Homeಕರ್ನಾಟಕಆದೇಶ ಇಲ್ಲದೆ ಪಠ್ಯಪರಿಷ್ಕರಣೆ; ಜನಾಕ್ರೋಶದ ನಡುವೆ ‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ!

ಆದೇಶ ಇಲ್ಲದೆ ಪಠ್ಯಪರಿಷ್ಕರಣೆ; ಜನಾಕ್ರೋಶದ ನಡುವೆ ‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ!

- Advertisement -
- Advertisement -

ಆದೇಶ ಇಲ್ಲದೆ ಪಠ್ಯ ಪರಿಷ್ಕರಣೆ ಮಾಡಿರುವ ಸಂಗತಿ ವರಿದಿಯಾಗಿದ್ದು, ಸರ್ಕಾರದ ನಿರ್ಲಕ್ಷದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಬಿ.ಸಿ.ನಾಗೇಶ್‌ ರಾಜೀನಾಮೆ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ.

ಆದೇಶವಿಲ್ಲದೆ ಪಠ್ಯಪರಿಷ್ಕರಣೆಯಾಗಿರುವ ಕುರಿತು ಕನ್ನಡದ ವಿಶ್ವಾಸಾರ್ಹ ದಿನಪತ್ರಿಕೆ ‘ಪ್ರಜಾವಾಣಿ’ ವರದಿ ಮಾಡಿದೆ. “2022–23ನೇ ಸಾಲಿಗೆ ಪರಿಷ್ಕೃತ ಪಠ್ಯಪುಸ್ತಕಗಳನ್ನುಮುದ್ರಿಸಿ ವಿತರಿಸುವ ಬಗ್ಗೆ ಮಾರ್ಚ್‌ 9 ರಂದು ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದಲ್ಲಿ, ‘ಪಠ್ಯಪುಸ್ತಕಗಳನ್ನು ಪರಿಷ್ಕೃತಗೊಳಿಸಿರುವುದಕ್ಕೆ ಘಟನೋತ್ತರ ಅನುಮತಿ ನೀಡಿ, ಮುದ್ರಿಸಲು ಸೂಚಿಸಲಾಗಿದೆ’ ಎಂಬ ಉಲ್ಲೇಖವಿದೆ” ಎಂದು ವರದಿ ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸರ್ಕಾರದ ಕೆಲಸವನ್ನೋ ಅಥವಾ ಕಾಮಗಾರಿಗೆ ಅನುದಾನ ಕೊಡಿಸಿಯೇ ತೀರುವೆಎಂಬ ವಿಶ್ವಾಸ ಇರುವ ಮುಖ್ಯಮಂತ್ರಿ ಅಥವಾ ಸಚಿವರು ಅಧಿಕೃತ ಆದೇಶ ಇಲ್ಲದೇ ಕೆಲಸ ಮಾಡಿಸುತ್ತಾರೆ. ಕೆಲಸ ಮುಗಿದ ಮೇಲೆ ಘಟನೋತ್ತರ ಅನುಮತಿ/ ಆದೇಶ ಹೊರಡಿಸುವ ಪರಿಪಾಟ ಇದೆ. ಮೌಖಿಕ ಸೂಚನೆ ಮೇರೆಗೆ ಪಠ್ಯಪುಸ್ತಕ ಪರಿಷ್ಕರಣೆಗೆ ಅವಕಾಶ ಕೊಟ್ಟು, ಬಳಿಕ ಆದೇಶ ಹೊರಡಿಸಿರುವುದು ತಕರಾರಿಗೆ ಕಾರಣವಾಗಿದೆ” ಎಂದು ವರದಿ ಹೇಳಿದೆ.

