Homeಕರ್ನಾಟಕಆದೇಶ ಇಲ್ಲದೆ ಪಠ್ಯಪರಿಷ್ಕರಣೆ; ಜನಾಕ್ರೋಶದ ನಡುವೆ ‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ!

ಆದೇಶ ಇಲ್ಲದೆ ಪಠ್ಯಪರಿಷ್ಕರಣೆ; ಜನಾಕ್ರೋಶದ ನಡುವೆ ‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ!

- Advertisement -
- Advertisement -

ಆದೇಶ ಇಲ್ಲದೆ ಪಠ್ಯ ಪರಿಷ್ಕರಣೆ ಮಾಡಿರುವ ಸಂಗತಿ ವರಿದಿಯಾಗಿದ್ದು, ಸರ್ಕಾರದ ನಿರ್ಲಕ್ಷದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಬಿ.ಸಿ.ನಾಗೇಶ್‌ ರಾಜೀನಾಮೆ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ.

ಆದೇಶವಿಲ್ಲದೆ ಪಠ್ಯಪರಿಷ್ಕರಣೆಯಾಗಿರುವ ಕುರಿತು ಕನ್ನಡದ ವಿಶ್ವಾಸಾರ್ಹ ದಿನಪತ್ರಿಕೆ ‘ಪ್ರಜಾವಾಣಿ’ ವರದಿ ಮಾಡಿದೆ. “2022–23ನೇ ಸಾಲಿಗೆ ಪರಿಷ್ಕೃತ ಪಠ್ಯಪುಸ್ತಕಗಳನ್ನುಮುದ್ರಿಸಿ ವಿತರಿಸುವ ಬಗ್ಗೆ ಮಾರ್ಚ್‌ 9 ರಂದು ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದಲ್ಲಿ, ‘ಪಠ್ಯಪುಸ್ತಕಗಳನ್ನು ಪರಿಷ್ಕೃತಗೊಳಿಸಿರುವುದಕ್ಕೆ ಘಟನೋತ್ತರ ಅನುಮತಿ ನೀಡಿ, ಮುದ್ರಿಸಲು ಸೂಚಿಸಲಾಗಿದೆ’ ಎಂಬ ಉಲ್ಲೇಖವಿದೆ” ಎಂದು ವರದಿ ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸರ್ಕಾರದ ಕೆಲಸವನ್ನೋ ಅಥವಾ ಕಾಮಗಾರಿಗೆ ಅನುದಾನ ಕೊಡಿಸಿಯೇ ತೀರುವೆಎಂಬ ವಿಶ್ವಾಸ ಇರುವ ಮುಖ್ಯಮಂತ್ರಿ ಅಥವಾ ಸಚಿವರು ಅಧಿಕೃತ ಆದೇಶ ಇಲ್ಲದೇ ಕೆಲಸ ಮಾಡಿಸುತ್ತಾರೆ. ಕೆಲಸ ಮುಗಿದ ಮೇಲೆ ಘಟನೋತ್ತರ ಅನುಮತಿ/ ಆದೇಶ ಹೊರಡಿಸುವ ಪರಿಪಾಟ ಇದೆ. ಮೌಖಿಕ ಸೂಚನೆ ಮೇರೆಗೆ ಪಠ್ಯಪುಸ್ತಕ ಪರಿಷ್ಕರಣೆಗೆ ಅವಕಾಶ ಕೊಟ್ಟು, ಬಳಿಕ ಆದೇಶ ಹೊರಡಿಸಿರುವುದು ತಕರಾರಿಗೆ ಕಾರಣವಾಗಿದೆ” ಎಂದು ವರದಿ ಹೇಳಿದೆ.

