Homeಮುಖಪುಟಹಿಂದೂ ಧರ್ಮದ ಪಠ್ಯ, ಸಂಪ್ರದಾಯದ ಮರುಪರಿಶೀಲನೆ ಅಗತ್ಯವಿದೆ: ಭಾಗವತ್‌

ಹಿಂದೂ ಧರ್ಮದ ಪಠ್ಯ, ಸಂಪ್ರದಾಯದ ಮರುಪರಿಶೀಲನೆ ಅಗತ್ಯವಿದೆ: ಭಾಗವತ್‌

- Advertisement -
- Advertisement -

“ಹಿಂದೂ ಧರ್ಮದ ಪಠ್ಯಗಳು ಮತ್ತು ಸಂಪ್ರದಾಯಗಳನ್ನು ಮರುಪರಿಶೀಲಿಸುವ ಅಗತ್ಯವಿದೆ” ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ನಾಗ್ಪುರದಲ್ಲಿ ಗುರುವಾರ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿರುವ ಅವರು, “ಹಿಂದೆ ನಮ್ಮಲ್ಲಿ ಗ್ರಂಥಗಳಿರಲಿಲ್ಲ; ಜ್ಞಾನವು ಮೌಖಿಕ ಸಂಪ್ರದಾಯದ ಮೂಲಕ ಹರಿಯುತ್ತಿತ್ತು. ನಂತರದಲ್ಲಿ ಕೃತಿಗಳನ್ನು ರಚಿಸಲಾಯಿತು. ಕೆಲವು ಸ್ವಾರ್ಥಿಗಳು ತಮಗೆ ಬೇಕಾದಂತೆ ತಪ್ಪುಗಳನ್ನು ಆ ಕೃತಿಗಳಲ್ಲಿ ಸೇರಿಸಿದ್ದಾರೆ” ಎಂದಿದ್ದಾರೆ.

“ಹಿಂದೂ ಮಹಾಕಾವ್ಯವಾದ ‘ರಾಮಚರಿತಮಾನಸ’ದಲ್ಲಿ ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗಗಳ ಬಗ್ಗೆ ಆಕ್ಷೇಪಾರ್ಹ ಭಾಷೆ ಇದೆ” ಎಂದು ಸಮಾಜವಾದಿ ಪಕ್ಷದ ಎಂಎಲ್‌ಸಿ ಸ್ವಾಮಿ ಪ್ರಸಾದ್ ಮೌರ್ಯ ಅವರು ಹೇಳಿಕೆ ನೀಡಿದ್ದರು. ಈ ವಿವಾದ ಭುಗಿಲೆದ್ದ ಎರಡು ತಿಂಗಳ ನಂತರ ಭಾಗವತ್ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ. ರಾಮಚರಿತಮಾನಸದಲ್ಲಿನ ಈ ಅಂಶಗಳನ್ನು ತೆಗೆದು ಹಾಕಬೇಕು ಎಂದು ಮೌರ್ಯ ಒತ್ತಾಯಿಸಿದ್ದರು.

ಮೌರ್ಯ ವಿರುದ್ಧ ಪ್ರಕರಣವೂ ದಾಖಲಾಗಿದೆ. ಧಾರ್ಮಿಕ ಭಾವನೆಗೆ ಘಾಸಿ, ಅಶಾಂತಿಯನ್ನು ಉಂಟು ಮಾಡಲು ಉದ್ದೇಶಪೂರ್ವಕವಾಗಿ ಅವಮಾನಿಸುವುದು, ವರ್ಗಗಳ ನಡುವೆ ದ್ವೇಷವನ್ನು ಸೃಷ್ಟಿಸುವ ಗುರಿಯನ್ನು ಹೊಂದಿರುವುದು- ಸೇರಿದಂತೆ ಮೊದಲಾದ ಆರೋಪಗಳನ್ನು ಹೊರಿಸಿ ಭಾರತೀಯ ದಂಡ ಸಂಹಿತೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಉತ್ತರ ಪ್ರದೇಶ ಪೊಲೀಸರು ಸ್ವಾಮಿ ಪ್ರಸಾದ್‌ ಮೌರ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಗುರುವಾರ ಭಾಗವತ್‌ ಅವರು ತಾವು ಮಾಡಿದ ಭಾಷಣದಲ್ಲಿ, “ಹಿಂದೂ ಧರ್ಮವು ಜೀವನವನ್ನು ಸಮತೋಲನಗೊಳಿಸುವ ಧರ್ಮವಾಗಿದೆ. ನಮ್ಮ ಧರ್ಮವು ವೈಜ್ಞಾನಿಕ ತತ್ವಗಳನ್ನು ಅನುಸರಿಸುತ್ತದೆ ” ಎಂದು ಬಣ್ಣಿಸಿದ್ದಾರೆ.

