Homeಕರ್ನಾಟಕಆದೇಶ ಇಲ್ಲದೆ ಪಠ್ಯಪರಿಷ್ಕರಣೆ; ಜನಾಕ್ರೋಶದ ನಡುವೆ ‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ!

ಆದೇಶ ಇಲ್ಲದೆ ಪಠ್ಯಪರಿಷ್ಕರಣೆ; ಜನಾಕ್ರೋಶದ ನಡುವೆ ‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ!

- Advertisement -
- Advertisement -

ಆದೇಶ ಇಲ್ಲದೆ ಪಠ್ಯ ಪರಿಷ್ಕರಣೆ ಮಾಡಿರುವ ಸಂಗತಿ ವರಿದಿಯಾಗಿದ್ದು, ಸರ್ಕಾರದ ನಿರ್ಲಕ್ಷದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಬಿ.ಸಿ.ನಾಗೇಶ್‌ ರಾಜೀನಾಮೆ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ.

ಆದೇಶವಿಲ್ಲದೆ ಪಠ್ಯಪರಿಷ್ಕರಣೆಯಾಗಿರುವ ಕುರಿತು ಕನ್ನಡದ ವಿಶ್ವಾಸಾರ್ಹ ದಿನಪತ್ರಿಕೆ ‘ಪ್ರಜಾವಾಣಿ’ ವರದಿ ಮಾಡಿದೆ. “2022–23ನೇ ಸಾಲಿಗೆ ಪರಿಷ್ಕೃತ ಪಠ್ಯಪುಸ್ತಕಗಳನ್ನುಮುದ್ರಿಸಿ ವಿತರಿಸುವ ಬಗ್ಗೆ ಮಾರ್ಚ್‌ 9 ರಂದು ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದಲ್ಲಿ, ‘ಪಠ್ಯಪುಸ್ತಕಗಳನ್ನು ಪರಿಷ್ಕೃತಗೊಳಿಸಿರುವುದಕ್ಕೆ ಘಟನೋತ್ತರ ಅನುಮತಿ ನೀಡಿ, ಮುದ್ರಿಸಲು ಸೂಚಿಸಲಾಗಿದೆ’ ಎಂಬ ಉಲ್ಲೇಖವಿದೆ” ಎಂದು ವರದಿ ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸರ್ಕಾರದ ಕೆಲಸವನ್ನೋ ಅಥವಾ ಕಾಮಗಾರಿಗೆ ಅನುದಾನ ಕೊಡಿಸಿಯೇ ತೀರುವೆಎಂಬ ವಿಶ್ವಾಸ ಇರುವ ಮುಖ್ಯಮಂತ್ರಿ ಅಥವಾ ಸಚಿವರು ಅಧಿಕೃತ ಆದೇಶ ಇಲ್ಲದೇ ಕೆಲಸ ಮಾಡಿಸುತ್ತಾರೆ. ಕೆಲಸ ಮುಗಿದ ಮೇಲೆ ಘಟನೋತ್ತರ ಅನುಮತಿ/ ಆದೇಶ ಹೊರಡಿಸುವ ಪರಿಪಾಟ ಇದೆ. ಮೌಖಿಕ ಸೂಚನೆ ಮೇರೆಗೆ ಪಠ್ಯಪುಸ್ತಕ ಪರಿಷ್ಕರಣೆಗೆ ಅವಕಾಶ ಕೊಟ್ಟು, ಬಳಿಕ ಆದೇಶ ಹೊರಡಿಸಿರುವುದು ತಕರಾರಿಗೆ ಕಾರಣವಾಗಿದೆ” ಎಂದು ವರದಿ ಹೇಳಿದೆ.