“ಸರ್ಕಾರದ ನಿಯಮಗಳ ಅನುಸಾರ, ವರದಿ ಸಲ್ಲಿಸಿದ ಬಳಿಕ ಪರಿಷ್ಕರಣೆ ಅಗತ್ಯವಿದ್ದಲ್ಲಿ ವಿಷಯ ತಜ್ಞರ ಸಮಿತಿ ರಚಿಸಬೇಕಾಗಿತ್ತು ಅಥವಾ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಗೆ ಪರಿಷ್ಕರಣೆ ಮಾಡುವ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸಬೇಕಿತ್ತು. ಸದರಿ ಆದೇಶದಲ್ಲಿ ನಿಯಮ ಮತ್ತು ಷರತ್ತುಗಳನ್ನು ನೀಡಬೇಕಿತ್ತು. ಆ ಕೆಲಸ ಆಗಿಯೇ ಇಲ್ಲ ಎಂದು ಇಲಾಖೆ ಮೂಲಗಳು ಹೇಳಿವೆ” ಎಂದು ವರದಿಯಲ್ಲಿ ತಿಳಿಸಲಾಗಿದೆ.

‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ: ಸ್ಪಷ್ಟನೆಗೆ ನಕಾರ

ಪಠ್ಯಪುಸ್ತಕ ಪರಿಶೀಲನೆಯ ಅಧ್ವಾನಗಳು ಒಂದೊಂದಾಗಿ ಚರ್ಚೆಗೆ ಬರುತ್ತಿರುವಲ್ಲಿ ‘ಪ್ರಜಾವಾಣಿ’ ಕೆಲಸವೂ ಮುಖ್ಯವಾಗಿದೆ. ಜನಾಕ್ರೋಶಕ್ಕೆ ಮಣಿದು ಸರ್ಕಾರ ಕೆಲವು ತಿದ್ದುಪಡಿಗಳನ್ನೂ ಮಾಡಿಕೊಂಡಿದೆ. (ಉದಾಹರಣೆಗೆ: ಭಗತ್‌ಸಿಂಗ್‌ ಪಾಠಕ್ಕೆ ಕೋಕ್‌ ಎಂಬ ವರದಿಯನ್ನು ಮೊದಲಿಗೆ ‘ಪ್ರಜಾವಾಣಿ’ ಮಾಡಿತ್ತು. ಜನಾಕ್ರೋಶಕ್ಕೆ ಮಣಿದು ಸರ್ಕಾರ ಆ ಪಠ್ಯವನ್ನು ಸೇರಿಸಿಕೊಂಡಿದೆ). ಆದರೆ ಪಠ್ಯಪುಸ್ತಕಕ್ಕೆ ಸಂಬಂಧಿಸಿ ವಿವಿಧ ಮಾಧ್ಯಮಗಳು ನಿರಂತರ ವರದಿ ಮಾಡುತ್ತಿರುವುದರಿಂದ ಬಿ.ಸಿ.ನಾಗೇಶ್ ವಿಚಲಿತರಾದಂತೆ ಕಾಣುತ್ತಿದೆ.

‘ಪ್ರಜಾವಾಣಿ’ಯ ವರದಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ವರದಿಗಾರರು ಸಚಿವ ಬಿ.ಸಿ.ನಾಗೇಶ್ ಅವರನ್ನು ಸಂಪರ್ಕಿಸಿದಾಗ, “ದಿನಕ್ಕೊಂದು ವರದಿಯನ್ನು ಪ್ರಜಾವಾಣಿಯವರು ಮಾಡುತ್ತಿದ್ದಾರೆ. ಅವರಿಗೆ ನಾವು ಪ್ರತಿಕ್ರಿಯೆ ನೀಡಬೇಕಿಲ್ಲ. ನಾರಾಯಣಗುರು ಪಾಠ ಇಲ್ಲ ಎಂದವರು ಅವರೇ, ಭಗತ್‌ಸಿಂಗ್ ಪಾಠಕ್ಕೆ ಕೊಕ್ ಎಂದವರೂ ಅವರೇ. ಎಲ್ಲದ್ದಕ್ಕೂ ಉತ್ತರ ಕೊಡೋಣವೇ? ಅವರು ಬರೆಯಲಿ, ನಾವು ಜನಕ್ಕೆ ಉತ್ತರ ಕೊಡುತ್ತೇವೆ” ಎಂದು ಹೇಳಿ ಕಾಲ್‌ ಕಟ್ ಮಾಡಿದರು. ವರದಿಗಳಿಗೆ ಯಾವುದೇ ಸ್ಪಷ್ಟನೆಯನ್ನು ಸಚಿವರು ನೀಡಲಿಲ್ಲ.