“ನಮ್ಮ ಧರ್ಮವು ಮನುಷ್ಯರಿಗೆ ಅವಶ್ಯಕವಾಗಿದೆ, ಏಕೆಂದರೆ ಹಿಂದೂ ಧರ್ಮವು ವೈಜ್ಞಾನಿಕವಾಗಿ ಮನುಷ್ಯನಿಗೆ ಸಹಾಯ ಮಾಡುತ್ತದೆ. ನಮ್ಮ ಸಂಪ್ರದಾಯಗಳಲ್ಲಿ ನಮ್ಮ ಪೂರ್ವಜರು ಪ್ರತಿಯೊಂದು ಕ್ಷೇತ್ರದಲ್ಲೂ ಜ್ಞಾನದ ಅನ್ವೇಷಣೆ ಮೂಲಕ ಕೊಡುಗೆಗಳನ್ನು ನೀಡಿದ್ದಾರೆ” ಎಂದು ಅಭಿಪ್ರಾಯಟ್ಟಿದ್ದಾರೆ.

“ಎಲ್‌ಜಿಬಿಟಿಕ್ಯೂ (ಲೆಸ್ಬಿಯನ್‌, ಗೇ, ಬೈಸೆಕ್ಸುವಲ್‌, ಟ್ರಾನ್ಸ್‌ಜೆಂಡರ್‌, ಕ್ವೀರ್‌) ಸಮುದಾಯದ ಸದಸ್ಯರೂ ಇತರರಂತೆ ಬದುಕುವ ಹಕ್ಕು ಹೊಂದಿದ್ದಾರೆ” ಎಂದು ಜನವರಿಯಲ್ಲಿ ಭಾಗವತ್‌ ಹೇಳಿಕೆ ನೀಡಿದ್ದರು.

ಹಿಂದೂ ಸಮಾಜವು ಟ್ರಾನ್ಸ್‌ಜೆಂಡರ್‌ಗಳನ್ನು ಸಮಸ್ಯೆಯೆಂದು ಭಾವಿಸುವುದಿಲ್ಲ. ಎಲ್‌ಜಿಬಿಟಿಕ್ಯೂ ಸಮುದಾಯದ ಸದಸ್ಯರು ತಮ್ಮದೇ ಆದ ಖಾಸಗಿತನವನ್ನು, ಸಾಮಾಜಿಕ ಸ್ಥಾನಮಾನವನ್ನು ಹೊಂದಲು ಅರ್ಹರು ಎಂದು ತಿಳಿಸಿದ್ದರು.

“ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆ” ಎಂದು ಭಾಗವತ್‌ ಫೆಬ್ರುವರಿಯಲ್ಲಿ ಹೇಳಿಕೆ ನೀಡಿದ್ದು ವಿವಾದಕ್ಕೆ ಗುರಿಯಾಗಿತ್ತು. ಬ್ರಾಹ್ಮಣ ಸಮುದಾಯವು ಭಾಗವತ್‌ ವಿರುದ್ಧ ಕಿಡಿಕಾರಿತ್ತು.

ಭಕ್ತಿ ಕವಿ ಸಂತ ರವಿದಾಸ್ ಅವರ ಜಯಂತಿಯ ಸ್ಮರಣಾರ್ಥ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಭಾಗವತ್ ರವಿದಾಸ್ ಅವರು ದೇವರು ಕುರಿತು ಹೇಳಿರುವುದನ್ನು ಉಲ್ಲೇಖಿಸಿದ್ದರು. “ನಾನು (ದೇವರು) ಎಲ್ಲಾ ಜೀವಿಗಳಲ್ಲಿ ಇದ್ದೇನೆ. ಹೆಸರು ಅಥವಾ ಬಣ್ಣ ಯಾವುದೇ ಇರಲಿ, ಎಲ್ಲರಿಗೂ ಒಂದೇ ಸಾಮರ್ಥ್ಯ, ಒಂದೇ ಗೌರವವಿದೆ. ಎಲ್ಲಾ ನನ್ನ ಸ್ವಂತದ್ದು. ಯಾರೂ ಮೇಲು ಅಥವಾ ಕೀಳು ಅಲ್ಲ. ಶಾಸ್ತ್ರಗಳ ಆಧಾರದ ಮೇಲೆ ಪಂಡಿತರು ಹೇಳುವುದು ಸುಳ್ಳು. ಮೇಲು-ಕೀಳು ಎಂಬ ಈ ಕಲ್ಪನೆಯಲ್ಲಿ ಸಿಲುಕಿ ದಾರಿ ತಪ್ಪಿದ್ದೇವೆ. ಈ ಭ್ರಮೆಯನ್ನು ತೊಲಗಿಸಬೇಕು”- ಎಂದು ಭಾಗವತ್ ಹೇಳಿದ್ದರು.

