Homeಮುಖಪುಟಹಿಂದೂ ಧರ್ಮದ ಪಠ್ಯ, ಸಂಪ್ರದಾಯದ ಮರುಪರಿಶೀಲನೆ ಅಗತ್ಯವಿದೆ: ಭಾಗವತ್‌

ಹಿಂದೂ ಧರ್ಮದ ಪಠ್ಯ, ಸಂಪ್ರದಾಯದ ಮರುಪರಿಶೀಲನೆ ಅಗತ್ಯವಿದೆ: ಭಾಗವತ್‌

- Advertisement -
- Advertisement -

“ಹಿಂದೂ ಧರ್ಮದ ಪಠ್ಯಗಳು ಮತ್ತು ಸಂಪ್ರದಾಯಗಳನ್ನು ಮರುಪರಿಶೀಲಿಸುವ ಅಗತ್ಯವಿದೆ” ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ನಾಗ್ಪುರದಲ್ಲಿ ಗುರುವಾರ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿರುವ ಅವರು, “ಹಿಂದೆ ನಮ್ಮಲ್ಲಿ ಗ್ರಂಥಗಳಿರಲಿಲ್ಲ; ಜ್ಞಾನವು ಮೌಖಿಕ ಸಂಪ್ರದಾಯದ ಮೂಲಕ ಹರಿಯುತ್ತಿತ್ತು. ನಂತರದಲ್ಲಿ ಕೃತಿಗಳನ್ನು ರಚಿಸಲಾಯಿತು. ಕೆಲವು ಸ್ವಾರ್ಥಿಗಳು ತಮಗೆ ಬೇಕಾದಂತೆ ತಪ್ಪುಗಳನ್ನು ಆ ಕೃತಿಗಳಲ್ಲಿ ಸೇರಿಸಿದ್ದಾರೆ” ಎಂದಿದ್ದಾರೆ.

“ಹಿಂದೂ ಮಹಾಕಾವ್ಯವಾದ ‘ರಾಮಚರಿತಮಾನಸ’ದಲ್ಲಿ ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗಗಳ ಬಗ್ಗೆ ಆಕ್ಷೇಪಾರ್ಹ ಭಾಷೆ ಇದೆ” ಎಂದು ಸಮಾಜವಾದಿ ಪಕ್ಷದ ಎಂಎಲ್‌ಸಿ ಸ್ವಾಮಿ ಪ್ರಸಾದ್ ಮೌರ್ಯ ಅವರು ಹೇಳಿಕೆ ನೀಡಿದ್ದರು. ಈ ವಿವಾದ ಭುಗಿಲೆದ್ದ ಎರಡು ತಿಂಗಳ ನಂತರ ಭಾಗವತ್ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ. ರಾಮಚರಿತಮಾನಸದಲ್ಲಿನ ಈ ಅಂಶಗಳನ್ನು ತೆಗೆದು ಹಾಕಬೇಕು ಎಂದು ಮೌರ್ಯ ಒತ್ತಾಯಿಸಿದ್ದರು.

ಮೌರ್ಯ ವಿರುದ್ಧ ಪ್ರಕರಣವೂ ದಾಖಲಾಗಿದೆ. ಧಾರ್ಮಿಕ ಭಾವನೆಗೆ ಘಾಸಿ, ಅಶಾಂತಿಯನ್ನು ಉಂಟು ಮಾಡಲು ಉದ್ದೇಶಪೂರ್ವಕವಾಗಿ ಅವಮಾನಿಸುವುದು, ವರ್ಗಗಳ ನಡುವೆ ದ್ವೇಷವನ್ನು ಸೃಷ್ಟಿಸುವ ಗುರಿಯನ್ನು ಹೊಂದಿರುವುದು- ಸೇರಿದಂತೆ ಮೊದಲಾದ ಆರೋಪಗಳನ್ನು ಹೊರಿಸಿ ಭಾರತೀಯ ದಂಡ ಸಂಹಿತೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಉತ್ತರ ಪ್ರದೇಶ ಪೊಲೀಸರು ಸ್ವಾಮಿ ಪ್ರಸಾದ್‌ ಮೌರ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಗುರುವಾರ ಭಾಗವತ್‌ ಅವರು ತಾವು ಮಾಡಿದ ಭಾಷಣದಲ್ಲಿ, “ಹಿಂದೂ ಧರ್ಮವು ಜೀವನವನ್ನು ಸಮತೋಲನಗೊಳಿಸುವ ಧರ್ಮವಾಗಿದೆ. ನಮ್ಮ ಧರ್ಮವು ವೈಜ್ಞಾನಿಕ ತತ್ವಗಳನ್ನು ಅನುಸರಿಸುತ್ತದೆ ” ಎಂದು ಬಣ್ಣಿಸಿದ್ದಾರೆ.

