Homeಕರ್ನಾಟಕಆದೇಶ ಇಲ್ಲದೆ ಪಠ್ಯಪರಿಷ್ಕರಣೆ; ಜನಾಕ್ರೋಶದ ನಡುವೆ ‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ!

ಆದೇಶ ಇಲ್ಲದೆ ಪಠ್ಯಪರಿಷ್ಕರಣೆ; ಜನಾಕ್ರೋಶದ ನಡುವೆ ‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ!

- Advertisement -
- Advertisement -

ಆದೇಶ ಇಲ್ಲದೆ ಪಠ್ಯ ಪರಿಷ್ಕರಣೆ ಮಾಡಿರುವ ಸಂಗತಿ ವರಿದಿಯಾಗಿದ್ದು, ಸರ್ಕಾರದ ನಿರ್ಲಕ್ಷದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಬಿ.ಸಿ.ನಾಗೇಶ್‌ ರಾಜೀನಾಮೆ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ.

ಆದೇಶವಿಲ್ಲದೆ ಪಠ್ಯಪರಿಷ್ಕರಣೆಯಾಗಿರುವ ಕುರಿತು ಕನ್ನಡದ ವಿಶ್ವಾಸಾರ್ಹ ದಿನಪತ್ರಿಕೆ ‘ಪ್ರಜಾವಾಣಿ’ ವರದಿ ಮಾಡಿದೆ. “2022–23ನೇ ಸಾಲಿಗೆ ಪರಿಷ್ಕೃತ ಪಠ್ಯಪುಸ್ತಕಗಳನ್ನುಮುದ್ರಿಸಿ ವಿತರಿಸುವ ಬಗ್ಗೆ ಮಾರ್ಚ್‌ 9 ರಂದು ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದಲ್ಲಿ, ‘ಪಠ್ಯಪುಸ್ತಕಗಳನ್ನು ಪರಿಷ್ಕೃತಗೊಳಿಸಿರುವುದಕ್ಕೆ ಘಟನೋತ್ತರ ಅನುಮತಿ ನೀಡಿ, ಮುದ್ರಿಸಲು ಸೂಚಿಸಲಾಗಿದೆ’ ಎಂಬ ಉಲ್ಲೇಖವಿದೆ” ಎಂದು ವರದಿ ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸರ್ಕಾರದ ಕೆಲಸವನ್ನೋ ಅಥವಾ ಕಾಮಗಾರಿಗೆ ಅನುದಾನ ಕೊಡಿಸಿಯೇ ತೀರುವೆಎಂಬ ವಿಶ್ವಾಸ ಇರುವ ಮುಖ್ಯಮಂತ್ರಿ ಅಥವಾ ಸಚಿವರು ಅಧಿಕೃತ ಆದೇಶ ಇಲ್ಲದೇ ಕೆಲಸ ಮಾಡಿಸುತ್ತಾರೆ. ಕೆಲಸ ಮುಗಿದ ಮೇಲೆ ಘಟನೋತ್ತರ ಅನುಮತಿ/ ಆದೇಶ ಹೊರಡಿಸುವ ಪರಿಪಾಟ ಇದೆ. ಮೌಖಿಕ ಸೂಚನೆ ಮೇರೆಗೆ ಪಠ್ಯಪುಸ್ತಕ ಪರಿಷ್ಕರಣೆಗೆ ಅವಕಾಶ ಕೊಟ್ಟು, ಬಳಿಕ ಆದೇಶ ಹೊರಡಿಸಿರುವುದು ತಕರಾರಿಗೆ ಕಾರಣವಾಗಿದೆ” ಎಂದು ವರದಿ ಹೇಳಿದೆ.