“ಸರ್ಕಾರದ ನಿಯಮಗಳ ಅನುಸಾರ, ವರದಿ ಸಲ್ಲಿಸಿದ ಬಳಿಕ ಪರಿಷ್ಕರಣೆ ಅಗತ್ಯವಿದ್ದಲ್ಲಿ ವಿಷಯ ತಜ್ಞರ ಸಮಿತಿ ರಚಿಸಬೇಕಾಗಿತ್ತು ಅಥವಾ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಗೆ ಪರಿಷ್ಕರಣೆ ಮಾಡುವ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸಬೇಕಿತ್ತು. ಸದರಿ ಆದೇಶದಲ್ಲಿ ನಿಯಮ ಮತ್ತು ಷರತ್ತುಗಳನ್ನು ನೀಡಬೇಕಿತ್ತು. ಆ ಕೆಲಸ ಆಗಿಯೇ ಇಲ್ಲ ಎಂದು ಇಲಾಖೆ ಮೂಲಗಳು ಹೇಳಿವೆ” ಎಂದು ವರದಿಯಲ್ಲಿ ತಿಳಿಸಲಾಗಿದೆ.

‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ: ಸ್ಪಷ್ಟನೆಗೆ ನಕಾರ

ಪಠ್ಯಪುಸ್ತಕ ಪರಿಶೀಲನೆಯ ಅಧ್ವಾನಗಳು ಒಂದೊಂದಾಗಿ ಚರ್ಚೆಗೆ ಬರುತ್ತಿರುವಲ್ಲಿ ‘ಪ್ರಜಾವಾಣಿ’ ಕೆಲಸವೂ ಮುಖ್ಯವಾಗಿದೆ. ಜನಾಕ್ರೋಶಕ್ಕೆ ಮಣಿದು ಸರ್ಕಾರ ಕೆಲವು ತಿದ್ದುಪಡಿಗಳನ್ನೂ ಮಾಡಿಕೊಂಡಿದೆ. (ಉದಾಹರಣೆಗೆ: ಭಗತ್‌ಸಿಂಗ್‌ ಪಾಠಕ್ಕೆ ಕೋಕ್‌ ಎಂಬ ವರದಿಯನ್ನು ಮೊದಲಿಗೆ ‘ಪ್ರಜಾವಾಣಿ’ ಮಾಡಿತ್ತು. ಜನಾಕ್ರೋಶಕ್ಕೆ ಮಣಿದು ಸರ್ಕಾರ ಆ ಪಠ್ಯವನ್ನು ಸೇರಿಸಿಕೊಂಡಿದೆ). ಆದರೆ ಪಠ್ಯಪುಸ್ತಕಕ್ಕೆ ಸಂಬಂಧಿಸಿ ವಿವಿಧ ಮಾಧ್ಯಮಗಳು ನಿರಂತರ ವರದಿ ಮಾಡುತ್ತಿರುವುದರಿಂದ ಬಿ.ಸಿ.ನಾಗೇಶ್ ವಿಚಲಿತರಾದಂತೆ ಕಾಣುತ್ತಿದೆ.

‘ಪ್ರಜಾವಾಣಿ’ಯ ವರದಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ವರದಿಗಾರರು ಸಚಿವ ಬಿ.ಸಿ.ನಾಗೇಶ್ ಅವರನ್ನು ಸಂಪರ್ಕಿಸಿದಾಗ, “ದಿನಕ್ಕೊಂದು ವರದಿಯನ್ನು ಪ್ರಜಾವಾಣಿಯವರು ಮಾಡುತ್ತಿದ್ದಾರೆ. ಅವರಿಗೆ ನಾವು ಪ್ರತಿಕ್ರಿಯೆ ನೀಡಬೇಕಿಲ್ಲ. ನಾರಾಯಣಗುರು ಪಾಠ ಇಲ್ಲ ಎಂದವರು ಅವರೇ, ಭಗತ್‌ಸಿಂಗ್ ಪಾಠಕ್ಕೆ ಕೊಕ್ ಎಂದವರೂ ಅವರೇ. ಎಲ್ಲದ್ದಕ್ಕೂ ಉತ್ತರ ಕೊಡೋಣವೇ? ಅವರು ಬರೆಯಲಿ, ನಾವು ಜನಕ್ಕೆ ಉತ್ತರ ಕೊಡುತ್ತೇವೆ” ಎಂದು ಹೇಳಿ ಕಾಲ್‌ ಕಟ್ ಮಾಡಿದರು. ವರದಿಗಳಿಗೆ ಯಾವುದೇ ಸ್ಪಷ್ಟನೆಯನ್ನು ಸಚಿವರು ನೀಡಲಿಲ್ಲ.

