲಿ ಪುಸ್ತಕಗಳನ್ನು ವಿತರಿಸುತ್ತಿದೆ?’’ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

ಕಾರ್ಯಕ್ರಮದಲ್ಲಿ ಹಿಂದಿನ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ನೇತೃತ್ವ ವಹಿಸಿದ್ದ ಹಿರಿಯ ಸಾಹಿತಿ, ಪ್ರೊಫೆಸರ್‌ ಬರಗೂರು ರಾಮಚಂದ್ರಪ್ಪ ಮಾತನಾಡಿ, ‘‘ರಾಜ್ಯದ ಧ್ವಜವನ್ನು ಒಳ ಉಡುಪಿಗೆ ಹೋಲಿಸಿದ, ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿದ ವ್ಯಕ್ತಿಯಿಂದ ಪ್ರಮಾಣ ಪತ್ರ ಪಡೆಯುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

ತಮ್ಮ ಸಮಿತಿ ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನು ಸಮರ್ಥಿಸಿಕೊಂಡ ಬರಗೂರು, “ನಾವು ಸಾವರ್ಕರ್ ಸೇರಿದಂತೆ ಯಾರ ಬಗ್ಗೆಯೂ ನಕಾರಾತ್ಮಕ ಮಾಹಿತಿಯನ್ನು ನೀಡಿಲ್ಲ” ಎಂದು ಹೇಳಿದ್ದಾರೆ.

“ಎಲ್ಲರಲ್ಲಿಯೂ ಧಾರ್ಮಿಕ ವಿಚಾರಧಾರೆ ಇರುವುದು ಸಾಮಾನ್ಯ. ಆದರೆ ಅದನ್ನು ಪಠ್ಯಪುಸ್ತಕಗಳ ಮೂಲಕ ಮಕ್ಕಳ ಮೇಲೆ ಹೇರುವುದು ಸ್ವೀಕಾರಾರ್ಹವಲ್ಲ. ಪಠ್ಯಪುಸ್ತಕಗಳನ್ನು ಬರೆಯುವಾಗ ಅಥವಾ ಪರಿಷ್ಕರಿಸುವಾಗ, ನಾವು ನಮ್ಮ ಸಿದ್ಧಾಂತದೊಂದಿಗೆ ಮಾನಸಿಕ ಅಂತರವನ್ನು ಕಾಯ್ದುಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌ ಸೇರಿಂದರೆ ಮತ್ತಿತರರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...