“ಸರ್ಕಾರದ ನಿಯಮಗಳ ಅನುಸಾರ, ವರದಿ ಸಲ್ಲಿಸಿದ ಬಳಿಕ ಪರಿಷ್ಕರಣೆ ಅಗತ್ಯವಿದ್ದಲ್ಲಿ ವಿಷಯ ತಜ್ಞರ ಸಮಿತಿ ರಚಿಸಬೇಕಾಗಿತ್ತು ಅಥವಾ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಗೆ ಪರಿಷ್ಕರಣೆ ಮಾಡುವ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸಬೇಕಿತ್ತು. ಸದರಿ ಆದೇಶದಲ್ಲಿ ನಿಯಮ ಮತ್ತು ಷರತ್ತುಗಳನ್ನು ನೀಡಬೇಕಿತ್ತು. ಆ ಕೆಲಸ ಆಗಿಯೇ ಇಲ್ಲ ಎಂದು ಇಲಾಖೆ ಮೂಲಗಳು ಹೇಳಿವೆ” ಎಂದು ವರದಿಯಲ್ಲಿ ತಿಳಿಸಲಾಗಿದೆ.

‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ: ಸ್ಪಷ್ಟನೆಗೆ ನಕಾರ

ಪಠ್ಯಪುಸ್ತಕ ಪರಿಶೀಲನೆಯ ಅಧ್ವಾನಗಳು ಒಂದೊಂದಾಗಿ ಚರ್ಚೆಗೆ ಬರುತ್ತಿರುವಲ್ಲಿ ‘ಪ್ರಜಾವಾಣಿ’ ಕೆಲಸವೂ ಮುಖ್ಯವಾಗಿದೆ. ಜನಾಕ್ರೋಶಕ್ಕೆ ಮಣಿದು ಸರ್ಕಾರ ಕೆಲವು ತಿದ್ದುಪಡಿಗಳನ್ನೂ ಮಾಡಿಕೊಂಡಿದೆ. (ಉದಾಹರಣೆಗೆ: ಭಗತ್‌ಸಿಂಗ್‌ ಪಾಠಕ್ಕೆ ಕೋಕ್‌ ಎಂಬ ವರದಿಯನ್ನು ಮೊದಲಿಗೆ ‘ಪ್ರಜಾವಾಣಿ’ ಮಾಡಿತ್ತು. ಜನಾಕ್ರೋಶಕ್ಕೆ ಮಣಿದು ಸರ್ಕಾರ ಆ ಪಠ್ಯವನ್ನು ಸೇರಿಸಿಕೊಂಡಿದೆ). ಆದರೆ ಪಠ್ಯಪುಸ್ತಕಕ್ಕೆ ಸಂಬಂಧಿಸಿ ವಿವಿಧ ಮಾಧ್ಯಮಗಳು ನಿರಂತರ ವರದಿ ಮಾಡುತ್ತಿರುವುದರಿಂದ ಬಿ.ಸಿ.ನಾಗೇಶ್ ವಿಚಲಿತರಾದಂತೆ ಕಾಣುತ್ತಿದೆ.

‘ಪ್ರಜಾವಾಣಿ’ಯ ವರದಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ವರದಿಗಾರರು ಸಚಿವ ಬಿ.ಸಿ.ನಾಗೇಶ್ ಅವರನ್ನು ಸಂಪರ್ಕಿಸಿದಾಗ, “ದಿನಕ್ಕೊಂದು ವರದಿಯನ್ನು ಪ್ರಜಾವಾಣಿಯವರು ಮಾಡುತ್ತಿದ್ದಾರೆ. ಅವರಿಗೆ ನಾವು ಪ್ರತಿಕ್ರಿಯೆ ನೀಡಬೇಕಿಲ್ಲ. ನಾರಾಯಣಗುರು ಪಾಠ ಇಲ್ಲ ಎಂದವರು ಅವರೇ, ಭಗತ್‌ಸಿಂಗ್ ಪಾಠಕ್ಕೆ ಕೊಕ್ ಎಂದವರೂ ಅವರೇ. ಎಲ್ಲದ್ದಕ್ಕೂ ಉತ್ತರ ಕೊಡೋಣವೇ? ಅವರು ಬರೆಯಲಿ, ನಾವು ಜನಕ್ಕೆ ಉತ್ತರ ಕೊಡುತ್ತೇವೆ” ಎಂದು ಹೇಳಿ ಕಾಲ್‌ ಕಟ್ ಮಾಡಿದರು. ವರದಿಗಳಿಗೆ ಯಾವುದೇ ಸ್ಪಷ್ಟನೆಯನ್ನು ಸಚಿವರು ನೀಡಲಿಲ್ಲ.