ಜನಾಕ್ರೋಶ

ಆದೇಶ ಇಲ್ಲದೇ ಪಠ್ಯ ಪರಿಷ್ಕರಣೆ ಮಾಡಿರುವ ಕುರಿತು ಜನಾಕ್ರೋಶ ವ್ಯಕ್ತವಾಗುತ್ತಿದೆ. ಈ ವಿಷಯ ಹೊರ ಬಂದ ಬಳಿಕ ಅನೇಕರು ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸರ್ಕಾರ ನಿಯಮಬಾಹಿರವಾಗಿ ನಡೆದುಕೊಂಡಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಇದು ಸಂತೋಷ್‌ ಪಾಟೀಲ್ ಕೇಸ್‌

“ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿಯ ಸಂತೋಷ್ ಪಾಟೀಲ್‌ ಕಾರ್ಯಾದೇಶ (Work order) ಇಲ್ಲದೇ ಕೆಲಸ ಮಾಡಿರುವುದೇ ಅಕ್ರಮ ಎಂದು ಆಡಳಿತ ಪಕ್ಷದವರು ವಾದ ಮಾಡಿದ್ದರು. ಈಗ ಇಲ್ಲಿ ಆಗಿರುವುದೇನು? ಆದೇಶ ಇಲ್ಲದೇ ಸಚಿವರ ಮೌಖಿಕ ಸೂಚನೆಯ ಮೇರೆಗೆ ಸಣ್ಣ ನೀರಿನಟ್ಯಾಂಕ್ ಕೂರಿಸಬಹುದು; ಚರಂಡಿ ಸ್ವಚ್ಛ ಮಾಡಬಹುದು ಅಥವಾ ಅಂತಹ ಯಾವುದಾದರೂ ತುರ್ತು ಕಾಮಗಾರಿ ಕೈಗೊಂಡರೆ ಒಪ್ಪಬಹುದು. ಲಕ್ಷಾಂತರ ಮಕ್ಕಳ ಕಲಿಕಾ ಭವಿಷ್ಯ ನಿರ್ಧರಿಸುವ ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ಹೀಗೆ ಮಾಡಬಹುದೇ? ಹಾಗಾದರೆ ಈ ಸರ್ಕಾರದಲ್ಲಿ ಇನ್ನೂ ಏನೇನು ಆದೇಶವಿಲ್ಲದೇ ಮಂತ್ರಿ-ಮುಖ್ಯಮಂತ್ರಿಗಳ ಮೌಖಿಕ ಸೂಚನೆ ಮೇರೆಗೆ ನಡೆದಿರಬಹುದು?” ಎಂದು ಡಾ.ಎಚ್.ವಿ.ವಾಸು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ನೂತನ ಪಠ್ಯ ಪುಸ್ತಕ: ಐವರು ಬಿಜೆಪಿ ನಾಯಕರಿಂದ ವಿರೋಧ

‘ಅಧ್ಯಕ್ಷನಿಂದ ಹಣ ವಸೂಲಿ ಮಾಡಿ’