“ನಮ್ಮ ಧರ್ಮವು ಮನುಷ್ಯರಿಗೆ ಅವಶ್ಯಕವಾಗಿದೆ, ಏಕೆಂದರೆ ಹಿಂದೂ ಧರ್ಮವು ವೈಜ್ಞಾನಿಕವಾಗಿ ಮನುಷ್ಯನಿಗೆ ಸಹಾಯ ಮಾಡುತ್ತದೆ. ನಮ್ಮ ಸಂಪ್ರದಾಯಗಳಲ್ಲಿ ನಮ್ಮ ಪೂರ್ವಜರು ಪ್ರತಿಯೊಂದು ಕ್ಷೇತ್ರದಲ್ಲೂ ಜ್ಞಾನದ ಅನ್ವೇಷಣೆ ಮೂಲಕ ಕೊಡುಗೆಗಳನ್ನು ನೀಡಿದ್ದಾರೆ” ಎಂದು ಅಭಿಪ್ರಾಯಟ್ಟಿದ್ದಾರೆ.

“ಎಲ್‌ಜಿಬಿಟಿಕ್ಯೂ (ಲೆಸ್ಬಿಯನ್‌, ಗೇ, ಬೈಸೆಕ್ಸುವಲ್‌, ಟ್ರಾನ್ಸ್‌ಜೆಂಡರ್‌, ಕ್ವೀರ್‌) ಸಮುದಾಯದ ಸದಸ್ಯರೂ ಇತರರಂತೆ ಬದುಕುವ ಹಕ್ಕು ಹೊಂದಿದ್ದಾರೆ” ಎಂದು ಜನವರಿಯಲ್ಲಿ ಭಾಗವತ್‌ ಹೇಳಿಕೆ ನೀಡಿದ್ದರು.

ಹಿಂದೂ ಸಮಾಜವು ಟ್ರಾನ್ಸ್‌ಜೆಂಡರ್‌ಗಳನ್ನು ಸಮಸ್ಯೆಯೆಂದು ಭಾವಿಸುವುದಿಲ್ಲ. ಎಲ್‌ಜಿಬಿಟಿಕ್ಯೂ ಸಮುದಾಯದ ಸದಸ್ಯರು ತಮ್ಮದೇ ಆದ ಖಾಸಗಿತನವನ್ನು, ಸಾಮಾಜಿಕ ಸ್ಥಾನಮಾನವನ್ನು ಹೊಂದಲು ಅರ್ಹರು ಎಂದು ತಿಳಿಸಿದ್ದರು.

“ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆ” ಎಂದು ಭಾಗವತ್‌ ಫೆಬ್ರುವರಿಯಲ್ಲಿ ಹೇಳಿಕೆ ನೀಡಿದ್ದು ವಿವಾದಕ್ಕೆ ಗುರಿಯಾಗಿತ್ತು. ಬ್ರಾಹ್ಮಣ ಸಮುದಾಯವು ಭಾಗವತ್‌ ವಿರುದ್ಧ ಕಿಡಿಕಾರಿತ್ತು.

ಭಕ್ತಿ ಕವಿ ಸಂತ ರವಿದಾಸ್ ಅವರ ಜಯಂತಿಯ ಸ್ಮರಣಾರ್ಥ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಭಾಗವತ್ ರವಿದಾಸ್ ಅವರು ದೇವರು ಕುರಿತು ಹೇಳಿರುವುದನ್ನು ಉಲ್ಲೇಖಿಸಿದ್ದರು. “ನಾನು (ದೇವರು) ಎಲ್ಲಾ ಜೀವಿಗಳಲ್ಲಿ ಇದ್ದೇನೆ. ಹೆಸರು ಅಥವಾ ಬಣ್ಣ ಯಾವುದೇ ಇರಲಿ, ಎಲ್ಲರಿಗೂ ಒಂದೇ ಸಾಮರ್ಥ್ಯ, ಒಂದೇ ಗೌರವವಿದೆ. ಎಲ್ಲಾ ನನ್ನ ಸ್ವಂತದ್ದು. ಯಾರೂ ಮೇಲು ಅಥವಾ ಕೀಳು ಅಲ್ಲ. ಶಾಸ್ತ್ರಗಳ ಆಧಾರದ ಮೇಲೆ ಪಂಡಿತರು ಹೇಳುವುದು ಸುಳ್ಳು. ಮೇಲು-ಕೀಳು ಎಂಬ ಈ ಕಲ್ಪನೆಯಲ್ಲಿ ಸಿಲುಕಿ ದಾರಿ ತಪ್ಪಿದ್ದೇವೆ. ಈ ಭ್ರಮೆಯನ್ನು ತೊಲಗಿಸಬೇಕು”- ಎಂದು ಭಾಗವತ್ ಹೇಳಿದ್ದರು.

