Homeಮುಖಪುಟಹಿಂದೂ ಧರ್ಮದ ಪಠ್ಯ, ಸಂಪ್ರದಾಯದ ಮರುಪರಿಶೀಲನೆ ಅಗತ್ಯವಿದೆ: ಭಾಗವತ್‌

ಹಿಂದೂ ಧರ್ಮದ ಪಠ್ಯ, ಸಂಪ್ರದಾಯದ ಮರುಪರಿಶೀಲನೆ ಅಗತ್ಯವಿದೆ: ಭಾಗವತ್‌

- Advertisement -
- Advertisement -

“ಹಿಂದೂ ಧರ್ಮದ ಪಠ್ಯಗಳು ಮತ್ತು ಸಂಪ್ರದಾಯಗಳನ್ನು ಮರುಪರಿಶೀಲಿಸುವ ಅಗತ್ಯವಿದೆ” ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ನಾಗ್ಪುರದಲ್ಲಿ ಗುರುವಾರ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿರುವ ಅವರು, “ಹಿಂದೆ ನಮ್ಮಲ್ಲಿ ಗ್ರಂಥಗಳಿರಲಿಲ್ಲ; ಜ್ಞಾನವು ಮೌಖಿಕ ಸಂಪ್ರದಾಯದ ಮೂಲಕ ಹರಿಯುತ್ತಿತ್ತು. ನಂತರದಲ್ಲಿ ಕೃತಿಗಳನ್ನು ರಚಿಸಲಾಯಿತು. ಕೆಲವು ಸ್ವಾರ್ಥಿಗಳು ತಮಗೆ ಬೇಕಾದಂತೆ ತಪ್ಪುಗಳನ್ನು ಆ ಕೃತಿಗಳಲ್ಲಿ ಸೇರಿಸಿದ್ದಾರೆ” ಎಂದಿದ್ದಾರೆ.

“ಹಿಂದೂ ಮಹಾಕಾವ್ಯವಾದ ‘ರಾಮಚರಿತಮಾನಸ’ದಲ್ಲಿ ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗಗಳ ಬಗ್ಗೆ ಆಕ್ಷೇಪಾರ್ಹ ಭಾಷೆ ಇದೆ” ಎಂದು ಸಮಾಜವಾದಿ ಪಕ್ಷದ ಎಂಎಲ್‌ಸಿ ಸ್ವಾಮಿ ಪ್ರಸಾದ್ ಮೌರ್ಯ ಅವರು ಹೇಳಿಕೆ ನೀಡಿದ್ದರು. ಈ ವಿವಾದ ಭುಗಿಲೆದ್ದ ಎರಡು ತಿಂಗಳ ನಂತರ ಭಾಗವತ್ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ. ರಾಮಚರಿತಮಾನಸದಲ್ಲಿನ ಈ ಅಂಶಗಳನ್ನು ತೆಗೆದು ಹಾಕಬೇಕು ಎಂದು ಮೌರ್ಯ ಒತ್ತಾಯಿಸಿದ್ದರು.

ಮೌರ್ಯ ವಿರುದ್ಧ ಪ್ರಕರಣವೂ ದಾಖಲಾಗಿದೆ. ಧಾರ್ಮಿಕ ಭಾವನೆಗೆ ಘಾಸಿ, ಅಶಾಂತಿಯನ್ನು ಉಂಟು ಮಾಡಲು ಉದ್ದೇಶಪೂರ್ವಕವಾಗಿ ಅವಮಾನಿಸುವುದು, ವರ್ಗಗಳ ನಡುವೆ ದ್ವೇಷವನ್ನು ಸೃಷ್ಟಿಸುವ ಗುರಿಯನ್ನು ಹೊಂದಿರುವುದು- ಸೇರಿದಂತೆ ಮೊದಲಾದ ಆರೋಪಗಳನ್ನು ಹೊರಿಸಿ ಭಾರತೀಯ ದಂಡ ಸಂಹಿತೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಉತ್ತರ ಪ್ರದೇಶ ಪೊಲೀಸರು ಸ್ವಾಮಿ ಪ್ರಸಾದ್‌ ಮೌರ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಗುರುವಾರ ಭಾಗವತ್‌ ಅವರು ತಾವು ಮಾಡಿದ ಭಾಷಣದಲ್ಲಿ, “ಹಿಂದೂ ಧರ್ಮವು ಜೀವನವನ್ನು ಸಮತೋಲನಗೊಳಿಸುವ ಧರ್ಮವಾಗಿದೆ. ನಮ್ಮ ಧರ್ಮವು ವೈಜ್ಞಾನಿಕ ತತ್ವಗಳನ್ನು ಅನುಸರಿಸುತ್ತದೆ ” ಎಂದು ಬಣ್ಣಿಸಿದ್ದಾರೆ.