“ಒಂದು ತರಗತಿಯ ಒಂದು ಅಧ್ಯಾಯದ ಪರಿಶೀಲನೆಗೆಂದು ಒಬ್ಬ ಅನರ್ಹ ವಿಕೃತನನ್ನು ನೇಮಿಸಿ, ರಾಜ್ಯದ ಶ್ರೇಷ್ಠ ತಜ್ಞರು ರಚಿಸಿದ್ದ ಎಲ್ಲಾ ತರಗತಿಗಳ ಪಠ್ಯಪುಸ್ತಕಗಳನ್ನು ಯಾವುದೇ ಆದೇಶವಿಲ್ಲದೆಯೂ ಅವನೊಬ್ಬನಿಗೆ ಹಾಳುಗೆಡವಲು ಅವಕಾಶವಿತ್ತು, ಅವನು ಮನಬಂದಂತೆ ತನ್ನ ವಿಕೃತಿಯನ್ನು ಅವುಗಳಲ್ಲಿ ತುಂಬಿಸಿದ್ದನ್ನು ಬೇರೆಯವರಲ್ಲಿ ಪರೀಕ್ಷಿಸದೆಯೇ, ಅಧಿಕಾರಿಗಳನ್ನೂ ಲೆಕ್ಕಿಸದೆಯೇ, ತರಾತುರಿಯಿಂದ ಘಟನೋತ್ತರ ಅನುಮತಿ ಒತ್ತಿ ಮುದ್ರಿಸಿ ರಾಜ್ಯದ ಮಕ್ಕಳಿಗೆ ಪುಸ್ತಕಗಳೇ ಇಲ್ಲದ ಹಾಗೆ ಮಾಡಿದ್ದಷ್ಟೇ ಅಲ್ಲದೇ ಎಲ್ಲಾ ದಾರ್ಶನಿಕರಿಗೂ, ಹಿರಿಯಾತಿಹಿರಿಯ ಸಾಹಿತಿಗಳಿಗೂ, ಎಲ್ಲಾ ಜನವರ್ಗಗಳ ಭಾವನೆಗಳಿಗೂ ಅಪಾರವಾದ ಘಾಸಿಯುಂಟು ಮಾಡಿದ್ದಕ್ಕಾಗಿ ಶಿಕ್ಷಣ ಸಚಿವರು ಇನ್ನೊಂದು ಘಳಿಗೆಯೂ ಮುಂದುವರಿಯದೆ ಕೂಡಲೇ ರಾಜೀನಾಮೆ ನೀಡಬೇಕು, ಯಾವುದೇ ಆದೇಶವಿಲ್ಲದೇ ಈ ದುಷ್ಟ ಕೆಲಸಗಳನ್ನು ಮಾಡಿದ ಅನರ್ಹ ಅಧ್ಯಕ್ಷನನ್ನು ಬಂಧಿಸಿ ಎಲ್ಲಾ ವೆಚ್ಚಗಳನ್ನು ಅವನಿಂದಲೇ ವಸೂಲಿ ಮಾಡಬೇಕು” ಎಂದು ಡಾ.ಶ್ರೀನಿವಾಸ ಕಕ್ಕಿಲ್ಲಾಯ ಒತ್ತಾಯಿಸಿದ್ದಾರೆ.

“ಪ್ರಜಾವಾಣಿಯ ಈ ವರದಿಯ ಪ್ರಕಾರ ರೋಹಿತ್ ಸಮಿತಿಗೆ ಪಠ್ಯ ತಿದ್ದುವ ಅಧಿಕಾರವೇ ಇರಲಿಲ್ಲ. ಆದರೂ ಅವನು ತಿದ್ದಿದ್ದಾನೆ. ಅವನು ತಿದ್ದಿದ ನಂತರ ರಾಜ್ಯ ಸರ್ಕಾರ ಅವನ ತಿದ್ದುಪಡಿಗೆ ಒಪ್ಪಿಗೆ ಸೂಚಿಸಿದೆ. ಇದನ್ನು ನೋಡಿದರೆ ತಕ್ಷಣವೇ ರೋಹಿತ್ ಮತ್ತು ಸಮಿತಿ ಸದಸ್ಯರ ಬಂಧನ ಆಗಬೇಕು. ಬಸವರಾಜ ಬೊಮ್ಮಾಯಿ ಮತ್ತು ನಾಗೇಶ ಇಬ್ಬರು ರಾಜೀನಾಮೆ ಕೊಡಬೇಕು” ಎಂದು ಬರಹಗಾರ ನಾಗೇಗೌಡ ಕೀಲಾರ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...