Homeಕರ್ನಾಟಕಕುವೆಂಪು & ನಾಡಗೀತೆ ನಿಂದಕನಿಗೆ ಪಠ್ಯ ಪರಿಷ್ಕರಣೆ ಜವಾಬ್ದಾರಿ: ಮುಂದುವರೆದ ಪ್ರತಿಭಟನೆಗಳು

ಕುವೆಂಪು & ನಾಡಗೀತೆ ನಿಂದಕನಿಗೆ ಪಠ್ಯ ಪರಿಷ್ಕರಣೆ ಜವಾಬ್ದಾರಿ: ಮುಂದುವರೆದ ಪ್ರತಿಭಟನೆಗಳು

- Advertisement -
- Advertisement -

ರಾಜ್ಯ ಪಠ್ಯ ಪುಸ್ತಕ ಮರು ಪರಿಷ್ಕರಣೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಸೋಮವಾರವೂ ಮುಂದುವರೆದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಕಡೆಯು ಇಂದು ಪ್ರತಿಭಟನೆ ಮುಂದುವರೆದಿದೆ. ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯ, ಮೈಸೂರು ಬ್ಯಾಂಕ್ ವೃತ್ತ ಹಾಗೂ ರಾಯಚೂರಿನ ಸಿಂಧನೂರಿನಲ್ಲಿ ಪ್ರತಿಭಟನೆಗಳು ದಾಖಲಾಗಿವೆ.

ರಾಷ್ಟ್ರಕವಿ ಕುವೆಂಪು ಮತ್ತು ನಾಡಗೀತೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅವಮಾನ ಮಾಡಿದ ಪಠ್ಯ ಪುಸ್ತಕ ಮರು ಪರಿಷ್ಕರಣಾ ಸಮಿತಿಯನ್ನು ರದ್ದುಪಡಿಸಿ, ಬರಗೂರು ರಾಮಚಂದ್ರಪ್ಪ ಸಮಿತಿಯ ಪಠ್ಯವನ್ನು ಅಳವಡಿಸಲು ಒತ್ತಾಯಿಸಿ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ಬಳಿ ಪ್ರತಿಭಟನೆ ವಕೀಲರು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಯಚೂರಿನ ಸಿಂಧನೂರಿನಲ್ಲಿ ಪ್ರತಿಭಟನೆ

ರಾಷ್ಟ್ರಕವಿ ಕುವೆಂಪು ಅವರನ್ನು ಅಗೌರವಸಿ ಪಠ್ಯ ಪುಸ್ತಕಗಳನ್ನು ಕಲುಷಿತಗೊಳಿಸುತ್ತಿರುವ ರೋಹಿತ್ ಚಕ್ರತೀರ್ಥ ಅವರನ್ನು ವಜಾಗೊಳಿಸಬೇಕು ಹಾಗೂ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿ, ‘ಜನತಾಂತ್ರಿಕ ಶಿಕ್ಷಣಕ್ಕಾಗಿ ಜಾಗೃತ ನಾಗರಿಕರ ವೇದಿಕೆ’, ‘ಮನುಜಮತ ಬಳಗ ಸಿಂಧನೂರು’ ಸಂಘಟನೆಗಳ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ಸಿಂಧನೂರು ತಹಶಿಲ್ದಾರರ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.

ಪಠ್ಯಪುಸ್ತಕಗಳಲ್ಲಿ ಮನುವಾದಿ ಚಿಂತನೆಗಳ ಪಾಠಗಳನ್ನು ಸೇರಿಸುವ ಮೂಲಕ ಶಿಕ್ಷಣವನ್ನು ಕೇಸರಿಣಗೊಳಿಸಿ ಮಕ್ಕಳ ಭವಿಷ್ಯವನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಹಾಳುಗೆಡುವಲು ಹೊರಟಿದೆ. ಇದು ಶಿಕ್ಷಣ ಕ್ಷೇತ್ರಕ್ಕಷ್ಟೇ ಅಲ್ಲದೇ ನಾಡಿಗೆ ದೊಡ್ಡ ಆಪತ್ತು ತರಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕುವೆಂಪು ಭಾವಚಿತ್ರ ಬೆಳ್ಳಿರಥದಲ್ಲಿ ಮೆರವಣಿಗೆ

ನಾಡಗೀತೆ ಹಾಗು ರಾಷ್ಟ್ರಕವಿ ಕುವೆಂಪು ಪರವಾಗಿ ವಾಟಾಳ್ ನಾಗಾರಾಜ್‌ ನೇತೃತ್ವದ ‘ಕನ್ನಡ ಚಳವಳಿ ವಾಟಾಳ್‌ ಪಕ್ಷ’ದ ವತಿಯಿಂದ ಕುವೆಂಪು ಅವರ ಆಳೆತ್ತರದ ಭಾವಚಿತ್ರವನ್ನು ಬೆಳ್ಳಿರಥದಲ್ಲಿ ಇಟ್ಟು ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದ ಬಳಿಯಿಂದ ಕೆಂಪೇಗೌಡ ಬಸ್‌ ನಿಲ್ದಾಣದವರೆಗೆ ಮೆರವಣಿಗೆ ಮಾಡಲಾಗಿದೆ.

ಮೆರವಣಿಗೆಯ ಉದ್ದಕ್ಕೂ ‘ನಾಡಗೀತೆ’ಯನ್ನು ನುಡಿಸಲಾಗಿದ್ದು, ಕುವೆಂಪು ಅವರಿಗೆ ಭಾರತರತ್ನ ನೀಡಬೇಕು ಎಂದು ವಾಟಾಲ್ ನಾಗರಾಜ್ ಅವರು ಆಗ್ರಹಿಸಿದ್ದಾರೆ.

ಸಮಿತಿಯ ರದ್ದತಿಗಾಗಿ ಮತ್ತು ಪರಿಷ್ಕರಣೆ ಮಾಡಿರುವ ಪಠ್ಯವನ್ನು ಕೈಬಿಟ್ಟು ಹಳೆಯ ಪಠ್ಯವನ್ನೇ ತರಬೇಕು ಎಂದು ಆಗ್ರಹಿಸಿ ರಾಜ್ಯದ ಹಲವು ವಿದ್ಯಾರ್ಥಿ ಸಂಘಟನೆಗಳು ಮಂಗಳವಾರದಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿವೆ.

ಇಷ್ಟೇ ಅಲ್ಲದೆ, ಪಠ್ಯ ಪುಸ್ತಕ ಸಮಿತಿಯನ್ನು ವಿರೋಧಿಸಿ ಜೂನ್‌ 10ರಂದು ದಲಿತ, ರೈತ ಸಂಘಟನೆಗಳು ಸೇರಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ತೀರ್ಮಾನ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...