ಜನಾಕ್ರೋಶ

ಆದೇಶ ಇಲ್ಲದೇ ಪಠ್ಯ ಪರಿಷ್ಕರಣೆ ಮಾಡಿರುವ ಕುರಿತು ಜನಾಕ್ರೋಶ ವ್ಯಕ್ತವಾಗುತ್ತಿದೆ. ಈ ವಿಷಯ ಹೊರ ಬಂದ ಬಳಿಕ ಅನೇಕರು ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸರ್ಕಾರ ನಿಯಮಬಾಹಿರವಾಗಿ ನಡೆದುಕೊಂಡಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಇದು ಸಂತೋಷ್‌ ಪಾಟೀಲ್ ಕೇಸ್‌

“ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿಯ ಸಂತೋಷ್ ಪಾಟೀಲ್‌ ಕಾರ್ಯಾದೇಶ (Work order) ಇಲ್ಲದೇ ಕೆಲಸ ಮಾಡಿರುವುದೇ ಅಕ್ರಮ ಎಂದು ಆಡಳಿತ ಪಕ್ಷದವರು ವಾದ ಮಾಡಿದ್ದರು. ಈಗ ಇಲ್ಲಿ ಆಗಿರುವುದೇನು? ಆದೇಶ ಇಲ್ಲದೇ ಸಚಿವರ ಮೌಖಿಕ ಸೂಚನೆಯ ಮೇರೆಗೆ ಸಣ್ಣ ನೀರಿನಟ್ಯಾಂಕ್ ಕೂರಿಸಬಹುದು; ಚರಂಡಿ ಸ್ವಚ್ಛ ಮಾಡಬಹುದು ಅಥವಾ ಅಂತಹ ಯಾವುದಾದರೂ ತುರ್ತು ಕಾಮಗಾರಿ ಕೈಗೊಂಡರೆ ಒಪ್ಪಬಹುದು. ಲಕ್ಷಾಂತರ ಮಕ್ಕಳ ಕಲಿಕಾ ಭವಿಷ್ಯ ನಿರ್ಧರಿಸುವ ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ಹೀಗೆ ಮಾಡಬಹುದೇ? ಹಾಗಾದರೆ ಈ ಸರ್ಕಾರದಲ್ಲಿ ಇನ್ನೂ ಏನೇನು ಆದೇಶವಿಲ್ಲದೇ ಮಂತ್ರಿ-ಮುಖ್ಯಮಂತ್ರಿಗಳ ಮೌಖಿಕ ಸೂಚನೆ ಮೇರೆಗೆ ನಡೆದಿರಬಹುದು?” ಎಂದು ಡಾ.ಎಚ್.ವಿ.ವಾಸು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ನೂತನ ಪಠ್ಯ ಪುಸ್ತಕ: ಐವರು ಬಿಜೆಪಿ ನಾಯಕರಿಂದ ವಿರೋಧ

‘ಅಧ್ಯಕ್ಷನಿಂದ ಹಣ ವಸೂಲಿ ಮಾಡಿ’

