Homeಕರ್ನಾಟಕಪಠ್ಯಪುಸ್ತಕ ಮತ್ತು ದಲಿತ ಚಿಂತನೆಗಳ ಹೊರಗಿಡುವಿಕೆ

ಪಠ್ಯಪುಸ್ತಕ ಮತ್ತು ದಲಿತ ಚಿಂತನೆಗಳ ಹೊರಗಿಡುವಿಕೆ

- Advertisement -
- Advertisement -

ಭಾರತದ ಬಹುಸಂಖ್ಯಾತ ಮತೀಯವಾದವು ತನ್ನ ರಾಜಕೀಯ ಸಾಮಾಜಿಕ ಧಾರ್ಮಿಕ ಐಡಿಯಾಲಜಿಯನ್ನು ಹೇರಲು ಹೇಗೆ ಪಠ್ಯಪುಸ್ತಕಗಳನ್ನು ಪ್ರಮುಖ ಮಾಧ್ಯಮವಾಗಿಸಿಕೊಳ್ಳುತ್ತದೆ ಎಂಬುದು, ಈಚಿನ ಪಠ್ಯಪರಿಷ್ಕರಣೆಯ ಪ್ರಕರಣದಲ್ಲಿ ಸಾರ್ವಜನಿಕಗೊಂಡಿದೆ. ಈ ವಿವಾದದಲ್ಲಿ ಬಹಿರಂಗಗೊಂಡಿರುವ ಇನ್ನೊಂದು ಮುಖವೆಂದರೆ, ಅದು ಏನೆಲ್ಲವನ್ನು ಆಚೆಗಿಡುತ್ತದೆ ಅಥವಾ ಒಳಗೊಳ್ಳಲು ಅಳುಕುತ್ತದೆ ಎನ್ನುವುದು. ಅದು ಒಳಗೊಳ್ಳಲು ನಿರಾಕರಿಸುವ ಸಂಗತಿಗಳಲ್ಲಿ ಮುಸ್ಲಿಮರ ಕೊಡುಗೆ, ಸ್ತ್ರೀಸಮಾನತೆ
ಅಥವಾ ಲಿಂಗತಾರತಮ್ಯ ವಿರೋಧ, ಜಾತಿವಾದ ನಿರಾಕರಣೆ, ಸಮಾಜವಾದಿ ಆಶಯ ಹಾಗೂ ದಲಿತ ಚಿಂತನೆಗೆ ಸಂಬಂಧಿಸಿದವಾಗಿವೆ. ಈ ಟಿಪ್ಪಣಿಯಲ್ಲಿ ಕೊನೆಯ ಅಂಶದ ಬಗ್ಗೆ ಮಾತ್ರ ವಿಶ್ಲೇಷಿಸಲು ಯತ್ನಿಸಿದೆ.