ವಿರೋಧ ಉಂಟಾದ ಕೆಲವು ದಿನಗಳ ನಂತರ ಆರ್‌ಎಸ್‌ಎಸ್ ಪ್ರತಿಕ್ರಿಯಿಸಿ, ಭಾಗವತ್ ಅವರು ಮಠಾಠಿ ಮೇಲ್ವರ್ಗದ ಹಿಂದೂಗಳನ್ನು ಗುರಿಯಾಗಿಸಿಕೊಂಡು ಮಾತನಾಡಿಲ್ಲ ಎಂದು ತಿಳಿಸಿತ್ತು. ಭಾಗವತ್ ಅವರು ಬಳಸಿದ ‘ಪಂಡಿತ್‌’ ಎಂಬ ಪದವು ‘ವಿದ್ವಾಂಸರು’ ಎಂಬ ಅರ್ಥವನ್ನು ಹೊಂದಿದೆ ಹೊರತು, ‘ಬ್ರಾಹ್ಮಣರು’ ಎಂದಲ್ಲ ಎಂದು ಆರ್‌ಎಸ್‌ಎಸ್‌ ಸಮರ್ಥನೆ ನೀಡಿತ್ತು.

ಭಾಗವತ್‌ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪುರಿ ಶಂಕರಾಚಾರ್ಯರಾದ ನಿಶ್ಚಲಾನಂದ ಸರಸ್ವತಿ ಅವರಲ್ಲಿ ಭಕ್ತರೊಬ್ಬರು ಪ್ರಶ್ನಿಸಿದಾಗ ಸ್ವಾಮೀಜಿಯವರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿದ್ದರು. ಭಾಗವತ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿರಿ: ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್‌ ತೇಲಿಬಿಟ್ಟ ಜನಸಂಖ್ಯೆ ಹೆಚ್ಚಳ, ಮತಾಂತರ ಕತೆಯ ವಾಸ್ತವವೇನು?

“ಮೊದಲ ಬ್ರಾಹ್ಮಣನ ಹೆಸರು ಬ್ರಹ್ಮಜಿ. ನೀವು ಧರ್ಮಗ್ರಂಥಗಳನ್ನು ಅಧ್ಯಯನ ಮಾಡಬೇಕು. ಪ್ರಪಂಚದ ಎಲ್ಲಾ ಶಾಸ್ತ್ರಗಳು ಮತ್ತು ಕಲೆಗಳನ್ನು ಬ್ರಾಹ್ಮಣರು ಮಾತ್ರ ವಿವರಿಸುತ್ತಾರೆ. ಶಿಕ್ಷಣ, ರಕ್ಷಣೆ ಮತ್ತು ಇತರ ಸೇವೆಗಳು ಯಾವಾಗಲೂ ಸಮತೋಲನದಲ್ಲಿರಬೇಕು. ನಾವು ಸನಾತನ ವ್ಯವಸ್ಥೆಯನ್ನು ಒಪ್ಪಿಕೊಳ್ಳದಿದ್ದರೆ, ಆಗ ಅಲ್ಲಿ ಯಾವ ವ್ಯವಸ್ಥೆ ಇರಬೇಕು?” ಎಂದು ಪ್ರಶ್ನಿಸಿದ್ದರು.

“ಆರ್‌ಎಸ್‌ಎಸ್‌ಗೆ ಸ್ವಂತ ಜ್ಞಾನವಿಲ್ಲ. ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆಯೇ ಹೊರತು ಮೂರ್ಖರಿಂದಲ್ಲ. ಇಂದಿಗೂ ಜನರು ಪ್ರಪಂಚದ ಸಮಸ್ಯೆಗಳನ್ನು ಪರಿಹರಿಸಲು ಭಾರತದ ಬ್ರಾಹ್ಮಣರ ಬಳಿಗೆ ಬರುತ್ತಾರೆ” ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದರು.

ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಪ್ರತಿಕ್ರಿಯಿಸಿ, “ಭಾಗವತ್ ಅವರು ತಡವಾಗಿ ಅಪಾರ ಬುದ್ಧಿವಂತಿಕೆಯನ್ನು ಸಂಪಾದಿಸಿದ್ದಾರೆ. ನೀವು ಸಂಶೋಧನೆ ಮಾಡಿದ್ದೀರಾ?… ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ನಾಲ್ಕು ವರ್ಣಗಳನ್ನು ಸೃಷ್ಟಿಸಿದನೆಂದು ನಾವು ಓದಿದ್ದೇವೆ. ದೇವರು ಇದನ್ನು (ಜಾತಿ ವ್ಯವಸ್ಥೆ) ಸೃಷ್ಟಿಸಿಲ್ಲ, ಅವುಗಳನ್ನು ಪಂಡಿತರು ನಿರ್ಮಿಸಿದ್ದಾರೆ ಎಂದು ಭಾಗವತ್ ಹೇಳುತ್ತಿದ್ದಾರೆ. ಈಗವರು ‘ಪಂಡಿತ್’ ಎಂದರೆ ‘ವಿದ್ವಾಂಸರು’ ಹೊರತು ‘ಬ್ರಾಹ್ಮಣ’ ಅಲ್ಲ ಎನ್ನುತ್ತಿದ್ದಾರೆ. ವಿದ್ವಾಂಸರು ಏನಾದರೂ ಹೇಳಿದ್ದರೆ ನೀವು ಅದನ್ನು ಏಕೆ ನಿರಾಕರಿಸುತ್ತೀರಿ?” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...