“ಒಂದು ತರಗತಿಯ ಒಂದು ಅಧ್ಯಾಯದ ಪರಿಶೀಲನೆಗೆಂದು ಒಬ್ಬ ಅನರ್ಹ ವಿಕೃತನನ್ನು ನೇಮಿಸಿ, ರಾಜ್ಯದ ಶ್ರೇಷ್ಠ ತಜ್ಞರು ರಚಿಸಿದ್ದ ಎಲ್ಲಾ ತರಗತಿಗಳ ಪಠ್ಯಪುಸ್ತಕಗಳನ್ನು ಯಾವುದೇ ಆದೇಶವಿಲ್ಲದೆಯೂ ಅವನೊಬ್ಬನಿಗೆ ಹಾಳುಗೆಡವಲು ಅವಕಾಶವಿತ್ತು, ಅವನು ಮನಬಂದಂತೆ ತನ್ನ ವಿಕೃತಿಯನ್ನು ಅವುಗಳಲ್ಲಿ ತುಂಬಿಸಿದ್ದನ್ನು ಬೇರೆಯವರಲ್ಲಿ ಪರೀಕ್ಷಿಸದೆಯೇ, ಅಧಿಕಾರಿಗಳನ್ನೂ ಲೆಕ್ಕಿಸದೆಯೇ, ತರಾತುರಿಯಿಂದ ಘಟನೋತ್ತರ ಅನುಮತಿ ಒತ್ತಿ ಮುದ್ರಿಸಿ ರಾಜ್ಯದ ಮಕ್ಕಳಿಗೆ ಪುಸ್ತಕಗಳೇ ಇಲ್ಲದ ಹಾಗೆ ಮಾಡಿದ್ದಷ್ಟೇ ಅಲ್ಲದೇ ಎಲ್ಲಾ ದಾರ್ಶನಿಕರಿಗೂ, ಹಿರಿಯಾತಿಹಿರಿಯ ಸಾಹಿತಿಗಳಿಗೂ, ಎಲ್ಲಾ ಜನವರ್ಗಗಳ ಭಾವನೆಗಳಿಗೂ ಅಪಾರವಾದ ಘಾಸಿಯುಂಟು ಮಾಡಿದ್ದಕ್ಕಾಗಿ ಶಿಕ್ಷಣ ಸಚಿವರು ಇನ್ನೊಂದು ಘಳಿಗೆಯೂ ಮುಂದುವರಿಯದೆ ಕೂಡಲೇ ರಾಜೀನಾಮೆ ನೀಡಬೇಕು, ಯಾವುದೇ ಆದೇಶವಿಲ್ಲದೇ ಈ ದುಷ್ಟ ಕೆಲಸಗಳನ್ನು ಮಾಡಿದ ಅನರ್ಹ ಅಧ್ಯಕ್ಷನನ್ನು ಬಂಧಿಸಿ ಎಲ್ಲಾ ವೆಚ್ಚಗಳನ್ನು ಅವನಿಂದಲೇ ವಸೂಲಿ ಮಾಡಬೇಕು” ಎಂದು ಡಾ.ಶ್ರೀನಿವಾಸ ಕಕ್ಕಿಲ್ಲಾಯ ಒತ್ತಾಯಿಸಿದ್ದಾರೆ.

“ಪ್ರಜಾವಾಣಿಯ ಈ ವರದಿಯ ಪ್ರಕಾರ ರೋಹಿತ್ ಸಮಿತಿಗೆ ಪಠ್ಯ ತಿದ್ದುವ ಅಧಿಕಾರವೇ ಇರಲಿಲ್ಲ. ಆದರೂ ಅವನು ತಿದ್ದಿದ್ದಾನೆ. ಅವನು ತಿದ್ದಿದ ನಂತರ ರಾಜ್ಯ ಸರ್ಕಾರ ಅವನ ತಿದ್ದುಪಡಿಗೆ ಒಪ್ಪಿಗೆ ಸೂಚಿಸಿದೆ. ಇದನ್ನು ನೋಡಿದರೆ ತಕ್ಷಣವೇ ರೋಹಿತ್ ಮತ್ತು ಸಮಿತಿ ಸದಸ್ಯರ ಬಂಧನ ಆಗಬೇಕು. ಬಸವರಾಜ ಬೊಮ್ಮಾಯಿ ಮತ್ತು ನಾಗೇಶ ಇಬ್ಬರು ರಾಜೀನಾಮೆ ಕೊಡಬೇಕು” ಎಂದು ಬರಹಗಾರ ನಾಗೇಗೌಡ ಕೀಲಾರ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...