Homeಕರ್ನಾಟಕಪಠ್ಯಪುಸ್ತಕ ಮತ್ತು ದಲಿತ ಚಿಂತನೆಗಳ ಹೊರಗಿಡುವಿಕೆ

ಪಠ್ಯಪುಸ್ತಕ ಮತ್ತು ದಲಿತ ಚಿಂತನೆಗಳ ಹೊರಗಿಡುವಿಕೆ

- Advertisement -
- Advertisement -

ಭಾರತದ ಬಹುಸಂಖ್ಯಾತ ಮತೀಯವಾದವು ತನ್ನ ರಾಜಕೀಯ ಸಾಮಾಜಿಕ ಧಾರ್ಮಿಕ ಐಡಿಯಾಲಜಿಯನ್ನು ಹೇರಲು ಹೇಗೆ ಪಠ್ಯಪುಸ್ತಕಗಳನ್ನು ಪ್ರಮುಖ ಮಾಧ್ಯಮವಾಗಿಸಿಕೊಳ್ಳುತ್ತದೆ ಎಂಬುದು, ಈಚಿನ ಪಠ್ಯಪರಿಷ್ಕರಣೆಯ ಪ್ರಕರಣದಲ್ಲಿ ಸಾರ್ವಜನಿಕಗೊಂಡಿದೆ. ಈ ವಿವಾದದಲ್ಲಿ ಬಹಿರಂಗಗೊಂಡಿರುವ ಇನ್ನೊಂದು ಮುಖವೆಂದರೆ, ಅದು ಏನೆಲ್ಲವನ್ನು ಆಚೆಗಿಡುತ್ತದೆ ಅಥವಾ ಒಳಗೊಳ್ಳಲು ಅಳುಕುತ್ತದೆ ಎನ್ನುವುದು. ಅದು ಒಳಗೊಳ್ಳಲು ನಿರಾಕರಿಸುವ ಸಂಗತಿಗಳಲ್ಲಿ ಮುಸ್ಲಿಮರ ಕೊಡುಗೆ, ಸ್ತ್ರೀಸಮಾನತೆ
ಅಥವಾ ಲಿಂಗತಾರತಮ್ಯ ವಿರೋಧ, ಜಾತಿವಾದ ನಿರಾಕರಣೆ, ಸಮಾಜವಾದಿ ಆಶಯ ಹಾಗೂ ದಲಿತ ಚಿಂತನೆಗೆ ಸಂಬಂಧಿಸಿದವಾಗಿವೆ. ಈ ಟಿಪ್ಪಣಿಯಲ್ಲಿ ಕೊನೆಯ ಅಂಶದ ಬಗ್ಗೆ ಮಾತ್ರ ವಿಶ್ಲೇಷಿಸಲು ಯತ್ನಿಸಿದೆ.