“ನಮ್ಮ ಧರ್ಮವು ಮನುಷ್ಯರಿಗೆ ಅವಶ್ಯಕವಾಗಿದೆ, ಏಕೆಂದರೆ ಹಿಂದೂ ಧರ್ಮವು ವೈಜ್ಞಾನಿಕವಾಗಿ ಮನುಷ್ಯನಿಗೆ ಸಹಾಯ ಮಾಡುತ್ತದೆ. ನಮ್ಮ ಸಂಪ್ರದಾಯಗಳಲ್ಲಿ ನಮ್ಮ ಪೂರ್ವಜರು ಪ್ರತಿಯೊಂದು ಕ್ಷೇತ್ರದಲ್ಲೂ ಜ್ಞಾನದ ಅನ್ವೇಷಣೆ ಮೂಲಕ ಕೊಡುಗೆಗಳನ್ನು ನೀಡಿದ್ದಾರೆ” ಎಂದು ಅಭಿಪ್ರಾಯಟ್ಟಿದ್ದಾರೆ.

“ಎಲ್‌ಜಿಬಿಟಿಕ್ಯೂ (ಲೆಸ್ಬಿಯನ್‌, ಗೇ, ಬೈಸೆಕ್ಸುವಲ್‌, ಟ್ರಾನ್ಸ್‌ಜೆಂಡರ್‌, ಕ್ವೀರ್‌) ಸಮುದಾಯದ ಸದಸ್ಯರೂ ಇತರರಂತೆ ಬದುಕುವ ಹಕ್ಕು ಹೊಂದಿದ್ದಾರೆ” ಎಂದು ಜನವರಿಯಲ್ಲಿ ಭಾಗವತ್‌ ಹೇಳಿಕೆ ನೀಡಿದ್ದರು.

ಹಿಂದೂ ಸಮಾಜವು ಟ್ರಾನ್ಸ್‌ಜೆಂಡರ್‌ಗಳನ್ನು ಸಮಸ್ಯೆಯೆಂದು ಭಾವಿಸುವುದಿಲ್ಲ. ಎಲ್‌ಜಿಬಿಟಿಕ್ಯೂ ಸಮುದಾಯದ ಸದಸ್ಯರು ತಮ್ಮದೇ ಆದ ಖಾಸಗಿತನವನ್ನು, ಸಾಮಾಜಿಕ ಸ್ಥಾನಮಾನವನ್ನು ಹೊಂದಲು ಅರ್ಹರು ಎಂದು ತಿಳಿಸಿದ್ದರು.

“ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆ” ಎಂದು ಭಾಗವತ್‌ ಫೆಬ್ರುವರಿಯಲ್ಲಿ ಹೇಳಿಕೆ ನೀಡಿದ್ದು ವಿವಾದಕ್ಕೆ ಗುರಿಯಾಗಿತ್ತು. ಬ್ರಾಹ್ಮಣ ಸಮುದಾಯವು ಭಾಗವತ್‌ ವಿರುದ್ಧ ಕಿಡಿಕಾರಿತ್ತು.

ಭಕ್ತಿ ಕವಿ ಸಂತ ರವಿದಾಸ್ ಅವರ ಜಯಂತಿಯ ಸ್ಮರಣಾರ್ಥ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಭಾಗವತ್ ರವಿದಾಸ್ ಅವರು ದೇವರು ಕುರಿತು ಹೇಳಿರುವುದನ್ನು ಉಲ್ಲೇಖಿಸಿದ್ದರು. “ನಾನು (ದೇವರು) ಎಲ್ಲಾ ಜೀವಿಗಳಲ್ಲಿ ಇದ್ದೇನೆ. ಹೆಸರು ಅಥವಾ ಬಣ್ಣ ಯಾವುದೇ ಇರಲಿ, ಎಲ್ಲರಿಗೂ ಒಂದೇ ಸಾಮರ್ಥ್ಯ, ಒಂದೇ ಗೌರವವಿದೆ. ಎಲ್ಲಾ ನನ್ನ ಸ್ವಂತದ್ದು. ಯಾರೂ ಮೇಲು ಅಥವಾ ಕೀಳು ಅಲ್ಲ. ಶಾಸ್ತ್ರಗಳ ಆಧಾರದ ಮೇಲೆ ಪಂಡಿತರು ಹೇಳುವುದು ಸುಳ್ಳು. ಮೇಲು-ಕೀಳು ಎಂಬ ಈ ಕಲ್ಪನೆಯಲ್ಲಿ ಸಿಲುಕಿ ದಾರಿ ತಪ್ಪಿದ್ದೇವೆ. ಈ ಭ್ರಮೆಯನ್ನು ತೊಲಗಿಸಬೇಕು”- ಎಂದು ಭಾಗವತ್ ಹೇಳಿದ್ದರು.