“ಸರ್ಕಾರದ ನಿಯಮಗಳ ಅನುಸಾರ, ವರದಿ ಸಲ್ಲಿಸಿದ ಬಳಿಕ ಪರಿಷ್ಕರಣೆ ಅಗತ್ಯವಿದ್ದಲ್ಲಿ ವಿಷಯ ತಜ್ಞರ ಸಮಿತಿ ರಚಿಸಬೇಕಾಗಿತ್ತು ಅಥವಾ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಗೆ ಪರಿಷ್ಕರಣೆ ಮಾಡುವ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸಬೇಕಿತ್ತು. ಸದರಿ ಆದೇಶದಲ್ಲಿ ನಿಯಮ ಮತ್ತು ಷರತ್ತುಗಳನ್ನು ನೀಡಬೇಕಿತ್ತು. ಆ ಕೆಲಸ ಆಗಿಯೇ ಇಲ್ಲ ಎಂದು ಇಲಾಖೆ ಮೂಲಗಳು ಹೇಳಿವೆ” ಎಂದು ವರದಿಯಲ್ಲಿ ತಿಳಿಸಲಾಗಿದೆ.

‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ: ಸ್ಪಷ್ಟನೆಗೆ ನಕಾರ

ಪಠ್ಯಪುಸ್ತಕ ಪರಿಶೀಲನೆಯ ಅಧ್ವಾನಗಳು ಒಂದೊಂದಾಗಿ ಚರ್ಚೆಗೆ ಬರುತ್ತಿರುವಲ್ಲಿ ‘ಪ್ರಜಾವಾಣಿ’ ಕೆಲಸವೂ ಮುಖ್ಯವಾಗಿದೆ. ಜನಾಕ್ರೋಶಕ್ಕೆ ಮಣಿದು ಸರ್ಕಾರ ಕೆಲವು ತಿದ್ದುಪಡಿಗಳನ್ನೂ ಮಾಡಿಕೊಂಡಿದೆ. (ಉದಾಹರಣೆಗೆ: ಭಗತ್‌ಸಿಂಗ್‌ ಪಾಠಕ್ಕೆ ಕೋಕ್‌ ಎಂಬ ವರದಿಯನ್ನು ಮೊದಲಿಗೆ ‘ಪ್ರಜಾವಾಣಿ’ ಮಾಡಿತ್ತು. ಜನಾಕ್ರೋಶಕ್ಕೆ ಮಣಿದು ಸರ್ಕಾರ ಆ ಪಠ್ಯವನ್ನು ಸೇರಿಸಿಕೊಂಡಿದೆ). ಆದರೆ ಪಠ್ಯಪುಸ್ತಕಕ್ಕೆ ಸಂಬಂಧಿಸಿ ವಿವಿಧ ಮಾಧ್ಯಮಗಳು ನಿರಂತರ ವರದಿ ಮಾಡುತ್ತಿರುವುದರಿಂದ ಬಿ.ಸಿ.ನಾಗೇಶ್ ವಿಚಲಿತರಾದಂತೆ ಕಾಣುತ್ತಿದೆ.

‘ಪ್ರಜಾವಾಣಿ’ಯ ವರದಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ವರದಿಗಾರರು ಸಚಿವ ಬಿ.ಸಿ.ನಾಗೇಶ್ ಅವರನ್ನು ಸಂಪರ್ಕಿಸಿದಾಗ, “ದಿನಕ್ಕೊಂದು ವರದಿಯನ್ನು ಪ್ರಜಾವಾಣಿಯವರು ಮಾಡುತ್ತಿದ್ದಾರೆ. ಅವರಿಗೆ ನಾವು ಪ್ರತಿಕ್ರಿಯೆ ನೀಡಬೇಕಿಲ್ಲ. ನಾರಾಯಣಗುರು ಪಾಠ ಇಲ್ಲ ಎಂದವರು ಅವರೇ, ಭಗತ್‌ಸಿಂಗ್ ಪಾಠಕ್ಕೆ ಕೊಕ್ ಎಂದವರೂ ಅವರೇ. ಎಲ್ಲದ್ದಕ್ಕೂ ಉತ್ತರ ಕೊಡೋಣವೇ? ಅವರು ಬರೆಯಲಿ, ನಾವು ಜನಕ್ಕೆ ಉತ್ತರ ಕೊಡುತ್ತೇವೆ” ಎಂದು ಹೇಳಿ ಕಾಲ್‌ ಕಟ್ ಮಾಡಿದರು. ವರದಿಗಳಿಗೆ ಯಾವುದೇ ಸ್ಪಷ್ಟನೆಯನ್ನು ಸಚಿವರು ನೀಡಲಿಲ್ಲ.