ಇಲ್ಲಿ ದಲಿತ ಚಿಂತನೆಯೆಂದರೆ, ಜಾತಿಪದ್ಧತಿಯ ಕ್ರೌರ್ಯವನ್ನು ಕಾಣಿಸುವ, ದಲಿತರೇ ರೂಢಿಸಿಕೊಂಡಿರುವ ಭಾಷೆ, ಆಹಾರ, ಆಚರಣೆಗಳನ್ನು ಘನತೀಕರಿಸುವ; ಅಂಬೇಡ್ಕರ್ ಹಾಗೂ ಬೌದ್ಧಧಮ್ಮವನ್ನು ವಿಮೋಚನೆಯ ಹಾದಿಯೆಂದು ಕಾಣಿಸುವ ಆಶಯವುಳ್ಳ ಸಂಗತಿಗಳು. ತನ್ನ ಸಾಮಾಜಿಕ ರಾಜಕೀಯ ಬುನಾದಿಯ ವಿಸ್ತರಣೆಗಾಗಿ ದಲಿತರನ್ನು ಒಳಗೊಳ್ಳುವ, ಅವರಿಗೆ ಸ್ಥಾನಮಾನ ಕಲ್ಪಿಸುವ, ತನ್ನ ಸಿದ್ಧಾಂತದ ಪ್ರಚಾರಕ್ಕೆ ಬಳಸುವ ರಾಜಕಾರಣವನ್ನು ಮತೀಯವಾದವು ಸಮರ್ಥವಾಗಿ ಮಾಡಿಕೊಂಡು ಬಂದಿದೆ. ಅಂಬೇಡ್ಕರ್‌ವಾದದಲ್ಲಿ ರೂಪುಗೊಂಡ ದಲಿತ ನಾಯಕರನ್ನು ಕೂಡ ಒಳಗೊಂಡಿರುವುದು, ಅದರ ಸೈದ್ಧಾಂತಿಕ ತಂತ್ರಗಾರಿಕೆ ಮತ್ತು ರಾಜಕೀಯ ಯಶಸ್ಸಿನ ದೊಡ್ಡ ಸಾಧನೆಯಾಗಿದೆ. ಕಾಂಗ್ರೆಸ್ಸನ್ನು ಮತ್ತು ಮುಸ್ಲಿಮರನ್ನು ದುರುಳೀಕರಿಸಲು ಅಂಬೇಡ್ಕರ್ ಅವರು ನಿರ್ದಿಷ್ಟ ಚಾರಿತ್ರಿಕ ಸಂದರ್ಭದಲ್ಲಿ ಬರೆದ ಬರೆಹಗಳನ್ನು ತಂತ್ರಗಾರಿಕೆಯಿಂದ ಕೂಡ ವ್ಯಾಖ್ಯಾನಿಸುತ್ತಿದೆ. ಹಾಗಿದ್ದರೂ ಬಾಬಾಸಾಹೇಬರು ಪ್ರತಿಪಾದಿಸಿದ, ದಲಿತರ ವಿಮೋಚನೆಗೆ ಹಾದಿಹಾಸುವ ದಲಿತ ಚಿಂತನೆಯ ಮೇಲ್ಕಾಣಿಸಿದ ನಾಲ್ಕು ಅಂಶಗಳನ್ನು ಒಳಗೊಳ್ಳಲು ಅದು ಯಾಕೆ ಹಿಂಜರಿಯುತ್ತದೆ? ಯಾಕೆಂದರೆ, ಈ ನಾಲ್ಕು ಅಂಶಗಳು, ಹಿಂದುತ್ವದ ರಾಜಕಾರಣವನ್ನು, ಅರ್ಥಾತ್ ಅದರ ತಿರುಳಾದ ಬ್ರಾಹ್ಮಣವಾದವನ್ನು ಒಳಗಿನಿಂದಲೇ ಆಸ್ಫೋಟಿಸುತ್ತವೆ. ಹೀಗಾಗಿಯೇ ಅದು ಚೆನ್ನಣ್ಣ ವಾಲೀಕಾರರು ಬಾಬಾಸಾಹೇಬರ ಮೇಲೆ ಬರೆದ ಹಾಡನ್ನು ಕೈಬಿಟ್ಟಿದೆ. ಅರವಿಂದ ಮಾಲಗತ್ತಿಯವರ ಬುದ್ಧ ಮತ್ತು ಆತನ ಧಮ್ಮವನ್ನು ಕುರಿತ ಹಾಡನ್ನು ಹೊರಗಿಟ್ಟಿದೆ. ಬಸವಣ್ಣ ಅಂಬೇಡ್ಕರ್ ಬುದ್ಧ ಕುವೆಂಪು ಭಗತ್‌ಸಿಂಗ್ ಕುರಿತ ಅದರ ಆಳದಲ್ಲಿರುವ ಈ ಅಳುಕು ಮತ್ತು ಆತಂಕಗಳು, ಅದು ಮುಸ್ಲಿಮರ ಕ್ರೈಸ್ತರ ವಿರೋಧಿ ಎಂಬ ಜನಪ್ರಿಯ ಮಿಥ್ಯೆಯನ್ನು ಒಡೆದುಹಾಕಿವೆ. ಅದು ಕಟ್ಟಲಿರುವ ಸಮಾಜದಲ್ಲಿ ಮತ್ತು ದೇಶದಲ್ಲಿ ಯಾವೆಲ್ಲ ಸಂಗತಿಗಳು ಇರುತ್ತವೆ ಮತ್ತು ಇರುವುದಿಲ್ಲ ಎಂಬುದರ ಮುನ್ನೋಟವನ್ನು ಒದಗಿಸಿವೆ. ಆದ್ದರಿಂದ ಪರಿಷ್ಕೃತ ಪಠ್ಯಗಳು, ಮತೀಯವಾದಿ ಭಾರತದ ಪರಿಕಲ್ಪನೆಯಲ್ಲಿ (ಐಡಿಯಾ ಆಫ್ ಇಂಡಿಯಾ) ಯಾವೆಲ್ಲ ಮೌಲ್ಯಗಳ ಹೇರಿಕೆಯಾಗುತ್ತದೆ, ಯಾವನ್ನು ಬದಿಗೆ ಸರಿಸಲಾಗುತ್ತದೆ ಮತ್ತು ಯಾವನ್ನು ಮರೆಮಾಚಲಾಗುತ್ತದೆ ಎಂಬುದರ ಪ್ರಾತ್ಯಕ್ಷಿತೆಗಳಾಗಿವೆ. ಈ ಹಿನ್ನೆಲೆಯಲ್ಲಿ ಮತೀಯ ನಂಜಿನ ಪಠ್ಯಪುಸ್ತಕಗಳನ್ನು ಪ್ರತಿರೋಧಿಸುವ ಚಳವಳಿಯಲ್ಲಿ, ಬಸವ, ಕುವೆಂಪು, ಬುದ್ಧ ಮತ್ತು ಅಂಬೇಡ್ಕರ್ ನದಿಗಳು ಕೂಡಿರುವುದು ಆಕಸ್ಮಿಕವಾಗಿಲ್ಲ. ಈ ಪ್ರತಿರೋಧದ ಆಂದೋಲನವನ್ನು ದೇವನೂರರು ತಮ್ಮ ಪಠ್ಯ ಹಿಂತೆಗೆಯುವ ಮೂಲಕ ಆರಂಭಿಸಿರುವುದು ಕೂಡ ಆಕಸ್ಮಿಕವಾಗಿಲ್ಲ.


ಇದನ್ನೂ ಓದಿ: ಒಳಗೊಳ್ಳದ ಮಾದರಿಯ ಸರ್ಕಾರಕ್ಕೆ ವಿದೇಶದಿಂದ ಬಂದೊದಗಿದ ಘಾಸಿ

ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...