ಇಲ್ಲಿ ದಲಿತ ಚಿಂತನೆಯೆಂದರೆ, ಜಾತಿಪದ್ಧತಿಯ ಕ್ರೌರ್ಯವನ್ನು ಕಾಣಿಸುವ, ದಲಿತರೇ ರೂಢಿಸಿಕೊಂಡಿರುವ ಭಾಷೆ, ಆಹಾರ, ಆಚರಣೆಗಳನ್ನು ಘನತೀಕರಿಸುವ; ಅಂಬೇಡ್ಕರ್ ಹಾಗೂ ಬೌದ್ಧಧಮ್ಮವನ್ನು ವಿಮೋಚನೆಯ ಹಾದಿಯೆಂದು ಕಾಣಿಸುವ ಆಶಯವುಳ್ಳ ಸಂಗತಿಗಳು. ತನ್ನ ಸಾಮಾಜಿಕ ರಾಜಕೀಯ ಬುನಾದಿಯ ವಿಸ್ತರಣೆಗಾಗಿ ದಲಿತರನ್ನು ಒಳಗೊಳ್ಳುವ, ಅವರಿಗೆ ಸ್ಥಾನಮಾನ ಕಲ್ಪಿಸುವ, ತನ್ನ ಸಿದ್ಧಾಂತದ ಪ್ರಚಾರಕ್ಕೆ ಬಳಸುವ ರಾಜಕಾರಣವನ್ನು ಮತೀಯವಾದವು ಸಮರ್ಥವಾಗಿ ಮಾಡಿಕೊಂಡು ಬಂದಿದೆ. ಅಂಬೇಡ್ಕರ್‌ವಾದದಲ್ಲಿ ರೂಪುಗೊಂಡ ದಲಿತ ನಾಯಕರನ್ನು ಕೂಡ ಒಳಗೊಂಡಿರುವುದು, ಅದರ ಸೈದ್ಧಾಂತಿಕ ತಂತ್ರಗಾರಿಕೆ ಮತ್ತು ರಾಜಕೀಯ ಯಶಸ್ಸಿನ ದೊಡ್ಡ ಸಾಧನೆಯಾಗಿದೆ. ಕಾಂಗ್ರೆಸ್ಸನ್ನು ಮತ್ತು ಮುಸ್ಲಿಮರನ್ನು ದುರುಳೀಕರಿಸಲು ಅಂಬೇಡ್ಕರ್ ಅವರು ನಿರ್ದಿಷ್ಟ ಚಾರಿತ್ರಿಕ ಸಂದರ್ಭದಲ್ಲಿ ಬರೆದ ಬರೆಹಗಳನ್ನು ತಂತ್ರಗಾರಿಕೆಯಿಂದ ಕೂಡ ವ್ಯಾಖ್ಯಾನಿಸುತ್ತಿದೆ. ಹಾಗಿದ್ದರೂ ಬಾಬಾಸಾಹೇಬರು ಪ್ರತಿಪಾದಿಸಿದ, ದಲಿತರ ವಿಮೋಚನೆಗೆ ಹಾದಿಹಾಸುವ ದಲಿತ ಚಿಂತನೆಯ ಮೇಲ್ಕಾಣಿಸಿದ ನಾಲ್ಕು ಅಂಶಗಳನ್ನು ಒಳಗೊಳ್ಳಲು ಅದು ಯಾಕೆ ಹಿಂಜರಿಯುತ್ತದೆ? ಯಾಕೆಂದರೆ, ಈ ನಾಲ್ಕು ಅಂಶಗಳು, ಹಿಂದುತ್ವದ ರಾಜಕಾರಣವನ್ನು, ಅರ್ಥಾತ್ ಅದರ ತಿರುಳಾದ ಬ್ರಾಹ್ಮಣವಾದವನ್ನು ಒಳಗಿನಿಂದಲೇ ಆಸ್ಫೋಟಿಸುತ್ತವೆ. ಹೀಗಾಗಿಯೇ ಅದು ಚೆನ್ನಣ್ಣ ವಾಲೀಕಾರರು ಬಾಬಾಸಾಹೇಬರ ಮೇಲೆ ಬರೆದ ಹಾಡನ್ನು ಕೈಬಿಟ್ಟಿದೆ. ಅರವಿಂದ ಮಾಲಗತ್ತಿಯವರ ಬುದ್ಧ ಮತ್ತು ಆತನ ಧಮ್ಮವನ್ನು ಕುರಿತ ಹಾಡನ್ನು ಹೊರಗಿಟ್ಟಿದೆ. ಬಸವಣ್ಣ ಅಂಬೇಡ್ಕರ್ ಬುದ್ಧ ಕುವೆಂಪು ಭಗತ್‌ಸಿಂಗ್ ಕುರಿತ ಅದರ ಆಳದಲ್ಲಿರುವ ಈ ಅಳುಕು ಮತ್ತು ಆತಂಕಗಳು, ಅದು ಮುಸ್ಲಿಮರ ಕ್ರೈಸ್ತರ ವಿರೋಧಿ ಎಂಬ ಜನಪ್ರಿಯ ಮಿಥ್ಯೆಯನ್ನು ಒಡೆದುಹಾಕಿವೆ. ಅದು ಕಟ್ಟಲಿರುವ ಸಮಾಜದಲ್ಲಿ ಮತ್ತು ದೇಶದಲ್ಲಿ ಯಾವೆಲ್ಲ ಸಂಗತಿಗಳು ಇರುತ್ತವೆ ಮತ್ತು ಇರುವುದಿಲ್ಲ ಎಂಬುದರ ಮುನ್ನೋಟವನ್ನು ಒದಗಿಸಿವೆ. ಆದ್ದರಿಂದ ಪರಿಷ್ಕೃತ ಪಠ್ಯಗಳು, ಮತೀಯವಾದಿ ಭಾರತದ ಪರಿಕಲ್ಪನೆಯಲ್ಲಿ (ಐಡಿಯಾ ಆಫ್ ಇಂಡಿಯಾ) ಯಾವೆಲ್ಲ ಮೌಲ್ಯಗಳ ಹೇರಿಕೆಯಾಗುತ್ತದೆ, ಯಾವನ್ನು ಬದಿಗೆ ಸರಿಸಲಾಗುತ್ತದೆ ಮತ್ತು ಯಾವನ್ನು ಮರೆಮಾಚಲಾಗುತ್ತದೆ ಎಂಬುದರ ಪ್ರಾತ್ಯಕ್ಷಿತೆಗಳಾಗಿವೆ. ಈ ಹಿನ್ನೆಲೆಯಲ್ಲಿ ಮತೀಯ ನಂಜಿನ ಪಠ್ಯಪುಸ್ತಕಗಳನ್ನು ಪ್ರತಿರೋಧಿಸುವ ಚಳವಳಿಯಲ್ಲಿ, ಬಸವ, ಕುವೆಂಪು, ಬುದ್ಧ ಮತ್ತು ಅಂಬೇಡ್ಕರ್ ನದಿಗಳು ಕೂಡಿರುವುದು ಆಕಸ್ಮಿಕವಾಗಿಲ್ಲ. ಈ ಪ್ರತಿರೋಧದ ಆಂದೋಲನವನ್ನು ದೇವನೂರರು ತಮ್ಮ ಪಠ್ಯ ಹಿಂತೆಗೆಯುವ ಮೂಲಕ ಆರಂಭಿಸಿರುವುದು ಕೂಡ ಆಕಸ್ಮಿಕವಾಗಿಲ್ಲ.


ಇದನ್ನೂ ಓದಿ: ಒಳಗೊಳ್ಳದ ಮಾದರಿಯ ಸರ್ಕಾರಕ್ಕೆ ವಿದೇಶದಿಂದ ಬಂದೊದಗಿದ ಘಾಸಿ

ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...