ಜನಾಕ್ರೋಶ

ಆದೇಶ ಇಲ್ಲದೇ ಪಠ್ಯ ಪರಿಷ್ಕರಣೆ ಮಾಡಿರುವ ಕುರಿತು ಜನಾಕ್ರೋಶ ವ್ಯಕ್ತವಾಗುತ್ತಿದೆ. ಈ ವಿಷಯ ಹೊರ ಬಂದ ಬಳಿಕ ಅನೇಕರು ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸರ್ಕಾರ ನಿಯಮಬಾಹಿರವಾಗಿ ನಡೆದುಕೊಂಡಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಇದು ಸಂತೋಷ್‌ ಪಾಟೀಲ್ ಕೇಸ್‌

“ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿಯ ಸಂತೋಷ್ ಪಾಟೀಲ್‌ ಕಾರ್ಯಾದೇಶ (Work order) ಇಲ್ಲದೇ ಕೆಲಸ ಮಾಡಿರುವುದೇ ಅಕ್ರಮ ಎಂದು ಆಡಳಿತ ಪಕ್ಷದವರು ವಾದ ಮಾಡಿದ್ದರು. ಈಗ ಇಲ್ಲಿ ಆಗಿರುವುದೇನು? ಆದೇಶ ಇಲ್ಲದೇ ಸಚಿವರ ಮೌಖಿಕ ಸೂಚನೆಯ ಮೇರೆಗೆ ಸಣ್ಣ ನೀರಿನಟ್ಯಾಂಕ್ ಕೂರಿಸಬಹುದು; ಚರಂಡಿ ಸ್ವಚ್ಛ ಮಾಡಬಹುದು ಅಥವಾ ಅಂತಹ ಯಾವುದಾದರೂ ತುರ್ತು ಕಾಮಗಾರಿ ಕೈಗೊಂಡರೆ ಒಪ್ಪಬಹುದು. ಲಕ್ಷಾಂತರ ಮಕ್ಕಳ ಕಲಿಕಾ ಭವಿಷ್ಯ ನಿರ್ಧರಿಸುವ ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ಹೀಗೆ ಮಾಡಬಹುದೇ? ಹಾಗಾದರೆ ಈ ಸರ್ಕಾರದಲ್ಲಿ ಇನ್ನೂ ಏನೇನು ಆದೇಶವಿಲ್ಲದೇ ಮಂತ್ರಿ-ಮುಖ್ಯಮಂತ್ರಿಗಳ ಮೌಖಿಕ ಸೂಚನೆ ಮೇರೆಗೆ ನಡೆದಿರಬಹುದು?” ಎಂದು ಡಾ.ಎಚ್.ವಿ.ವಾಸು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ನೂತನ ಪಠ್ಯ ಪುಸ್ತಕ: ಐವರು ಬಿಜೆಪಿ ನಾಯಕರಿಂದ ವಿರೋಧ

‘ಅಧ್ಯಕ್ಷನಿಂದ ಹಣ ವಸೂಲಿ ಮಾಡಿ’