ವಿರೋಧ ಉಂಟಾದ ಕೆಲವು ದಿನಗಳ ನಂತರ ಆರ್‌ಎಸ್‌ಎಸ್ ಪ್ರತಿಕ್ರಿಯಿಸಿ, ಭಾಗವತ್ ಅವರು ಮಠಾಠಿ ಮೇಲ್ವರ್ಗದ ಹಿಂದೂಗಳನ್ನು ಗುರಿಯಾಗಿಸಿಕೊಂಡು ಮಾತನಾಡಿಲ್ಲ ಎಂದು ತಿಳಿಸಿತ್ತು. ಭಾಗವತ್ ಅವರು ಬಳಸಿದ ‘ಪಂಡಿತ್‌’ ಎಂಬ ಪದವು ‘ವಿದ್ವಾಂಸರು’ ಎಂಬ ಅರ್ಥವನ್ನು ಹೊಂದಿದೆ ಹೊರತು, ‘ಬ್ರಾಹ್ಮಣರು’ ಎಂದಲ್ಲ ಎಂದು ಆರ್‌ಎಸ್‌ಎಸ್‌ ಸಮರ್ಥನೆ ನೀಡಿತ್ತು.

ಭಾಗವತ್‌ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪುರಿ ಶಂಕರಾಚಾರ್ಯರಾದ ನಿಶ್ಚಲಾನಂದ ಸರಸ್ವತಿ ಅವರಲ್ಲಿ ಭಕ್ತರೊಬ್ಬರು ಪ್ರಶ್ನಿಸಿದಾಗ ಸ್ವಾಮೀಜಿಯವರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿದ್ದರು. ಭಾಗವತ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿರಿ: ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್‌ ತೇಲಿಬಿಟ್ಟ ಜನಸಂಖ್ಯೆ ಹೆಚ್ಚಳ, ಮತಾಂತರ ಕತೆಯ ವಾಸ್ತವವೇನು?

“ಮೊದಲ ಬ್ರಾಹ್ಮಣನ ಹೆಸರು ಬ್ರಹ್ಮಜಿ. ನೀವು ಧರ್ಮಗ್ರಂಥಗಳನ್ನು ಅಧ್ಯಯನ ಮಾಡಬೇಕು. ಪ್ರಪಂಚದ ಎಲ್ಲಾ ಶಾಸ್ತ್ರಗಳು ಮತ್ತು ಕಲೆಗಳನ್ನು ಬ್ರಾಹ್ಮಣರು ಮಾತ್ರ ವಿವರಿಸುತ್ತಾರೆ. ಶಿಕ್ಷಣ, ರಕ್ಷಣೆ ಮತ್ತು ಇತರ ಸೇವೆಗಳು ಯಾವಾಗಲೂ ಸಮತೋಲನದಲ್ಲಿರಬೇಕು. ನಾವು ಸನಾತನ ವ್ಯವಸ್ಥೆಯನ್ನು ಒಪ್ಪಿಕೊಳ್ಳದಿದ್ದರೆ, ಆಗ ಅಲ್ಲಿ ಯಾವ ವ್ಯವಸ್ಥೆ ಇರಬೇಕು?” ಎಂದು ಪ್ರಶ್ನಿಸಿದ್ದರು.

“ಆರ್‌ಎಸ್‌ಎಸ್‌ಗೆ ಸ್ವಂತ ಜ್ಞಾನವಿಲ್ಲ. ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆಯೇ ಹೊರತು ಮೂರ್ಖರಿಂದಲ್ಲ. ಇಂದಿಗೂ ಜನರು ಪ್ರಪಂಚದ ಸಮಸ್ಯೆಗಳನ್ನು ಪರಿಹರಿಸಲು ಭಾರತದ ಬ್ರಾಹ್ಮಣರ ಬಳಿಗೆ ಬರುತ್ತಾರೆ” ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದರು.

ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಪ್ರತಿಕ್ರಿಯಿಸಿ, “ಭಾಗವತ್ ಅವರು ತಡವಾಗಿ ಅಪಾರ ಬುದ್ಧಿವಂತಿಕೆಯನ್ನು ಸಂಪಾದಿಸಿದ್ದಾರೆ. ನೀವು ಸಂಶೋಧನೆ ಮಾಡಿದ್ದೀರಾ?… ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ನಾಲ್ಕು ವರ್ಣಗಳನ್ನು ಸೃಷ್ಟಿಸಿದನೆಂದು ನಾವು ಓದಿದ್ದೇವೆ. ದೇವರು ಇದನ್ನು (ಜಾತಿ ವ್ಯವಸ್ಥೆ) ಸೃಷ್ಟಿಸಿಲ್ಲ, ಅವುಗಳನ್ನು ಪಂಡಿತರು ನಿರ್ಮಿಸಿದ್ದಾರೆ ಎಂದು ಭಾಗವತ್ ಹೇಳುತ್ತಿದ್ದಾರೆ. ಈಗವರು ‘ಪಂಡಿತ್’ ಎಂದರೆ ‘ವಿದ್ವಾಂಸರು’ ಹೊರತು ‘ಬ್ರಾಹ್ಮಣ’ ಅಲ್ಲ ಎನ್ನುತ್ತಿದ್ದಾರೆ. ವಿದ್ವಾಂಸರು ಏನಾದರೂ ಹೇಳಿದ್ದರೆ ನೀವು ಅದನ್ನು ಏಕೆ ನಿರಾಕರಿಸುತ್ತೀರಿ?” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...