Homeಕರ್ನಾಟಕಪಠ್ಯಪುಸ್ತಕ ಮತ್ತು ದಲಿತ ಚಿಂತನೆಗಳ ಹೊರಗಿಡುವಿಕೆ

ಪಠ್ಯಪುಸ್ತಕ ಮತ್ತು ದಲಿತ ಚಿಂತನೆಗಳ ಹೊರಗಿಡುವಿಕೆ

- Advertisement -
- Advertisement -

ಭಾರತದ ಬಹುಸಂಖ್ಯಾತ ಮತೀಯವಾದವು ತನ್ನ ರಾಜಕೀಯ ಸಾಮಾಜಿಕ ಧಾರ್ಮಿಕ ಐಡಿಯಾಲಜಿಯನ್ನು ಹೇರಲು ಹೇಗೆ ಪಠ್ಯಪುಸ್ತಕಗಳನ್ನು ಪ್ರಮುಖ ಮಾಧ್ಯಮವಾಗಿಸಿಕೊಳ್ಳುತ್ತದೆ ಎಂಬುದು, ಈಚಿನ ಪಠ್ಯಪರಿಷ್ಕರಣೆಯ ಪ್ರಕರಣದಲ್ಲಿ ಸಾರ್ವಜನಿಕಗೊಂಡಿದೆ. ಈ ವಿವಾದದಲ್ಲಿ ಬಹಿರಂಗಗೊಂಡಿರುವ ಇನ್ನೊಂದು ಮುಖವೆಂದರೆ, ಅದು ಏನೆಲ್ಲವನ್ನು ಆಚೆಗಿಡುತ್ತದೆ ಅಥವಾ ಒಳಗೊಳ್ಳಲು ಅಳುಕುತ್ತದೆ ಎನ್ನುವುದು. ಅದು ಒಳಗೊಳ್ಳಲು ನಿರಾಕರಿಸುವ ಸಂಗತಿಗಳಲ್ಲಿ ಮುಸ್ಲಿಮರ ಕೊಡುಗೆ, ಸ್ತ್ರೀಸಮಾನತೆ
ಅಥವಾ ಲಿಂಗತಾರತಮ್ಯ ವಿರೋಧ, ಜಾತಿವಾದ ನಿರಾಕರಣೆ, ಸಮಾಜವಾದಿ ಆಶಯ ಹಾಗೂ ದಲಿತ ಚಿಂತನೆಗೆ ಸಂಬಂಧಿಸಿದವಾಗಿವೆ. ಈ ಟಿಪ್ಪಣಿಯಲ್ಲಿ ಕೊನೆಯ ಅಂಶದ ಬಗ್ಗೆ ಮಾತ್ರ ವಿಶ್ಲೇಷಿಸಲು ಯತ್ನಿಸಿದೆ.