ಜನಾಕ್ರೋಶ

ಆದೇಶ ಇಲ್ಲದೇ ಪಠ್ಯ ಪರಿಷ್ಕರಣೆ ಮಾಡಿರುವ ಕುರಿತು ಜನಾಕ್ರೋಶ ವ್ಯಕ್ತವಾಗುತ್ತಿದೆ. ಈ ವಿಷಯ ಹೊರ ಬಂದ ಬಳಿಕ ಅನೇಕರು ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸರ್ಕಾರ ನಿಯಮಬಾಹಿರವಾಗಿ ನಡೆದುಕೊಂಡಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಇದು ಸಂತೋಷ್‌ ಪಾಟೀಲ್ ಕೇಸ್‌

“ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿಯ ಸಂತೋಷ್ ಪಾಟೀಲ್‌ ಕಾರ್ಯಾದೇಶ (Work order) ಇಲ್ಲದೇ ಕೆಲಸ ಮಾಡಿರುವುದೇ ಅಕ್ರಮ ಎಂದು ಆಡಳಿತ ಪಕ್ಷದವರು ವಾದ ಮಾಡಿದ್ದರು. ಈಗ ಇಲ್ಲಿ ಆಗಿರುವುದೇನು? ಆದೇಶ ಇಲ್ಲದೇ ಸಚಿವರ ಮೌಖಿಕ ಸೂಚನೆಯ ಮೇರೆಗೆ ಸಣ್ಣ ನೀರಿನಟ್ಯಾಂಕ್ ಕೂರಿಸಬಹುದು; ಚರಂಡಿ ಸ್ವಚ್ಛ ಮಾಡಬಹುದು ಅಥವಾ ಅಂತಹ ಯಾವುದಾದರೂ ತುರ್ತು ಕಾಮಗಾರಿ ಕೈಗೊಂಡರೆ ಒಪ್ಪಬಹುದು. ಲಕ್ಷಾಂತರ ಮಕ್ಕಳ ಕಲಿಕಾ ಭವಿಷ್ಯ ನಿರ್ಧರಿಸುವ ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ಹೀಗೆ ಮಾಡಬಹುದೇ? ಹಾಗಾದರೆ ಈ ಸರ್ಕಾರದಲ್ಲಿ ಇನ್ನೂ ಏನೇನು ಆದೇಶವಿಲ್ಲದೇ ಮಂತ್ರಿ-ಮುಖ್ಯಮಂತ್ರಿಗಳ ಮೌಖಿಕ ಸೂಚನೆ ಮೇರೆಗೆ ನಡೆದಿರಬಹುದು?” ಎಂದು ಡಾ.ಎಚ್.ವಿ.ವಾಸು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ನೂತನ ಪಠ್ಯ ಪುಸ್ತಕ: ಐವರು ಬಿಜೆಪಿ ನಾಯಕರಿಂದ ವಿರೋಧ

‘ಅಧ್ಯಕ್ಷನಿಂದ ಹಣ ವಸೂಲಿ ಮಾಡಿ’

