Homeಕರ್ನಾಟಕಪಠ್ಯಪುಸ್ತಕ ಮತ್ತು ದಲಿತ ಚಿಂತನೆಗಳ ಹೊರಗಿಡುವಿಕೆ

ಪಠ್ಯಪುಸ್ತಕ ಮತ್ತು ದಲಿತ ಚಿಂತನೆಗಳ ಹೊರಗಿಡುವಿಕೆ

- Advertisement -
- Advertisement -

ಭಾರತದ ಬಹುಸಂಖ್ಯಾತ ಮತೀಯವಾದವು ತನ್ನ ರಾಜಕೀಯ ಸಾಮಾಜಿಕ ಧಾರ್ಮಿಕ ಐಡಿಯಾಲಜಿಯನ್ನು ಹೇರಲು ಹೇಗೆ ಪಠ್ಯಪುಸ್ತಕಗಳನ್ನು ಪ್ರಮುಖ ಮಾಧ್ಯಮವಾಗಿಸಿಕೊಳ್ಳುತ್ತದೆ ಎಂಬುದು, ಈಚಿನ ಪಠ್ಯಪರಿಷ್ಕರಣೆಯ ಪ್ರಕರಣದಲ್ಲಿ ಸಾರ್ವಜನಿಕಗೊಂಡಿದೆ. ಈ ವಿವಾದದಲ್ಲಿ ಬಹಿರಂಗಗೊಂಡಿರುವ ಇನ್ನೊಂದು ಮುಖವೆಂದರೆ, ಅದು ಏನೆಲ್ಲವನ್ನು ಆಚೆಗಿಡುತ್ತದೆ ಅಥವಾ ಒಳಗೊಳ್ಳಲು ಅಳುಕುತ್ತದೆ ಎನ್ನುವುದು. ಅದು ಒಳಗೊಳ್ಳಲು ನಿರಾಕರಿಸುವ ಸಂಗತಿಗಳಲ್ಲಿ ಮುಸ್ಲಿಮರ ಕೊಡುಗೆ, ಸ್ತ್ರೀಸಮಾನತೆ
ಅಥವಾ ಲಿಂಗತಾರತಮ್ಯ ವಿರೋಧ, ಜಾತಿವಾದ ನಿರಾಕರಣೆ, ಸಮಾಜವಾದಿ ಆಶಯ ಹಾಗೂ ದಲಿತ ಚಿಂತನೆಗೆ ಸಂಬಂಧಿಸಿದವಾಗಿವೆ. ಈ ಟಿಪ್ಪಣಿಯಲ್ಲಿ ಕೊನೆಯ ಅಂಶದ ಬಗ್ಗೆ ಮಾತ್ರ ವಿಶ್ಲೇಷಿಸಲು ಯತ್ನಿಸಿದೆ.