ವಿರೋಧ ಉಂಟಾದ ಕೆಲವು ದಿನಗಳ ನಂತರ ಆರ್‌ಎಸ್‌ಎಸ್ ಪ್ರತಿಕ್ರಿಯಿಸಿ, ಭಾಗವತ್ ಅವರು ಮಠಾಠಿ ಮೇಲ್ವರ್ಗದ ಹಿಂದೂಗಳನ್ನು ಗುರಿಯಾಗಿಸಿಕೊಂಡು ಮಾತನಾಡಿಲ್ಲ ಎಂದು ತಿಳಿಸಿತ್ತು. ಭಾಗವತ್ ಅವರು ಬಳಸಿದ ‘ಪಂಡಿತ್‌’ ಎಂಬ ಪದವು ‘ವಿದ್ವಾಂಸರು’ ಎಂಬ ಅರ್ಥವನ್ನು ಹೊಂದಿದೆ ಹೊರತು, ‘ಬ್ರಾಹ್ಮಣರು’ ಎಂದಲ್ಲ ಎಂದು ಆರ್‌ಎಸ್‌ಎಸ್‌ ಸಮರ್ಥನೆ ನೀಡಿತ್ತು.

ಭಾಗವತ್‌ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪುರಿ ಶಂಕರಾಚಾರ್ಯರಾದ ನಿಶ್ಚಲಾನಂದ ಸರಸ್ವತಿ ಅವರಲ್ಲಿ ಭಕ್ತರೊಬ್ಬರು ಪ್ರಶ್ನಿಸಿದಾಗ ಸ್ವಾಮೀಜಿಯವರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿದ್ದರು. ಭಾಗವತ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿರಿ: ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್‌ ತೇಲಿಬಿಟ್ಟ ಜನಸಂಖ್ಯೆ ಹೆಚ್ಚಳ, ಮತಾಂತರ ಕತೆಯ ವಾಸ್ತವವೇನು?

“ಮೊದಲ ಬ್ರಾಹ್ಮಣನ ಹೆಸರು ಬ್ರಹ್ಮಜಿ. ನೀವು ಧರ್ಮಗ್ರಂಥಗಳನ್ನು ಅಧ್ಯಯನ ಮಾಡಬೇಕು. ಪ್ರಪಂಚದ ಎಲ್ಲಾ ಶಾಸ್ತ್ರಗಳು ಮತ್ತು ಕಲೆಗಳನ್ನು ಬ್ರಾಹ್ಮಣರು ಮಾತ್ರ ವಿವರಿಸುತ್ತಾರೆ. ಶಿಕ್ಷಣ, ರಕ್ಷಣೆ ಮತ್ತು ಇತರ ಸೇವೆಗಳು ಯಾವಾಗಲೂ ಸಮತೋಲನದಲ್ಲಿರಬೇಕು. ನಾವು ಸನಾತನ ವ್ಯವಸ್ಥೆಯನ್ನು ಒಪ್ಪಿಕೊಳ್ಳದಿದ್ದರೆ, ಆಗ ಅಲ್ಲಿ ಯಾವ ವ್ಯವಸ್ಥೆ ಇರಬೇಕು?” ಎಂದು ಪ್ರಶ್ನಿಸಿದ್ದರು.

“ಆರ್‌ಎಸ್‌ಎಸ್‌ಗೆ ಸ್ವಂತ ಜ್ಞಾನವಿಲ್ಲ. ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆಯೇ ಹೊರತು ಮೂರ್ಖರಿಂದಲ್ಲ. ಇಂದಿಗೂ ಜನರು ಪ್ರಪಂಚದ ಸಮಸ್ಯೆಗಳನ್ನು ಪರಿಹರಿಸಲು ಭಾರತದ ಬ್ರಾಹ್ಮಣರ ಬಳಿಗೆ ಬರುತ್ತಾರೆ” ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದರು.

ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಪ್ರತಿಕ್ರಿಯಿಸಿ, “ಭಾಗವತ್ ಅವರು ತಡವಾಗಿ ಅಪಾರ ಬುದ್ಧಿವಂತಿಕೆಯನ್ನು ಸಂಪಾದಿಸಿದ್ದಾರೆ. ನೀವು ಸಂಶೋಧನೆ ಮಾಡಿದ್ದೀರಾ?… ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ನಾಲ್ಕು ವರ್ಣಗಳನ್ನು ಸೃಷ್ಟಿಸಿದನೆಂದು ನಾವು ಓದಿದ್ದೇವೆ. ದೇವರು ಇದನ್ನು (ಜಾತಿ ವ್ಯವಸ್ಥೆ) ಸೃಷ್ಟಿಸಿಲ್ಲ, ಅವುಗಳನ್ನು ಪಂಡಿತರು ನಿರ್ಮಿಸಿದ್ದಾರೆ ಎಂದು ಭಾಗವತ್ ಹೇಳುತ್ತಿದ್ದಾರೆ. ಈಗವರು ‘ಪಂಡಿತ್’ ಎಂದರೆ ‘ವಿದ್ವಾಂಸರು’ ಹೊರತು ‘ಬ್ರಾಹ್ಮಣ’ ಅಲ್ಲ ಎನ್ನುತ್ತಿದ್ದಾರೆ. ವಿದ್ವಾಂಸರು ಏನಾದರೂ ಹೇಳಿದ್ದರೆ ನೀವು ಅದನ್ನು ಏಕೆ ನಿರಾಕರಿಸುತ್ತೀರಿ?” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...