“ಒಂದು ತರಗತಿಯ ಒಂದು ಅಧ್ಯಾಯದ ಪರಿಶೀಲನೆಗೆಂದು ಒಬ್ಬ ಅನರ್ಹ ವಿಕೃತನನ್ನು ನೇಮಿಸಿ, ರಾಜ್ಯದ ಶ್ರೇಷ್ಠ ತಜ್ಞರು ರಚಿಸಿದ್ದ ಎಲ್ಲಾ ತರಗತಿಗಳ ಪಠ್ಯಪುಸ್ತಕಗಳನ್ನು ಯಾವುದೇ ಆದೇಶವಿಲ್ಲದೆಯೂ ಅವನೊಬ್ಬನಿಗೆ ಹಾಳುಗೆಡವಲು ಅವಕಾಶವಿತ್ತು, ಅವನು ಮನಬಂದಂತೆ ತನ್ನ ವಿಕೃತಿಯನ್ನು ಅವುಗಳಲ್ಲಿ ತುಂಬಿಸಿದ್ದನ್ನು ಬೇರೆಯವರಲ್ಲಿ ಪರೀಕ್ಷಿಸದೆಯೇ, ಅಧಿಕಾರಿಗಳನ್ನೂ ಲೆಕ್ಕಿಸದೆಯೇ, ತರಾತುರಿಯಿಂದ ಘಟನೋತ್ತರ ಅನುಮತಿ ಒತ್ತಿ ಮುದ್ರಿಸಿ ರಾಜ್ಯದ ಮಕ್ಕಳಿಗೆ ಪುಸ್ತಕಗಳೇ ಇಲ್ಲದ ಹಾಗೆ ಮಾಡಿದ್ದಷ್ಟೇ ಅಲ್ಲದೇ ಎಲ್ಲಾ ದಾರ್ಶನಿಕರಿಗೂ, ಹಿರಿಯಾತಿಹಿರಿಯ ಸಾಹಿತಿಗಳಿಗೂ, ಎಲ್ಲಾ ಜನವರ್ಗಗಳ ಭಾವನೆಗಳಿಗೂ ಅಪಾರವಾದ ಘಾಸಿಯುಂಟು ಮಾಡಿದ್ದಕ್ಕಾಗಿ ಶಿಕ್ಷಣ ಸಚಿವರು ಇನ್ನೊಂದು ಘಳಿಗೆಯೂ ಮುಂದುವರಿಯದೆ ಕೂಡಲೇ ರಾಜೀನಾಮೆ ನೀಡಬೇಕು, ಯಾವುದೇ ಆದೇಶವಿಲ್ಲದೇ ಈ ದುಷ್ಟ ಕೆಲಸಗಳನ್ನು ಮಾಡಿದ ಅನರ್ಹ ಅಧ್ಯಕ್ಷನನ್ನು ಬಂಧಿಸಿ ಎಲ್ಲಾ ವೆಚ್ಚಗಳನ್ನು ಅವನಿಂದಲೇ ವಸೂಲಿ ಮಾಡಬೇಕು” ಎಂದು ಡಾ.ಶ್ರೀನಿವಾಸ ಕಕ್ಕಿಲ್ಲಾಯ ಒತ್ತಾಯಿಸಿದ್ದಾರೆ.

“ಪ್ರಜಾವಾಣಿಯ ಈ ವರದಿಯ ಪ್ರಕಾರ ರೋಹಿತ್ ಸಮಿತಿಗೆ ಪಠ್ಯ ತಿದ್ದುವ ಅಧಿಕಾರವೇ ಇರಲಿಲ್ಲ. ಆದರೂ ಅವನು ತಿದ್ದಿದ್ದಾನೆ. ಅವನು ತಿದ್ದಿದ ನಂತರ ರಾಜ್ಯ ಸರ್ಕಾರ ಅವನ ತಿದ್ದುಪಡಿಗೆ ಒಪ್ಪಿಗೆ ಸೂಚಿಸಿದೆ. ಇದನ್ನು ನೋಡಿದರೆ ತಕ್ಷಣವೇ ರೋಹಿತ್ ಮತ್ತು ಸಮಿತಿ ಸದಸ್ಯರ ಬಂಧನ ಆಗಬೇಕು. ಬಸವರಾಜ ಬೊಮ್ಮಾಯಿ ಮತ್ತು ನಾಗೇಶ ಇಬ್ಬರು ರಾಜೀನಾಮೆ ಕೊಡಬೇಕು” ಎಂದು ಬರಹಗಾರ ನಾಗೇಗೌಡ ಕೀಲಾರ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...