ಇಲ್ಲಿ ದಲಿತ ಚಿಂತನೆಯೆಂದರೆ, ಜಾತಿಪದ್ಧತಿಯ ಕ್ರೌರ್ಯವನ್ನು ಕಾಣಿಸುವ, ದಲಿತರೇ ರೂಢಿಸಿಕೊಂಡಿರುವ ಭಾಷೆ, ಆಹಾರ, ಆಚರಣೆಗಳನ್ನು ಘನತೀಕರಿಸುವ; ಅಂಬೇಡ್ಕರ್ ಹಾಗೂ ಬೌದ್ಧಧಮ್ಮವನ್ನು ವಿಮೋಚನೆಯ ಹಾದಿಯೆಂದು ಕಾಣಿಸುವ ಆಶಯವುಳ್ಳ ಸಂಗತಿಗಳು. ತನ್ನ ಸಾಮಾಜಿಕ ರಾಜಕೀಯ ಬುನಾದಿಯ ವಿಸ್ತರಣೆಗಾಗಿ ದಲಿತರನ್ನು ಒಳಗೊಳ್ಳುವ, ಅವರಿಗೆ ಸ್ಥಾನಮಾನ ಕಲ್ಪಿಸುವ, ತನ್ನ ಸಿದ್ಧಾಂತದ ಪ್ರಚಾರಕ್ಕೆ ಬಳಸುವ ರಾಜಕಾರಣವನ್ನು ಮತೀಯವಾದವು ಸಮರ್ಥವಾಗಿ ಮಾಡಿಕೊಂಡು ಬಂದಿದೆ. ಅಂಬೇಡ್ಕರ್‌ವಾದದಲ್ಲಿ ರೂಪುಗೊಂಡ ದಲಿತ ನಾಯಕರನ್ನು ಕೂಡ ಒಳಗೊಂಡಿರುವುದು, ಅದರ ಸೈದ್ಧಾಂತಿಕ ತಂತ್ರಗಾರಿಕೆ ಮತ್ತು ರಾಜಕೀಯ ಯಶಸ್ಸಿನ ದೊಡ್ಡ ಸಾಧನೆಯಾಗಿದೆ. ಕಾಂಗ್ರೆಸ್ಸನ್ನು ಮತ್ತು ಮುಸ್ಲಿಮರನ್ನು ದುರುಳೀಕರಿಸಲು ಅಂಬೇಡ್ಕರ್ ಅವರು ನಿರ್ದಿಷ್ಟ ಚಾರಿತ್ರಿಕ ಸಂದರ್ಭದಲ್ಲಿ ಬರೆದ ಬರೆಹಗಳನ್ನು ತಂತ್ರಗಾರಿಕೆಯಿಂದ ಕೂಡ ವ್ಯಾಖ್ಯಾನಿಸುತ್ತಿದೆ. ಹಾಗಿದ್ದರೂ ಬಾಬಾಸಾಹೇಬರು ಪ್ರತಿಪಾದಿಸಿದ, ದಲಿತರ ವಿಮೋಚನೆಗೆ ಹಾದಿಹಾಸುವ ದಲಿತ ಚಿಂತನೆಯ ಮೇಲ್ಕಾಣಿಸಿದ ನಾಲ್ಕು ಅಂಶಗಳನ್ನು ಒಳಗೊಳ್ಳಲು ಅದು ಯಾಕೆ ಹಿಂಜರಿಯುತ್ತದೆ? ಯಾಕೆಂದರೆ, ಈ ನಾಲ್ಕು ಅಂಶಗಳು, ಹಿಂದುತ್ವದ ರಾಜಕಾರಣವನ್ನು, ಅರ್ಥಾತ್ ಅದರ ತಿರುಳಾದ ಬ್ರಾಹ್ಮಣವಾದವನ್ನು ಒಳಗಿನಿಂದಲೇ ಆಸ್ಫೋಟಿಸುತ್ತವೆ. ಹೀಗಾಗಿಯೇ ಅದು ಚೆನ್ನಣ್ಣ ವಾಲೀಕಾರರು ಬಾಬಾಸಾಹೇಬರ ಮೇಲೆ ಬರೆದ ಹಾಡನ್ನು ಕೈಬಿಟ್ಟಿದೆ. ಅರವಿಂದ ಮಾಲಗತ್ತಿಯವರ ಬುದ್ಧ ಮತ್ತು ಆತನ ಧಮ್ಮವನ್ನು ಕುರಿತ ಹಾಡನ್ನು ಹೊರಗಿಟ್ಟಿದೆ. ಬಸವಣ್ಣ ಅಂಬೇಡ್ಕರ್ ಬುದ್ಧ ಕುವೆಂಪು ಭಗತ್‌ಸಿಂಗ್ ಕುರಿತ ಅದರ ಆಳದಲ್ಲಿರುವ ಈ ಅಳುಕು ಮತ್ತು ಆತಂಕಗಳು, ಅದು ಮುಸ್ಲಿಮರ ಕ್ರೈಸ್ತರ ವಿರೋಧಿ ಎಂಬ ಜನಪ್ರಿಯ ಮಿಥ್ಯೆಯನ್ನು ಒಡೆದುಹಾಕಿವೆ. ಅದು ಕಟ್ಟಲಿರುವ ಸಮಾಜದಲ್ಲಿ ಮತ್ತು ದೇಶದಲ್ಲಿ ಯಾವೆಲ್ಲ ಸಂಗತಿಗಳು ಇರುತ್ತವೆ ಮತ್ತು ಇರುವುದಿಲ್ಲ ಎಂಬುದರ ಮುನ್ನೋಟವನ್ನು ಒದಗಿಸಿವೆ. ಆದ್ದರಿಂದ ಪರಿಷ್ಕೃತ ಪಠ್ಯಗಳು, ಮತೀಯವಾದಿ ಭಾರತದ ಪರಿಕಲ್ಪನೆಯಲ್ಲಿ (ಐಡಿಯಾ ಆಫ್ ಇಂಡಿಯಾ) ಯಾವೆಲ್ಲ ಮೌಲ್ಯಗಳ ಹೇರಿಕೆಯಾಗುತ್ತದೆ, ಯಾವನ್ನು ಬದಿಗೆ ಸರಿಸಲಾಗುತ್ತದೆ ಮತ್ತು ಯಾವನ್ನು ಮರೆಮಾಚಲಾಗುತ್ತದೆ ಎಂಬುದರ ಪ್ರಾತ್ಯಕ್ಷಿತೆಗಳಾಗಿವೆ. ಈ ಹಿನ್ನೆಲೆಯಲ್ಲಿ ಮತೀಯ ನಂಜಿನ ಪಠ್ಯಪುಸ್ತಕಗಳನ್ನು ಪ್ರತಿರೋಧಿಸುವ ಚಳವಳಿಯಲ್ಲಿ, ಬಸವ, ಕುವೆಂಪು, ಬುದ್ಧ ಮತ್ತು ಅಂಬೇಡ್ಕರ್ ನದಿಗಳು ಕೂಡಿರುವುದು ಆಕಸ್ಮಿಕವಾಗಿಲ್ಲ. ಈ ಪ್ರತಿರೋಧದ ಆಂದೋಲನವನ್ನು ದೇವನೂರರು ತಮ್ಮ ಪಠ್ಯ ಹಿಂತೆಗೆಯುವ ಮೂಲಕ ಆರಂಭಿಸಿರುವುದು ಕೂಡ ಆಕಸ್ಮಿಕವಾಗಿಲ್ಲ.


ಇದನ್ನೂ ಓದಿ: ಒಳಗೊಳ್ಳದ ಮಾದರಿಯ ಸರ್ಕಾರಕ್ಕೆ ವಿದೇಶದಿಂದ ಬಂದೊದಗಿದ ಘಾಸಿ

ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...