“ಒಂದು ತರಗತಿಯ ಒಂದು ಅಧ್ಯಾಯದ ಪರಿಶೀಲನೆಗೆಂದು ಒಬ್ಬ ಅನರ್ಹ ವಿಕೃತನನ್ನು ನೇಮಿಸಿ, ರಾಜ್ಯದ ಶ್ರೇಷ್ಠ ತಜ್ಞರು ರಚಿಸಿದ್ದ ಎಲ್ಲಾ ತರಗತಿಗಳ ಪಠ್ಯಪುಸ್ತಕಗಳನ್ನು ಯಾವುದೇ ಆದೇಶವಿಲ್ಲದೆಯೂ ಅವನೊಬ್ಬನಿಗೆ ಹಾಳುಗೆಡವಲು ಅವಕಾಶವಿತ್ತು, ಅವನು ಮನಬಂದಂತೆ ತನ್ನ ವಿಕೃತಿಯನ್ನು ಅವುಗಳಲ್ಲಿ ತುಂಬಿಸಿದ್ದನ್ನು ಬೇರೆಯವರಲ್ಲಿ ಪರೀಕ್ಷಿಸದೆಯೇ, ಅಧಿಕಾರಿಗಳನ್ನೂ ಲೆಕ್ಕಿಸದೆಯೇ, ತರಾತುರಿಯಿಂದ ಘಟನೋತ್ತರ ಅನುಮತಿ ಒತ್ತಿ ಮುದ್ರಿಸಿ ರಾಜ್ಯದ ಮಕ್ಕಳಿಗೆ ಪುಸ್ತಕಗಳೇ ಇಲ್ಲದ ಹಾಗೆ ಮಾಡಿದ್ದಷ್ಟೇ ಅಲ್ಲದೇ ಎಲ್ಲಾ ದಾರ್ಶನಿಕರಿಗೂ, ಹಿರಿಯಾತಿಹಿರಿಯ ಸಾಹಿತಿಗಳಿಗೂ, ಎಲ್ಲಾ ಜನವರ್ಗಗಳ ಭಾವನೆಗಳಿಗೂ ಅಪಾರವಾದ ಘಾಸಿಯುಂಟು ಮಾಡಿದ್ದಕ್ಕಾಗಿ ಶಿಕ್ಷಣ ಸಚಿವರು ಇನ್ನೊಂದು ಘಳಿಗೆಯೂ ಮುಂದುವರಿಯದೆ ಕೂಡಲೇ ರಾಜೀನಾಮೆ ನೀಡಬೇಕು, ಯಾವುದೇ ಆದೇಶವಿಲ್ಲದೇ ಈ ದುಷ್ಟ ಕೆಲಸಗಳನ್ನು ಮಾಡಿದ ಅನರ್ಹ ಅಧ್ಯಕ್ಷನನ್ನು ಬಂಧಿಸಿ ಎಲ್ಲಾ ವೆಚ್ಚಗಳನ್ನು ಅವನಿಂದಲೇ ವಸೂಲಿ ಮಾಡಬೇಕು” ಎಂದು ಡಾ.ಶ್ರೀನಿವಾಸ ಕಕ್ಕಿಲ್ಲಾಯ ಒತ್ತಾಯಿಸಿದ್ದಾರೆ.

“ಪ್ರಜಾವಾಣಿಯ ಈ ವರದಿಯ ಪ್ರಕಾರ ರೋಹಿತ್ ಸಮಿತಿಗೆ ಪಠ್ಯ ತಿದ್ದುವ ಅಧಿಕಾರವೇ ಇರಲಿಲ್ಲ. ಆದರೂ ಅವನು ತಿದ್ದಿದ್ದಾನೆ. ಅವನು ತಿದ್ದಿದ ನಂತರ ರಾಜ್ಯ ಸರ್ಕಾರ ಅವನ ತಿದ್ದುಪಡಿಗೆ ಒಪ್ಪಿಗೆ ಸೂಚಿಸಿದೆ. ಇದನ್ನು ನೋಡಿದರೆ ತಕ್ಷಣವೇ ರೋಹಿತ್ ಮತ್ತು ಸಮಿತಿ ಸದಸ್ಯರ ಬಂಧನ ಆಗಬೇಕು. ಬಸವರಾಜ ಬೊಮ್ಮಾಯಿ ಮತ್ತು ನಾಗೇಶ ಇಬ್ಬರು ರಾಜೀನಾಮೆ ಕೊಡಬೇಕು” ಎಂದು ಬರಹಗಾರ ನಾಗೇಗೌಡ ಕೀಲಾರ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...