ಇಲ್ಲಿ ದಲಿತ ಚಿಂತನೆಯೆಂದರೆ, ಜಾತಿಪದ್ಧತಿಯ ಕ್ರೌರ್ಯವನ್ನು ಕಾಣಿಸುವ, ದಲಿತರೇ ರೂಢಿಸಿಕೊಂಡಿರುವ ಭಾಷೆ, ಆಹಾರ, ಆಚರಣೆಗಳನ್ನು ಘನತೀಕರಿಸುವ; ಅಂಬೇಡ್ಕರ್ ಹಾಗೂ ಬೌದ್ಧಧಮ್ಮವನ್ನು ವಿಮೋಚನೆಯ ಹಾದಿಯೆಂದು ಕಾಣಿಸುವ ಆಶಯವುಳ್ಳ ಸಂಗತಿಗಳು. ತನ್ನ ಸಾಮಾಜಿಕ ರಾಜಕೀಯ ಬುನಾದಿಯ ವಿಸ್ತರಣೆಗಾಗಿ ದಲಿತರನ್ನು ಒಳಗೊಳ್ಳುವ, ಅವರಿಗೆ ಸ್ಥಾನಮಾನ ಕಲ್ಪಿಸುವ, ತನ್ನ ಸಿದ್ಧಾಂತದ ಪ್ರಚಾರಕ್ಕೆ ಬಳಸುವ ರಾಜಕಾರಣವನ್ನು ಮತೀಯವಾದವು ಸಮರ್ಥವಾಗಿ ಮಾಡಿಕೊಂಡು ಬಂದಿದೆ. ಅಂಬೇಡ್ಕರ್‌ವಾದದಲ್ಲಿ ರೂಪುಗೊಂಡ ದಲಿತ ನಾಯಕರನ್ನು ಕೂಡ ಒಳಗೊಂಡಿರುವುದು, ಅದರ ಸೈದ್ಧಾಂತಿಕ ತಂತ್ರಗಾರಿಕೆ ಮತ್ತು ರಾಜಕೀಯ ಯಶಸ್ಸಿನ ದೊಡ್ಡ ಸಾಧನೆಯಾಗಿದೆ. ಕಾಂಗ್ರೆಸ್ಸನ್ನು ಮತ್ತು ಮುಸ್ಲಿಮರನ್ನು ದುರುಳೀಕರಿಸಲು ಅಂಬೇಡ್ಕರ್ ಅವರು ನಿರ್ದಿಷ್ಟ ಚಾರಿತ್ರಿಕ ಸಂದರ್ಭದಲ್ಲಿ ಬರೆದ ಬರೆಹಗಳನ್ನು ತಂತ್ರಗಾರಿಕೆಯಿಂದ ಕೂಡ ವ್ಯಾಖ್ಯಾನಿಸುತ್ತಿದೆ. ಹಾಗಿದ್ದರೂ ಬಾಬಾಸಾಹೇಬರು ಪ್ರತಿಪಾದಿಸಿದ, ದಲಿತರ ವಿಮೋಚನೆಗೆ ಹಾದಿಹಾಸುವ ದಲಿತ ಚಿಂತನೆಯ ಮೇಲ್ಕಾಣಿಸಿದ ನಾಲ್ಕು ಅಂಶಗಳನ್ನು ಒಳಗೊಳ್ಳಲು ಅದು ಯಾಕೆ ಹಿಂಜರಿಯುತ್ತದೆ? ಯಾಕೆಂದರೆ, ಈ ನಾಲ್ಕು ಅಂಶಗಳು, ಹಿಂದುತ್ವದ ರಾಜಕಾರಣವನ್ನು, ಅರ್ಥಾತ್ ಅದರ ತಿರುಳಾದ ಬ್ರಾಹ್ಮಣವಾದವನ್ನು ಒಳಗಿನಿಂದಲೇ ಆಸ್ಫೋಟಿಸುತ್ತವೆ. ಹೀಗಾಗಿಯೇ ಅದು ಚೆನ್ನಣ್ಣ ವಾಲೀಕಾರರು ಬಾಬಾಸಾಹೇಬರ ಮೇಲೆ ಬರೆದ ಹಾಡನ್ನು ಕೈಬಿಟ್ಟಿದೆ. ಅರವಿಂದ ಮಾಲಗತ್ತಿಯವರ ಬುದ್ಧ ಮತ್ತು ಆತನ ಧಮ್ಮವನ್ನು ಕುರಿತ ಹಾಡನ್ನು ಹೊರಗಿಟ್ಟಿದೆ. ಬಸವಣ್ಣ ಅಂಬೇಡ್ಕರ್ ಬುದ್ಧ ಕುವೆಂಪು ಭಗತ್‌ಸಿಂಗ್ ಕುರಿತ ಅದರ ಆಳದಲ್ಲಿರುವ ಈ ಅಳುಕು ಮತ್ತು ಆತಂಕಗಳು, ಅದು ಮುಸ್ಲಿಮರ ಕ್ರೈಸ್ತರ ವಿರೋಧಿ ಎಂಬ ಜನಪ್ರಿಯ ಮಿಥ್ಯೆಯನ್ನು ಒಡೆದುಹಾಕಿವೆ. ಅದು ಕಟ್ಟಲಿರುವ ಸಮಾಜದಲ್ಲಿ ಮತ್ತು ದೇಶದಲ್ಲಿ ಯಾವೆಲ್ಲ ಸಂಗತಿಗಳು ಇರುತ್ತವೆ ಮತ್ತು ಇರುವುದಿಲ್ಲ ಎಂಬುದರ ಮುನ್ನೋಟವನ್ನು ಒದಗಿಸಿವೆ. ಆದ್ದರಿಂದ ಪರಿಷ್ಕೃತ ಪಠ್ಯಗಳು, ಮತೀಯವಾದಿ ಭಾರತದ ಪರಿಕಲ್ಪನೆಯಲ್ಲಿ (ಐಡಿಯಾ ಆಫ್ ಇಂಡಿಯಾ) ಯಾವೆಲ್ಲ ಮೌಲ್ಯಗಳ ಹೇರಿಕೆಯಾಗುತ್ತದೆ, ಯಾವನ್ನು ಬದಿಗೆ ಸರಿಸಲಾಗುತ್ತದೆ ಮತ್ತು ಯಾವನ್ನು ಮರೆಮಾಚಲಾಗುತ್ತದೆ ಎಂಬುದರ ಪ್ರಾತ್ಯಕ್ಷಿತೆಗಳಾಗಿವೆ. ಈ ಹಿನ್ನೆಲೆಯಲ್ಲಿ ಮತೀಯ ನಂಜಿನ ಪಠ್ಯಪುಸ್ತಕಗಳನ್ನು ಪ್ರತಿರೋಧಿಸುವ ಚಳವಳಿಯಲ್ಲಿ, ಬಸವ, ಕುವೆಂಪು, ಬುದ್ಧ ಮತ್ತು ಅಂಬೇಡ್ಕರ್ ನದಿಗಳು ಕೂಡಿರುವುದು ಆಕಸ್ಮಿಕವಾಗಿಲ್ಲ. ಈ ಪ್ರತಿರೋಧದ ಆಂದೋಲನವನ್ನು ದೇವನೂರರು ತಮ್ಮ ಪಠ್ಯ ಹಿಂತೆಗೆಯುವ ಮೂಲಕ ಆರಂಭಿಸಿರುವುದು ಕೂಡ ಆಕಸ್ಮಿಕವಾಗಿಲ್ಲ.


ಇದನ್ನೂ ಓದಿ: ಒಳಗೊಳ್ಳದ ಮಾದರಿಯ ಸರ್ಕಾರಕ್ಕೆ ವಿದೇಶದಿಂದ ಬಂದೊದಗಿದ ಘಾಸಿ

ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....